Thursday | July 16, 2026 |

ನಾರಾಯಣಪುರ ಎಡದಂಡೆ ಕಾಲುವೆ; ಯೋಜನಾ ಮೊತ್ತ ಪರಿಷ್ಕರಣೆಯಿಂದ ಬೊಕ್ಕಸಕ್ಕೆ 700 ಕೋಟಿ ಹೊರೆ

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತವನ್ನು ಪರಿಷ್ಕರಿಸಿರುವ ಪರಿಣಾಮ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಒಟ್ಟಾರೆ 700.15 ಕೋಟಿ ರು. ಆರ್ಥಿಕ ಹೊರೆಯಾಗಲಿದೆ.

 

ಸರ್ಕಾರದ ಅನುಮೋದನೆ ಪಡೆಯದಿರುವುದು ಮತ್ತು ನಿಯಮ ಉಲ್ಲಂಘಿಸಿ 465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವುದು ಬಹಿರಂಗವಾದ ಬೆನ್ನಲ್ಲೇ ಬೊಕ್ಕಸಕ್ಕೆ 700 ಕೋಟಿಯಷ್ಟು ಆರ್ಥಿಕ ಹೊರೆಯಾಗಿದೆ ಎಂದು ಆರ್ಥಿಕ ಇಲಾಖೆಯು ಹೇಳಿರುವ ಅಂಶವು ಮುನ್ನೆಲೆಗೆ ಬಂದಿದೆ.
ಈ ಕುರಿತು ‘ದಿ ಫೈಲ್‌’ 500ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

ಈ ಹಿಂದೆ ಇದೇ ಪ್ರಸ್ತಾಪಿತ ಯೋಜನೆಗೆ ರಾಜ್ಯ ಸರ್ಕಾರದಿಂದ 4,233.98 ಕೋಟಿ ಮೊತ್ತದ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,245.63 ಕೋಟಿ ರು ಮತ್ತು ರಾಜ್ಯದ ಪಾಲು 2,988.35 ಕೋಟಿ ರು.ಗಳಾಗಿತ್ತು. ನಂತರ ಮಾರ್ಗಸೂಚಿಗಳು ಪರಿಷ್ಕೃತಗೊಂಡ ನಂತರ ಕೇಂದ್ರ ಸರ್ಕಾರವು ತನ್ನ ಪಾಲನ್ನು 1,010.50 ಕೋಟಿ ರು.ಗಳಿಗೆ ಇಳಿಕೆ ಮಾಡಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ಒಟ್ಟಾರೆಯಾಗಿ 235.13 ಕೋಟಿಗಳಷ್ಟು ಹೆಚ್ಚುವರಿ ಹೊರೆಯಾಗಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಪ್ರಸ್ತಾಪಿತ ಯೋಜನೆಗೆ ಇಲ್ಲಿಯವರೆಗೂ 4,209.59 ಕೋಟಿಗಳಷ್ಟು ವೆಚ್ಚವಾಗಿರುತ್ತದೆ. ಇದರಲ್ಲಿ ಮಾರ್ಚ್‌ 2022ರವರೆಗೆ ಎಐಬಿಪಿ ಅಡಿಯಲ್ಲಿ 999.396 ಕೋಟಿ ರು., ಎಐಬಿಪಿಯೇತರ ಅಡಿಯಲ್ಲಿ 3,210.20 ಕೋಟಿ ರು. ವೆಚ್ಚವಾಗಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

‘ಪ್ರಸ್ತುತ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ 4,233.98 ಕೋಟಿಗಳಿಂದ 4,699.00 ಕೋಟಿಗಳಿಗೆ ಮರುಪರಿಷ್ಕರಣೆಗೊಂಡಿದ್ದು ಇದರಿಂದ 465 ಕೋಟಿಗಳಷ್ಟು ಹೆಚ್ಚುವರಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಮೊತ್ತ  235.13 ಕೋಟಿ (ಕಂಡಿಕೆ 4(3)ರಲ್ಲಿ ಇದ್ದಂತೆ) ಗಳನ್ನು ಒಳಗೊಂಡಂತೆ ಪ್ರಸ್ತಾಪಿತ ಯೋಜನೆಗೆ ಒಟ್ಟಾರೆ 700.15 ಕೋಟಿಗಳಷ್ಟು ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗಲಿದೆ.

 

2,988.35 ಕೋಟಿ ಇದ್ದದ್ದು 700.15 ಕೋಟಿಗೆ ಏರಿರುವುದರಿಂದ ಪ್ರಸ್ತಾಪಿತ ಯೋಜನೆಗೆ ಒಟ್ಟಾರೆ ರಾಜ್ಯ ಸರ್ಕಾರದ ಪಾಲು 3,688.50 ಕೋಟಿಗಳಷ್ಟಾಗಲಿದೆ,’ ಎಂದು ಟಿಪ್ಪಣಿಯಲ್ಲಿ ವಿವರಿಸಲಾಗಿದೆ.

 

ಅನುಮೋದಿತ ಅಂದಾಜಿನಲ್ಲಿ ಇಂಡಿ ಶಾಖಾ ಕಾಲುವೆ 0.00 ಇಂದ 64 ಕಿ ಮೀ ವರೆಗಿನ ಸ್ಕಾಡಾ (SCADA-AUTOMATION) ಆಳವಡಿಸಲು ಅನುವು ಮಾಡಿಕೊಳ್ಳಲಾಗಿತ್ತು. ಆದರೆ ಪ್ರಸ್ತುತ ಇಂಡಿ ಶಾಖಾ ಕಾಲುವೆ 64 ಕಿ ಮೀ ನಿಂದ 172 ಕಿ ಮೀ ವರೆಗಿನ 2ನೇ ಹಂತದ ಸ್ಕಾಡಾ ಕಾಮಗಾರಿ ಕೈಗೊಳ್ಳಲಾಗಿದೆ. ಸ್ಕಾಡಾ ಆಟೋಮೇಷನ್‌ಗೆ ಅನುಮೋದಿತಗೊಂಡ ಅಂದಾಜಿನಲ್ಲಿ 3,352 ಸಂಖ್ಯೆಯ ಗೇಟುಗಳಿದ್ದು ಪ್ರಸ್ತುತ ಅಂದಾಜಿನಲ್ಲಿ 4,753 ಸಂಖ್ಯೆಯ ಗೇಟುಗಳನ್ನು ಅಳವಡಿಸಿಕೊಳ್ಳಲಾಗಿದೆ. ಇದರಿಂದ 1,401 ಸಂಖ್ಯೆಯ ಗೇಟುಗಳು ಹೆಚ್ಚಾಗಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಈ ಯೋಜನೆಗೆ 2019ರ ಮಾರ್ಚ್‌ವರೆಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಮೊತ್ತ 635.86 ಕೋಟಿಗಳೆಂದು ನಮೂದಿಸಲಾಗಿತ್ತು. ಆದರೆ 2022ರ ಜೂನ್‌ 7ವರೆಗೆ 999.39 ಬಿಡುಗಡೆಯಾಗಿತ್ತು.

 

ಅಡಳಿತ ಇಲಾಖೆಯು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ, ಅರ್ಥಿಕ ಇಲಾಖೆಯ ಗಮನಕ್ಕೂ ತರದೇ ರೂ 465.00 ಕೋಟಿ ರು.ಗಳ ಕಾಮಗಾರಿಗಳಿಗೆ ಗುತ್ತಿಗೆ ನೀಡಿ ಕೈಗೆತ್ತಿಕೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದ್ದು ಈ ಸಂಬಂಧ ಸದರಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆರ್ಥಿಕ ಇಲಾಖೆ ಸೂಚಿಸಿದ್ದನ್ನು ಸ್ಮರಿಸಬಹುದು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!