Wednesday | April 15, 2026 |

ಜನಸೇವಾಟ್ರಸ್ಟ್‌ಗೆ 25 ಎಕರೆ ಗೋಮಾಳ ಮಂಜೂರಾಗಿದ್ದರೂ ಹೆಚ್ಚುವರಿ 15 ಎಕರೆ ಕೋರಿಕೆ ಮನ್ನಣೆಗೆ ನಿರ್ದೇಶನ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿದ್ದರೂ ಪುನಃ 15 ಎಕರೆ ಹೆಚ್ಚುವರಿ ಜಮೀನಿಗೆ ಬೇಡಿಕೆ ಇಟ್ಟಿರುವುದು ಇದೀಗ ಬಹಿರಂಗವಾಗಿದೆ.

 

ಜನಸೇವಾ ಟ್ರಸ್ಟ್‌ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರು. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿಯೂ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವ ಬೆನ್ನಲ್ಲೇ ಹೆಚ್ಚುವರಿಯಾಗಿ 15 ಎಕರೆ ಜಮೀನು ಮಂಜೂರಾತಿಗಾಗಿ ನಿರ್ದೇಶನ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಜನಸೇವಾ ಟ್ರಸ್ಟ್‌ಗೆ 2022ರ ಸೆ. 13ರಂದು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

 

ಇದಾಗಿ 9 ದಿನಗಳ ಅಂತರದಲ್ಲೇ ಟ್ರಸ್ಟ್‌ನ ಅ ಸಾ ನಿರ್ಮಲ್‌ ಕುಮಾರ್‌ ಎಂಬುವರು 2022ರ ಸೆ.28ರಂದು ಪುನಃ 15 ಎಕರೆ ಜಮೀನು ಮಂಜೂರಾತಿಗಾಗಿ ಸರ್ಕಾರಕ್ಕೆ  ಕೋರಿಕೆ   ಸಲ್ಲಿಸಿತ್ತು.

 

ಇದನ್ನಾಧರಿಸಿ  ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಯು 2023ರ ಜನವರಿ 25ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

 

‘ಜನಸೇವಾ ಟ್ರಸ್ಟ್‌ಗೆ 15 ಎಕರೆ ಜಮೀನನ್ನು ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ನಿಗದಿಪಡಿಸಿ ಮಂಜೂರು ಮಾಡಬೇಕು ಎಂದು ಕೋರಿರುತ್ತಾರೆ. ಈ ಪತ್ರದಲ್ಲಿ ತಿಳಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,’ ಎಂದು ಸರ್ಕಾರದ ಕಾರ್ಯದರ್ಶಿಯು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಿದ್ದಾರೆ. ಕಂದಾಯ ಸಚಿವ ಆರ್‌ ಅಶೋಕ್‌ ಅವರ ಸೂಚನೆ ಮೇರೆಗೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

 

ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್‌ 89ರಲ್ಲಿದ್ದ ಒಟ್ಟು 40.20 ಎಕರೆ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನಲ್ಲಿ ಸುಮಾರು 40 ಕ್ಕೂ ಹೆಚ್ಚಿನ ಭೂ ಭಾಗದಲ್ಲಿ ಕಲ್ಲು ಬಂಡೆಗಳಿವೆ. ಎತ್ತರ ಮತ್ತು ತಗ್ಗು ಪ್ರದೇಶದಿಂದ ಕೂಡಿದೆ. ಉದ್ದೇಶಿತ ಕಟ್ಟಡಗಳನ್ನು ನಿರ್ಮಾಣ ಮಾಢುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಹಣವನ್ನು ಭರಿಸಬೇಕಾಗುತ್ತದೆ. ಮತ್ತು ಉದ್ದೇಶಿತ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ತರಲು ಈಗ ಮಂಜೂರಾದ 25 ಎಕರೆ ಭೂಮಿಯ ಜತೆಗೆ ಇದೇ ಸರ್ವೇ ನಂಬರ್‌ನಲ್ಲಿರುವ ಇನ್ನೂ 15 ಎಕರೆ ಭೂಮಿಯ ಅವಶ್ಯಕತೆ ಇದೆ ಎಂದು ಜನಸೇವಾ ಟ್ರಸ್ಟ್‌ನ ಅ ಸ ನಿರ್ಮಲಕುಮಾರ್‌ ಅವರು ಸರ್ಕಾರಕ್ಕೆ ಸಲ್ಲಿಸಿರುವ ಕೋರಿಕೆಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಕುರುಬರಹಳ್ಳಿಯಲ್ಲಿ ಪ್ರತಿ ಎಕರೆಗೆ ಮಾರುಕಟ್ಟೆ ಬೆಲೆಯು 2 ಕೋಟಿ ರು. ಇದೆ. ಇದರ ಪ್ರಕಾರ 25 ಎಕರೆಗೆ 50 ಕೋಟಿ ರು. ಬೆಲೆ ಇದೆ. ಸರ್ಕಾರವು ಆದೇಶದಲ್ಲಿ ನಮೂದಿಸಿರುವ ಮಾರ್ಗಸೂಚಿ ದರದ ಪ್ರಕಾರ ಪ್ರತಿ ಎಕರೆಗೆ 1.20 ಕೋಟಿ ರು. ಇದೆ. ಆದರೆ ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿ ಮೌಲ್ಯದ ಶೇ.25ರಷ್ಟು ದರದಲ್ಲಿ 25 ಎಕರೆಯನ್ನು ಈಗಾಗಲೇ ಮಂಜೂರು ಮಾಡಿರುವ ಸರ್ಕಾರವು ಬೊಕ್ಕಸಕ್ಕೆ 20 ಕೋಟಿ ನಷ್ಟವನ್ನು ಹೊತ್ತುಕೊಂಡಿದೆ.

 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂ 89ರಲ್ಲಿ ಲಭ್ಯವಿರುವ ಜಮೀನನ್ನು ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ ಬಲರಾಮ್‌ ಅವರು ‘ ಈ ಭೂಮಿಯು ಅತಿ ಅಮೂಲ್ಯವಾದ ಭೂಮಿಯಾಗಿರುವುದರಿಂದ ಈ ಸಂಸ್ಥೆಗೆ ನೀಡುವುದು ಸರಿಯಲ್ಲ. ಆದ್ದರಿಂದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ತಿಳಿಸಲು ನಿರ್ದೇಶಿತನಾಗಿದ್ದೇನೆ,’ ಎಂದು 2022ರ ಮೇ 4ರಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗೆ ಪತ್ರವನ್ನೂ ಬರೆದಿದ್ದರು,

 

ಈ ಸರ್ವೆ ನಂಬರ್‌ನಲ್ಲಿರುವ ಜಮೀನನ್ನು ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್‌ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿದೆ. ಆದರೂ ಸರ್ಕಾರವು 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವುದನ್ನು ಸ್ಮರಿಸಬಹುದು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!