Friday | March 27, 2026 |

ವಿದ್ಯುತ್‌ ಖರೀದಿಯ 16,323 ಕೋಟಿ ಬಾಕಿ, 14,413 ಕೋಟಿ ಸಂಚಿತ ನಷ್ಟ; ಎಸ್ಕಾಂಗಳಿಂದ ರಾಜ್ಯ ಹಣಕಾಸಿಗೆ ಅಪಾಯ

Support THE-FILE

spot_img

ಬೆಂಗಳೂರು; ನಿಗದಿತ ವೆಚ್ಚಗಳನ್ನು ವಸೂಲು ಮಾಡಲು ಸಾಧ್ಯವಾಗದಿರುವುದು ಮತ್ತು ಕೆಪಿಸಿಎಲ್‌ನ ಬಾಕಿಗಳನ್ನು ಪಾವತಿಸುವಲ್ಲಿನ ವಿಫಲವಾಗಿರುವುದು ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ದುರ್ಬಲ ಹಣಕಾಸಿ ಪರಿಸ್ಥಿತಿ ಎದುರಿಸುತ್ತಿರುವ ರಾಜ್ಯದ ವಿದ್ಯುತ್‌ ಕಂಪನಿಗಳು (ಎಸ್ಕಾಂಗಳು) ರಾಜ್ಯದ ಹಣಕಾಸಿನ ಮೇಲೆ ಅಪಾಯಗಳನ್ನು ತರುವ ಸಾಧ್ಯತೆ ಇದೆ ಎಂದು ವಿತ್ತೀಯ ನಿರ್ವಹಣೆ ಪರಿಶೀಲನಾ ಸಮಿತಿಯು ಮುನ್ಸೂಚನೆ ನೀಡಿದೆ.

 

ಆಯವ್ಯಯದ ಜತೆಯಲ್ಲಿ ಮಂಡನೆಯಾಗಿರುವ 2023-27ರ ಮಧ್ಯಮಾವಧಿ ವಿತ್ತೀಯ ಯೋಜನೆಯಲ್ಲಿ ಎಸ್ಕಾಂಗಳ ಹಣಕಾಸಿನ ಪರಿಸ್ಥಿತಿ ಮೇಲೆ ಬೆಳಕು ಚೆಲ್ಲಲಾಗಿದೆ. ಎಸ್ಕಾಂಗಳ ಸುಧಾರಣೆ ಕುರಿತು ಇಂಧನ ಸಚಿವ ವಿ ಸುನಿಲ್‌ಕುಮಾರ್‌ ಅವರು ಇತ್ತೀಚೆಗಷ್ಟೇ  ಹೇಳಿಕೆ ನೀಡಿದ್ದರ ಬೆನ್ನಲ್ಲೇ  ಮಧ್ಯಮಾವಧಿ ವಿತ್ತೀಯ ಯೋಜನೆಯು ನೀಡಿರುವ ವರದಿಯಲ್ಲಿ  ಎಸ್ಕಾಂಗಳ ಕಾರ್ಯನಿರ್ವಹಣೆ ಕುರಿತು ಬೆಳಕು ಚೆಲ್ಲಿರುವುದು ಮುನ್ನೆಲೆಗೆ ಬಂದಿದೆ.

 

‘ರಾಜ್ಯ ವಿದ್ಯುತ್‌ ಕಂಪನಿಗಳ ದುರ್ಬಲ ಹಣಕಾಸು ಪರಿಸ್ಥಿತಿಯು ರಾಜ್ಯದ ಹಣಕಾಸಿನ ಮೇಲೆ ಅಪಾಯಗಳನ್ನು ತರುವ ಸಾಧ್ಯತೆ ಇರುತ್ತದೆ. ರಾಜ್ಯ ಸರ್ಕಾರವು ವಿದ್ಯುತ್‌ ಕಂಪನಿಗಳ ಮತ್ತು ಕೆಪಿಸಿಎಲ್‌ನ ಸಾಲಗಳಿಗೆ 30,895 ಕೋಟಿ ರು.ಗಳ ಖಾತರಿ ನಿಡಿದೆ. ಈ ಕಂಪನಿಗಳು ಸಾಲವನ್ನು ಮರು ಪಾವತಿಸಲು ವಿಫಲವಾದರೆ ಇಂತಹ ಖಾತರಿಗಳ ಕಾರಣದಿಂದ ಒಟ್ಟು ಸಾಲದ ಹೊಣೆಗಾರಿಕೆಯು ರಾಜ್ಯ ಸರ್ಕಾರದ ಮೇಲೆ ಬೀಳುತ್ತದೆ,’ ಎಂದು ವಿವರಿಸಿದೆ.

 

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್‌ 2022ರವರೆಗೆ ವಿದ್ಯುತ್‌ ಸರಬರಾಜು ಕಂಪನಿಗಳ ಎಲ್‌ಪಿಎಸ್‌ ಬಾಕಿಗಳಿಗಾಗಿ 13,709 ಕೋಟಿ ರುಗಳೂ ಸೇರಿದಂತೆ 17,465 ಕೋಟಿ ರು.ಗಳ ಖಾತರಿ ನೀಡಿದೆ. ಈ ಖಾತರಿಗಳು ಸಾದಿಲ್ವಾರು ಹೊಣೆಗಾರಿಕೆಗಳಾಗಿದ್ದು ಖಾತರಿ ಪಡೆದ ವಿದ್ಯುತ್‌ ಕಂಪನಿಗಳು ಮರುಪಾವತಿ ಮಾಡದಿದ್ದಲ್ಲಿ ಸಂಪೂರ್ಣ ಸಾಲ ಮರುಪಾವತಿ ಹೊಣೆಗಾರಿಕೆಯು ರಾಜ್ಯ ಸರ್ಕಾರದ ಮೇಲೆ ಬೀಳುತ್ತದೆ ಎಂದು ವಿತ್ತೀಯ ನಿರ್ವಹಣೆ ಪರಿಶೀಲನಾ ಸಮಿತಿಯು ಎಚ್ಚರಿಸಿರುವುದು ವರದಿಯಿಂದ ಗೊತ್ತಾಗಿದೆ.

 

 

‘ರಾಜ್ಯವು ರಾಜ್ಯ ಉದ್ದಿಮೆಗಳಿಗೆ ವಿತರಿಸಿದ ಖಾತರಿಗಳಿಂದ ಉದ್ಭವಿಸುವ ಹೊಣೆಗಾರಿಕೆಗಳನ್ನು ಪೂರೈಸುವುದಕ್ಕಾಗಿ ಖಾತರಿ ನಿಧಿಯನ್ನು ರೂಪಿಸಿದೆ. ರಾಜ್ಯ ಸರ್ಕಾರವು ಡಿಸೆಂಬರ್‌ 2022ರವರೆಗೆ ವಿತರಿಸಿದ ಖಾತರಿಗಳ ಬಾಕಿ ಮೊತ್ತವು (ಬಡ್ಡಿ ಸೇರಿದಂತೆ) 36,657 ಕೋಟಿ ರು>ಗಾಇದೆ. ಇದು ಹಿಂದಿನ ಎರಡನೇ ವರ್ಷದ ರಾಜಸ್ವ ಸ್ವೀಕೃತಿಗಳ ಶೇ.21.7ರಷ್ಟಿದೆ,’ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ವಿದ್ಯುತ್‌ ಉತ್ಪಾದಕ, ಪ್ರಸರಣ ಕಂಪನಿಗಳಿಗೆ ಎಸ್ಕಾಂಗಳು ವಿದ್ಯುತ್‌ ಖರೀದಿ ಬಾಕಿ ರೂಪದಲ್ಲಿ 16,323 ಕೋಟಿ ರು.ಗಳಷ್ಟಿದೆ.  2022ರ ಡಿಸೆಂಬರ್‌ ಅಂತ್ಯಕ್ಕೆ 30,554 ಕೋಟಿ ರು. ಎಸ್ಕಾಂಗಳ ಬಾಕಿ ಸಾಲ ಇದೆ. ಅಲ್ಲದೇ ಎಸ್ಕಾಂಗಳ ಸಂಚಿತ ನಷ್ಟವು 2022ರ ಮಾರ್ಚ್‌ ಅಂತ್ಯಕ್ಕೆ 14,413 ಕೋಟಿ ರು.ಗಳಷ್ಟಿದೆ.

 

‘ಕೆಪಿಸಿಎಲ್‌ನ ಬಾಕಿಗಳನ್ನು ಪಾವತಿಸುವಲ್ಲಿನ ಎಸ್ಕಾಂಗಳ ವೈಫಲ್ಯದಿಂದಾಗಿ ಕೆಪಿಸಿಎಲ್‌ನ ಕಾರ್ಯಾಚರಣೆಗಳಿಗೆ ತೊಡಕು ಉಂಟಾಗಿದೆ. ಮತ್ತು ಕೆಪಿಸಿಎಲ್‌ನ ಬಾಕಿ ಸಾಲಗಳು 31,258 ಕೋಟಿ ರುಗಳಿಗೆ ಏರಲು ಕಾರಣವಾಗಿದೆ,’ ಎಂದು ಸಮಿತಿಯು ವರದಿಯಲ್ಲಿ ವಿಶ್ಲೇಷಿಸಿದೆ.

 

ಮಧ್ಯಮಾವಧಿ ವಿತ್ತೀಯ ಯೋಜನೆ ವರದಿ ಪ್ರಕಾರ ಎಸ್ಕಾಂಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ನಿಗದಿತ ವೆಚ್ಚಗಳನ್ನು ವಸೂಲು ಮಾಡಲು ಸಾಧ್ಯವಾಗದೇ ಇರುವುದು, ಕ್ರಾಸ್‌ ಸಬ್ಸಿಡೈಸೇಷನ್‌ ಮಟ್ಟ ಹೆಚ್ಚಿರುವುದು, ಹೆಚ್ಚಿನ ವಿದ್ಯುತ್‌ ದರದ ವಿದ್ಯುತ್‌ ಖರೀದಿಗೆ ಮತ್ತು ಹೆಚ್ಚು ಪಾವತಿಸುವಂತಹ ಗ್ರಾಹಕರು ಮುಕ್ತ ಬಳಕೆ/ಬಂಧಿತ ಉತ್ಪಾದನೆಯ ಕಡೆ ಹೊರಳುತ್ತಿರುವುದು ಎಸ್ಕಾಂಗಳನ್ನು ನಷ್ಟ ಮತ್ತು ಸಮಸ್ಯೆಗಳಿಗೆ ದೂಡಿವೆ.

Hot this week

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Topics

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Related Articles

Popular Categories

error: Content is protected !!