Monday | March 9, 2026 |

ಬಿಎಂಎಸ್‌ ಟ್ರಸ್ಟ್‌ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ

Support THE-FILE

spot_img

ಬೆಂಗಳೂರು; ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ಬೆಂಗಳೂರು ಜಿಲ್ಲಾಧಿಕಾರಿ ಇದುವರೆಗೂ ಪಾಲನೆ ಮಾಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ನ ಡೀಡ್‌ನ್ನು ನಿಯಮಬಾಹಿರವಾಗಿ ತಿದ್ದುಪಡಿ ಮಾಡಲಾಗುತ್ತಿದೆ ಎಂಬ ಸಲ್ಲಿಕೆಯಾಗಿದ್ದ ದೂರನ್ನು ಲೋಕಾಯುಕ್ತ ಸಂಸ್ಥೆಯು ವಿಚಾರಣೆಯನ್ನೇ ನಡೆಸದಿರುವುದು ಮತ್ತು ಜಮೀನಿನ ವ್ಯಾಜ್ಯ ಇತ್ಯರ್ಥವಾಗದಿದ್ದರೂ ಬಿಎಂಎಸ್‌ ಖಾಸಗಿ ವಿಶ್ವವಿದ್ಯಾಲಯ ಮಸೂದೆಗೆ ವಿಧಾನಮಂಡಲವು ಒಪ್ಪಿಗೆ ನೀಡಿರುವ ಹೊತ್ತಿನಲ್ಲಿಯೇ ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವು ಮುನ್ನೆಲೆಗೆ ಬಂದಿದೆ. ಈ ಕುರಿತು ಸಚಿವ ಆರ್‌ ಅಶೋಕ್‌ ಅವರು ನೀಡಿದ್ದ ಸೂಚನೆ ಮೇರೆಗೆ ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ಗೊತ್ತಾಗಿದೆ.

 

ಬಿಎಂಎಸ್‌ ಎಜುಕೇಷನ್‌ ಟ್ರಸ್ಟ್‌ ಹೊಂದಿರುವ ಜಮೀನಿನ ದಾಖಲೆಗಳ ನೈಜತೆ ಪರಿಶೀಲಿಸಿ ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ 2022ರ ಡಿಸೆಂಬರ್‌ 12ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು. ಇದರ ಪ್ರತಿಯು’ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಟ್ರಸ್ಟ್‌ ಹೊಂದಿರುವ ಜಮೀನಿನ ದಾಖಲೆಗಳನ್ನು ಪರಿಶೀಲಿಸಿ ಕ್ರಮಬದ್ಧತೆ ಬಗ್ಗೆ ವರದಿ ನೀಡಬೇಕು. ನೈಜತೆ ಸೇರಿದಂತೆ ಎಲ್ಲಾ ಅಂಶಗಳನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸಿ ಕೂಡಲೇ ದಾಖಲೆ ಮಾಹಿತಿಯೊಂದಿಗೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ನೀಡಬೇಕು,’ ಎಂದು ನಿರ್ದೇಶನ ನೀಡಿರುವುದು ಪತ್ರದಿಂದ ಗೊತ್ತಾಗಿದೆ.

 

ಪತ್ರದಲ್ಲೇನಿದೆ?

 

ಬಿ ಎಂ ಶ್ರೀನಿವಾಸಯ್ಯ ಎಜುಕೇಷನಲ್‌ ಟ್ರಸ್ಟ್‌ ಸಂಸ್ಥೆಯು ಆವಲಹಳ್ಳಿ, ಯಲಹಂಕದಲ್ಲಿ ಹೊಂದಿರುವ 12.25 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರದಿಂದ ಮಂಜೂರು ಮಾಡಲಾಗಿರುತ್ತದೆ. ಬೆಂಗಳೂರು ನಗರದ ಬಸವನಗುಡಿ ರಸ್ತೆಯಲ್ಲಿರುವ ಬಿಎಂಎಸ್‌ ಇಂಜಿನಿಯರಿಂಗ್‌ ಕಾಲೇಜು 15 ಎಕರೆ 3.72 ಎಕರೆ ಜಮೀನನ್ನು ಮೈಸೂರು ಸರ್ಕಾರದಿಂದ ಖರೀದಿಸಿದ ಹಾಗೂ ಬೆಂಗಳೂರು ಸಿಟಿ ಕಾರ್ಪೋರೇ‍ಷನ್‌ನಿಂದ ದಾನವಾಗಿ ಪಡೆದ ಭೂಮಿಯಾಗಿರುತ್ತದೆ ಎಂದು ಹೇಳಿರುವ ಪತ್ರದ ನೈಜತೆ ಮತ್ತು ಕಂದಾಯ ದಾಖಲೆಗಳಲ್ಲಿ ನಮೂದಾಗಿರುವ ವಿವರದೊಂದಿಗೆ ಪರಿಶೀಲಿಸಿ ವಸ್ತುನಿಷ್ಠ ವರದಿ ನೀಡಬೇಕು. ಸದರಿ ಜಮೀನು ಪ್ರಸ್ತುತ ಸರ್ಕಾರಿ ಜಮೀನು ಭೂಮಿ ಆಗಿಲ್ಲವೆಂಬ ದಾಖಲೆ ಒದಗಿಸಬೇಕು ಎಂದು ಸೂಚಿಸಲಾಗಿದೆ.

 

ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಬರೆದಿರುವ ಪತ್ರದ ಪ್ರತಿ

 

ಆವಲಹಳ್ಳಿ ಯಲಹಂಕದಲ್ಲಿ ಸುಮಾರು 21 ಎಕರೆ 20 ಗುಂಟೆ ಜಮೀನನ್ನು ಹೊಂದಿದ್ದು ಈ ಜಮೀನಿನಲ್ಲಿ 12.25 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರದಿಂದ ಮಂಜೂರು ಮಾಡಿರುವ ಬಗ್ಗೆ ಪರಿಶೀಲಿಸಬೇಕು. ಬಿ ಎಂ ಶ್ರೀನಿವಾಸಯ್ಯ ಎಜುಕೇಷನಲ್‌ ಟ್ರಸ್ಟ್‌ ಹೊಂದಿರುವ 27 ಎಕರೆ ಜಮೀನಿನ ಒಡೆತನದ ಬಗ್ಗೆ ಕಂದಾಯ ದಾಖಲೆ ಪರಿಶೀಲಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿರುವುದು ಪತ್ರದಿಂದ ಗೊತ್ತಾಗಿದೆ.

 

ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ಪ್ರಸ್ತಾವನೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರಸಮಿತಿಯು 3 ತಿಂಗಳ ಹಿಂದೆಯೇ ನೀಡಿದ್ದ ದೂರು ಲೋಕಾಯುಕ್ತದಲ್ಲಿ ತೆವಳುತ್ತಿರುವ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರವು ಬಿಎಂಎಸ್‌ ವಿಶ್ವವಿದ್ಯಾಲಯ ಕಾಯ್ದೆ 2023 ರೂಪಿಸುವ ಉದ್ದೇಶದಿಂದ ತರಾತುರಿಯಲ್ಲಿ ಮಸೂದೆ ಮಂಡಿಸಿರುವುದು ವಿವಾದಕ್ಕೆ ಕಾರಣವಾಗಿತ್ತು.

 

ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ ಡಿ ಕುಮಾರಸ್ವಾಮಿ ಅವರು ಬಿಎಂಎಸ್‌ ಟ್ರಸ್ಟ್‌ ಡೀಡ್‌ ತಿದ್ದುಪಡಿ ಪ್ರಸ್ತಾವನೆ ತಿರಸ್ಕೃತಗೊಳಿಸಿದ್ದರು. ಹಾಲಿ ಬಿಜೆಪಿ ಸರ್ಕಾರದ ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಇದೇ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದರು. ಈ ಕುರಿತು ಕರ್ನಾಟಕ ರಾಷ್ಟ್ರಸಮಿತಿಯು 2022ರ ಅಕ್ಟೋಬರ್‌ 18ರಂದು ನೀಡಿದ್ದ ದೂರು ಇದುವರೆಗೂ ಅಪರ ವಿಚಾರಣಾಧಿಕಾರಿಗಳು (11) (LOK/BCD/4171/2022) ಬಳಿ ಇರುವುದನ್ನು ಸ್ಮರಿಸಬಹುದು.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!