Monday | March 16, 2026 |

ಲವ್‌ ಜಿಹಾದ್‌; ನಿಖರ ವ್ಯಾಖ್ಯಾನವೂ ಇಲ್ಲ, ಅಪರಾಧ ವರ್ಗೀಕರಣವಾಗಲೀ ಇಲ್ಲವೆಂದ ಸಚಿವ

Support THE-FILE

spot_img

ಬೆಂಗಳೂರು; ರಾಜ್ಯದ ಕರಾವಳಿ ಪ್ರದೇಶಗಳೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲವ್‌ ಜಿಹಾದ್‌ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿವೆ ಎಂದು ಹಿಂದೂಪರ ಸಂಘಟನೆಗಳು ಹುಯಿಲೆಬ್ಬಿಸಿದ್ದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು ಲವ್‌ ಜಿಹಾದ್‌ ಪದಕ್ಕೆ ನಿಖರವಾದ ವ್ಯಾಖ್ಯಾನವಾಗಲೀ, ಅಪರಾಧ ವರ್ಗೀಕರಣವಾಗಲೀ ಇಲ್ಲ ಎಂದು ಹೇಳಿಕೆ ನೀಡಿದೆ.

 

ವಿಧಾನಸಭೆಯಲ್ಲಿ ಈ ಕುರಿತು ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಲವ್ ಜಿಹಾದ್‌ ಕುರಿತು ಮಾಹಿತಿ ಒದಗಿಸಿದ್ದಾರೆ.
ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರೂಪಿಸುವುದು ಮತ್ತು ಪೊಲೀಸ್ ದಳ ರಚಿಸುವ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ಕುರಿತು ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿಂದು ಜನಜಾಗೃತಿ ಸಮಿತಿಗೆ ಭರವಸೆ ನೀಡಿದ್ದರ ಬೆನ್ನಲ್ಲೇ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರವು ಮುನ್ನೆಲೆಗೆ ಬಂದಿದೆ.

 

ನಿಖರವಾದ ವ್ಯಾಖ್ಯಾನ ಮತ್ತು ಅಪರಾಧ ವರ್ಗೀಕರಣವಾಗಲೀ ಮಾಡಿಲ್ಲ ಎಂದು ಹೇಳಿರುವ ಸಚಿವ ಆರಗ ಜ್ಞಾನೇಂದ್ರ ಅವರು ಮದುವೆ ಆಮಿಷವೊಡ್ಡಿ ಮತಾಂತರಗೊಳಿಸಲು ಒತ್ತಾಯಿಸುವ ಸಂಬಂಧ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ 2022ರಡಿ ಪ್ರಕರಣಗಳು ದಾಖಲಾಗಿವೆ ಎಂದು ಉತ್ತರ ನೀಡಿದ್ದಾರೆ.

 

ಆದರೆ ಮತಾಂತರದಡಿಯಲ್ಲಿಯೂ ಬೆಂಗಳೂರು ನಗರ, ಮಂಡ್ಯ, ಚಿತ್ರದುರ್ಗ ಜಿಲ್ಲೆಯಲ್ಲಷ್ಟೇ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ ಎಂಬುದು ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

 

‘ಬೆಂಗಳೂರು ನಗರ ಯಶವಂತಪುರ (ಮೊಕದ್ದಮೆ ಸಂಖ್ಯೆ 329/2022 ಕಲಂ 5) ಮಂಡ್ಯ (ನಾಗಮಂಗಲ ಟೌನ್‌ ಪೊಲೀಸ್‌ ಠಾಣೆ ಮೊಕದ್ದಮೆ ಸಂಖ್ಯೆ 121/2022), ಚಿತ್ರದುರ್ಗ (ಕೋಟೆ ಪೊಲೀಸ್‌ ಠಾಣೆ ಮೊಕದ್ದಮೆ ಸಂಖ್ಯೆ 137/2022) ಮೊಕದ್ದಮೆ ದಾಖಲಾಗಿವೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ 2022ರಡಿ ತಪ್ಪಿಸ್ಥತರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗುತ್ತಿದೆ. ಬೆಂಗಳೂರು ನಗರ, ಮಂಡ್ಯ ಮತ್ತು ಚಿತ್ರದುರ್ಗದಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿದೆ,’ ಎಂದು ಉತ್ತರಿಸಿದ್ದಾರೆ.

 

ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದರು. ಹಿಂದೂ ಯುವತಿಯರು ಮುಸ್ಲಿಂ ಯುವಕರ ಮೋಸಕ್ಕೆ ಬಲಿಯಾಗಬೇಡಿ ಎಂದು ಜಾಗೃತಿ ತಿಳಿಸುವ, ದೆಹಲಿಯಲ್ಲಿ ಶ್ರದ್ಧಾಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಅಫ್ತಾಬ್ ನ ಫೋಟೋ ಹಾಕಿ ಅಲ್ಲಲ್ಲಿ ಪೋಸ್ಟರ್ ಅಂಟಿಸಿದ್ದರು.

 

ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನಿಗೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿ ರಾಜ್ಯಾದ್ಯಂತ ಅಭಿಯಾನ ನಡೆಸಿದ್ದರು. ಪುತ್ತೂರು ನಗರದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಯಾಗಬೇಕು ಎಂದು ಹಿಂದೂಪರ ಸಂಘಟನೆಗಳ ಪೋಸ್ಟರ್‌ಗಳು ರಾರಾಜಿಸಿದ್ದವು.

 

ಮಂಗಳೂರಿನ ಹುಡುಗಿ ಆಶಾ ತನ್ನ ಹೆಸರನ್ನು ಆಯೇಶಾ ಎಂದು ಬದಲಾಯಿಸಿಕೊಂಡು ಭಯೋತ್ಪಾದಕಳಾದಳು. ದೇಶದಲ್ಲಿ ಲವ್ ಜಿಹಾದ್ ನ ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹಿಂದೂ ಯುವತಿಯರು ಇದರಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಹಿಂದೂ ಯುವತಿಯರು ಮತ್ತು ಮಹಿಳೆಯರನ್ನು ಉಳಿಸಲು, ಉತ್ತರ ಪ್ರದೇಶದಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ತರಬೇಕು ಎಂದು ಪ್ರಮೋದ್‌ ಮುತಾಲಿಕ್‌ ಒತ್ತಾಯಿಸಿದ್ದರು.

 

ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಹಿಂದುಪರ ಸಂಘಟನೆಗಳ ನಿಯೋಗವು ಲವ್ ಜಿಹಾದ್ ಕುರಿತು ದೂರು ಸಲ್ಲಿಸಿ, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.

Hot this week

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

Topics

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

Related Articles

Popular Categories

error: Content is protected !!