Thursday | August 27, 2026 |

5 ವರ್ಷದಲ್ಲಿ 9,018 ಮಕ್ಕಳ ಅಪಹರಣ/ಕಾಣೆ; ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಸರ್ಕಾರ

ಬೆಂಗಳೂರು; ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 9,018 ಮಕ್ಕಳು ಅಪಹರಣ ಅಥವಾ ಕಾಣೆಯಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ರಾಜ್ಯ ಸರ್ಕಾರವು ಅಂಕಿ ಅಂಶಗಳನ್ನು ಬಹಿರಂಗಗೊಳಿಸಿದೆ.

 

ವಿಧಾನಪರಿಷತ್‌ನಲ್ಲಿ ಗೋವಿಂದರಾಜು ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆರಗ ಜ್ಞಾನೇಂದ್ರ ಅವರು ಬಹಿರಂಗಪಡಿಸಿರುವ ಅಂಕಿ ಅಂಶಗಳ ಪೈಕಿ ಎಷ್ಟು ಮಕ್ಕಳು ಅಪಹರಣಕ್ಕೊಳಗಾಗಿದ್ದಾರೆ ಎಂಬ ಬಗ್ಗೆ ನಿರ್ದಿಷ್ಟ ಸಂಖ್ಯೆಯನ್ನು ಒದಗಿಸಿಲ್ಲ. 9,018 ಮಕ್ಕಳು ಅಪಹರಣಕ್ಕೊಳಾಗಿದ್ದಾರೆಯೇ ಅಥವಾ ಕಾಣೆಯಾಗಿದ್ದಾರೆಯೇ ಎಂಬ ಬಗ್ಗೆ ಪ್ರತ್ಯೇಕಿಸಿ ಅಂಕಿ ಅಂಶಗಳನ್ನು ಒದಗಿಸಿಲ್ಲ.

 

‘ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ಗಮನಿಸಿದಲ್ಲಿ ಸರಾಸರಿ 10ರಿಂದ ಶೇ.20ರಷ್ಟು ಹೆಚ್ಚಾಗಿರುವುದು ಕಂಡುಬಂದಿದೆ. ಆದರೆ ಕಳೆದ 8 ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿ ಹೆಚ್ಚಾಗಿಲ್ಲ,’ ಎಂದು ಉತ್ತರ ನೀಡಿದ್ದಾರೆ.

 

9,018 ಮಕ್ಕಳ ಪೈಕಿ 2,858 ಗಂಡು ಮಕ್ಕಳನ್ನು ಅಪಹರಣ ಮಾಡಲಾಗಿದೆ. ಅದೇ ರೀತಿ 6,160 ಹೆಣ್ಣು ಮಕ್ಕಳನ್ನು ಅಪಹರಣ ಮಾಡಲಾಗಿದೆ. 2020ರಿಂದ 2023ರವರೆಗೆ 1,720 ಗಂಡುಮಕ್ಕಳು, 4,404 ಹೆಣ್ಣುಮಕ್ಕಳು ಸೇರಿ ಒಟ್ಟಾರೆ 6,124 ಮಕ್ಕಳ ಅಪಹರಣವಾಗಿದ್ದಾರೆ ಎಂಬುದು ಉತ್ತರದಿಂದ ಗೊತ್ತಾಗಿದೆ.

 

ಬಿಜೆಪಿ ಸರ್ಕಾರದ ಅವಧಿಯಲ್ಲಿ 4,242 ಮಕ್ಕಳ ಅಪಹರಣ/ಕಾಣೆಯಾಗಿರುವ ಪ್ರಕರಣಗಳು ವರದಿಯಾಗಿವೆ.  ಇದೇ ಅವಧಿಯಲ್ಲಿ 12,592 ಪೋಕ್ಸೋ ದಾಖಲಾಗಿವೆ. 853 ಬಾಲ್ಯ ವಿವಾಹ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿವೆ. 319 ಬಾಲಕಾರ್ಮಿಕ ತಡೆ ಕಾಯ್ದೆ ಪ್ರಕರಣಗಳು ದಾಖಲಾಗಿವೆ. ಜೆಜೆ ಕಾಯ್ದೆ ಅಡಿ 292 ಪ್ರಕರಣಗಳು ದಾಖಲಾಗಿವೆ

 

2012ರಿಂದ 2023ರ ಜನವರಿ ಅಂತ್ಯಕ್ಕೆ 20,010 ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 9,434 ಪ್ರಕರಣಗಳು ವರದಿಯಾಗಿದ್ದರೆ , ಬಿಜೆಪಿ ಸರ್ಕಾರದ ಮೂರು ವರ್ಷಗಳಲ್ಲಿ 8,333 ಪ್ರಕರಣಗಳು ವರದಿಯಾಗಿವೆ.

 

ಒಟ್ಟು 20,010 ಪ್ರಕರಣಗಳ ಪೈಕಿ 19,147 ಪ್ರಕರಣಗಳು ನಿಜ ಎಂದು ಹೇಳಲಾಗಿದ್ದರೇ 385 ಪ್ರಕರಣಗಳು ಸುಳ್ಳು ಎಂದು ಹೇಳಲಾಗಿದೆ. 478 ಪ್ರಕರಣಗಳನ್ನು ವರ್ಗಾವಣೆ ಮಾಡಲಾಗಿದೆ. 1,277 ಪ್ರಕರಣಗಳಲ್ಲಿ ಕನ್ವಿಕ್ಷನ್‌ ಆಗಿದೆ. 6,766 ಪ್ರಕರಣಗಳು ವಿಲೇವಾರಿಯಾಗಿವೆ. 9,940 ಪ್ರಕರಣಗಳು ಇನ್ನೂ ವಿಚಾರಣೆಗೆ ಬಾಕಿ ಇವೆ,. 94 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿಲ್ಲ ಎಂಬುದು ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

Hot this week

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...
Please Scan to make Your Contribution

Topics

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

Related Articles

Popular Categories

error: Content is protected !!