Saturday | March 21, 2026 |

2022-23ನೇ ಬಜೆಟ್; ಆರ್ಥಿಕ ವರ್ಷಾಂತ್ಯದಲ್ಲಿದ್ದರೂ 79,255 ಕೋಟಿ ರು. ವೆಚ್ಚವೇ ಆಗಿಲ್ಲ

Support THE-FILE

spot_img

ಬೆಂಗಳೂರು; ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಬೈಸಿಕಲ್‌ ಒದಗಿಸಲು ಹಣವಿಲ್ಲವೆಂದು ಕೈಚೆಲ್ಲುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಫೆಬ್ರುವರಿ ಅಂತ್ಯಗೊಂಡರೂ 79,255 ಕೋಟಿ ರು.ಗಳನ್ನು ಇನ್ನೂ ಖರ್ಚು ಮಾಡಿಲ್ಲ ಎಂಬುದು ಬಹಿರಂಗವಾಗಿದೆ.

 

2023ರ ಮಾರ್ಚ್‌ 21ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿರುವ ನಡೆಯುತ್ತಿರುವ ಕರ್ನಾಟಕ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಗೆ ಇಲಾಖೆಗಳು ಸಲ್ಲಿಸಿರುವ ಅಂಕಿ ಅಂಶಗಳ ಪ್ರಕಾರ ನಗರಾಭಿವೃದ್ದಿ ಸೇರಿದಂತೆ ಹಲವು ಇಲಾಖೆಗಳು ನಿಗದಿತ ಅವಧಿ ಮೀರಿದ್ದರೂ ಬಿಡುಗಡೆಯಾಗಿರುವ ಅನುದಾನವನ್ನೂ ಖರ್ಚು ಮಾಡದೆಯೇ ಹಲವು ಜನಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇಲಾಖೆಗಳು ಮಂಡಿಸಿರುವ ಅಂಕಿ ಅಂಶಗಳ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಮತ ಬ್ಯಾಂಕ್‌ನ್ನು ಬಲಪಡಿಸಿಕೊಳ್ಳಲು ಕೋಟ್ಯಂತರ ರುಪಾಯಿ ಖರ್ಚು ಮಾಡಿ ಫಲಾನುಭವಿಗಳ ಸಮಾವೇಶಗಳನ್ನು ಸಂಘಟಿಸುತ್ತಿದೆ. ಬಿಡುಗಡೆಯಾಗಿರುವ ಅನುದಾನವನ್ನು ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವವರುಗಳು  ಈ ಸಮಾವೇಶಗಳಲ್ಲಿ ಲೆಕ್ಕಕೊಡುತ್ತಿದ್ದಾರಾದರೂ  2023ರ ಫೆಬ್ರುವರಿ ಅಂತ್ಯಕ್ಕೆ 79,255 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿರುವುದು ಮುನ್ನೆಲೆಗೆ ಬಂದಿದೆ.

 

2022-23ರ ಆಯವ್ಯಯದಲ್ಲಿ ಒಟ್ಟು 2,42,751.39 ಕೋಟಿ ರು. ಹಂಚಿಕೆಯಾಗಿತ್ತು. ಈ ಮೊತ್ತದಲ್ಲಿ ಪ್ರಾರಂಭಿಕ ಶಿಲ್ಕು 20,248.66 ಕೋಟಿ ರು. ಇತ್ತು. ಈ ಪೈಕಿ 1,93,281.91 ಕೋಟಿ ರು. ಬಿಡುಗಡೆ ಆಗಿದೆ. ಇದು ಒಟ್ಟು ಅನುದಾನಕ್ಕೆ ಶೇ.79.62ರಷ್ಟಿತ್ತು. ಇದರಲ್ಲಿ ಒಟ್ಟು 1,83,744.97 ಕೋಟಿ ರು. ವೆಚ್ಚವಾಗಿದೆ. 2021-22ರಲ್ಲಿ ಇದೇ ಅವಧಿಗೆ ಒಟ್ಟು ಅನುದಾನಕ್ಕೆ ಶೆ.86.3ರಷ್ಟು ವೆಚ್ಚವಾಗಿತ್ತು. 1,61,297.40 ಕೋಟಿ ರು. ವೆಚ್ಚವಾಗಿತ್ತು. 2021-22ರ ಫೆಬ್ರುವರಿಯಲ್ಲಿ 90,369 ಕೋಟಿ ರು. ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿತ್ತು ಎಂಬುದು ಅಂಕಿ ಅಂಶದಿಂದ ತಿಳಿದು ಬಂದಿದೆ.

 

ಅನುದಾನವನ್ನು ಖರ್ಚು ಮಾಡದೆಯೇ ಬಾಕಿ ಉಳಿಸಿಕೊಂಡಿರುವ ಇಲಾಖೆಗಳ ಪೈಕಿ ನಗರಾಭಿವೃದ್ಧಿ ಇಲಾಖೆಯು ಪ್ರಥಮ ಸ್ಥಾನದಲ್ಲಿದೆ. ಈ ಇಲಾಖೆಯು ಫೆ.2023ರ ಅಂತ್ಯಕ್ಕೆ ನಗರಾಭಿವೃದ್ಧಿ ಇಲಾಖೆಯು ಒಟ್ಟು 8,204.96 ಕೋಟಿ ರು.ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿದೆ.

 

ಅದೇ ರೀತಿ ಗ್ರಾಮೀಣಾಬಿವೃದ್ಧಿ ಇಲಾಖೆಯಲ್ಲಿ 7,345.80 ಕೋಟಿ ರು., ಜಲಸಂಪನ್ಮೂಲ ಇಲಾಖೆಯಲ್ಲಿ 7,174.86 ಕೋಟಿ ರು., ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು 5,957.76 ಕೋಟಿ ರು. , ಇಂಧನ ಇಲಾಖೆಯಲ್ಲಿ 4,907 ಕೋಟಿ ರು., ಲೋಕೋಪಯೋಗಿ ಇಲಾಖೆಯು 4,355.02 ಕೋಟಿ ರು.ಗಳನ್ನು ಖರ್ಚು ಮಾಡಿಲ್ಲ.

 

ಯೋಜನೆ ಇಲಾಖೆಯು 3,633.02 ಕೋಟಿ ರು., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 3,283.67 ಕೋಟಿ ರು., ಕೃಷಿ ಇಲಾಖೆಯು 3,262.49 ಕೋಟಿ ರು., ಆರೋಗ್ಯ ಇಲಾಖೆಯು 2,331.53 ಕೋಟಿ ರು., ಕಂದಾಯ 1,990.96 ಕೋಟಿ ರು., ವಸತಿ 1,972.64 ಕೋಟಿ ರು., ಸಹಕಾರ 1,569.82 ಕೋಟಿ ರು., ಉನ್ನತ ಸಶಿಕ್ಷಣ 1,386.72 ಕೋಟಿ ರು., ಒಳಾಡಳಿತ 1,300.94 ಕೋಟಿ ರು., ಸಮಾಜ ಕಲ್ಯಾಣ ಇಲಾಖೆಯು 1,109.94 ಕೋಟಿ ರು., ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ.

 

ವಿಪತ್ತು ನಿರ್ವಹಣೆಯಲ್ಲಿ 695.93 ಕೋಟಿ ರು., ಅರಣ್ಯ ಇಲಾಖೆಯಲ್ಲಿ 608.74 ಕೋಟಿ ರು., ಮೂಲಸೌಲಭ್ಯ ಅಭಿವೃದ್ಧಿಯಲ್ಲಿ 575.38 ಕೋಟಿ ರು., ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 567.70 ಕೋಟಿ ರು., ಸಣ್ಣ ನೀರಾವರಿಯಲ್ಲಿ 525.05 ಕೋಟಿ ರು., ಪಶುಸಂಗೋಒಪನೆಯಲ್ಲಿ 464.45 ಕೋಟಿ ರು., ವಾಣಿಜ್ಯ ಮತ್ತು ಕೈಗಾರಿಕೆಯಲ್ಲಿ 417.30 ಕೋಟಿ ರು., ತೋಟಗಾರಿಕೆಯಲ್ಲಿ 406.56 ಕೋಟಿ ರು., ಕೌಶಲ್ಯಾಭಿವೃದ್ದಿಯಲ್ಲಿ 260.33 ಕೋಟಿ ರು., ಕನ್ನಡ ಸಂಸ್ಕೃತಿಯಲ್ಲಿ 221.71 ಕೋಟಿ ರು.,ಗಳನ್ನು ವೆಚ್ಚ ಮಾಡಿಲ್ಲ ಎಂಬುದು ತಿಳಿದು ಬಂದಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!