Wednesday | July 22, 2026 |

2022-23ನೇ ಬಜೆಟ್; ಆರ್ಥಿಕ ವರ್ಷಾಂತ್ಯದಲ್ಲಿದ್ದರೂ 79,255 ಕೋಟಿ ರು. ವೆಚ್ಚವೇ ಆಗಿಲ್ಲ

ಬೆಂಗಳೂರು; ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಬೈಸಿಕಲ್‌ ಒದಗಿಸಲು ಹಣವಿಲ್ಲವೆಂದು ಕೈಚೆಲ್ಲುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಫೆಬ್ರುವರಿ ಅಂತ್ಯಗೊಂಡರೂ 79,255 ಕೋಟಿ ರು.ಗಳನ್ನು ಇನ್ನೂ ಖರ್ಚು ಮಾಡಿಲ್ಲ ಎಂಬುದು ಬಹಿರಂಗವಾಗಿದೆ.

 

2023ರ ಮಾರ್ಚ್‌ 21ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿರುವ ನಡೆಯುತ್ತಿರುವ ಕರ್ನಾಟಕ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಗೆ ಇಲಾಖೆಗಳು ಸಲ್ಲಿಸಿರುವ ಅಂಕಿ ಅಂಶಗಳ ಪ್ರಕಾರ ನಗರಾಭಿವೃದ್ದಿ ಸೇರಿದಂತೆ ಹಲವು ಇಲಾಖೆಗಳು ನಿಗದಿತ ಅವಧಿ ಮೀರಿದ್ದರೂ ಬಿಡುಗಡೆಯಾಗಿರುವ ಅನುದಾನವನ್ನೂ ಖರ್ಚು ಮಾಡದೆಯೇ ಹಲವು ಜನಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇಲಾಖೆಗಳು ಮಂಡಿಸಿರುವ ಅಂಕಿ ಅಂಶಗಳ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಮತ ಬ್ಯಾಂಕ್‌ನ್ನು ಬಲಪಡಿಸಿಕೊಳ್ಳಲು ಕೋಟ್ಯಂತರ ರುಪಾಯಿ ಖರ್ಚು ಮಾಡಿ ಫಲಾನುಭವಿಗಳ ಸಮಾವೇಶಗಳನ್ನು ಸಂಘಟಿಸುತ್ತಿದೆ. ಬಿಡುಗಡೆಯಾಗಿರುವ ಅನುದಾನವನ್ನು ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವವರುಗಳು  ಈ ಸಮಾವೇಶಗಳಲ್ಲಿ ಲೆಕ್ಕಕೊಡುತ್ತಿದ್ದಾರಾದರೂ  2023ರ ಫೆಬ್ರುವರಿ ಅಂತ್ಯಕ್ಕೆ 79,255 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿರುವುದು ಮುನ್ನೆಲೆಗೆ ಬಂದಿದೆ.

 

2022-23ರ ಆಯವ್ಯಯದಲ್ಲಿ ಒಟ್ಟು 2,42,751.39 ಕೋಟಿ ರು. ಹಂಚಿಕೆಯಾಗಿತ್ತು. ಈ ಮೊತ್ತದಲ್ಲಿ ಪ್ರಾರಂಭಿಕ ಶಿಲ್ಕು 20,248.66 ಕೋಟಿ ರು. ಇತ್ತು. ಈ ಪೈಕಿ 1,93,281.91 ಕೋಟಿ ರು. ಬಿಡುಗಡೆ ಆಗಿದೆ. ಇದು ಒಟ್ಟು ಅನುದಾನಕ್ಕೆ ಶೇ.79.62ರಷ್ಟಿತ್ತು. ಇದರಲ್ಲಿ ಒಟ್ಟು 1,83,744.97 ಕೋಟಿ ರು. ವೆಚ್ಚವಾಗಿದೆ. 2021-22ರಲ್ಲಿ ಇದೇ ಅವಧಿಗೆ ಒಟ್ಟು ಅನುದಾನಕ್ಕೆ ಶೆ.86.3ರಷ್ಟು ವೆಚ್ಚವಾಗಿತ್ತು. 1,61,297.40 ಕೋಟಿ ರು. ವೆಚ್ಚವಾಗಿತ್ತು. 2021-22ರ ಫೆಬ್ರುವರಿಯಲ್ಲಿ 90,369 ಕೋಟಿ ರು. ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿತ್ತು ಎಂಬುದು ಅಂಕಿ ಅಂಶದಿಂದ ತಿಳಿದು ಬಂದಿದೆ.

 

ಅನುದಾನವನ್ನು ಖರ್ಚು ಮಾಡದೆಯೇ ಬಾಕಿ ಉಳಿಸಿಕೊಂಡಿರುವ ಇಲಾಖೆಗಳ ಪೈಕಿ ನಗರಾಭಿವೃದ್ಧಿ ಇಲಾಖೆಯು ಪ್ರಥಮ ಸ್ಥಾನದಲ್ಲಿದೆ. ಈ ಇಲಾಖೆಯು ಫೆ.2023ರ ಅಂತ್ಯಕ್ಕೆ ನಗರಾಭಿವೃದ್ಧಿ ಇಲಾಖೆಯು ಒಟ್ಟು 8,204.96 ಕೋಟಿ ರು.ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿದೆ.

 

ಅದೇ ರೀತಿ ಗ್ರಾಮೀಣಾಬಿವೃದ್ಧಿ ಇಲಾಖೆಯಲ್ಲಿ 7,345.80 ಕೋಟಿ ರು., ಜಲಸಂಪನ್ಮೂಲ ಇಲಾಖೆಯಲ್ಲಿ 7,174.86 ಕೋಟಿ ರು., ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು 5,957.76 ಕೋಟಿ ರು. , ಇಂಧನ ಇಲಾಖೆಯಲ್ಲಿ 4,907 ಕೋಟಿ ರು., ಲೋಕೋಪಯೋಗಿ ಇಲಾಖೆಯು 4,355.02 ಕೋಟಿ ರು.ಗಳನ್ನು ಖರ್ಚು ಮಾಡಿಲ್ಲ.

 

ಯೋಜನೆ ಇಲಾಖೆಯು 3,633.02 ಕೋಟಿ ರು., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 3,283.67 ಕೋಟಿ ರು., ಕೃಷಿ ಇಲಾಖೆಯು 3,262.49 ಕೋಟಿ ರು., ಆರೋಗ್ಯ ಇಲಾಖೆಯು 2,331.53 ಕೋಟಿ ರು., ಕಂದಾಯ 1,990.96 ಕೋಟಿ ರು., ವಸತಿ 1,972.64 ಕೋಟಿ ರು., ಸಹಕಾರ 1,569.82 ಕೋಟಿ ರು., ಉನ್ನತ ಸಶಿಕ್ಷಣ 1,386.72 ಕೋಟಿ ರು., ಒಳಾಡಳಿತ 1,300.94 ಕೋಟಿ ರು., ಸಮಾಜ ಕಲ್ಯಾಣ ಇಲಾಖೆಯು 1,109.94 ಕೋಟಿ ರು., ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ.

 

ವಿಪತ್ತು ನಿರ್ವಹಣೆಯಲ್ಲಿ 695.93 ಕೋಟಿ ರು., ಅರಣ್ಯ ಇಲಾಖೆಯಲ್ಲಿ 608.74 ಕೋಟಿ ರು., ಮೂಲಸೌಲಭ್ಯ ಅಭಿವೃದ್ಧಿಯಲ್ಲಿ 575.38 ಕೋಟಿ ರು., ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 567.70 ಕೋಟಿ ರು., ಸಣ್ಣ ನೀರಾವರಿಯಲ್ಲಿ 525.05 ಕೋಟಿ ರು., ಪಶುಸಂಗೋಒಪನೆಯಲ್ಲಿ 464.45 ಕೋಟಿ ರು., ವಾಣಿಜ್ಯ ಮತ್ತು ಕೈಗಾರಿಕೆಯಲ್ಲಿ 417.30 ಕೋಟಿ ರು., ತೋಟಗಾರಿಕೆಯಲ್ಲಿ 406.56 ಕೋಟಿ ರು., ಕೌಶಲ್ಯಾಭಿವೃದ್ದಿಯಲ್ಲಿ 260.33 ಕೋಟಿ ರು., ಕನ್ನಡ ಸಂಸ್ಕೃತಿಯಲ್ಲಿ 221.71 ಕೋಟಿ ರು.,ಗಳನ್ನು ವೆಚ್ಚ ಮಾಡಿಲ್ಲ ಎಂಬುದು ತಿಳಿದು ಬಂದಿದೆ.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!