Friday | May 1, 2026 |

2022-23ನೇ ಬಜೆಟ್; ಆರ್ಥಿಕ ವರ್ಷಾಂತ್ಯದಲ್ಲಿದ್ದರೂ 79,255 ಕೋಟಿ ರು. ವೆಚ್ಚವೇ ಆಗಿಲ್ಲ

ಬೆಂಗಳೂರು; ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಬೈಸಿಕಲ್‌ ಒದಗಿಸಲು ಹಣವಿಲ್ಲವೆಂದು ಕೈಚೆಲ್ಲುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಫೆಬ್ರುವರಿ ಅಂತ್ಯಗೊಂಡರೂ 79,255 ಕೋಟಿ ರು.ಗಳನ್ನು ಇನ್ನೂ ಖರ್ಚು ಮಾಡಿಲ್ಲ ಎಂಬುದು ಬಹಿರಂಗವಾಗಿದೆ.

 

2023ರ ಮಾರ್ಚ್‌ 21ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿರುವ ನಡೆಯುತ್ತಿರುವ ಕರ್ನಾಟಕ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಗೆ ಇಲಾಖೆಗಳು ಸಲ್ಲಿಸಿರುವ ಅಂಕಿ ಅಂಶಗಳ ಪ್ರಕಾರ ನಗರಾಭಿವೃದ್ದಿ ಸೇರಿದಂತೆ ಹಲವು ಇಲಾಖೆಗಳು ನಿಗದಿತ ಅವಧಿ ಮೀರಿದ್ದರೂ ಬಿಡುಗಡೆಯಾಗಿರುವ ಅನುದಾನವನ್ನೂ ಖರ್ಚು ಮಾಡದೆಯೇ ಹಲವು ಜನಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇಲಾಖೆಗಳು ಮಂಡಿಸಿರುವ ಅಂಕಿ ಅಂಶಗಳ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಮತ ಬ್ಯಾಂಕ್‌ನ್ನು ಬಲಪಡಿಸಿಕೊಳ್ಳಲು ಕೋಟ್ಯಂತರ ರುಪಾಯಿ ಖರ್ಚು ಮಾಡಿ ಫಲಾನುಭವಿಗಳ ಸಮಾವೇಶಗಳನ್ನು ಸಂಘಟಿಸುತ್ತಿದೆ. ಬಿಡುಗಡೆಯಾಗಿರುವ ಅನುದಾನವನ್ನು ಖರ್ಚು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವವರುಗಳು  ಈ ಸಮಾವೇಶಗಳಲ್ಲಿ ಲೆಕ್ಕಕೊಡುತ್ತಿದ್ದಾರಾದರೂ  2023ರ ಫೆಬ್ರುವರಿ ಅಂತ್ಯಕ್ಕೆ 79,255 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿರುವುದು ಮುನ್ನೆಲೆಗೆ ಬಂದಿದೆ.

 

2022-23ರ ಆಯವ್ಯಯದಲ್ಲಿ ಒಟ್ಟು 2,42,751.39 ಕೋಟಿ ರು. ಹಂಚಿಕೆಯಾಗಿತ್ತು. ಈ ಮೊತ್ತದಲ್ಲಿ ಪ್ರಾರಂಭಿಕ ಶಿಲ್ಕು 20,248.66 ಕೋಟಿ ರು. ಇತ್ತು. ಈ ಪೈಕಿ 1,93,281.91 ಕೋಟಿ ರು. ಬಿಡುಗಡೆ ಆಗಿದೆ. ಇದು ಒಟ್ಟು ಅನುದಾನಕ್ಕೆ ಶೇ.79.62ರಷ್ಟಿತ್ತು. ಇದರಲ್ಲಿ ಒಟ್ಟು 1,83,744.97 ಕೋಟಿ ರು. ವೆಚ್ಚವಾಗಿದೆ. 2021-22ರಲ್ಲಿ ಇದೇ ಅವಧಿಗೆ ಒಟ್ಟು ಅನುದಾನಕ್ಕೆ ಶೆ.86.3ರಷ್ಟು ವೆಚ್ಚವಾಗಿತ್ತು. 1,61,297.40 ಕೋಟಿ ರು. ವೆಚ್ಚವಾಗಿತ್ತು. 2021-22ರ ಫೆಬ್ರುವರಿಯಲ್ಲಿ 90,369 ಕೋಟಿ ರು. ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿತ್ತು ಎಂಬುದು ಅಂಕಿ ಅಂಶದಿಂದ ತಿಳಿದು ಬಂದಿದೆ.

 

ಅನುದಾನವನ್ನು ಖರ್ಚು ಮಾಡದೆಯೇ ಬಾಕಿ ಉಳಿಸಿಕೊಂಡಿರುವ ಇಲಾಖೆಗಳ ಪೈಕಿ ನಗರಾಭಿವೃದ್ಧಿ ಇಲಾಖೆಯು ಪ್ರಥಮ ಸ್ಥಾನದಲ್ಲಿದೆ. ಈ ಇಲಾಖೆಯು ಫೆ.2023ರ ಅಂತ್ಯಕ್ಕೆ ನಗರಾಭಿವೃದ್ಧಿ ಇಲಾಖೆಯು ಒಟ್ಟು 8,204.96 ಕೋಟಿ ರು.ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿದೆ.

 

ಅದೇ ರೀತಿ ಗ್ರಾಮೀಣಾಬಿವೃದ್ಧಿ ಇಲಾಖೆಯಲ್ಲಿ 7,345.80 ಕೋಟಿ ರು., ಜಲಸಂಪನ್ಮೂಲ ಇಲಾಖೆಯಲ್ಲಿ 7,174.86 ಕೋಟಿ ರು., ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು 5,957.76 ಕೋಟಿ ರು. , ಇಂಧನ ಇಲಾಖೆಯಲ್ಲಿ 4,907 ಕೋಟಿ ರು., ಲೋಕೋಪಯೋಗಿ ಇಲಾಖೆಯು 4,355.02 ಕೋಟಿ ರು.ಗಳನ್ನು ಖರ್ಚು ಮಾಡಿಲ್ಲ.

 

ಯೋಜನೆ ಇಲಾಖೆಯು 3,633.02 ಕೋಟಿ ರು., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 3,283.67 ಕೋಟಿ ರು., ಕೃಷಿ ಇಲಾಖೆಯು 3,262.49 ಕೋಟಿ ರು., ಆರೋಗ್ಯ ಇಲಾಖೆಯು 2,331.53 ಕೋಟಿ ರು., ಕಂದಾಯ 1,990.96 ಕೋಟಿ ರು., ವಸತಿ 1,972.64 ಕೋಟಿ ರು., ಸಹಕಾರ 1,569.82 ಕೋಟಿ ರು., ಉನ್ನತ ಸಶಿಕ್ಷಣ 1,386.72 ಕೋಟಿ ರು., ಒಳಾಡಳಿತ 1,300.94 ಕೋಟಿ ರು., ಸಮಾಜ ಕಲ್ಯಾಣ ಇಲಾಖೆಯು 1,109.94 ಕೋಟಿ ರು., ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ.

 

ವಿಪತ್ತು ನಿರ್ವಹಣೆಯಲ್ಲಿ 695.93 ಕೋಟಿ ರು., ಅರಣ್ಯ ಇಲಾಖೆಯಲ್ಲಿ 608.74 ಕೋಟಿ ರು., ಮೂಲಸೌಲಭ್ಯ ಅಭಿವೃದ್ಧಿಯಲ್ಲಿ 575.38 ಕೋಟಿ ರು., ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 567.70 ಕೋಟಿ ರು., ಸಣ್ಣ ನೀರಾವರಿಯಲ್ಲಿ 525.05 ಕೋಟಿ ರು., ಪಶುಸಂಗೋಒಪನೆಯಲ್ಲಿ 464.45 ಕೋಟಿ ರು., ವಾಣಿಜ್ಯ ಮತ್ತು ಕೈಗಾರಿಕೆಯಲ್ಲಿ 417.30 ಕೋಟಿ ರು., ತೋಟಗಾರಿಕೆಯಲ್ಲಿ 406.56 ಕೋಟಿ ರು., ಕೌಶಲ್ಯಾಭಿವೃದ್ದಿಯಲ್ಲಿ 260.33 ಕೋಟಿ ರು., ಕನ್ನಡ ಸಂಸ್ಕೃತಿಯಲ್ಲಿ 221.71 ಕೋಟಿ ರು.,ಗಳನ್ನು ವೆಚ್ಚ ಮಾಡಿಲ್ಲ ಎಂಬುದು ತಿಳಿದು ಬಂದಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!