Monday | March 9, 2026 |

ಮೂಲಸೌಕರ್ಯಕ್ಕೆ 93,226 ಕೋಟಿ, ಇಂಧನ ವಲಯಕ್ಕೆ 81,974 ಕೋಟಿ, ಕೃಷಿಗೆ ಕೇವಲ 1,053 ಕೋಟಿ ಹೂಡಿಕೆ

Support THE-FILE

spot_img

ಬೆಂಗಳೂರು; ಮೂಲ ಸೌಕರ್ಯ ಕಲ್ಪಿಸುವ ಉದ್ದೇಶ ಮತ್ತು ಇಂಧನ ವಲಯದ ಸಾರ್ವಜನಿಕ ಉದ್ಯಮಗಳಲ್ಲಿಯೇ ಅತಿ ಹೆಚ್ಚು ಹೂಡಿಕೆ ಮಾಡಿರುವ ರಾಜ್ಯ ಸರ್ಕಾರವು ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳ ಉದ್ದಿಮೆಗಳಿಗೆ ಅತೀ ಕಡಿಮೆ ಪ್ರಮಾಣದ ಹೂಡಿಕೆ ಮಾಡಿದೆ.

 

ಕೃಷಿ ಚಟುವಟಿಕೆ ಮತ್ತು ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವು ಭರ್ಜರಿ ಪ್ರಚಾರ ಪಡೆದುಕೊಂಡಿತ್ತು. ಅಲ್ಲದೇ ವಿಧಾನಸಭೆ ಅಧಿವೇಶನದಲ್ಲಿಯೇ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರೂ ಸಹ ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು  ನೀಡಲಾಗಿದೆ ಎಂದು ಹೇಳಿಕೆ ನೀಡಿದ್ದರ  ಹೊತ್ತಿನಲ್ಲಿಯೇ ಸಾರ್ವಜನಿಕ ಉದ್ಯಮಗಳಲ್ಲಿನ ಹೂಡಿಕೆ ಕುರಿತಾಗಿ ಸಿಎಜಿ ಸಲ್ಲಿಸಿರುವ ವರದಿಯು ಮುನ್ನೆಲೆಗೆ ಬಂದಿದೆ.

 

2021ರ ಮಾರ್ಚ್‌ ಅಂತ್ಯದವರಿಗೆ ಮೂಲ ಸೌಕರ್ಯ ವಲಯದ ಸಾರ್ವಜನಿಕ ಉದ್ದಿಮೆಗಳಿಗೆ 93, 226.24 ಕೋಟಿ ರು. ಮತ್ತು ಇಂಧನ ವಲಯದ ಸಾರ್ವಜನಿಕ ಉದ್ದಿಮೆಗಳಿಗೆ 81,974.15 ಕೋಟಿ ರು. ಹೂಡಿಕೆ ಮಾಡಿದ್ದರೇ ಕೃ‍ಷಿ ಹಾಗೂ ಸಂಬಂಧಿತ ಚಟುವಟಿಕೆಗಳಿಗೆ ಕೇವಲ 1,053.34 ಕೋಟಿ ರು. ಹೂಡಿಕೆ ಮಾಡಲಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

ಸಾರ್ವಜನಿಕ ಉದ್ದಿಮೆಗಳ ಪೈಕಿ ಮೂಲ ಸೌಕರ್ಯ ಹಾಗೂ ಇಂಧನ ವಲಯಗಳಲ್ಲಿ ಹೂಡಿಕೆಗಳಿಗೆ ಹೆಚ್ಚಿನ ಒತ್ತು ನೀಡಿದ್ದು ಇದು ಕ್ರಮವಾಗಿ ಶೇ. 50.17, ಹಾಗೂ ಶೇ. 44.12ರಷ್ಟಾಗಿದೆ. 2016-17 ಹಾಗೂ 2020-21ರ ನಡುವೆ ಮೂಲ ಸೌಕರ್ಯ ಹಾಗೂ ಇಂಧನ ವಲಯಗಳಲ್ಲಿ ಹೂಡಿಕೆಗಳು ಕ್ರಮವಾಗಿ 39,667.67 ಕೋಟಿ ಹಾಗೂ 39,781.19 ಕೋಟಿ ಮೊತ್ತಗಳಷ್ಟು ಹೆಚ್ಚಳಗೊಂಡಿದ್ದವು ಎಂದು ವಿವರಿಸಿದೆ.

 

ಕೃಷಿ ಹಾಗೂ ಸಂಬಂಧಿತ, ಹಣಕಾಸು, ಮೂಲಸೌಕರ್ಯ, ಉತ್ಪಾದನೆ, ಇಂಧನ, ಸೇವೆಗಳು ಮತ್ತು ಇತರೆ ವಲಯಗಳಲ್ಲಿ ಒಟ್ಟು 105 ಸಾರ್ವಜನಿಕ ಉದ್ಯಮವು ಕಾರ್ಯನಿರತವಾಗಿವೆ. 13 ಸ್ಥಗಿತಗೊಂಡಿವೆ. ಈ ಉದ್ದಿಮೆಗಳಲ್ಲಿ 2021ರ ಮಾರ್ಚ್‌ ಅಂತ್ಯಕ್ಕೆ ಒಟ್ಟಾರೆ 1,85,804.43 ಕೋಟಿ ರು.ಹೂಡಿಕೆಯಾಗಿದೆ.
ಹಾಗೆಯೇ ಇದೇ ಅವಧಿಯಲ್ಲಿ 670.18 ಕೋಟಿ ಮೊತ್ತದಷ್ಟು ಹೂಡಿಕೆಗಳನ್ನು ಮಾಡಿದ್ದ 13 ಸಾರ್ವಜನಿಕ ಉದ್ಯಮಗಳು ಕಳೆದ ದ18 ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿವೆ. 27 ಸಾರ್ವಜನಿಕ ವಲಯದ ಉದ್ದಿಮೆಗಳು 2021ರ ಮಾರ್ಚ್‌ ಅಂತ್ಯದವರೆಗೂ ಹೂಡಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನೇ ಸಿಎಜಿಗೆ ಒದಗಿಸಿಲ್ಲ.

 

70 ಸಾರ್ವಜನಿಕ ವಲಯ ಉದ್ದಿಮೆಗಳ ಪೈಕಿ 36ರಲ್ಲಿ 18,319.38 ಕೋಟಿ ಮೊತ್ತದಷ್ಟು ಹೂಡಿಕೆಯಾಗಿದೆ. ಆದರೆ ಲೆಕ್ಕಪತ್ರಗಳನ್ನು ಅಂತಿಮ ರೂಪಕ್ಕೆ ತರುವಲ್ಲಿ ಹಾಗೂ ನಂತರದಲ್ಲಿ ಅವುಗಳ ಲೆಕ್ಕಪರಿಶೋಧನೆಯ ಅನುಪಸ್ಥಿತಿಯಲ್ಲಿ ಮಾಡಿರುವ ಹೂಡಿಕೆಗಳ ಹಾಗೂ ಭರಿಸಿರುವ ವೆಚ್ಚಗಳ ಕುರಿತು ಸಮರ್ಪಕ ಲೆಕ್ಕ ಇಡಲಾಗಿದೆಯೇ ಅಥವಾ ಮೊತ್ತವನ್ನು ಯಾವ ಉದ್ದೇಶಕ್ಕೆ ಹೂಡಿಕೆ ಮಾಡಲಾಗಿತ್ತೋ ಅಂತಹ ಉದ್ದೇಶವು ಈಡೇರಿರುವುದೋ ಅಥವಾ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿಲ್ಲ ಎಂದು ಸಿಎಜಿ ವರದಿಯಲ್ಲಿ ವಿವರಿಸಿದೆ.

 

42 ಸಾರ್ವಜನಿಕ ವಲಯ ಉದ್ದಿಮೆಗಳು 2,986.47 ಕೋಟಿಯಷ್ಟು ನಷ್ಟ ಹೊಂದಿವೆ. ಕೆಎಸ್‌ಎಸ್‌ಡಿಸಿಎಲ್‌, ಕೆಎಂಎಂಡಿಸಿಎಲ್‌, ಕೆಎಎಡಿಸಿಎಲ್‌ ತಮ್ಮ ಮೊದಲ ಲೆಕ್ಕಪತ್ರಗಳನ್ನೇ ಇನ್ನೂ ಅಂತಿಮ ರೂಪಕ್ಕೆ ತಂದಿಲ್ಲ. ಲಾಭಕ್ಕೆ ಪ್ರಮುಖವಾಗಿ ಕೊಡುಗೆ ನೀಡಿರುವ ಕೆಪಿಸಿಎಲ್‌ 1,209.56 ಕೋಟಿ, ಕೆಪಿಟಿಸಿಎಲ್‌ 398.93 ಕೋಟಿ, ಹೆಸ್ಕಾಂ 2,490.26 ಕೋಟಿ, ಆರ್‌ಪಿಎಸಿಎಲ್‌ 1,431.84 ಕೋಟಿ ಗಮನಾರ್ಹ ಮೊತ್ತದ ನಷ್ಟವನ್ನು ಭರಿಸಿದ್ದವು.

 

ಕಾರ್ಯನಿರತ ಸಾರ್ವಜನಿಕ ಉದ್ದಿಮೆಗಳು 2016-17ರಲ್ಲಿ 155.12 ಕೋಟಿ ಮೊತ್ತದಷ್ಟು ನಿವ್ವಳ ಲಾಭ ತೋರಿಸಿದ್ದವು. 2017-18, 2018-19, 2019-20 ಹಾಗೂ 2020-21ನೇ ಸಾಲಿನಲ್ಲಿ ಕ್ರಮವಾಗಿ 2,099.69 ಕೋಟಿ, 2,340.99 ಕೋಟಿ, 3,374.05 ಕೋಟಿ, 5,137.65 ಕೋಟಿಯಷ್ಟು ನಿವ್ವಳ ನಷ್ಟ ಭರಿಸಿದ್ದವು ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!