Wednesday | June 10, 2026 |

ಮೂಲಸೌಕರ್ಯಕ್ಕೆ 93,226 ಕೋಟಿ, ಇಂಧನ ವಲಯಕ್ಕೆ 81,974 ಕೋಟಿ, ಕೃಷಿಗೆ ಕೇವಲ 1,053 ಕೋಟಿ ಹೂಡಿಕೆ

ಬೆಂಗಳೂರು; ಮೂಲ ಸೌಕರ್ಯ ಕಲ್ಪಿಸುವ ಉದ್ದೇಶ ಮತ್ತು ಇಂಧನ ವಲಯದ ಸಾರ್ವಜನಿಕ ಉದ್ಯಮಗಳಲ್ಲಿಯೇ ಅತಿ ಹೆಚ್ಚು ಹೂಡಿಕೆ ಮಾಡಿರುವ ರಾಜ್ಯ ಸರ್ಕಾರವು ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳ ಉದ್ದಿಮೆಗಳಿಗೆ ಅತೀ ಕಡಿಮೆ ಪ್ರಮಾಣದ ಹೂಡಿಕೆ ಮಾಡಿದೆ.

 

ಕೃಷಿ ಚಟುವಟಿಕೆ ಮತ್ತು ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವು ಭರ್ಜರಿ ಪ್ರಚಾರ ಪಡೆದುಕೊಂಡಿತ್ತು. ಅಲ್ಲದೇ ವಿಧಾನಸಭೆ ಅಧಿವೇಶನದಲ್ಲಿಯೇ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರೂ ಸಹ ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು  ನೀಡಲಾಗಿದೆ ಎಂದು ಹೇಳಿಕೆ ನೀಡಿದ್ದರ  ಹೊತ್ತಿನಲ್ಲಿಯೇ ಸಾರ್ವಜನಿಕ ಉದ್ಯಮಗಳಲ್ಲಿನ ಹೂಡಿಕೆ ಕುರಿತಾಗಿ ಸಿಎಜಿ ಸಲ್ಲಿಸಿರುವ ವರದಿಯು ಮುನ್ನೆಲೆಗೆ ಬಂದಿದೆ.

 

2021ರ ಮಾರ್ಚ್‌ ಅಂತ್ಯದವರಿಗೆ ಮೂಲ ಸೌಕರ್ಯ ವಲಯದ ಸಾರ್ವಜನಿಕ ಉದ್ದಿಮೆಗಳಿಗೆ 93, 226.24 ಕೋಟಿ ರು. ಮತ್ತು ಇಂಧನ ವಲಯದ ಸಾರ್ವಜನಿಕ ಉದ್ದಿಮೆಗಳಿಗೆ 81,974.15 ಕೋಟಿ ರು. ಹೂಡಿಕೆ ಮಾಡಿದ್ದರೇ ಕೃ‍ಷಿ ಹಾಗೂ ಸಂಬಂಧಿತ ಚಟುವಟಿಕೆಗಳಿಗೆ ಕೇವಲ 1,053.34 ಕೋಟಿ ರು. ಹೂಡಿಕೆ ಮಾಡಲಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

ಸಾರ್ವಜನಿಕ ಉದ್ದಿಮೆಗಳ ಪೈಕಿ ಮೂಲ ಸೌಕರ್ಯ ಹಾಗೂ ಇಂಧನ ವಲಯಗಳಲ್ಲಿ ಹೂಡಿಕೆಗಳಿಗೆ ಹೆಚ್ಚಿನ ಒತ್ತು ನೀಡಿದ್ದು ಇದು ಕ್ರಮವಾಗಿ ಶೇ. 50.17, ಹಾಗೂ ಶೇ. 44.12ರಷ್ಟಾಗಿದೆ. 2016-17 ಹಾಗೂ 2020-21ರ ನಡುವೆ ಮೂಲ ಸೌಕರ್ಯ ಹಾಗೂ ಇಂಧನ ವಲಯಗಳಲ್ಲಿ ಹೂಡಿಕೆಗಳು ಕ್ರಮವಾಗಿ 39,667.67 ಕೋಟಿ ಹಾಗೂ 39,781.19 ಕೋಟಿ ಮೊತ್ತಗಳಷ್ಟು ಹೆಚ್ಚಳಗೊಂಡಿದ್ದವು ಎಂದು ವಿವರಿಸಿದೆ.

 

ಕೃಷಿ ಹಾಗೂ ಸಂಬಂಧಿತ, ಹಣಕಾಸು, ಮೂಲಸೌಕರ್ಯ, ಉತ್ಪಾದನೆ, ಇಂಧನ, ಸೇವೆಗಳು ಮತ್ತು ಇತರೆ ವಲಯಗಳಲ್ಲಿ ಒಟ್ಟು 105 ಸಾರ್ವಜನಿಕ ಉದ್ಯಮವು ಕಾರ್ಯನಿರತವಾಗಿವೆ. 13 ಸ್ಥಗಿತಗೊಂಡಿವೆ. ಈ ಉದ್ದಿಮೆಗಳಲ್ಲಿ 2021ರ ಮಾರ್ಚ್‌ ಅಂತ್ಯಕ್ಕೆ ಒಟ್ಟಾರೆ 1,85,804.43 ಕೋಟಿ ರು.ಹೂಡಿಕೆಯಾಗಿದೆ.
ಹಾಗೆಯೇ ಇದೇ ಅವಧಿಯಲ್ಲಿ 670.18 ಕೋಟಿ ಮೊತ್ತದಷ್ಟು ಹೂಡಿಕೆಗಳನ್ನು ಮಾಡಿದ್ದ 13 ಸಾರ್ವಜನಿಕ ಉದ್ಯಮಗಳು ಕಳೆದ ದ18 ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿವೆ. 27 ಸಾರ್ವಜನಿಕ ವಲಯದ ಉದ್ದಿಮೆಗಳು 2021ರ ಮಾರ್ಚ್‌ ಅಂತ್ಯದವರೆಗೂ ಹೂಡಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನೇ ಸಿಎಜಿಗೆ ಒದಗಿಸಿಲ್ಲ.

 

70 ಸಾರ್ವಜನಿಕ ವಲಯ ಉದ್ದಿಮೆಗಳ ಪೈಕಿ 36ರಲ್ಲಿ 18,319.38 ಕೋಟಿ ಮೊತ್ತದಷ್ಟು ಹೂಡಿಕೆಯಾಗಿದೆ. ಆದರೆ ಲೆಕ್ಕಪತ್ರಗಳನ್ನು ಅಂತಿಮ ರೂಪಕ್ಕೆ ತರುವಲ್ಲಿ ಹಾಗೂ ನಂತರದಲ್ಲಿ ಅವುಗಳ ಲೆಕ್ಕಪರಿಶೋಧನೆಯ ಅನುಪಸ್ಥಿತಿಯಲ್ಲಿ ಮಾಡಿರುವ ಹೂಡಿಕೆಗಳ ಹಾಗೂ ಭರಿಸಿರುವ ವೆಚ್ಚಗಳ ಕುರಿತು ಸಮರ್ಪಕ ಲೆಕ್ಕ ಇಡಲಾಗಿದೆಯೇ ಅಥವಾ ಮೊತ್ತವನ್ನು ಯಾವ ಉದ್ದೇಶಕ್ಕೆ ಹೂಡಿಕೆ ಮಾಡಲಾಗಿತ್ತೋ ಅಂತಹ ಉದ್ದೇಶವು ಈಡೇರಿರುವುದೋ ಅಥವಾ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿಲ್ಲ ಎಂದು ಸಿಎಜಿ ವರದಿಯಲ್ಲಿ ವಿವರಿಸಿದೆ.

 

42 ಸಾರ್ವಜನಿಕ ವಲಯ ಉದ್ದಿಮೆಗಳು 2,986.47 ಕೋಟಿಯಷ್ಟು ನಷ್ಟ ಹೊಂದಿವೆ. ಕೆಎಸ್‌ಎಸ್‌ಡಿಸಿಎಲ್‌, ಕೆಎಂಎಂಡಿಸಿಎಲ್‌, ಕೆಎಎಡಿಸಿಎಲ್‌ ತಮ್ಮ ಮೊದಲ ಲೆಕ್ಕಪತ್ರಗಳನ್ನೇ ಇನ್ನೂ ಅಂತಿಮ ರೂಪಕ್ಕೆ ತಂದಿಲ್ಲ. ಲಾಭಕ್ಕೆ ಪ್ರಮುಖವಾಗಿ ಕೊಡುಗೆ ನೀಡಿರುವ ಕೆಪಿಸಿಎಲ್‌ 1,209.56 ಕೋಟಿ, ಕೆಪಿಟಿಸಿಎಲ್‌ 398.93 ಕೋಟಿ, ಹೆಸ್ಕಾಂ 2,490.26 ಕೋಟಿ, ಆರ್‌ಪಿಎಸಿಎಲ್‌ 1,431.84 ಕೋಟಿ ಗಮನಾರ್ಹ ಮೊತ್ತದ ನಷ್ಟವನ್ನು ಭರಿಸಿದ್ದವು.

 

ಕಾರ್ಯನಿರತ ಸಾರ್ವಜನಿಕ ಉದ್ದಿಮೆಗಳು 2016-17ರಲ್ಲಿ 155.12 ಕೋಟಿ ಮೊತ್ತದಷ್ಟು ನಿವ್ವಳ ಲಾಭ ತೋರಿಸಿದ್ದವು. 2017-18, 2018-19, 2019-20 ಹಾಗೂ 2020-21ನೇ ಸಾಲಿನಲ್ಲಿ ಕ್ರಮವಾಗಿ 2,099.69 ಕೋಟಿ, 2,340.99 ಕೋಟಿ, 3,374.05 ಕೋಟಿ, 5,137.65 ಕೋಟಿಯಷ್ಟು ನಿವ್ವಳ ನಷ್ಟ ಭರಿಸಿದ್ದವು ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Hot this week

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!