Friday | April 17, 2026 |

ಮೈಷುಗರ್‌ ಆಧುನೀಕರಣ; 74 ಕೋಟಿ ಹೂಡಿಕೆ ಮಾಡಿದ್ದರೂ ಕಾರ್ಯಾಚರಿಸದ ಕೋ-ಜನರೇಷನ್ ಘಟಕ

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿನ ಕೋ-ಜನರೇಷನ್‌ ಘಟಕದ ಆಧುನೀಕರಣಕ್ಕೆ ಎಪ್ಪತ್ತನಾಲ್ಕು ಕೋಟಿ ರು. ವೆಚ್ಚ ಮಾಡಿದ್ದರೂ ಕಾರ್ಯಾರಂಭಗೊಂಡ ನಂತರವೂ ಅದು ನಿಷ್ಪ್ರಯೋಜಕವಾಗಿತ್ತು. ಹೀಗಾಗಿ 74 ಕೋಟಿಯಷ್ಟು ಹೂಡಿಕೆ ವ್ಯರ್ಥವಾಗಿತ್ತು ಎಂಬುದನ್ನು ಸಿಎಜಿ ವರದಿಯು ಬಹಿರಂಗಗೊಳಿಸಿದೆ.

 

ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುಚ್ಛಕ್ತಿ ಕೋ ಜನರೇಷನ್‌ ಘಟಕವನ್ನು 30 ಮೆಗಾ ವ್ಯಾಟ್‌ ಸಾಮರ್ಥ್ಯದೊಂದಿಗೆ ಸ್ಥಾಪಿಸಲಾಗಿತ್ತು. ಅದಕ್ಕಾಗಿ ಪ್ರಾಯೋಗಿಕ/ಪರೀಕ್ಷಾರ್ಥ ಕಾರ್ಯಾಚರಣೆಯನ್ನು 2007ರಲ್ಲಿ ನಡೆಸಲಾಗಿತ್ತು. ಇದಕ್ಕಾಗಿ ಕಂಪನಿಯು 74.78 ಕೋಟಿಯಷ್ಟು ವೆಚ್ಚ ಮಾಡಿತ್ತು. ಆದರೆ ಈ ಘಟಕವು ಕಾರ್ಯಾಚರಣೆಯನ್ನೇ ಮಾಡಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

 

ಈ ಘಟಕವು 5,000 ಟಿಸಿಡಿ ದರದಲ್ಲಿ ಕಚ್ಛಾ ಸಾಮಾಗ್ರಿಯ ಲಭ್ಯತೆ ಇರದ ಕಾರಣ ಅದನ್ನು ಕಾರ್ಯಾರಂಭಗೊಳಿಸಿದ ದಿನದಿಂದಲೂ ನಿಷ್ಪ್ರಯೋಜಕವಾಗಿಯೇ ಇತ್ತು. ಬಿ-ಮಿಲ್‌ ಕಾರ್ಯ ಸ್ಥಗಿತಗೊಂಡಿದ್ದು ಮತ್ತು ಎ-ಮಿಲ್‌ ಅದರ ಆಧುನೀಕರಣದ ನಂತರ ಅದರ ಸಾಮರ್ಥ್ಯಕ್ಕೆ ತಕ್ಕಂತೆ ಎಂದಿಗೂ ಕಾರ್ಯನಿರ್ವಹಿಸಿರಲಿಲ್ಲ. ಕೋ ಜನರೇಷನ್‌ ಘಟಕ ನಡೆಸಲು ಅಗತ್ಯ ಕಚ್ಛಾ ಸಾಮಗ್ರಿಯಯು ಲಭ್ಯವಿರಲಿಲ್ಲ.

 

‘ಸಹ-ಉತ್ಪಾದನಾ ಸ್ಥಾವರ ಹಾಗೂ ಎ-ಮಿಲ್‌ನ ಆಧುನೀಕರಣಕ್ಕಾಗಿ 123.88 ( ಎ-ಮಿಲ್‌ನ ಆಧುನೀಕರಣಕ್ಕಾಗಿ 49.10 ಕೋಟಿ) ವೆಚ್ಚ ಮಾಡಿತ್ತು. ಅಲ್ಲದೆಯೇ ಕೋ ಜನರೇಷನ್‌ ಘಟಕ ಸ್ಥಾಪನೆಗೆ ಹುಡ್ಕೋದಿಂದ ಪಡೆದುಕೊಂಡಿದ್ದ ಸಾಲದ ಮೇಲೆ 59.04 ಕೋಟಿ ಮೊತ್ತದಷ್ಟು ಬಡ್ಡಿ ಹೊರೆಯನ್ನು ಕರ್ನಾಟಕ ಸರ್ಕಾರದ ಹೆಗಲಿಗೆ ಬಿದ್ದಿತ್ತು ಎಂದು ಸಿಎಜಿ ವರದಿಯಲ್ಲಿ ಹೇಳಲಾಗಿದೆ.

 

ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸುವ ಕಡೆಗೆ ರಾಜ್ಯ ಸರ್ಕಾರವು ಕ್ರಮಕೈಗೊಂಡಿದತ್ತು. 2021-22ನೇ ಸಾಲಿಗೆ ಕಬ್ಬು ಅರೆಯುವ ಸೀಸನ್‌ನಿಂದ 40 ವರ್ಷಗಳ ಅವಧಿಗೆ ಎಲ್‌ಆರ್‌ಒಟಿ (ಗುತ್ತಿಗೆ, ಪುನರ್ವಸತಿ, ಕಾರ್ಯಾಚರಣೆ ಹಾಗೂ ವರ್ಗಾವಣೆ) ಆಧಾರದ ಮೇಲೆ ತೀರ್ಮಾನ ಕೈಗೊಂಡಿತ್ತು. ಈ ನಿಟ್ಟಿನಲ್ಲಿ 2022ರ ಮೇ ವರೆಗೂ ಹೆಚ್ಚಿನ ಪ್ರಗತಿಯನ್ನೂ ಸಾಧಿಸಿರಲಿಲ್ಲ.

 

2006-07ರಿಂದಲೂ ಈ ಕಂಪನಿಯನ್ನು ರೋಗಗ್ರಸ್ತ ಎಂದು ಘೋಷಿಸಿದ ನಂತರ 2020-21ರವರೆಗೂ ಈಕ್ವಿಟಿ, ಸಾಲ ಹಾಗೂ ಅನುದಾನಗಳ ರೂಪದಲ್ಲಿ 526.51 ಕೋಟಿ ಮೊತ್ತದಷ್ಟು ಹಣಕಾಸನ್ನು ಹೂಡಿಕೆ ಮಾಡಿತ್ತು. 2006-07ರಿಂದ 2020-21ರವರೆಗೆ ಕಂಪನಿಯು 31.47 ಲಕ್ಷ ಮೆಟ್ರಿಕ್‌ ಟನ್‌ ಕಬ್ಬನ್ನು ಅರೆದಿತ್ತು. ಇದೇ ಅವಧಿಲ್ಲಿ ತನ್ನ ಕಾರ್ಯಾಚರಣೆಗಳಿಂದ 418.13 ಕೋಟಿ ಮೊತ್ತದಷ್ಟು ನಷ್ಟ ಅನುಭವಿಸಿತ್ತು.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!