Friday | March 13, 2026 |

ಮೈಷುಗರ್‌ ಆಧುನೀಕರಣ; 74 ಕೋಟಿ ಹೂಡಿಕೆ ಮಾಡಿದ್ದರೂ ಕಾರ್ಯಾಚರಿಸದ ಕೋ-ಜನರೇಷನ್ ಘಟಕ

Support THE-FILE

spot_img

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿನ ಕೋ-ಜನರೇಷನ್‌ ಘಟಕದ ಆಧುನೀಕರಣಕ್ಕೆ ಎಪ್ಪತ್ತನಾಲ್ಕು ಕೋಟಿ ರು. ವೆಚ್ಚ ಮಾಡಿದ್ದರೂ ಕಾರ್ಯಾರಂಭಗೊಂಡ ನಂತರವೂ ಅದು ನಿಷ್ಪ್ರಯೋಜಕವಾಗಿತ್ತು. ಹೀಗಾಗಿ 74 ಕೋಟಿಯಷ್ಟು ಹೂಡಿಕೆ ವ್ಯರ್ಥವಾಗಿತ್ತು ಎಂಬುದನ್ನು ಸಿಎಜಿ ವರದಿಯು ಬಹಿರಂಗಗೊಳಿಸಿದೆ.

 

ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುಚ್ಛಕ್ತಿ ಕೋ ಜನರೇಷನ್‌ ಘಟಕವನ್ನು 30 ಮೆಗಾ ವ್ಯಾಟ್‌ ಸಾಮರ್ಥ್ಯದೊಂದಿಗೆ ಸ್ಥಾಪಿಸಲಾಗಿತ್ತು. ಅದಕ್ಕಾಗಿ ಪ್ರಾಯೋಗಿಕ/ಪರೀಕ್ಷಾರ್ಥ ಕಾರ್ಯಾಚರಣೆಯನ್ನು 2007ರಲ್ಲಿ ನಡೆಸಲಾಗಿತ್ತು. ಇದಕ್ಕಾಗಿ ಕಂಪನಿಯು 74.78 ಕೋಟಿಯಷ್ಟು ವೆಚ್ಚ ಮಾಡಿತ್ತು. ಆದರೆ ಈ ಘಟಕವು ಕಾರ್ಯಾಚರಣೆಯನ್ನೇ ಮಾಡಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

 

ಈ ಘಟಕವು 5,000 ಟಿಸಿಡಿ ದರದಲ್ಲಿ ಕಚ್ಛಾ ಸಾಮಾಗ್ರಿಯ ಲಭ್ಯತೆ ಇರದ ಕಾರಣ ಅದನ್ನು ಕಾರ್ಯಾರಂಭಗೊಳಿಸಿದ ದಿನದಿಂದಲೂ ನಿಷ್ಪ್ರಯೋಜಕವಾಗಿಯೇ ಇತ್ತು. ಬಿ-ಮಿಲ್‌ ಕಾರ್ಯ ಸ್ಥಗಿತಗೊಂಡಿದ್ದು ಮತ್ತು ಎ-ಮಿಲ್‌ ಅದರ ಆಧುನೀಕರಣದ ನಂತರ ಅದರ ಸಾಮರ್ಥ್ಯಕ್ಕೆ ತಕ್ಕಂತೆ ಎಂದಿಗೂ ಕಾರ್ಯನಿರ್ವಹಿಸಿರಲಿಲ್ಲ. ಕೋ ಜನರೇಷನ್‌ ಘಟಕ ನಡೆಸಲು ಅಗತ್ಯ ಕಚ್ಛಾ ಸಾಮಗ್ರಿಯಯು ಲಭ್ಯವಿರಲಿಲ್ಲ.

 

‘ಸಹ-ಉತ್ಪಾದನಾ ಸ್ಥಾವರ ಹಾಗೂ ಎ-ಮಿಲ್‌ನ ಆಧುನೀಕರಣಕ್ಕಾಗಿ 123.88 ( ಎ-ಮಿಲ್‌ನ ಆಧುನೀಕರಣಕ್ಕಾಗಿ 49.10 ಕೋಟಿ) ವೆಚ್ಚ ಮಾಡಿತ್ತು. ಅಲ್ಲದೆಯೇ ಕೋ ಜನರೇಷನ್‌ ಘಟಕ ಸ್ಥಾಪನೆಗೆ ಹುಡ್ಕೋದಿಂದ ಪಡೆದುಕೊಂಡಿದ್ದ ಸಾಲದ ಮೇಲೆ 59.04 ಕೋಟಿ ಮೊತ್ತದಷ್ಟು ಬಡ್ಡಿ ಹೊರೆಯನ್ನು ಕರ್ನಾಟಕ ಸರ್ಕಾರದ ಹೆಗಲಿಗೆ ಬಿದ್ದಿತ್ತು ಎಂದು ಸಿಎಜಿ ವರದಿಯಲ್ಲಿ ಹೇಳಲಾಗಿದೆ.

 

ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸುವ ಕಡೆಗೆ ರಾಜ್ಯ ಸರ್ಕಾರವು ಕ್ರಮಕೈಗೊಂಡಿದತ್ತು. 2021-22ನೇ ಸಾಲಿಗೆ ಕಬ್ಬು ಅರೆಯುವ ಸೀಸನ್‌ನಿಂದ 40 ವರ್ಷಗಳ ಅವಧಿಗೆ ಎಲ್‌ಆರ್‌ಒಟಿ (ಗುತ್ತಿಗೆ, ಪುನರ್ವಸತಿ, ಕಾರ್ಯಾಚರಣೆ ಹಾಗೂ ವರ್ಗಾವಣೆ) ಆಧಾರದ ಮೇಲೆ ತೀರ್ಮಾನ ಕೈಗೊಂಡಿತ್ತು. ಈ ನಿಟ್ಟಿನಲ್ಲಿ 2022ರ ಮೇ ವರೆಗೂ ಹೆಚ್ಚಿನ ಪ್ರಗತಿಯನ್ನೂ ಸಾಧಿಸಿರಲಿಲ್ಲ.

 

2006-07ರಿಂದಲೂ ಈ ಕಂಪನಿಯನ್ನು ರೋಗಗ್ರಸ್ತ ಎಂದು ಘೋಷಿಸಿದ ನಂತರ 2020-21ರವರೆಗೂ ಈಕ್ವಿಟಿ, ಸಾಲ ಹಾಗೂ ಅನುದಾನಗಳ ರೂಪದಲ್ಲಿ 526.51 ಕೋಟಿ ಮೊತ್ತದಷ್ಟು ಹಣಕಾಸನ್ನು ಹೂಡಿಕೆ ಮಾಡಿತ್ತು. 2006-07ರಿಂದ 2020-21ರವರೆಗೆ ಕಂಪನಿಯು 31.47 ಲಕ್ಷ ಮೆಟ್ರಿಕ್‌ ಟನ್‌ ಕಬ್ಬನ್ನು ಅರೆದಿತ್ತು. ಇದೇ ಅವಧಿಲ್ಲಿ ತನ್ನ ಕಾರ್ಯಾಚರಣೆಗಳಿಂದ 418.13 ಕೋಟಿ ಮೊತ್ತದಷ್ಟು ನಷ್ಟ ಅನುಭವಿಸಿತ್ತು.

Hot this week

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

Topics

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

Related Articles

Popular Categories

error: Content is protected !!