Thursday | June 25, 2026 |

ಶಾಸಕ ಮಾಡಾಳು ವಿರೂಪಾಕ್ಷಪ್ಪ ನಾಪತ್ತೆ; ಲೋಕಾ ಪೊಲೀಸರಿಂದ ಲುಕ್‌ಔಟ್‌ ನೋಟೀಸ್‌ ಜಾರಿಗೆ ಸಿದ್ಧತೆ

ಬೆಂಗಳೂರು; ರಾಸಾಯನಿಕ ಸಾಮಗ್ರಿಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರೊಬ್ಬರಿಂದ 40 ಲಕ್ಷ ರು. ಲಂಚ ಪಡೆಯುವಾಗ ಪ್ರಶಾಂತ ಮಾಡಾಳು ಮತ್ತಿತರರು ಸಿಕ್ಕಿಬಿದ್ದಿರುವ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕೆಎಸ್‌ಡಿಎಲ್‌ನ ಅಧ್ಯಕ್ಷರೂ ಆಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪತ್ತೆಗೆ ಹುಡುಕಾಟ ನಡೆಸಿರುವ ಲೋಕಾಯುಕ್ತ ಪೊಲೀಸರು ಲುಕ್‌ಔಟ್‌ ನೋಟೀಸ್‌ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ.

 

ಬಂಧನದಿಂದ ಪಾರಾಗಲು ನೇರವಾಗಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿ ಕಾನೂನು ಮೊರೆಹೋಗುವ ಕುರಿತು ಮಾಡಾಳು ವಿರೂಪಾಕ್ಷಪ್ಪ ಅವರು ತಂತ್ರಗಾರಿಕೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪ್ರಕ್ರಿಯೆಗೂ ಮುನ್ನವೇ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದ್ದಾರೆ.

 

ಈ ಕುರಿತು ಮೂವರು ಡಿವೈಎಸ್ಪಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿರುವ ಲೋಕಾಯುಕ್ತ ಪೊಲೀಸ್‌ ವಿಭಾಗವು ಮಾಡಾಳು ವಿರೂಪಾಕ್ಷಪ್ಪ ಅವರ ನಡೆ,   ಚಲನವಲನಗಳ ಮೇಲೆ ಹದ್ದಿನ ಕಣ್ಣು ಇರಿಸಿದೆ. ಪುತ್ರ ಪ್ರಶಾಂತ್‌ ಮಾಡಾಳು ಅವರು ಲೋಕಾಯುಕ್ತ ಬಲೆಗೆ ಬಿದ್ದ ಸುದ್ದಿ ಗೊತ್ತಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ವಿರೂಪಾಕ್ಷಪ್ಪ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಪತ್ರವನ್ನು ಮುಖ್ಯಮಂತ್ರಿಗೆ ರವಾನಿಸಿ ನಾಪತ್ತೆಯಾಗಿದ್ದರು.

 

ಭಾನುವಾರದೊಳಗೆ ಮಾಡಾಳು ವಿರೂಪಾಕ್ಷಪ್ಪ ಅವರು ಲೋಕಾಯುಕ್ತಕ್ಕೆ ಶರಣಾಗದೇ ಇದ್ದರೇ ಅಥವಾ ಪತ್ತೆಯಾಗದೇ ಇದ್ದರೇ ಅವರ ನಿವಾಸ, ಅವರಿಗೆ ಹಂಚಿಕೆಯಾಗಿರುವ ಶಾಸಕ ಭವನದ ಕೊಠಡಿಗೆ ಲುಕ್‌ಔಟ್‌ ನೋಟೀಸ್‌ನ್ನು ಲಗತ್ತಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್‌ ವಿಭಾಗದ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

 

ಇದೇ ಪ್ರಕರಣದಲ್ಲಿ ಈಗಾಗಲೇ 6 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಂಡ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿರುವ ಲೋಕಾಯುಕ್ತ ಪೊಲೀಸರು ಈ ಸಂಬಂಧ ತನಿಖೆಗೆ ನೆರವು ಕೋರಿದ್ದಾರೆ ಎಂದು ತಿಳಿದು ಬಂದಿದೆ.

 

ಕೋಟ್ಯಂತರ ರುಪಾಯಿ ನಗದು, ಚಿನ್ನ, ಕೃಷಿ ಜಮೀನು, ನಿವೇಶನಗಳು ಸೇರಿದಂತೆ ಇನ್ನಿತರೆ ಸ್ವರೂಪದ ಆಸ್ತಿಗಳನ್ನು ಹೊಂದಿದ್ದಾರೆ ಎಂಬ ಮಾಹಿತಿಯನ್ನು ಹರಪನಹಳ್ಳಿ, ಶಿವಮೊಗ್ಗ, ದಾವಣಗೆರೆ, ಚನ್ನಗಿರಿ ಸೇರಿದಂತೆ ವಿವಿಧೆಡೆಯಿಂದ ಲೋಕಾಯುಕ್ತಕ್ಕೆ ದೂರವಾಣಿ ಕರೆಗಳು ಬರಲಾರಂಭಿಸಿವೆ ಎಂದೂ ಗೊತ್ತಾಗಿದೆ.

Hot this week

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು...

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...

ದಲಿತರ ಜಮೀನು ಭೂ ಪರಿವರ್ತನೆ; ಜಿಲ್ಲಾಧಿಕಾರಿಯಿಂದ ವಾಸ್ತವಾಂಶ ವರದಿ, ಪ್ರಕರಣವನ್ನೇ ಮುಚ್ಚಿ ಹಾಕಿತೇ?

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ...
Please Scan to make Your Contribution

Topics

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು...

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...

ದಲಿತರ ಜಮೀನು ಭೂ ಪರಿವರ್ತನೆ; ಜಿಲ್ಲಾಧಿಕಾರಿಯಿಂದ ವಾಸ್ತವಾಂಶ ವರದಿ, ಪ್ರಕರಣವನ್ನೇ ಮುಚ್ಚಿ ಹಾಕಿತೇ?

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ...

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...

Related Articles

Popular Categories

error: Content is protected !!