Saturday | March 21, 2026 |

ಜೋಕುಮಾರ ಕೆರೆ ಆಸ್ತಿ ವಿವಾದ; ಸಿಎಂ ಉಪ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಪ್ರಕರಣ ಹಿಂತೆಗೆತ

Support THE-FILE

spot_img

ಬೆಂಗಳೂರು; ಜೋಕುಮಾರನ ಕೆರೆಯ ಆಸ್ತಿಯನ್ನು ಜಗದ್ಗುರು ದಿಂಗಾಲೇಶ್ವರ ಸಂಸ್ಥಾನ ಮಠದ ಸ್ವಾಮೀಜಿ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಾಲಿ ಉಪ ಕಾರ್ಯದರ್ಶಿ ರಮೇಶ್‌ ಪಿ ಕೋನರಡ್ಡಿ (ಶಿರಹಟ್ಟಿಯ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸಿದ್ದ ಅವಧಿ) ಅವರ ವಿರುದ್ಧದ ಇಲಾಖೆ ವಿಚಾರಣೆ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವಹಿಸಲು ಸೂಕ್ತವಾಗಿಲ್ಲ ಎಂದು ಅನುಮೋದಿಸಿರುವ ಕಂದಾಯ ಸಚಿವ ಆರ್‌ ಅಶೋಕ್‌ ಅವರು ಉಪ ಲೋಕಾಯುಕ್ತರ ಪ್ರಸ್ತಾವನೆಯನ್ನೇ ತಿರಸ್ಕರಿಸಿರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಗ್ರೂಪ್‌ ಎ ವೃಂದದ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ವಹಿಸುವುದು, ದಂಡನೆ ವಿಧಿಸುವ ಸಂಬಂಧ ಲೋಕಾಯುಕ್ತ, ಉಪ ಲೋಕಾಯುಕ್ತರು ಶಿಫಾರಸ್ಸುಗಳನ್ನು ತಿರಸ್ಕರಿಸುವ, ಮಾರ್ಪಡಿಸುವ ಪ್ರಸ್ತಾವನೆಗಳ ಕುರಿತು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ 2022ರ ಆಗಸ್ಟ್‌ 2ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಮುಂದೆ ಕಂದಾಯ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪ್ರಕರಣದ ವಿವರ

 

ಮಠದ ಟ್ರಸ್ಟಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಜಮೀನಿಗೆ ಅನುಕೂಲವಾಗುವಂತೆ ಮಾದಾಪುರದಿಂದ ಬಾಳೆಹೊಸೂರು ಕಡೆಗೆ ಹಾಗೂ ಯಲ್ಲಾಪುರದಿಂದ ಬಾಳೆಹೊಸೂರು ಕಡೆಗೆ ಬರುವ ರಸ್ತೆಯನ್ನು ಅತ್ರಿಕಮಣ ಮಾಡಿ ಅಲ್ಲಿ ಸಿಮೆಂಟ್‌ ಇಟ್ಟಿಗೆ ತಯಾರಿಸುತ್ತಿದ್ದರು. ಸಾರ್ವಜನಿಕ ಕೊಳವೆ ಬಾವಿಯನ್ನು ಸ್ವಾಮೀಜಿ ಸಾರ್ವಜನಿಗೆ ಬಿಟ್ಟುಕೊಡದೇ ಕೇವಲ ತಮ್ಮ ಮಠಕ್ಕೆ ಉಪಯೋಗಿಸಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು. ಈ ಸಂಬಂಧ ಫಕಿರೇಶ್‌ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

 

ಅಲ್ಲದೆ ರಾಜ್ಯ ಹೆದ್ದಾರಿಯನ್ನು ನಿರ್ಮಿಸಲು ಕೆರೆ ಒತ್ತುವರಿ ಮಾಡಿದ್ದು ನ್ಯಾಯಾಲಯದ ಆದೇಶದಂತೆ ನಿರ್ಮಾಣ ಮಾಡಿರಲಿಲ್ಲ. ರಾಜ್ಯದ ಹೆದ್ದಾರಿ ನಂ 136ರಲ್ಲಿ ಮಠ ಕಟ್ಟಿದ್ದು ರಾಜ್ಯ ಹೆದ್ದಾರಿ 136ರ ಕೆರೆಯಲ್ಲಿ ಉತ್ತರ-ದಕ್ಷಿಣ 75 ಹಾಗೂ ಪೂರ್ವ-ಪಶ್ಚಿಮ 750 ಅಡಿ ಅತಿಕ್ರಮಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಸಾರ್ವಜನಿಕ ಜೋಕುಮಾರನ ಕೆರೆ ಗ್ರಾಮದ ಆಸ್ತಿಯಾಗಿದ್ದರೂ ಮಠದ ಸ್ವಾಮೀಜಿ ತಮ್ಮ ಹೆಸರಿಗೆ ಕೆರೆ ಆಸ್ತಿಯನ್ನು ಕಾನೂನು ಬಾಹಿರವಾಗಿತ್ತು ಪಡೆದಿದ್ದರು. ಹಾಗೆಯೇ ಸ್ವಾಮೀಜಿ ನಿರ್ದೇಶನದ ಮೇರೆಗೆ ಕಾನೂನುಬಾಹಿರವಾಗಿ ಮಠಕ್ಕೆ ಬಿಟ್ಟುಕೊಟ್ಟಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿತ್ತು.

 

ಈ ಪ್ರಕರಣದಲ್ಲಿ ಶಿರಹಟ್ಟಿ ತಾಲೂಕು ಪಿಡಬ್ಲ್ಯೂಡಿ ಜ್ಯೂನಿಯರ್‌ ಎಂಜಿನಿಯರ್‌ ಎಲ್ ಎ ಬಾಲಿ, ಪ್ರಭಾರ ತಹಶೀಲ್ದಾರ್‌ ಆಗಿದ್ದ ರಮೇಶ್‌ ಕೋನರೆಡ್ಡಿ (ಹಾಲಿ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ), ತಹಶೀಲ್ದಾರ್‌ ಆರ್‌ ಡಿ ಉಪ್ಪಿನ, ಬಾಳೆಹೊಸೂರು ಗ್ರಾಮ ಲೆಕ್ಕಿಗ ಕೆ ಎನ್‌ ಪಾಟೀಲ್‌, ರಾಜಸ್ವ ನಿರೀಕ್ಷಕ ಎಫ್‌ ಎನ್‌ ಹುಬ್ಬಳ್ಳಿ, ಭೂಮಾಪಕ ಯು ಕೆ ದಂಡಾಪುರ, ಪಿಡಿಒ ಎಂ ಎಸ್‌ ಲಕ್ಷ್ಮೇಶ್ವರ, ಪಿಡಬ್ಲ್ಯೂಡಿ ಎಇಇ ಎಲ್‌ ವೈ ಮಾಳೋಡೆ ಅವರ ವಿರುದ್ಧ ಕರ್ತವ್ಯಲೋಪ/ದುರ್ವರ್ತನೆ ಎಸಗಿದ್ದರು ಎಂದು ಆರೋಪಿಸಲಾಗಿತ್ತು.

 

ಈ ದೂರಿನ ಕುರಿತು ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್‌ ಆನಂದ್‌ ಅವರು ಲೋಕಾಯುಕ್ತ ಕಾಯ್ದೆ ಕಲಂ 9ರ ಅಡಿಯಲ್ಲಿ ತನಿಖೆ ನಡೆಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕಲಂ 12(3) ಅನ್ವಯ ವರದಿ ಸಲ್ಲಿಸಿದ್ದರು.

 

ವರದಿಯಲ್ಲೇನಿತ್ತು?

 

ತಹಶೀಲ್ದಾರ್‌ ವರದಿಯಂತೆ 1985-86ರ ನಂತರದಲ್ಲಿ ಗ್ರಾಮದ ಆಸ್ತಿ ಸಂಖ್ಯೆ 223/1 ಜೋಕುಮಾರನ ಕೆರೆ ಅಂದಾಜು 2 ಹೆಕ್ಟೇರ್‌ ಎಂದು ದಾಖಲಿಸಿದ್ದನ್ನು ತೆಗೆದು ಹಾಕಲಾಗಿತ್ತು. 1985-86ರ ಪೂರ್ವದಲ್ಲಿದ್ದಂತೆ ದಾಖಲಿಸಲು ದಿಂಗಾಲೇಶ್ವರ ಸ್ವಾಮಿಗಳು ಬಾಳೆಹೊಸೂರು ಗ್ರಾಮದ ಪಿಡಿಇಒ ಅವರಿಗೆ 2014ರ ಜುಲೈ 20ರಂದು ಅರ್ಜಿ ಸಲ್ಲಿಸಿದ್ದರು. ಅಂದರೆ ತಹಶೀಲ್ದಾರ್‌ ವರದಿ ಪ್ರಕಾರ 1985-86ರಿಂದ 2014ರವರೆಗೂ ಆಸ್ತಿ ಸಂಖ್ಯೆ 223ರಲ್ಲಿ ಆಸ್ತಿ ಸಂಖ್ಯೆ 223/1 ಜೋಕುಮಾರನ ಕೆರೆ ಅಂದಾಜು 2 ಹೆಕ್ಟೇರ್‌ ಎಂದು ದಾಖಲಾಗಿದೆ.

 

ಅಂದರೆ ಸುಮಾರು 28 ವರ್ಷಗಳವರೆಗೆ ಸತತವಾಗಿ ಗ್ರಾಮದ ಆಸ್ತಿ 223ರಲ್ಲಿ ಆಸ್ತಿ ಸಂ. 223/1 ಜೋಕುಮಾರನ ಕೆರೆ ಅಂದಾಜು 2 ಹೆಕ್ಟೇರ್‌ ಎಂದು ಇದೆ. ಸತತವಾಗಿ 28 ವರ್ಷಗಳವರೆಗೆ ದಾಖಲೆಯಲ್ಲಿದ್ದ ಆಸ್ತಿ ಸಂಖ್ಯೆ 223/1 ಜೋಕುಮಾರನ ಕೆರೆ ಅಂದಾಜು 2 ಹೆಕ್ಟೇರ್‌ ಎಂಬುದನ್ನು ಬಾಳೆಹೊಸೂರು ಗ್ರಾಮ ಪಂಚಾಯತ್‌ ಪಿಡಿಒ 28 ವರ್ಷಗಳ ನಂತರ ಗ್ರಾಮ ಸಭೆಯಲ್ಲಿ ಚರ್ಚಿಸಿ ದಾಖಲಾತಿಯನ್ನು ತೆಗೆದು ಹಾಕಿದ್ದರು. ಅಖಂಡ 223 ಆಸ್ತಿಯು ಶ್ರೀ ಜಗದ್ಗುರು ದಿಂಗಾಲೇಶ್ವರ ಸಂಸ್ಥಾನ ಮಠ ಎಂದು ಠರಾವು ಪಾಸು ಮಾಡಿರುವುದು ಕಾನೂನುಬಾಹಿರವಾಗಿದೆ.

 

ಈ ರೀತಿಯಾಗಿ ದಾಖಲೆಯಲ್ಲಿದ್ದ ಆಸ್ತಿಯನ್ನು ತೆಗೆದುಹಾಕುವುದು, ಮಠದ ಹೆಸರಿನಲ್ಲಿ ಆಸ್ತಿಯನ್ನು ವರ್ಗಾಯಿಸಿದಂತೆ ಆಗುತ್ತದೆ. ಅಂತಹ ಆಸ್ತಿ ವರ್ಗಾವಣೆಯನ್ನು ಕೇವಲ ಸಿವಿಲ್‌ ನ್ಯಾಯಾಲಯದ ಆದೇಶದನ್ವಯ ಮಾತ್ರ ಮಾರ್ಪಡಿಸಲು ಅವಕಾಶವಿದೆಯೆ ಹೊರತು ಗ್ರಾಮ ಸಭೆಯ ಠರಾವಿನ ಮೂಲಕ ಈ ಹಕ್ಕನ್ನು ಮಠದ ಹೆಸರಿಗೆ ವರ್ಗಾಯಿಸಲು ಅಥವಾ ತಿದ್ದುಪಡಿ ಮಾಡಲು ಗ್ರಾಮ ಪಂಚಾಯತ್‌ಗೆ ಯಾವುದೇ ಹಕ್ಕುಕ ಇಲ್ಲ. ಈ ರೀತಿ ಖಾತೆ ಬದಲಾವಣೆ ಮಾಡಿರುವುದು ಕಾನೂನುಬಾಹಿರವಾಗಿದೆ. ಅದೇ ರೀತಿ ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಲಾಗಿದ್ದು ಎದುರುದಾರರು ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 19549/2011 ಮತ್ತು ಸಿಸಿಸಿ ಸಂ 2264/2011ರ ಅದೇಶಗಳಲ್ಲಿ ನೀಡಿದ್ದ ನಿರ್ದೇಶನವನ್ನೂ ಪಾಲಿಸಿಲ್ಲ.

 

ಈ ಸಂಬಂಧ ಹಿಂದಿನ ತಹಶೀಲ್ದಾರ್‌ ರಮೇಶ್‌ ಪಿ ಕೋನರೆಡ್ಡಿ ಸೇರಿದಂತೆ ಇತರ ಎದುರುದಾರರು ತಮ್ಮ ವಿರುದ್ಧದ ನಡವಳಿಯನ್ನು ಕೈಬಿಡಲು ಸೂಕ್ತ, ಸಮಂಜಸ, ಸಮಾಧಾನಕರ ಕಾಋಣ ತೋರಿಸಿಲ್ಲ ಎಂದು ಉಪಲೋಕಾಯುಕ್ತರು ಅಭಿಪ್ರಾಯಿಸಿದ್ದರು. ಕಡತದಲ್ಲಿರುವ ಸಂಗತಿಗಳು ಮತ್ತು ದಾಖಲಾತಿಗಳಿಂದ ಎರಡನೇ ಎದುರುದಾರ ರಮೇಶ್‌ ಪಿ ಕೋನರೆಡ್ಡಿ ಸೇರಿದಂತೆ 7, 10, 11ನೇ ಎದರುದಾರರು ಸರ್ಕಾರಿ/ಸಾರ್ವಜನಿಕ ನೌಕರರಾಗಿ ಪರಿಪೂರ್ಣ ಪ್ರಾಮಾಣಿಕತೆ, ಸಂಪೂರ್ಣ ಕರ್ತವ್ಯ ನಿಷ್ಠತೆ ಮತ್ತು ಸರ್ಕಾರಿ ಸೇವಕರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡ ದುವರ್ತನೆ, ದುರ್ನಡತೆ ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ವರದಿಯಲ್ಲಿ ಅಭಿಪ್ರಾಯಿಸಿದ್ದರು.

 

ಹೀಗಾಗಿ ಇವರ ವಿರುದ್ಧ ಇಲಾಖಾ ಶಿಸ್ತು ಕ್ರಮಕೈಗೊಳ್ಳಲು ಕರ್ನಾಟಕ ಲೋಕಾಯುಕ್ತ ಕಾಯಿದೆ ಕಲಂ 12(3) ಅಡಿ ಅಧಿಕಾರದಡಿಯಲ್ಲಿ ಕೆಸಿಎಸ್‌ಆರ್‌ ಇಯಮ 214(2)ಬಿ (i)ಅಡಿ ಇಲಾಖೆ ವಿಚಾರಣೆಗೆ ಅನುಮತಿ ನೀಡಿ ಲೋಕಾಯುಕ್ತ ಸಂಸ್ಥೆಗೆ ವಹಿಸಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್ ಆನಂದ ಅವರು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

 

ಆದರೆ ಗದಗ್‌ ಜಿಲ್ಲಾಧಿಕಾರಿಯು ‘ಉಚ್ಛ ನ್ಯಾಯಾಲಯವು ಮನವಿದಾರರ ಅರ್ಜಿಗಳನ್ನು ವಜಾಗೊಳಿಸಿರುವುದರಿಂದ ಬಾದಿತರು ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 136 (i)(ii)ರಡಿ ಮೇಲ್ಮನವಿ ಪ್ರಾಧಿಕಾರದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿರುವ ಪ್ರಕರಣವಾಗಿರುತ್ತದೆ,’ ಎಂದು 2020ರ ಜನವರಿ 22ರಂದು ಅಭಿಪ್ರಾಯ ನೀಡಿದ್ದರು. ಇದನ್ನಾಧರಿಸಿರುವ ಕಂದಾಯ ಸಚಿವ ಆರ್‌ ಅಶೋಕ್‌ ಅವರು ಸಹ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕಲಂ 8(1)(ಬಿ) ಅನ್ವಯ ಲೋಕಾಯುಕ್ತ, ಉಪ ಲೋಕಾಯುಕ್ತರು ಯಾವುದೇ ವಿಚಾರಣೆ ಅಥವಾ ತನಿಖೆ ನಡೆಸಲು ಅವಕಾಶ ಇಲ್ಲದ ಕಾರಣ ಪ್ರಕರಣವನ್ನು ಉಪಲೋಕಾಯುಕ್ತರಿಗೆ ವಹಿಸುವುದು ಸೂಕ್ತವಾಗಿರುವುದಿಲ್ಲ,’ ಎಂದು ಅಭಿಪ್ರಾಯಿಸಿದ್ದಾರೆ.

Hot this week

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

Topics

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Related Articles

Popular Categories

error: Content is protected !!