Saturday | May 2, 2026 |

ಗೋಮಾಳ ತಾರತಮ್ಯ; ಸಂಘ ಪರಿವಾರ ಅಂಗ ಸಂಸ್ಥೆಗಳಿಗೆ ಶೇ.5ರ ದರ, ಜೆಎಸ್‌ಎಸ್‌ ವಿದ್ಯಾಪೀಠಕ್ಕೆ ಶೇ.100ರಷ್ಟು ಬೆಲೆ

ಬೆಂಗಳೂರು; ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿ ಬೆಲೆಯ ಶೇ.5ರಷ್ಟು ದರ ನಿಗದಿಗೊಳಿಸಿ 35 ಎಕರೆ ಗೋಮಾಳವನ್ನು ಮಂಜೂರು ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು ಮೈಸೂರಿನ ಜೆ ಎಸ್‌ ಎಸ್‌ ಮಹಾವಿದ್ಯಾಪೀಠಕ್ಕೆ ಕಲ್ಬುರ್ಗಿಯಲ್ಲಿ ಮಾರುಕಟ್ಟೆ ಮೌಲ್ಯದ ಶೇ.100ರಷ್ಟು ದರ ವಿಧಿಸಿ 15 ಎಕರೆ ಗೋಮಾಳವನ್ನು ಮಂಜೂರು ಮಾಡಿರುವುದು ಇದೀಗ ಬಹಿರಂಗವಾಗಿದೆ.

 

ಅಲ್ಲದೇ ಜೆಎಸ್‌ಎಸ್‌ ಮಹಾವಿದ್ಯಾಪೀಠಕ್ಕೆ ಗೋಮಾಳ ಮಂಜೂರಾಗಿರುವ ಕಲ್ಬುರ್ಗಿಯ ಸಿಂದಗಿ (ಬಿ) ಗ್ರಾಮದಲ್ಲಿ ಜಾನುವಾರುಗಳ ಸಂಖ್ಯೆಗೆ ತಕ್ಕಂತೆ ಗೋಮಾಳ ಇರದೇ ಕೊರತೆ ಎದುರಿಸುತ್ತಿದೆ. ಆದರೂ 15 ಎಕರೆ ಗೋಮಾಳವನ್ನು ಮಂಜೂರು ಮಾಡಿ ಗೋವುಗಳಿಗೆ ಮೇವಿನ ತಾಣವನ್ನೇ ಕಸಿದುಕೊಂಡಂತಾಗಿದೆ.

 

ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ಗೆ ಈಗಾಗಲೇ ಕಾನೂನು, ನಿಯಮಗಳನ್ನು ಉಲ್ಲಂಘಿಸಿ ಮಾರುಕಟ್ಟೆ ಮೌಲ್ಯದ ಶೇ.25 ಮತ್ತು ಪ್ರಚಲಿತ ಮಾರ್ಗಸೂಚಿಗಳ ದರಗಳನ್ವಯ ಗೋಮಾಳವನ್ನು ಮಂಜೂರು ಮಾಡಲಾಗಿತ್ತಾದರೂ ಆ ನಂತರ ಈ ಎರಡೂ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಿದ್ದ ಕೋರಿಕೆಯನ್ನು ಪುರಸ್ಕರಿಸಿ ಶೇ.5ರಷ್ಟು ದರವನ್ನು ಮರು ನಿಗದಿಗೊಳಿಸಿದೆ.

 

ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹತ್ತಾರು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿರುವ ಜೆಎಸ್‌ಎಸ್‌ ಮಹಾವಿದ್ಯಾಪೀಠಕ್ಕೆ ಮಾರುಕಟ್ಟೆ ಮೌಲ್ಯದ ಶೇ.100ರಷ್ಟು ದರವನ್ನು ವಿಧಿಸಿ  ತಾರತಮ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.  ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಜೆಎಸ್‌ಎಸ್‌ ಮಹಾವಿದ್ಯಾಪೀಠ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾಪೀಠದ ಶೈಕ್ಷಣಿಕ ಸಂಸ್ಥೆಗಳ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದರು. ಆದರೂ ಈ ಸಂಸ್ಥೆಗೆ ದರದಲ್ಲಿ ಯಾವುದೇ ರಿಯಾಯಿತಿಯನ್ನೂ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಜೆಎಸ್‌ಎಸ್‌ ಮಹಾವಿದ್ಯಾಪೀಠಕ್ಕೆ  15 ಎಕರೆ ಮಂಜೂರು ಮಾಡಿ 2023ರ ಮಾರ್ಚ್‌ 27ರಂದು ಹೊರಡಿಸಿರುವ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಲ್ಬುರ್ಗಿ ತಾಲೂಕಿನ ಸಿಂದಗಿ (ಬಿ) ಗ್ರಾಮದ ಸರ್ವೆನಂಬರ್‌ 73/1ರಲ್ಲಿನ 15.00 ಎಕರೆ ಗೋಮಾಳ ಜಮೀನನ್ನು ಜೆ ಎಸ್‌ ಎಸ್‌ ಮಹಾವಿದ್ಯಾಪೀಠಕ್ಕೆ ಮಂಜೂರು ಮಾಡುವ ಸಂಬಂಧ ಕಲ್ಬುರ್ಗಿ ವಿಭಾಗದ ಪ್ರಾದೇಶಿಕ ಅಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಸರ್ಕಾರವು 2023ರ ಮಾರ್ಚ್‌ 27ರಂದು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಿಶೇಷವೆಂದರೇ ಕಲ್ಬುರ್ಗಿ ತಾಲೂಕಿನ ಸಿಂದಗಿ (ಬಿ) ಗ್ರಾಮದಲ್ಲಿ ಗಾಯರಾಣ ಜಮೀನು ಕಡಿಮೆ ಇದೆ.

 

‘ಸಿಂದಗಿ (ಬಿ) ಗ್ರಾಮದಲ್ಲಿ ಒಟ್ಟು 892 ಜಾನುವಾರುಗಳಿದ್ದು ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ 267.00ಎಕರೆ ಗೊಮಾಳ ಜಮೀನಿನ ಅವಶ್ಯಕತೆ ಇದೆ. ಆದರೆ ಈ ಗ್ರಾಮದಲ್ಲಿ 233.28 ಎಕರೆ ಗೋಮಾಳ ಜಮೀನು ಮಾತ್ರ ಲಭ್ಯವಿದೆ. ಗಾಯರಾಣ ಜಮೀನು ಕಡಿಮೆ ಇರುವುದರಿಂದ ಗಾಯರಾಣ/ಗೋಮಾಳ ಲೆಕ್ಕ ಶೀರ್ಷಿಕೆಯಿಂದ ತಗ್ಗಿಸಿ ಮಂಜೂರು ಮಾಡಬೇಕಾದರೆ ಸರಕಾರಕ್ಕೆ ಮಾತ್ರ ಅಧಿಕಾರ ಇದೆ,’ ಎಂದು ಕಲ್ಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂಬುದು ಆದೇಶದಿಂದ ತಿಳಿದು ಬಂದಿದೆ.

 

ಕಲ್ಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಪ್ರಸ್ತಾವನೆ ಪ್ರಕಾರ ಸಿಂದಗಿ (ಬಿ) ಗ್ರಾಮದಲ್ಲಿ ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಇರಬೇಕಿದ್ದ ಜಮೀನಿನ ಪೈಕಿ 33.72 ಎಕರೆ ಜಮೀನು ಕೊರತೆ ಇದ್ದರೂ 15 ಎಕರೆಯನ್ನು ಮಂಜೂರು ಮಾಡಿ ಗೋವುಗಳಿಗಿದ್ದ ಮೇವಿನ ತಾಣವನ್ನೇ ಕಸಿದುಕೊಂಡಂತಾಗಿದೆ.

 

‘ಸರ್ಕಾರಿ ಗಾಯರಾಣ ಸರ್ವೆ ನಂಬರ್‌ 73/1ರಲ್ಲಿ 15.00 ಎಕರೆ ಜಮೀನನ್ನು ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 97(4) ಅನ್ವಯ ಗಾಯರಾಣ ಶೀರ್ಷಿಕೆಯಿಂದ ತಗ್ಗಿಸಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1079ರ ನಿಯಮ 27ರಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರ ಚಲಾಯಿಸಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22(3)(1)(i)(2) ಅನ್ವಯ ಪ್ರಚಲಿತ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೆ.100ರಷ್ಟು ಹಾಗೂ ಇನ್ನಿತರೆ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಶೈಕ್ಷಣಿಕ ಉದ್ದೇಶಕ್ಕಾಗಿ ಜೆಎಸ್‌ಎಸ್‌ ಮಹಾವಿದ್ಯಾಪೀಠಕ್ಕೆ 15 ಎಕರೆ ಮಂಜೂರು ಮಾಡಿದೆ,’ ಎಂದು ಆದೇಶದಲ್ಲಿ ವಿವರಿಸಿದೆ.

 

ರಾಜ್ಯ ಸರ್ಕಾರವು ರಾಷ್ಟ್ರೋತ್ಥಾನ ಪರಿಷತ್‌ ಸೇರಿದಂತೆ ಖಾಸಗಿ ಸಂಘ, ಸಂಸ್ಥೆಗಳಿಗೆ ಶೈಕ್ಷಣಿಕ ಉದ್ದೇಶದ ಹೆಸರಿನಲ್ಲಿ ಹತ್ತಾರು ಎಕರೆ ಗೋಮಾಳವನ್ನು ಮಂಜೂರು ಮಾಡುತ್ತಿದೆ. ಈ ಕುರಿತು ‘ದಿ ಫೈಲ್‌’ ಸರಣಿ ರೂಪದಲ್ಲಿ 13 ವರದಿಗಳನ್ನು ಪ್ರಕಟಿಸಿತ್ತು.

 

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

 

ಗೋಮಾಳ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಕಾನುನು ಇಲಾಖೆ ತನ್ನ ಅಭಿಪ್ರಾಯವನ್ನು ಪುನರುಚ್ಚರಿಸುತ್ತಿದ್ದರೂ ಜನಸೇವಾ ಟ್ರಸ್ಟ್‌ಗೆ ಚಿಕ್ಕಾಸು ದರದಲ್ಲಿ 35.33 ಎಕರೆ ಗೋಮಾಳವನ್ನು ಮಂಜೂರು ಮಾಡಿತ್ತು. ಅಲ್ಲದೇ ಜನಸೇವಾ ಟ್ರಸ್ಟ್‌ಗೆ ಮಾರುಕಟ್ಟೆ ಮೌಲ್ಯದ ಕೇವಲ ಶೇ.5ರಷ್ಟು ದರ ನಿಗದಿಗೊಳಿಸಿ 139.21 ಕೋಟಿ ರು. ಬೊಕ್ಕಸಕ್ಕೆ ನಷ್ಟಕ್ಕೆ ಕಾರಣವಾಗಿತ್ತು. ಈ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

 

ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ; ಎಕರೆಗೆ ಶೇ. 5ರಷ್ಟು ದರ ನಿಗದಿ, 139.21 ಕೋಟಿ ನಷ್ಟದ ಹೊರೆ

ಕರ್ನಾಟಕ ವಿಧಾನಸಭೆಗೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಗಳಿಗೆಯಲ್ಲಿಯೇ ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ 35.33 ಎಕರೆ ವಿಸ್ತೀರ್ಣದ ಜಮೀನಿಗೆ ಪ್ರಚಲಿತ ಕೃಷಿಯೇತರ ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ದರವನ್ನು ಮರು ನಿಗದಿಗೊಳಿಸಿ ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಬೊಕ್ಕಸಕ್ಕೆ ಅಂದಾಜು 139.21 ಕೋಟಿ ರು. ನಷ್ಟವನ್ನು ಹೊರಿಸಿದಂತಾಗಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!