Thursday | May 7, 2026 |

ಸಚಿವಾಲಯ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ಮುಂಚೂಣಿಯಲ್ಲಿವೆ ನಗರಾಭಿವೃದ್ಧಿ, ಕಂದಾಯ ಇಲಾಖೆ

ಬೆಂಗಳೂರು; ಸಚಿವಾಲಯದ ಇಲಾಖೆಗಳಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ, ಕರ್ತವ್ಯಲೋಪ, ದುರುಪಯೋಗ ಸೇರಿದಂತೆ ಮತ್ತಿತರೆ ಗಂಭೀರ ಆರೋಪಗಳಿಗೆ ಗುರಿಯಾಗುತ್ತಿರುವ ಅಧಿಕಾರಿಗಳ ಸಂಖ್ಯೆ ಮತ್ತು 6 ತಿಂಗಳಿಗೂ ಮೇಲ್ಪಟ್ಟ ಅಮಾನತು ಪ್ರಕರಣಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

 

ಇಲಾಖಾ ಪ್ರಕರಣಗಳು, ಇಲಾಖಾ ವಿಚಾರಣೆ, ಲೋಕಾಯುಕ್ತ ಪ್ರಕರಣಗಳ ಸಂಖ್ಯೆಯೂ ಏರುಗತಿಯಲ್ಲಿವೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ 2023ರ ಮಾರ್ಚ್‌ 21ರಂದು ನಡೆಯಲಿದ್ದ ಸಭೆಗೆ ಇಲಾಖಾ ಮುಖ್ಯಸ್ಥರು ಪ್ರಕರಣಗಳ ಕುರಿತು ಅಂಕಿ ಅಂಶಗಳನ್ನು ಮಂಡಿಸಿದ್ದಾರೆ. ಈ ಕುರಿತಾದ ಸಮಗ್ರ ವಿವರಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಇಲಾಖಾ ವಿಚಾರಣೆ ಮತ್ತು ಲೋಕಾಯುಕ್ತ ಪ್ರಕರಣಗಳ ಸಂಖ್ಯೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಪ್ತಿಯಲ್ಲಿರುವ  ನಗರಾಭಿವೃದ್ದಿ, ಆರ್‌ ಅಶೋಕ್‌ ಅವರು ಸಚಿವರಾಗಿದ್ದ  ಕಂದಾಯ ಇಲಾಖೆಯಲ್ಲಿಯೇ ಅತಿ ಹೆಚ್ಚಿವೆ.

 

ಸಚಿವಾಲಯದ ಇಲಾಖೆಗಳಲ್ಲಿ ಒಟ್ಟು 1,163 ಇಲಾಖಾ ಪ್ರಕರಣಗಳ ಪೈಕಿ ನಿಯಮ 11ರಡಿ 853 ಹಾಗೂ ನಿಯಮ 12ರ ಅಡಿ 96 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಜಾರಿ ಮಾಡಲಾಗಿದೆ. ದೋಷಾರೋಪಣೆ ಪಟ್ಟಿಗೆ ವಿವರಣೆ ಕೊಟ್ಟಿರುವ 706 ಪ್ರಕರಣಗಳಲ್ಲಿ 639 ಪ್ರಕರಣಗಳಿಗೆ ವಿಚಾರಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪೈಕಿ 325 ಪ್ರಕರಣಗಳಲ್ಲಿ ಮಾತ್ರ ವಿಚಾರಣಾಧಿಕಾರಿಗಳಿಂದ ವರದಿ ಬಂದಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ 12, ಆಹಾರ ನಾಗರಿಕ ಸರಬರಾಜು ಇಲಾಖೆಯಲ್ಲಿ 39, ಆರ್ಥಿಕ ಇಲಾಖೆಯಲ್ಲಿ 42, ಜಲಸಂಪನ್ಮೂಲ ಇಲಾಖೆಯಲ್ಲಿ 19, ತೋಟಗಾರಿಕೆ ಇಲಾಖೆಯಲ್ಲಿ 17, ಉನ್ನತ ಶಿಕ್ಷಣದಲ್ಲಿ 20, ಕಂದಾಯ ಇಲಾಖೆಯಲ್ಲಿ 336, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 30, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 15, ವಾಣಿಜ್ಯ ಕೈಗಾರಿಕೆ ಇಲಾಖೆಯಲ್ಲಿ 23, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯಲ್ಲಿ 149, ಸಹಕಾರ ಇಲಾಖೆಯಲ್ಲಿ 10, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 80, ನಗರಾಭಿವೃದ್ಧಿ ಇಲಾಖೆಯಲ್ಲಿ 109, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 25, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯಲ್ಲಿ 22 ಪ್ರಕರಣಗಳು ನಿಯಮ 11ರಡಿ ದಾಖಲಾಗಿರುವುದು ಗೊತ್ತಾಗಿದೆ.

 

ನಿಯಮ 12 ರಡಿಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯಲ್ಲಿ 10, ಕಂದಾಯ ಇಲಾಖೆಯಲ್ಲಿ 10, ನಗರಾಭಿವೃದ್ಧಿ ಇಲಾಖೆಯಲ್ಲಿ 23 ಪ್ರಕರಣಗಳು ದಾಖಲಾಗಿವೆ. 2ನೇ ಕಾರಣ ಕೇಳುವ ನೋಟೀಸ್‌ಗೆ ಆರೋಪಿತ ಅಧಿಕಾರಿ, ನೌಕರರಿಂದ ವಿವರಣೆ ಪಡೆದ 161 ಪ್ರಕರಣಗಳಲ್ಲಿ 72 ಪ್ರಕರಣಗಳಿಗೆ ಮಾತ್ರ ಅಂತಿಮ ಆದೇಶ ಹೊರಡಿಸಲಾಗಿದೆ. ಡಿಸೆಂಬರ್‌ 2022ರಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,312, 2023 ಫೆಬ್ರುವರಿಯಲ್ಲಿ 1,163 ಪ್ರಕರಣಗಳಿವೆ.

 

6 ತಿಂಗಳಿಗೂ ಮೇಲ್ಪಟ್ಟ ಅಮಾನತು ಪ್ರಕರಣಗಳು 2023ರ ಫೆಬ್ರುವರಿ ಅಂತ್ಯದವರೆಗೆ ಒಟ್ಟು 84 ಪ್ರಕರಣಗಳಿವೆ. ಕಂದಾಯ ಇಲಾಖೆಯಲ್ಲಿಯೇ 66 , ಇಲಾಖಾ ಅಮಾನತು ಪ್ರಕರಣಗಳಲ್ಲಿ ಒಳಾಡಳಿತ ಇಲಾಖೆಯೊಂದರಲ್ಲೇ 65 ಅಮಾನತು ಪ್ರಕರಣಗಳು 6 ತಿಂಗಳಿಗೂ ಮೇಲ್ಪಟ್ಟಿವೆ.

 

ಒಳಾಡಳಿತ ಇಲಾಖೆಯ 60 ಪ್ರಕರಣಗಳಲ್ಲಿ ಅಧಿಕಾರಿಗಳನ್ನು 2020ರ ಮಾರ್ಚ್‌ 20ರಂದು ಅಮಾನತಿನಲ್ಲಿಟ್ಟು ಆದೇಶಿಸಲಾಗಿತ್ತು. ಇವರ ಅಮಾನತು ಆದೇಶವನ್ನು ಮುಂದಿನ 3 ತಿಂಗಳ ಅವಧಿಗೆ ಮುಂದುವರೆಸಿ 2023ರ ಫೆ.21ರಂದು ಆದೇಶ ಹೊರಡಿಸಲಾಗಿದೆ.

 

ಲೋಕಾಯುಕ್ತ ನಿಯಮ 12(1) ಅಡಿಯಲ್ಲಿ ಒಟ್ಟು 473 ಪ್ರಕರಣಗಳ ಪೈಕಿ 223 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವಹಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 95, ಕಂದಾಯ ಇಲಾಖೆಯಲ್ಲಿ 87, ನಗರಾಭಿವೃದ್ದಿ ಇಲಾಖೆಯಲ್ಲಿ 123, ಪ್ರಕರಣಗಳಿವೆ.

 

ಸಚಿವಾಲಯದ ಇಲಾಖೆಗಳಿಗೆ ಲೋಕಾಯುಕ್ತದಿಂದ ಬಂದಿರುವ ಒಟ್ಟು 1,846 ಪ್ರಕರಣಗಳ ಪೈಕಿ ನಿಯಮ 14(ಎ) ಅಡಿಯಲ್ಲಿ 1,538 ಪ್ರಕರಣಗಳನ್ನು ವಹಿಸಲಾಗಿದೆ. ನಿಯಮ 14(ಎ) ಅಡಿಯಲ್ಲಿ ವರದಿ ಸ್ವೀಕೃತವಾದ ಪ್ರಕರಣಗಳ ಪೈಕಿ 368 ಮತ್ತು 34 ಪ್ರಕರಣಗಳಿಗೆ ಅಂತಿಮ ಆದೇಶ ಹೊರಡಿಸಲಾಗಿದೆ.

 

ಕೃಷಿ ಇಲಾಖೆಯಲ್ಲಿ 81, ಆರ್ಥಿಕ ಇಲಾಖೆಯಲ್ಲಿ 78, ಸಿಬ್ಬಂದಿ ಆಢಳಿತ ಸುದಾರಣೆ ಇಲಾಖೆಯಲ್ಲಿ 90, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 50, ಗ್ರಾಮIನಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯಲ್ಲಿ 20, ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆಕಯಲ್ಲಿ 42, ಸಣ್ಣ ನೀರಾವರಿಯಲ್ಲಿ 25,ಕಂದಾಯ ಇಲಾಖೆಯಲ್ಲಿ 492, ಒಳಾಡಳಿತ ಇಲಾ/ಖೆಯಲ್ಲಿ 74,ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯಲ್ಲಿ 108, ಲೋಕೋಪಯೋಗಿ ಇಆಖೆಯಲ್ಲಿ 141, ನಗರಾಭಿವೃದ್ದಿ ಇಲಾಖೆಯಲ್ಲಿ 289, ವಾಣಿಜ್ಯ ಕೈಗಾರಿಕೆಯಲ್ಲಿ 49 ಪ್ರಕರಣಗಳಿರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!