Sunday | March 22, 2026 |

ಸಮಾಜ ಕಲ್ಯಾಣ ಇಲಾಖೆ; 4,710 ದಿನಗಳಿಂದಲೂ ಕಡತಗಳಿಗೆ ದೊರೆತಿಲ್ಲ ಮುಕ್ತಿ

Support THE-FILE

spot_img

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಳೆದ 4,710 ದಿನಗಳಿಂದ ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ಮಾಹಿತಿಯನ್ನು ತೆರೆದಿಡಲಾಗಿದೆ.

 

ಸಚಿವಾಲಯದ ಇಲಾಖೆಗಳಲ್ಲಿ ಕಡತ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿನ ಕೆಡಿಪಿ ಸಭೆಗಳಲ್ಲಿ ಚರ್ಚೆಯಾಗುತ್ತಿದ್ದರೂ ಸಮಾಜ ಕಲ್ಯಾಣ ಇಲಾಖೆಯೊಂದರಲ್ಲೇ 4,710  ದಿನಗಳಿಂದ 383 ಕ್ಕೂ ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಇರುವುದು ಮುನ್ನೆಲೆಗೆ ಬಂದಿದೆ.

 

ಸಮಾಜ ಕಲ್ಯಾಣ ಇಲಾಖೆಯ ಸಚಿವರ ಬಳಿಯೇ ಒಟ್ಟು 14 ಕಡತಗಳು ಕಳೆದ 430  ದಿನಗಳಿಂದಲೂ ಬಾಕಿ ಇವೆ. ಉಪ ಕಾರ್ಯದರ್ಶಿ ಬಳಿ ೧೨೧ ಕಡತಗಳು 1,180  ದಿನಗಳಿಂದ, ಮತ್ತೊಬ್ಬ ಉಪ ಕಾರ್ಯದರ್ಶಿ (2) 101 ಕಡತಗಳು 2,274  ದಿನಗಳಿಂದಲೂ ಬಾಕಿ ಇರುವುದು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಿಂದ ಗೊತ್ತಾಗಿದೆ.

 

2023 ರ ಏಪ್ರಿಲ್‌ 25ರಿಂದ 26ರವರೆಗೆ ಒಟ್ಟು 557 ಕಡತಗಳ ಪೈಕಿ 231  ಕಡತಗಳನ್ನು ಇಲಾಖೆಯು ಸ್ವೀಕರಿಸಿದೆ. ಇದರಲ್ಲಿ36 ಕಡತಗಳನ್ನಷ್ಟೇ ಮುಕ್ತಾಯಗೊಳಿಸಿದೆ. 234 ಕಡತಗಳನ್ನು ಮುಂದಿನ ಹಂತಕ್ಕೆ ರವಾನಿಸಿದೆ. ಒಟ್ಟು 383 ಕಡತಗಳು ವಿಲೇವಾರಿಗೆ ಬಾಕಿ ಇರುವುದು ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

 

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಪದಗ್ರಹಣ ಮಾಡಿ ತಮ್ಮ ಅವಧಿ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಮತ್ತು ವಿವಿಧ ಸಚಿವರೂ ಸೇರಿದಂತೆ ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಇಲಾಖೆಗಳಲ್ಲಿ 2023ರ ಮಾರ್ಚ್‌ 16ರವರೆಗೆ ಒಟ್ಟು 1,48,782 ಕಡತಗಳು ವಿಲೇವಾರಿಗೆ ಬಾಕಿ ಇದ್ದವು.

 

2023 ಮಾರ್ಚ್‌ 16ರ ಅಂತ್ಯಕ್ಕೆ ಎಫ್‌ಎಂಎಸ್‌ನಲ್ಲಿ ಒಟ್ಟು 43,376 ಮತ್ತು ಇ ಆಫೀಸ್‌ನಲ್ಲಿ 1,02,425 ಕಡತಗಳಿದ್ದವು. ಒಟ್ಟಾರೆ 1,45,801 ಕಡತಗಳಿದ್ದವು. ಇದೇ ಅವಧಿಯಲ್ಲಿ ಹೊಸದಾಗಿ ಎಫ್‌ಎಂಎಸ್‌ನಲ್ಲಿ 3,200 ಮತ್ತು ಇ ಆಫೀಸ್‌ನಲ್ಲಿ 27,420 ಸೇರಿ ಒಟ್ಟು  30,620 ಕಡತಗಳಿದ್ದವು.

 

ಎಫ್ಎಂಎಸ್‌ನಲ್ಲಿದ್ದ 43,376 ಕಡತಗಳ ಪೈಕಿ ಮುಕ್ತಾಯಗೊಂಡ ಕಡತಗಳ ಸಂಖ್ಯೆ 2,060 ಸಂಖ್ಯೆಯಲ್ಲಿದ್ದರೇ ಈ ಆಫೀಸ್‌ನಲ್ಲಿದ್ದ 1,02,425 ಕಡತಗಳ ಪೈಕಿ 25,639 ಸೇರಿ ಒಟ್ಟಾರೆ 27,699 ಕಡತಗಳು ಮುಕ್ತಾಯಗೊಂಡಿದ್ದವು. ಉಳಿದಂತೆ ವಿಲೇವಾರಿಗೆ ಎಫ್‌ಎಂಎಸ್‌ನಲ್ಲಿ 44,576, ಇ ಅಫೀಸ್‌ನಲ್ಲಿ 104,206 ಸೇರಿ ಒಟ್ಟಾರೆ 1,48,782 ಕಡತಗಳು ಬಾಕಿ ಇದ್ದವು.

 

2021ರ ಅಕ್ಟೋಬರ್‌ 25ರ ಅಂತ್ಯಕ್ಕೆ ಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿದ್ದವು. ಇದೇ ಅವಧಿಯಲ್ಲಿ 18 ಇಲಾಖೆಗಳ ಮುಖ್ಯಸ್ಥರ ಹಂತದಲ್ಲೇ 31,308 ಕಡತಗಳು  ವಿಲೇವಾರಿಯಾಗಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿಯೇ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿದ್ದವು.

 

2021ರ ಆಗಸ್ಟ್‌ ಅಂತ್ಯಕ್ಕೆ 41 ಆಡಳಿತ ಇಲಾಖೆಗಳಲ್ಲಿ 1.60 ಲಕ್ಷ ಕಡತಗಳು ವಿಲೇವಾರಿಗೆ ಬಾಕಿ ಇದ್ದವು. ಈ ಪೈಕಿ 31,077 ಕಡತಗಳು ಈ ಆಫೀಸ್‌ನಲ್ಲಿಯೇ ವಿಲೇವಾರಿ ಆಗಿರಲಿಲ್ಲ. ನಗರಾಭಿವೃದ್ಧಿ ಇಲಾಖೆಯಲ್ಲಿ 11,250, ಕಂದಾಯ ಇಲಾಖೆಯಲ್ಲಿ 9,314, ಪ್ರಾಥಮಿಕ, ಪ್ರೌಢಶಿಕ್ಷಣದಲ್ಲಿ 7,689, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 5,446, ಜಲ ಸಂಪನ್ಮೂಲ ಇಲಾಖೆಯಲ್ಲಿ 5,490 ಕಡತಗಳು ಬಾಕಿ ಇದ್ದವು. ಈ ಕುರಿತು ‘ದಿ ಫೈಲ್‌’ ಸೆ.2ರಂದು ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

 

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಕಡತಗಳ ವಿಲೇವಾರಿಗೆ ಅಧೀನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿಗಳನ್ನು ಕಡತ ವಿಲೇವಾರಿ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲು ಮುಂದಾಗಿದೆ. ನೋಡೆಲ್ ಅಧಿಕಾರಿಗಳು ಕಾನೂನು ಇಲಾಖೆ ಸಂಯೋಜನೆ ಮಾಡಿ ಎರಡು ತಿಂಗಳೊಳಗೆ ಕಡತ ವಿಲೇವಾರಿ ಮಾಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದನ್ನು ಸ್ಮರಿಸಬಹುದು.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!