Tuesday | March 24, 2026 |

ಆರ್ಥಿಕ ಇಲಾಖೆ ಅನುಮತಿಯಿಲ್ಲದೇ ಪೀಠೋಪಕರಣ ವಿಲೇವಾರಿ; ಸಚಿವಾಲಯದಿಂದ ನಿಯಮ ಉಲ್ಲಂಘನೆ

Support THE-FILE

spot_img

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯಕ್ಕೆ ಸೇರಿರುವ ಅನುಪಯುಕ್ತ ಪೀಠೋಪಕರಣಗಳು ಮತ್ತು ಉಪಕರಣಗಳನ್ನು ವಿಲೇವಾರಿ ಮಾಡುವ ಮುನ್ನ ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಲೆಕ್ಕಪರಿಶೋಧಕರು ಬೆಳಕಿಗೆ ತಂದಿದ್ದಾರೆ.

 

ಕರ್ನಾಟಕ ವಿಧಾನಪರಿಷತ್ ಸಚಿವಾಲಯಕ್ಕೆ ಸಂಬಂಧಿಸಿದಂತೆ 2013-14ರಿಂದ 2014-15ರ ಅವಧಿಯಲ್ಲಿ ಲೆಕ್ಕಪರಿಶೋಧನೆ ಮಾಡಿರುವ ಲೆಕ್ಕಪರಿಶೋಧಕರು ಸರ್ಕಾರದ ಆದೇಶ ಪಡೆಯದೆ ಪೀಠೋಪಕರಣಗಳು ಮತ್ತು ಇತರೆ ಉಪಕರಣಗಳನ್ನು ಚಾರಿಟಬಲ್ ಸಂಸ್ಥೆಗಳಿಗೆ ನೀಡಿರುವುದನ್ನೂ ಪತ್ತೆ ಹಚ್ಚಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಉಪಕರಣಗಳ ವಿಲೇವಾರಿಯಿಂದ ಬಂದ ಮೊತ್ತವನ್ನು ರಾಜ್ಯದ ಸಂಚಿತ ನಿಧಿಗೆ ಜಮೆ ಮಾಡಬೇಕಾದ್ದರಿಂದ ಈ ವಿಷಯದಲ್ಲಿ ಅಗತ್ಯವಿದ್ದ ಆರ್ಥಿಕ ಇಲಾಖೆಯ ಅನುಮತಿಯನ್ನು ಹೊಂದಿರುವುದಿಲ್ಲ,’ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ದುರಸ್ತಿಗೆ ಅರ್ಹವಿದ್ದ ಉಪಕರಣಗಳನ್ನು ವಿಲೇವಾರಿಗೂ ಪೂರ್ವದಲ್ಲಿ ಇಲಾಖಾ ಮುಖ್ಯಸ್ಥರು 34ಬಿ ನಮೂನೆಯಲ್ಲಿ ದಾಖಲಿಸಿರುವುದಿಲ್ಲ. ದಾಸ್ತಾನಿನ ಮೌಲ್ಯವನ್ನು ನಮೂದಿಸಿರುವುದಿಲ್ಲ ಎಂದು ಆಕ್ಷೇಪಿಸಿದೆ.

 

ಕರ್ನಾಟಕ ಆರ್ಥಿಕ ಸಂಹಿತೆಯ ನಿಯಮ 168(b)(ii)ರ ರೀತ್ಯಾ 34ಬಿ ನಮೂನೆಯನ್ನು ಲೆಕ್ಕಪರಿಶೋಧಕರಿಗೆ ಒದದಗಿಸಿರುವುದಿಲ್ಲ. ರಾಜ್ಯದಲ್ಲಿ ಹಲವಾರು ಚಾರಿಟಬಲ್ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದರೂ, ಎರಡೂ ಬಾರಿ ಒಂದೇ ಸಂಸ್ಥೆಗೆ ಅನುಪಯುಕ್ತ ಸಾಮಗ್ರಿಗಳನ್ನು ನೀಡಿರುವ ಹಿನ್ನಲೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿರುವುದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

 

ಅದೇ ರೀತಿ ಕರ್ನಾಟಕ ವಿಧಾನಪರಿಷತ್ ಸಚಿವಾಲಯು ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಲು ಹೋಟೆಲ್ ನಿಸರ್ಗ ದವರಿಗೆ ಬಾಡಿಗೆಗೆ ನೀಡಲಾಗಿತ್ತು. ಆದರೆ ಇವರಿಂದ ವಿದ್ಯುಚ್ಛಕ್ತಿ ಬಿಲ್‌ನಲ್ಲಿನ ಮೊತ್ತಕ್ಕಿಂತಲೂ ಕಡಿಮೆ ವಸೂಲಾತಿ ಮಾಡಿತ್ತು. ಈ ಹೋಟೆಲ್‌ಗೆ ಬಾಡಿಗೆಗೆ ನೀಡಿದ್ದ ಜಾಗಕ್ಕೆ ಲೋಕೋಪಯೋಗಿ ಇಲಾಖೆಯು ನಿಗದಿಪಡಿಸಿರುವ ಬಾಡಿಗೆಯೊಂದಿಗೇ ವಿದ್ಯುಚ್ಛಕ್ತಿ ಮತ್ತು ನೀರಿನ ಬಿಲ್‌ನ್ನು ಪ್ರತಿ ತಿಂಗಳೂ ಪಾವತಿಸಬೇಕಿತ್ತು. ಆದರೆ ಸಚಿವಾಲಯವು ವಿದ್ಯುಚ್ಛಕ್ತಿ ಬಿಲ್‌ನ್ನು ಮೀಟರಿಗನುಣವಾಗಿ ವಸೂಲಾತಿ ಮಾಡದೆಯೇ ಪ್ರತಿ ಯೂನಿಟ್‌ಗೆ 2,500 ರು.ನಂತೆ ನಿಗದಿಪಡಿಸಿ ವಸೂಲಾತಿ ಮಾಡಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಕೊಠಡಿಗಳ ನವೀಕರಣ ಕಾಮಗಾರಿಯನ್ನು ವಿಭಜಿಸಿ ನೀಡಿದ್ದರೂ ಕೆಟಿಪಿಪಿ ಕಾಯ್ದೆ ಪಾಲನೆ ಮಾಡಿಲ್ಲದಿರುವುದು ಕೆ.ಆರ್.ಐ.ಡಿ.ಎಲ್ ನಿಂದ ಬಳಕೆ ಪ್ರಮಾಣ ಪತ್ರವನ್ನು ಪಡೆದಿರಲಿಲ್ಲ. ಕಾರ್ಯಾದೇಶದಲ್ಲಿ ಉಲ್ಲೇಖಿಸಲಾದ ದಾಸ್ತಾನು/ ಪೀಠೋಪಕರಣಗಳನ್ನು ಭೌತಿಕವಾಗಿ ದಾಸ್ತಾನಿಗೆ ತೆಗೆದುಕೊಂಡಿರುವುದಿಲ್ಲ ಎಂಬುದನ್ನು ಲೆಕ್ಕಪರಿಶೋಧಕರು ಪತ್ತೆ ಹಚ್ಚಿದ್ದನ್ನು ಸ್ಮರಿಸಬಹುದು.

 

ಈ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ  ವಿಧಾನಪರಿಷತ್‌ನ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಪರಿಷತ್‌ನ ಕಾರ್ಯದರ್ಶಿ ಚರ್ಚೆಯನ್ನು ನಡೆಸಿಲ್ಲ ಮತ್ತು ಯಾವುದೇ ಉತ್ತರವನ್ನೂ ನೀಡಿಲ್ಲ ಎಂದು ಗೊತ್ತಾಗಿದೆ.

Hot this week

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

Topics

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Related Articles

Popular Categories

error: Content is protected !!