Wednesday | June 10, 2026 |

ಆರ್ಥಿಕ ಇಲಾಖೆ ಅನುಮತಿಯಿಲ್ಲದೇ ಪೀಠೋಪಕರಣ ವಿಲೇವಾರಿ; ಸಚಿವಾಲಯದಿಂದ ನಿಯಮ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯಕ್ಕೆ ಸೇರಿರುವ ಅನುಪಯುಕ್ತ ಪೀಠೋಪಕರಣಗಳು ಮತ್ತು ಉಪಕರಣಗಳನ್ನು ವಿಲೇವಾರಿ ಮಾಡುವ ಮುನ್ನ ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಲೆಕ್ಕಪರಿಶೋಧಕರು ಬೆಳಕಿಗೆ ತಂದಿದ್ದಾರೆ.

 

ಕರ್ನಾಟಕ ವಿಧಾನಪರಿಷತ್ ಸಚಿವಾಲಯಕ್ಕೆ ಸಂಬಂಧಿಸಿದಂತೆ 2013-14ರಿಂದ 2014-15ರ ಅವಧಿಯಲ್ಲಿ ಲೆಕ್ಕಪರಿಶೋಧನೆ ಮಾಡಿರುವ ಲೆಕ್ಕಪರಿಶೋಧಕರು ಸರ್ಕಾರದ ಆದೇಶ ಪಡೆಯದೆ ಪೀಠೋಪಕರಣಗಳು ಮತ್ತು ಇತರೆ ಉಪಕರಣಗಳನ್ನು ಚಾರಿಟಬಲ್ ಸಂಸ್ಥೆಗಳಿಗೆ ನೀಡಿರುವುದನ್ನೂ ಪತ್ತೆ ಹಚ್ಚಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಉಪಕರಣಗಳ ವಿಲೇವಾರಿಯಿಂದ ಬಂದ ಮೊತ್ತವನ್ನು ರಾಜ್ಯದ ಸಂಚಿತ ನಿಧಿಗೆ ಜಮೆ ಮಾಡಬೇಕಾದ್ದರಿಂದ ಈ ವಿಷಯದಲ್ಲಿ ಅಗತ್ಯವಿದ್ದ ಆರ್ಥಿಕ ಇಲಾಖೆಯ ಅನುಮತಿಯನ್ನು ಹೊಂದಿರುವುದಿಲ್ಲ,’ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ದುರಸ್ತಿಗೆ ಅರ್ಹವಿದ್ದ ಉಪಕರಣಗಳನ್ನು ವಿಲೇವಾರಿಗೂ ಪೂರ್ವದಲ್ಲಿ ಇಲಾಖಾ ಮುಖ್ಯಸ್ಥರು 34ಬಿ ನಮೂನೆಯಲ್ಲಿ ದಾಖಲಿಸಿರುವುದಿಲ್ಲ. ದಾಸ್ತಾನಿನ ಮೌಲ್ಯವನ್ನು ನಮೂದಿಸಿರುವುದಿಲ್ಲ ಎಂದು ಆಕ್ಷೇಪಿಸಿದೆ.

 

ಕರ್ನಾಟಕ ಆರ್ಥಿಕ ಸಂಹಿತೆಯ ನಿಯಮ 168(b)(ii)ರ ರೀತ್ಯಾ 34ಬಿ ನಮೂನೆಯನ್ನು ಲೆಕ್ಕಪರಿಶೋಧಕರಿಗೆ ಒದದಗಿಸಿರುವುದಿಲ್ಲ. ರಾಜ್ಯದಲ್ಲಿ ಹಲವಾರು ಚಾರಿಟಬಲ್ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದರೂ, ಎರಡೂ ಬಾರಿ ಒಂದೇ ಸಂಸ್ಥೆಗೆ ಅನುಪಯುಕ್ತ ಸಾಮಗ್ರಿಗಳನ್ನು ನೀಡಿರುವ ಹಿನ್ನಲೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿರುವುದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

 

ಅದೇ ರೀತಿ ಕರ್ನಾಟಕ ವಿಧಾನಪರಿಷತ್ ಸಚಿವಾಲಯು ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಲು ಹೋಟೆಲ್ ನಿಸರ್ಗ ದವರಿಗೆ ಬಾಡಿಗೆಗೆ ನೀಡಲಾಗಿತ್ತು. ಆದರೆ ಇವರಿಂದ ವಿದ್ಯುಚ್ಛಕ್ತಿ ಬಿಲ್‌ನಲ್ಲಿನ ಮೊತ್ತಕ್ಕಿಂತಲೂ ಕಡಿಮೆ ವಸೂಲಾತಿ ಮಾಡಿತ್ತು. ಈ ಹೋಟೆಲ್‌ಗೆ ಬಾಡಿಗೆಗೆ ನೀಡಿದ್ದ ಜಾಗಕ್ಕೆ ಲೋಕೋಪಯೋಗಿ ಇಲಾಖೆಯು ನಿಗದಿಪಡಿಸಿರುವ ಬಾಡಿಗೆಯೊಂದಿಗೇ ವಿದ್ಯುಚ್ಛಕ್ತಿ ಮತ್ತು ನೀರಿನ ಬಿಲ್‌ನ್ನು ಪ್ರತಿ ತಿಂಗಳೂ ಪಾವತಿಸಬೇಕಿತ್ತು. ಆದರೆ ಸಚಿವಾಲಯವು ವಿದ್ಯುಚ್ಛಕ್ತಿ ಬಿಲ್‌ನ್ನು ಮೀಟರಿಗನುಣವಾಗಿ ವಸೂಲಾತಿ ಮಾಡದೆಯೇ ಪ್ರತಿ ಯೂನಿಟ್‌ಗೆ 2,500 ರು.ನಂತೆ ನಿಗದಿಪಡಿಸಿ ವಸೂಲಾತಿ ಮಾಡಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಕೊಠಡಿಗಳ ನವೀಕರಣ ಕಾಮಗಾರಿಯನ್ನು ವಿಭಜಿಸಿ ನೀಡಿದ್ದರೂ ಕೆಟಿಪಿಪಿ ಕಾಯ್ದೆ ಪಾಲನೆ ಮಾಡಿಲ್ಲದಿರುವುದು ಕೆ.ಆರ್.ಐ.ಡಿ.ಎಲ್ ನಿಂದ ಬಳಕೆ ಪ್ರಮಾಣ ಪತ್ರವನ್ನು ಪಡೆದಿರಲಿಲ್ಲ. ಕಾರ್ಯಾದೇಶದಲ್ಲಿ ಉಲ್ಲೇಖಿಸಲಾದ ದಾಸ್ತಾನು/ ಪೀಠೋಪಕರಣಗಳನ್ನು ಭೌತಿಕವಾಗಿ ದಾಸ್ತಾನಿಗೆ ತೆಗೆದುಕೊಂಡಿರುವುದಿಲ್ಲ ಎಂಬುದನ್ನು ಲೆಕ್ಕಪರಿಶೋಧಕರು ಪತ್ತೆ ಹಚ್ಚಿದ್ದನ್ನು ಸ್ಮರಿಸಬಹುದು.

 

ಈ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ  ವಿಧಾನಪರಿಷತ್‌ನ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಪರಿಷತ್‌ನ ಕಾರ್ಯದರ್ಶಿ ಚರ್ಚೆಯನ್ನು ನಡೆಸಿಲ್ಲ ಮತ್ತು ಯಾವುದೇ ಉತ್ತರವನ್ನೂ ನೀಡಿಲ್ಲ ಎಂದು ಗೊತ್ತಾಗಿದೆ.

Hot this week

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!