Tuesday | May 12, 2026 |

6 ಕೋಟಿ ಬೇನಾಮಿ ಖಾತೆಗೆ ವರ್ಗಾವಣೆ ಆರೋಪ; ಕುಲಪತಿ ವಿರುದ್ಧ ಪ್ರಕರಣ ಲೋಕಾ ತನಿಖೆಗೆ ಆದೇಶ

ಬೆಂಗಳೂರು; ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ ಹೆಚ್‌ ಡಿ ನಾರಾಯಣಸ್ವಾಮಿ ಅವರು ಬೇನಾಮಿ ಹೆಸರಿನಲ್ಲಿ ತೆರೆದಿರುವ ಖಾತೆಗಳಿಗೆ ವಿಶ್ವವಿದ್ಯಾಲಯಕ್ಕೆ ಸೇರಿದ 6.00 ಕೋಟಿ ರು. ಮೊತ್ತದ ಹಣವನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಪ್ರಕರಣವನ್ನು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯು ಹೆಚ್ಚಿನ ತನಿಖೆಗಾಗಿ ಲೋಕಾಯುಕ್ತಕ್ಕೆ ವಹಿಸಿ ಆದೇಶಿಸಿದೆ.

 

ಕುಲಪತಿ ಡಾ ಹೆಚ್‌ ಡಿ ನಾರಾಯಣಸ್ವಾಮಿ ಅವರು ಕುಲಪತಿ ಹುದ್ದೆ ಅಧಿಕಾರವನ್ನು ವಹಿಸಿಕೊಂಡ ದಿನದಿಂದ ಇವರ ವೈಯಕ್ತಿಕ ಬ್ಯಾಂಕ್‌ ಖಾತೆಗಳಿಗೆ ಕಾನೂನುಬಾಹಿರವಾಗಿ ವಿಶ್ವವಿದ್ಯಾಲಯದ ಹಣವು ಸಂದಾಯವಾಗಿದೆ ಮತ್ತು ವಿಶ್ವವಿದ್ಯಾಲಯದ ಹಣವನ್ನು ಬೇನಾಮಿ ಹೆಸರುಗಳಲ್ಲಿ ತೆರೆದಿರುವ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ ಎಂದು ಡಾ ಕೆ ವೆಂಕಟರೆಡ್ಡಿ ಎಂಬುವರು ರಾಜ್ಯಪಾಲರ ಕಚೇರಿಗೆ ದೂರು ಸಲ್ಲಿಸಿದ್ದರು.

 

ಈ ದೂರನ್ನಾಧರಿಸಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯು ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿ 2023ರ ಮಾರ್ಚ್‌ 14ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಡಾ ಹೆಚ್‌ ಡಿ ನಾರಾಯಣಸ್ವಾಮಿ ಅವರು ಕುಲಪತಿ ಹುದ್ದೆ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಇವರ ವೈಯಕ್ತಿಕ ಬ್ಯಾಂಕ್‌ ಖಾತೆಗಳಿಗೆ ಕಾನೂನುಬಾಹಿರವಾಗಿ ವಿಶ್ವವಿದ್ಯಾಲಯದ ಹಣವು ಹಣ ಸಂದಾಯವಾಗಿದೆ. ಹಾಗೂ ವಿಶ್ವವಿದ್ಯಾಲಯದ ಹಣವನ್ನು ಬೇನಾಮಿ ಹೆಸರುಗಳಲ್ಲಿ ತೆರೆದಿರುವ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಮತ್ತು ಗಂಗಾನಗರದಲ್ಲಿ ಬ್ಯಾಂಕ್‌ ಆಫ್‌ ಬರೋಡ ಶಾಖೆಯಲ್ಲಿ ವೈಯಕ್ತಿಕ ಖಾತೆಗೆ 6 ಕೋಟಿಗೂ ಹೆಚ್ಚು ಹಣವನ್ನು ಜಮಾ ಮಾಡಿದ್ದಾರೆ. ಈ ಬಗೆಗಿನ ಆರೋಪಗಳ ಕುರಿತಂತೆ ಇವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಕಲಂ 13 ಅನ್ವಯ ತನಿಖೆ ನಡೆಸಲು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವಹಿಸಿರುವುದು ಆದೇಶದ ಪ್ರತಿಯಿಂದ ತಿಳಿದು ಬಂದಿದೆ.

 

ಲೋಕಾಯುಕ್ತಕ್ಕೆ ವಹಿಸುವ ಮುನ್ನ ಇಲಾಖೆಯು ಡಾ ಹೆಚ್‌ ಡಿ ನಾರಾಯಣ ಸ್ವಾಮಿ ಅವರಿಗೆ 2022ರ ಜುಲೈ 5ರಂದು ನೋಟೀಸ್‌ ಜಾರಿಗೊಳಿಸಿತ್ತು. ಆದರೆ ಅವರಿಂದ ಯಾವುದೇ ವಿವರಣೆ/ಉತ್ತರ ಬಂದಿಲ್ಲ. ಹೀಗಾಗಿ 2022ರ ಆಗಸ್ಟ್‌ 1ರೊಳಗೆ ವಿವರಣೆ ನೀಡಬೇಕು ಎಂದು 2022ರ ಜುಲೈ 23ರಂದು ಮತ್ತೊಂದು ನೋಟೀಸ್‌ ನೀಡಿತ್ತು. ಆದರೆ ಎರಡನೇ ನೋಟೀಸ್‌ಗೂ ಡಾ ಹೆಚ್‌ ಡಿ ನಾರಾಯಣಸ್ವಾಮಿ ಅವರು ವಿವರಣೆ/ಉತ್ತರವನ್ನು ಇಲಾಖೆಗೆ ನೀಡಿರಲಿಲ್ಲ ಎಂಬ ಅಂಶ ಆದೇಶದಿಂದ ತಿಳಿದು ಬಂದಿದೆ.

 

‘ಮೇಲ್ನೋಟಕ್ಕೆ ಹಣವು ವೈಯಕ್ತಿಕ ಬ್ಯಾಂಕ್‌ ಖಾತೆಗೆ ವರ್ಗಾವಣೆಯಾಗಿರುವುದನ್ನು ವಿಶ್ವವಿದ್ಯಾಲಯವು ಗಮನಿಸಿದೆ. ಕಾಲಾವಕಾಶ ನೀಡಿದ ದಿನಾಂಕದ ನಂತರವೂ ಬರದಿದ್ದಲ್ಲಿ ಅವರಿಂದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಈಗಾಗಲೇ ಅವರಿಗೆ ತಿಳಿಸಲಾಗಿದೆ. ವಿಶ್ವವಿದ್ಯಾಲಯದ ಅಭಿಪ್ರಾಯದೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು,’ ಎಂದು ಕುಲಸಚಿವರು ಸರ್ಕಾರಕ್ಕೆ ತಿಳಿಸಿದ್ದರು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!