Friday | May 1, 2026 |

702 ಕೋಟಿ ಹೆಚ್ಚುವರಿ ವೆಚ್ಚಕ್ಕೆ ಅನುಮೋದನೆ; ಆರ್ಥಿಕ ಇಲಾಖೆ ನೆನಪೋಲೆಗಳಿಗೆ ಕಿಮ್ಮತ್ತಿಲ್ಲ

ಬೆಂಗಳೂರು; ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿ ಕೈಗೆತ್ತಿಕೊಂಡಿದ್ದ ಕರ್ನಾಟಕ ನೀರಾವರಿ ನಿಗಮವು ಪರಿಷ್ಕೃತ ಅಂದಾಜಿಗೆ ಅನುಮೋದನೆ ತೆಗೆದುಕೊಳ್ಳಲು ಆರ್ಥಿಕ ಇಲಾಖೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಅನುಮೋದನೆಯನ್ನೂ ಪಡೆದಿರಲಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಸರ್ಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ ರು.ಗೂ ಅಧಿಕ ವೆಚ್ಚ ಮಾಡಿರುವುದು ಬಹಿರಂಗವಾದ ಬೆನ್ನಲ್ಲೇ ಅನುಮೋದನೆ ಪಡೆಯಲು ಆರ್ಥಿಕ ಇಲಾಖೆ ನೀಡಿದ್ದ ಸೂಚನೆಯನ್ನೂ ನಿಗಮವು ಪಾಲಿಸಿರಲಿಲ್ಲ ಎಂಬುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ ‘ದಿ ಫೈಲ್‌’ ಸಮಗ್ರ ದಾಖಲೆಗಳನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

‘ಈಗಾಗಲೇ ಅನುಮೋದಿತ ಮೊತ್ತವು 2,561.88 ಕೋಟಿಗಳಾಗಿದ್ದು 2,782.47ಕೋಟಿ ವೆಚ್ಚ ಭರಿಸಲಾಗಿದೆ. ಅದರಂತೆ 220.59 ಕೋಟಿಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುತ್ತದೆ. ಆರ್ಥಿಕ ಇಲಾಖೆಯಿಂದ ಪರಿಷ್ಕೃತ ಅಂದಾಜಿಗೆ ಅನುಮೋದನೆ ತೆಗೆದುಕೊಳ್ಳಲು ಹಲವು ಬಾರಿ ತಿಳಿಸಿದಾಗಲೂ ಸಹ ಯಾವುದೇ ಅನುಮೋದನೆಯನ್ನು ಪಡೆಯದೇ ಯಾವ ಆಧಾರದ ಮೇಲೆ 220.59 ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುತ್ತದೆ ಹಾಗೂ  ಇದನ್ನು ಯಾವ ಅನುದಾನ/ಲೆಕ್ಕ ಶೀರ್ಷಿಕೆಯಿಂದ ಭರಿಸಲಾಗಿದೆ,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಆಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಲಗುರ್ಕಿ ಅವರು 2019ರ ಜುಲೈ 30ರಂದೇ ಟಿಪ್ಪಣಿಯಲ್ಲಿ ದಾಖಲಿಸಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಅದೇ ರೀತಿ ಪ್ರಸ್ತಾಪಿತ ಮೊತ್ತವು 3,395.02 ಕೋಟಿಗಳಾಗಿದ್ದು ಈಗಾಗಲೇ 2,782.47ಕೋಟಿ ವೆಚ್ಚ ಭರಿಸಲಾಗಿದ ಎಂದು ನಿಗಮವು ತಿಳಿಸಿತ್ತು. ಅದರಂತೆ 612.55 ಕೋಟಿ ಬಾಕಿ ಕಾಮಗಾರಿ ಉಳಿಕೆಯಾಗಬೇಕಿತ್ತು. ಆದರೆ ಪ್ರಸ್ತಾವನೆಯಲ್ಲಿ 770.16 ಕೋಟಿಗಳೆಂದು ತಿಳಿಸಿತ್ತು. ಒಟ್ಟು 157.61 ಕೋಟಿ ರು. ವ್ಯತ್ಯಾಸ ಕಂಡುಬಂದಿತ್ತು. ಆರ್ಥಿಕ ಇಲಾಖೆಯು ಈ ವ್ಯತ್ಯಾಸಕ್ಕೆ ಸ್ಪಷ್ಟೀಕರಣ ಕೇಳಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಸಚಿವ ಸಂಪುಟಕ್ಕೆ ಕಡತ ಮಂಡಿಸುವ ಮುನ್ನ ಸಚಿವ ಗೋವಿಂದ ಕಾರಜೋಳ ಅವರೂ ಆರ್ಥಿಕ ಇಲಾಖೆಯ ನೆನಪೋಲೆಗಳತ್ತ ಗಮನಹರಿಸಿಲ್ಲ ಎಂದು ಗೊತ್ತಾಗಿದೆ.

 

ಹಾಗೆಯೇ ಪ್ರಸ್ತಾವನೆಯಲ್ಲಿ 770.16 ಕೋಟಿ ಉಳಿಕೆ ಕಾರ್ಯಭಾರ ಎಂದು ನಿಗಮವು ಹೇಳಿತ್ತು. ಕರಡು ಸಚಿವ ಸಂಪುಟ ಟಿಪ್ಪಣಿಯ ಕಂಡಿಕೆ 6ರಲ್ಲಿ 833.14 ಕೋಟಿ ರು ಹೆಚ್ಚುವರಿ ಎಂದು ತೋರಿಸಿತ್ತು. ಆದರೆ 770.16 ಕೋಟಿಗಳನ್ನು ಮಾತ್ರ ಕೇಂದ್ರ ಮತ್ತು ರಾಜ್ಯದ ಪಾಲನ್ನು ಲೆಕ್ಕ ಹಾಕಲು ಪರಿಗಣಿಸಲಾಗಿತ್ತು. ಉಳಿಕೆ ಮೊತ್ತ 62.98 ಕೋಟಿ ಮೊತ್ತವನ್ನು ಯಾವ ಮೂಲದಿಂದ ಭರಿಸಲಾಗುವುದು ಮತ್ತು ಈ ಮೊತ್ತವನ್ನು ಕೈಬಿಡಲು ಕಾರಣಗಳೇನು ಎಂದೂ ಆರ್ಥಿಕ ಇಲಾಖೆಯು ವಿವರಣೆ ಬಯಸಿ ಟಿಪ್ಪಣಿ ಹಾಳೆಯಲ್ಲಿ ದಾಖಲಿಸಿತ್ತು.

 

ಈ ಯೋಜನೆಯು 2014-15ನೇ ಸಾಲಿನಿಂದ ಕೇಂದ್ರ ಪುರಸ್ಕೃತ ಎಐಬಿಪಿ ಅನುದಾನದಡಿ ಸೇರ್ಪಡೆಯಾಗಿತ್ತು. ಯೋಜನೆಯ ಅನುಮೋದಿತ ಮೊತ್ತವು 2,561.88 ಕೋಟಿ ರು.ಗಳಾಗಿತ್ತು. ಈ ಪೈಕಿ ಸಿಬ್ಬಂದಿ ವೆಚ್ಚವನ್ನು ಹೊರತುಪಡಿಸಿ ಕಾಮಗಾರಿ ಅಂದಾಜು ಮೊತ್ತ 2,3342.33 ಕೋಟಿ ರುಗಳಾಗಿತ್ತು.

 

ಎಐಬಿಪಿ ಅಡಿ ಸೇರ್ಪಡೆಗೊಳ್ಳುವ ಸಮಯದಲ್ಲಿ ಅಂದರೆ 2014ರ ಮಾರ್ಚ್‌ 31ರ ಅಂತ್ಯಕ್ಕೆ 1,572.07 ಕೋಟಿ ರು. ವೆಚ್ಚವಾಗಿತ್ತು. 2017-18ನೇ ಸಾಲಿನ ದರಪಟ್ಟಿಯಂತೆ ತಯಾರಿಸಿದ ಅಂದಾಜು ಮೊತ್ತ 3,395.02 ಕೋಟಿ ರು ಗಳಾಗಿತ್ತು. 2018-19ನೇ ಸಾಲಿನ ಅಂತ್ಯದವರೆಗಿನ ವೆಚ್ಚವು 2,782.47 ಕೋಟಿ ರು.ಗಳಾಗಿತ್ತು. ಅದರಂತೆ ಉಳಿಕೆ ಮೊತ್ತ 612.55 ಕೋಟಿ ರು. ಎಂದು ನಿಗಮವು ಮಾಹಿತಿ ಒದಗಿಸಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!