Friday | June 12, 2026 |

ಗ್ರಾಮ ಪಂಚಾಯ್ತಿಗಳಲ್ಲಿ ಲೆಕ್ಕಪರಿಶೋಧನೆ; 251.99 ಕೋಟಿ ರು. ಜಮೆ-ವೆಚ್ಚಕ್ಕೆ ದಾಖಲೆಗಳೇ ಇಲ್ಲ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 147 ಪಂಚಾಯ್ತಿಗಳು ದಾಖಲೆ ನಿರ್ವಹಣೆಯಲ್ಲಿ ಮತ್ತು ಲೆಕ್ಕ ಪರಿಶೋಧನೆಗೆ ದಾಖಲೆಗಳನ್ನು ಒದಗಿಸುವಲ್ಲಿ ವಿಫಲವಾಗಿವೆ. ಅದೇ ರೀತಿ ಲೆಕ್ಕಪರಿಶೋಧನೆಗೆ 251.99 ಕೋಟಿ ರು.ಗಳ ಜಮೆ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪತ್ತೆ ಹಚ್ಚಿದೆ.

 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅದೇ ರೀತಿ ಬೆಂಗಳೂರು, ಬೆಳಗಾವಿ, ಕಲ್ಬುರ್ಗಿ ಮತ್ತು ಮೈಸೂರು ವಿಭಾಗದ ಒಟ್ಟು 121 ಪಂಚಾಯ್ತಿಗಳ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಚಾರ್ಜ್‌ಲೀಸ್ಟ್‌ ತಯಾರಿಸಿ ಕಾರ್ಯಭಾರವನ್ನು ಹಸ್ತಾಂತರ ಮಾಡಿಲ್ಲ.
ಬೆಂಗಳೂರು ವಿಭಾಗದಲ್ಲಿ 14, ಬೆಳಗಾವಿ ವಿಭಾಗದಲ್ಲಿ 56, ಕಲ್ಬುರ್ಗಿ ವಿಭಾಗದಲ್ಲಿ 54, ಮೈಸೂರು ವಿಭಾಗದಲ್ಲಿ 23 ಸೇರಿ ಒಟ್ಟು 147 ಪಂಚಾಯ್ತಿಗಳು ಜಮೆ ಮತ್ತು ವೆಚ್ಚದ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ. ಇದರ ಮೊತ್ತವೇ 251,99,1,892 ರು ಗಳು ಎಂಬುದು ವರದಿಯಿಂದ ತಿಳಿದು ಬಂದಿದೆ.

 

ಗ್ರಾಮ ಪಂಚಾಯ್ತಿಗಳು ಪೂರ್ಣ ಪ್ರಮಾಣದಲ್ಲಿ ಬ್ಯಾಂಕ್‌ಗಳ ಮೂಲಕ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುತ್ತಿದೆ. ಬ್ಯಾಂಕ್‌ ಚೆಕ್‌ ಪುಸ್ತಕಗಳು, ಕಾಮಗಾರಿ ಅಳತೆ ಪುಸ್ತಕಗಳು ಸೇರಿದಂತೆ ಪ್ರಮುಖ ಅರ್ಥಿಕ ದಾಖಲೆಗಳನ್ನು ಜಾಗೂರಕತೆಯಿಂದ ನಿರ್ವಹಿಸಬೇಕು. ಅಲ್ಲದೇ ಈ ಎಲ್ಲಾ ದಾಖಲೆಗಳನ್ನು ಕಾರ್ಯಭಾರ ವಹಿಸಿಕೊಂಡ ಅಧಿಕಾರಿಗೆ ಕಾರ್ಯಭಾರ ಪಟ್ಟಿಯ ಮುಖಾಂತರ ಹಸ್ತಾಂತರಿಸಬೇಕು. ಆದರೆ 121 ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿಗಳು ಕಾರ್ಯಭಾರ ಪಟ್ಟಿ ಮುಖಾಂತರ ಈ ಯಾವ ದಾಖಲೆಗಳನ್ನೂ ಹಸ್ತಾಂತರ ಮಾಡಿಲ್ಲ ಎಂಬುದು ವರದಿಯಿಂದ ಮೇಲ್ನೋಟಕ್ಕೆ ಕಂಡುಬಂದಿದೆ.

 

ಕರ್ನಾಟಕ ಪಂಚಾಯತ್‌ರಾಜ್‌ ನಿಯಮಗಳು 2006ರರ ನಿಯಮ 43ರ ಅನ್ವಯ ಪಾವತಿಗೆ ಬಿಲ್‌ ಅಥವಾ ವೋಚರ್‍‌ಗಳ ಆಧಾರ ಇರಬೇಕು. ಕರ್ನಾಟಕ ಆರ್ಥಿಕ ಸಂಹಿತೆ ಸೆಕ್ಷನ್‌ 3 ಮತ್ತು 49ರ ಅನ್ವಯ ವೆಚ್ಚಗಳ ಲೆಕ್ಕಪತ್ರಗಳನ್ನು ನಿರ್ವಹಿಸಬೇಕು. ಲೆಕ್ಕ ಪರಿಶೋಧನೆಗೆ ಅಂತಹ ದಾಖಲೆಗಳನ್ನು ಒದಗಿಸಬೇಕು.

 

ವೋಚರ್‍‌ ಹಾಗೂ ಅಗತ್ಯ ಪೂರಕ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸದೇ ಇದ್ದಲ್ಲಿ ಇದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯಲೋಪವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಪಿಡಿಓ ವಿರುದ್ಧ ಶಿಸ್ತು ಕ್ರಮ, ಸೇವಾ ಬಡ್ತಿ ತಡೆಯುವುದು, ಸಿವಿಲ್‌, ಕ್ರಿಮಿನಲ್‌ ಮೊಕದ್ದಮೆ ಹೂಡಲು ಅವಕಾಶವಿದೆ. ಹಾಗೆಯೇ ಮೈಸೂರು ಆಡಿಟ್‌ ಮ್ಯಾನ್ಯುಯಲ್‌ ನಿಯಮ 537ರ ಅನುಸಾರ ಹಣ ದುರುಪಯೋಗವಾಗಿದೆಂದು ಸಹ ಪರಿಗಣಿಸಬಹುದು ಎಂದು ವರದಿಯಲ್ಲಿ ವಿವರಿಸಲಾಗಿದೆ.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

Related Articles

Popular Categories

error: Content is protected !!