Wednesday | July 22, 2026 |

342 ಪಂಚಾಯ್ತಿಗಳಲ್ಲಿ ನಡೆಯದ ವಾರ್ಡ್‌, ಗ್ರಾಮ ಸಭೆ; ಸಾರ್ವಜನಿಕ ಸಹಭಾಗಿತ್ವದ ಕೊರತೆ ಬಹಿರಂಗ

ಬೆಂಗಳೂರು; ಕಾರ್ಯಕ್ಷಮತೆ ಲೆಕ್ಕಪರಿಶೋಧನೆಗೆ ಒಳಪಟ್ಟ ರಾಜ್ಯದ 559 ಗ್ರಾಮ ಪಂಚಾಯ್ತಿಗಳ ಪೈಕಿ 342 ಪಂಚಾಯ್ತಿಗಳಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆ, ಜಮಾಬಂದಿಗಳನ್ನೇ ನಡೆಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬೆಂಗಳೂರು ವಿಭಾಗದ 171 ಪಂಚಾಯ್ತಿಗಳ ಪೈಕಿ 75 ಪಂಚಾಯ್ತಿಗಳಲ್ಲಿ ವಾರ್ಡ್‌ ಮತ್ತು ಗ್ರಾಮ ಸಭೆ ನಡೆದಿಲ್ಲ. ಬೆಳಗಾವಿ ವಿಭಾಗದಲ್ಲಿ 97, ಕಲ್ಬುರ್ಗಿ ವಿಭಾಗದಲ್ಲಿ 110, ಮೈಸೂರು ವಿಭಾಗದಲ್ಲಿ 60 ಪಂಚಾಯ್ತಿಗಳಲ್ಲಿ ವಾರ್ಡ್‌ ಮತ್ತು ಗ್ರಾಮ ಸಭೆಗಳನ್ನು ನಡೆಸಿಲ್ಲ ಎಂಬ ಅಂಕಿ ಅಂಶವು ವರದಿಯಿಂದ ತಿಳಿದು ಬಂದಿದೆ.

 

ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳ ಮೂಲಕ ಯೋಜನೆಗಳನ್ನು ಸಿದ್ಧಪಡಿಸುವುದು ಮತ್ತು ಅನುಷ್ಠಾನ ಹೇಗಾಗುತ್ತಿದೆ ಎಂಬುದರ ಮೇಲೆ ಹದ್ದಿನ ಕಣ್ಣಿಡಲು ಈ ಸಭೆಗಳು ನಡೆಯಬೇಕು. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಸೆಕ್ಷನ್‌ 3(ಸಿ) ಅನ್ವಯ ವಾರ್ಡ್ ಸಭೆ, ಸೆಕ್ಷನ್‌ 3(ಇ) ಅನ್ವಯ ಗ್ರಾಮ ಸಭೆಗಳನ್ನು 6 ತಿಂಗಳ ಅವಧಿಯನ್ನು ಮೀರದಂತೆ ಏರ್ಪಡಿಸಬೇಕು.

 

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಹಾಗೂ ರೂಪಿಸಿರುವ ಯೋಜನೆಗಳಲ್ಲಿ ಜನತೆಯ ಆಶೋತ್ತರಗಳಿಗೆ ಹೆಚ್ಚಿನ ಅವಕಾಶ ಲಭ್ಯವಾಗುವ ಉದ್ದೇಶದಿಂದಲೇ ವಾರ್ಡ್ ಮತ್ತು ಗ್ರಾಮ ಸಭೆಗಳನ್ನು ಆಯೋಜಿಸಬೇಕಿತ್ತು. ಅದರೆ 342 ಪಂಚಾಯ್ತಿಗಳಲ್ಲಿ ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳನ್ನೇ ನಡೆಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಈ ಸಭೆಗಳಲ್ಲಿ ಭಾಗವಹಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಭೆಗಳಲ್ಲಿ ತೆಗೆದುಕೊಳ್ಳಬೇಕಾದ ವಿಷಯಗಳು, ವಿಷಯಗಳನ್ನು ನಿರ್ಣಯಿಸುವ ವಿಧಾನ ಮತ್ತು ನಡವಳಿಗಳ ದಾಖಲೆ ಇತ್ಯಾದಿ ವಿಷಯಗಳ ಬಗ್ಗೆ ದಾಖಲೆಗಳನ್ನು ನಿರ್ವಹಿಸಿಲ್ಲ. ಮತ್ತು ಅವುಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ.

 

‘ಯೋಜನೆಗಳ ಫಲಾನುವಿಗಳ ಆಯ್ಕೆ ಪ್ರಕ್ರಿಯೆ ಮತ್ತು ಗ್ರಾಮ ಪಂಚಾಯ್ತಿಗಳ ಉತ್ತರದಾಯಿತ್ವದ ಪರಿಶೀಲನೆಯಲ್ಲಿ ಸಾರ್ವಜನಿಕ ಸಹಭಾಗಿತ್ವದ ಕೊರತೆ ಇದೆ,’ ಎಂದು ಲೆಕ್ಕಪರಿಶೋಧನೆ ವರದಿಯು ಗಮನಿಸಿರುವುದು ತಿಳಿದು ಬಂದಿದೆ.

 

ಗ್ರಾಮ ಪಂಚಾಯ್ತಿಯಲ್ಲಿ ಅನುಷ್ಠಾನಗೊಳ್ಳುವ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಎಲ್ಲಾ ಹಂತದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವಲ್ಲಿ ಗ್ರಾಮದ ಎಲ್ಲಾ ನಾಗರೀಕರು ನೇರವಾಗ ಭಾಗಿಯಾಗಬೇಕು. ಆದರೆ ಕಾರ್ಯಕ್ಷಮತೆ ಕೈಗೊಂಡ ಪಂಚಾಯ್ತಿಗಳ ಪೈಕಿ 119 ಪಂಚಾಯ್ತಿಗಳಲ್ಲಿ ಜಮಾಬಂದಿಯನ್ನೇ ನಡೆಸಿಲ್ಲ. ಹೀಗಾಗಿ ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸ್ಥಳೀಯ ನಾಗರೀಕರು ಭಾಗಿಯಾಗಿದ್ದಾರೆಯೇ ಎಂಬುದನ್ನು ನಿಶ್ಚಿತಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಲೆಕ್ಕ ಪರಿಶೋಧನೆ ವರದಿಯು ವಿವರಿಸಿದೆ.

 

‘ಗ್ರಾಮ ಮಟ್ಟದಲ್ಲಿ ಸ್ಥಳೀಯ ಸ್ವಯಂ ಆಡಳಿತದ ಮೂಲ ಘಟಕವಾಗುವ ಉದ್ದೇಶದಿಂದ ರೂಪಿಸಲಾಗಿರುವ ಈ ಸಭೆಗಳನ್ನು ನಿಯಮಿತವಾಗಿ ನಡೆಸದೇ ಇರುವುದರಿಂದ ಗ್ರಾಮ ಪಂಚಾಯ್ತಿಯ ಆಡಳಿತದಲ್ಲಿ ಸಾರ್ವಜನಿಕ ಸಹಭಾಗಿತ್ವ  ಪೂರ್ಣ ಪ್ರಮಾಣದಲ್ಲಿ ಅನುಷ್ಟಾನಗೊಂಡಿರುವುದಿಲ್ಲ,’ ಎಂದು ವರದಿಯು ಉಲ್ಲೇಖಿಸಿದೆ.

Hot this week

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...
Please Scan to make Your Contribution

Topics

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

Related Articles

Popular Categories

error: Content is protected !!