Saturday | March 21, 2026 |

ಮಾನವ ಆನೆ ಸಂಘರ್ಷ; ಕಾಂಗ್ರೆಸ್‌ ಸರ್ಕಾರದಲ್ಲಿ ನಿರ್ಮಾಣವಾದ ತಡೆಗೋಡೆಗಳು ಅತ್ಯಂತ ಕಳಪೆ

Support THE-FILE

spot_img

ಬೆಂಗಳೂರು; ಮಾನವ-ಆನೆ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ   ರಾಮನಗರ ಜಿಲ್ಲೆ ಸೇರಿದಂತೆ ಹಲವೆಡೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ( 2014-15ರಿಂದ 2018ರವರೆಗೆ)  ನಿರ್ಮಿಸಿದ್ದ ತಡೆಗೋಡೆಗಳು ಅತ್ಯಂತ ಕಳಪೆಯಿಂದ ಕೂಡಿವೆ. ನಿರ್ವಹಣೆಗೆ ಅನುದಾನ ಬಿಡುಗಡೆ ಆಗದೇ ಇರುವುದು ಅಥವಾ ಅನುದಾನ ಬಳಕೆಗೆ ಅವಕಾಶವೂ ಇರಲಿಲ್ಲ ಎಂದು ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಮತ್ತು ಅರಣ್ಯ ಇಲಾಖೆಯು ನಡೆಸಿದ್ದ ಮೌಲ್ಯಮಾಪನ ವರದಿಯು ಬಹಿರಂಗಗೊಳಿಸಿದೆ.

 

ಮಾನವ ಆನೆ ಸಂಘರ್ಷ, ಉಪಶಮನ ಕ್ರಮಗಳು ಮತ್ತು ಸಂಘರ್ಷ ತಗ್ಗಿಸುವಲ್ಲಿ ಅದರ ಪರಿಣಾಮ ಕುರಿತು ಪ್ರಾಧಿಕಾರಕ್ಕೆ 2022ರ ನವೆಂಬರ್‌ನಲ್ಲಿ ಸಲ್ಲಿಸಿರುವ ವರದಿಯು ಮಾನವ ಆನೆ ಸಂಘರ್ಷದ ವಿವಿಧ ಆಯಾಮಗಳನ್ನು ತೆರೆದಿಟ್ಟಿದೆ. ಹಾಗೆಯೇ 2023ರಲ್ಲಿ ಕಾಂಗ್ರೆಸ್‌ ಸರ್ಕಾರವೇ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಈ ವರದಿಯು ಮುನ್ನೆಲೆಗೆ ಬಂದಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘2014-15ರಿಂದ 2018-19ರ ಅವಧಿಯಲ್ಲಿ ರಾಮನಗರ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ತಡೆಗೋಡೆಗಳು ಅತ್ಯಂತ ಕಳಪೆಯಿಂದ ಕೂಡಿವೆ. ಅವುಗಳನ್ನು ನಿರ್ವಹಣೆ ಮಾಡಿಲ್ಲ. ಶೇ.50ಕ್ಕಿಂತಲೂ ಹೆಚ್ಚು ಅಧಿಕ ಹಾನಿಗೆ ಒಳಗಾಗಿವೆ. ಕಾರ್ಯನಿರ್ವಹಣೆ ಸ್ಥಿತಿಯಲ್ಲಿಲ್ಲ. ಅವುಗಳನ್ನು ಮತ್ತೆ ಕಾರ್ಯನಿರ್ವಹಿಸುವ ರೀತಿಯಲ್ಲಿ ಪುನಶ್ಚೇತನಗೊಳಿಸುವುದು ಸಾಧ್ಯವೇ ಇಲ್ಲ. ಬಹುತೇಕ ತಡೆಗೋಡೆಗಳನ್ನು 2014-15ರಲ್ಲಿ ನಿರ್ಮಿಸಲಾಗಿದ್ದು ಅವು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ,’ ಎಂದು ಅಧ್ಯಯನ ತಂಡವು ವಿವರಿಸಿದೆ.

 

ರಾಮನಗರದಲ್ಲಿ ಕಳಪೆ ಪ್ರಮಾಣ ಶೇ.67ರಷ್ಟು ಇದ್ದರೆ ಮಡಿಕೇರಿಯಲ್ಲಿ ಅದು ಶೇ.100ರಷ್ಟಿದೆ. ಚಾಮರಾಜನಗರದಲ್ಲಿ ಶೇ.40ರಷ್ಟಿದೆ. ಅವುಗಳಲ್ಲಿ ಕೆಲವು ನಿರ್ವಹಣೆ ಅಗತ್ಯವಿರುವ ಮಧ್ಯಮ ಶ್ರೇಣಿಯವೂ ಇದೆ. 2014-15ರಲ್ಲಿ ನಿರ್ಮಾಣಗೊಂಡವನ್ನು ಹೊರತುಪಡಿಸಿ ಕೆಲವು ಇಪಿಟಿಗಳು ಬಹುಶಃ ಉತ್ತಮ ನಿರ್ವಹಣೆಯಿಂದ ಕೂಡಿವೆ ಎಂದು ವರದಿಯಿಂದ ತಿಳಿದು ಬಂದಿದೆ.

 

ಚಾಮರಾಜನಗರ, ಬಂಡೀಪುರ ಮತ್ತು ನಾಗರಹೊಳೆಗಳಲ್ಲಿ ಕೆಲವು ಮಧ್ಯಮ ಶ್ರೇಣಿಯಲ್ಲಿವೆ. ಸ್ವಲ್ಪ ಮಟ್ಟಿನ ನಿರ್ವಹಣೆ ಅಗತ್ಯವಿದೆ. 2014-15ರಲ್ಲಿ ನಿರ್ಮಾಣವಾಗಿರುವ ತಡೆಗೋಡೆಗಳ ನಿರ್ವಹಣೆಗೆ ಅನುದಾನದ ಕೊರತೆ ಕಂಡು ಬಂದಿದೆ. ಮೈಸೂರಿನಲ್ಲಿ ಶೇ.75ರಷ್ಟು ಇಪಿಟಿಗಳು ಮಧ್ಯಮ ಶ್ರೇಣಿಯಲ್ಲಿದ್ದರೆ ಶೇ.25ರಷ್ಟು ಕಳಪೆಯಿಂದ ಕೂಡಿವೆ. 2017-18 ಮತ್ತು 2018-19ರಲ್ಲಿ ನಿರ್ಮಿಸಿರುವ ತಡೆಗೋಡೆಗಳ ನಿರ್ವಹಣೆಗಾಗಿ ಯಾವುದೇ ಅನುದಾನವನ್ನೂ ಹಂಚಿಕೆ ಮಾಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

 

ಮಡಿಕೇರಿ (ಪ್ರಾದೇಶಿಕ) ವಿಭಾಗದಲ್ಲಿ ಅಧ್ಯಯನ ಅವಧಿಯಲ್ಲಿ ನಿರ್ಮಿಸಿರುವ ಇಪಿಟಿಗಳ ಪೈಕಿ ಕೆಲವನ್ನು ಮಾತ್ರ ನಿರ್ಮಾಣ ಮಾಡಲಾಗಿದೆ. ಬಹುತೇಕ ತಡೆಗೋಡೆಗಳಲ್ಲಿ ಪೊದೆಗಳು ಬೆಳೆದುಕೊಂಡಿದ್ದು ಹೂಳು ತುಂಬಿಕೊಂಡಿವೆ. ಅವುಗಲಣ್ನು ನಿರ್ವಹಣೆ ಮಾಡಿಲ್ಲ. ಶೇ. 87 ರಷ್ಟು ತಡೆಗೋಡೆಗಳು ಅತ್ಯಂತ ಕಳಪೆ ಸ್ಥಿತಿಯಲ್ಲಿವೆ. ನಿರ್ವಹಣೆಯನ್ನೇ ಮಾಡಿಲ್ಲ ಎಂಬ ಸಂಗತಿಯು ವರದಿಯಿಂದ ಗೊತ್ತಾಗಿದೆ.

 

‘ಕಾಡು ಹಂದಿಗಳಂತಹ ಕಾಡು ಪ್ರಾಣಿಗಳು ಮತ್ತು ಜಿಂಕೆಗಳು ಅನೆಗಳಿಗೆ ಕಂದಕ ದಾಟುವ ಸುಲಭ ದಾರಿಯನ್ನು ತೋರಿಸಿಕೊಡುತ್ತವೆ. ಅಲ್ಲದೆ ಇಪಿಟಿಗಳನ್ನು ಹೂಳು ಸಂಗ್ರಹ, ಕಳೆ, ಪೊದೆಗಳು ಬೆಳೆದುಕೊಂಡು ಅನೆಗಳ ದಾರಿಯನ್ನು ಸುಲಭಗೊಳಿಸುವುದು ಮಾತ್ರವಲ್ಲದೇ ಇಪಿಟಿಯ ಬಾಳಿಕೆ ಅವಧಿ ಮತ್ತು ಸಾಮರ್ಥ್ಯವನ್ನು ಕುಂದಿಸಲಿದೆ,’ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ನಿರ್ವಹಣೆಗೆ ಅನುದಾನ ಬಿಡುಗಡೆ ಆಗದೇ ಇರುವುದು ಅಥವಾ ಅನುದಾನ ಬಳಕೆಗೆ ಅವಕಾಶ ಇಲ್ಲದ ಕಾರಣದಿಂದ ಇಪಿಟಿಗಳನ್ನು ನಿರ್ವಹಣೆ ಮಾಢದೇ ಇದ್ದರೆ ಕೆಲವು ವರ್ಷಗಳಲ್ಲಿ ಹೂಳು ತುಂಬಿಕೊಂಡು ಇಪಿಟಿಗಳು ಬಳಕೆಗೆ ಅಯೋಗ್ಯವಾಗುತ್ತವೆ. ‘ಒಟ್ಟಾರೆಯಾಗಿ ಹೇಳುವುದಾದರೇ ಆರಂಭದ ವರ್ಷಗಳಾದ 2014-15, 2015-16, 2016-17ರ ಅವಧಿಯಲ್ಲಿ ನಿರ್ಮಾಣವಾಗಿರುವ ತಡೆಗೋಡೆಗಳು ನಿರ್ವಹಣೆ ಕೊರತೆ, ಅನುದಾನದ ಅಲಭ್ಯತೆ ಮತ್ತು ಸೂಕ್ತ ನಿಗಾ ಇಲ್ಲದ ಕಾರಣ ಕಳಪೆ ಸ್ಥಿತಿಯಲ್ಲಿವೆ,’ ಎಂದು ವರದಿಯಿಂದ ಗೊತ್ತಾಗಿದೆ.

 

‘ಅನುದಾನದ ಕೊರತೆ ಅಥವಾ ನಿರ್ವಹಣಾ ವೆಚ್ಚಕ್ಕೆ ನಿಧಿಯನ್ನು ಒದಗಿಸದ ಕಾರಣ ನಿರ್ವಹಣೆ ಮಾಡಲಾಗಿಲ್ಲ. ಹೀಗಾಗಿ ಹೂಳು, ಕಲ್ಲು ಮಣ್ಣುಗಳು ಮತ್ತು  ಕಳೆ ತುಂಬಿಕೊಂಡು ನಿರೀಕ್ಷಿತ ಕೆಲಸ ಮಾಡಲು ಸಾಧ್ಯವಿಲ್ಲದ ಸ್ಥಿತಿ ತಲುಪಿವೆ,’ ಎಂದು ವರದಿಯು ವಿವರಿಸಿದೆ.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!