Saturday | March 21, 2026 |

ಹರ್ಷನಿಗೆ 25 ಲಕ್ಷ ರು ಪರಿಹಾರ; ಸಿಎಂ ವಿವೇಚನೆ ದುರುಪಯೋಗ, ವರ್ಷದ ಬಳಿಕ ಕಡತ ನೀಡಿದ ಸರ್ಕಾರ

Support THE-FILE

spot_img

ಬೆಂಗಳೂರು; ದುಷ್ಕರ್ಮಿಗಳ ಮಾರಕ ದಾಳಿಯಿಂದ ಕೊಲೆಗೀಡಾಗಿದ್ದ ಬಜರಂಗ ದಳದ ಶಿವಮೊಗ್ಗದ ಕಾರ್ಯಕರ್ತ ಹರ್ಷ ಎಂಬಾತನಿಗೆ ಮುಖ್ಯಮಂತ್ರಿಗಳ ವಿವೇಚನೆಗೆ ಒಳಪಟ್ಟ ಪರಿಹಾರ ನಿಧಿಯಿಂದ 25 ಲಕ್ಷ ರು. ಭರಿಸಲು ಅನುಮೋದಿಸಿದ್ದ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ವಿವೇಚನೆಯನ್ನು ದುರುಪಯೋಗಪಡಿಸಿಕೊಂಡಿದ್ದರು ಎಂಬುದು ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.

 

ಅಲ್ಲದೇ ಈ ಸಂಬಂಧ ತೆರೆದಿದ್ದ ಕಡತವನ್ನು ಒಂದು ವರ್ಷದ ಬಳಿಕ ಮುಖ್ಯಮಂತ್ರಿಗಳ ಸಚಿವಾಲಯವು ಒದಗಿಸಿದೆ. ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ 25 ಲಕ್ಷ ರು. ಭರಿಸಿರುವ ಸಂಬಂಧ ಸಮಗ್ರ ಕಡತ ಪಡೆಯಲು ‘ದಿ ಫೈಲ್‌’ 2022ರ ಮಾರ್ಚ್‌ 7ರಂದು ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು. ಒಂದು ತಿಂಗಳ ಅವಧಿಯೊಳಗೆ ಮಾಹಿತಿ ಒದಗಿಸಬೇಕಿದ್ದ ಮುಖ್ಯಮಂತ್ರಿಗಳ ಸಚಿವಾಲಯವು ಒಂದು ವರ್ಷದವರೆಗೂ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ.

 

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಮೂರ್ನಾಲ್ಕು ದಿನಗಳಲ್ಲೇ ಅಂದರೆ 2023ರ ಮೇ 20ರಂದು ಕಡತವನ್ನು (ಕಡತ ಸಂಖ್ಯೆ; ಸಿಎಂ/43/ಸಿಎಎಂಆರ್‌ಎಫ್‌/ಜಿಇಎನ್‌/2022) ಒದಗಿಸಿದೆ.

 

ಸಿಎಂ ವಿವೇಚನೆ ದುರುಪಯೋಗ

 

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾರ್ಪೋರೇಟ್‌ ಕಂಪನಿಗಳು, ಸಾರ್ವಜನಿಕ ಸ್ವಾಮ್ಯದ ಕಂಪನಿಗಳು, ಉದ್ಯಮಿಗಳು, ತೆರಿಗೆದಾರರು ಸೇರಿದಂತೆ ಇನ್ನಿತರೆ ವಲಯದ ಸಾಮಾನ್ಯರೂ ಸಹ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಾರೆ. ಈ ನಿಧಿಯಲ್ಲಿರುವ ದೇಣಿಗೆ ಹಣವನ್ನು ಅನಾರೋಗ್ಯ ಪೀಡಿತರಾದ ಬಿಪಿಎಲ್‌ ಪಡಿತರದಾರರಿಗೆ, ಅಶಕ್ತರಿಗೆ, ನಿರ್ಗತಿಕರ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ. ಈ ನಿಧಿಯು ಮುಖ್ಯಮಂತ್ರಿಗಳ ವಿವೇಚನೆಗೆ ಒಳಪಟ್ಟ ನಿಧಿಯಾಗಿದೆ.

 

ಇಂತಹ ನಿಧಿಯಲ್ಲಿರುವ ಒಟ್ಟು ದೇಣಿಗೆ ಹಣವನ್ನು ಕೊಲೆ ಮತ್ತು ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿತರು ಮೃತರಾದ ಸಂದರ್ಭದಲ್ಲಿ ಅವರ ಅವಲಂಬಿತ ಕುಟುಂಬಗಳಿಗೆ ಪರಿಹಾರ ಒದಗಿಸಲು ಅವಕಾಶವಿಲ್ಲ. ಆದರೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನಿಗೆ 25 ಲಕ್ಷ ರು ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೇ ಭರಿಸಲು ಅನುಮೋದನೆ ನೀಡಿರುವುದು ತಮ್ಮ ವಿವೇಚನೆಯನ್ನೇ ದುರುಪಯೋಗಪಡಿಸಿಕೊಂಡಂತಾಗಿದೆ.

 

ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ ಮತ್ತು ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತ 2022ರ ಫೆ.20ರಂದು ದುಷ್ಕರ್ಮಿಗಳ ಮಾರಕ ದಾಳಿಯಿಂದ ಹತ್ಯೆಗೀಡಾಗಿದ್ದ. ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಅಂದಿನ ಸಚಿವ ಕೆ ಎಸ್ ಈಶ್ವರಪ್ಪ ಸೇರಿ ಹಲವರು ಭೇಟಿಯಾಗಿ ಕುಟುಂಬಕ್ಎಕ ಸಾಂತ್ವನ ಹೇಳಿದ್ದರು. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು 25 ಲಕ್ಷ ರು.ಗಳ ಪರಿಹಾರವನ್ನು ಸರ್ಕಾರದಿಂದಲೇ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

 

ಅಧಿಕಾರಿಗಳ ಅಭಿಪ್ರಾಯ ಬದಿಗೊತ್ತಿದ್ದ ಬಸವರಾಜ ಬೊಮ್ಮಾಯಿ

 

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೇ 25 ಲಕ್ಷ ರು. ಭರಿಸಬೇಕು ಎಂದು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಮಂಡನೆಯಾಗಿದ್ದ ಕಡತಕ್ಕೆ ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯಲು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌ ಅವರು ಮೌಖಿಕವಾಗಿ ತಿಳಿಸಿದ್ದರು ಎಂಬುದು ಆರ್‌ಟಿಐ ದಾಖಲೆಯಿಂದ ಗೊತ್ತಾಗಿದೆ.

 

ಇದಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ಅಧಿಕಾರಿಗಳು ‘ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಕೋಮು ಗಲಭೆ, ಕಗ್ಗೊಲೆ ಮುಂತಾದ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ಇಲ್ಲಿಯವರೆಗೂ ಪರಿಹಾರ ಒದಗಿಸಿರುವುದಿಲ್ಲ. ಇಂತಹ ಪ್ರಕರಣಗಳಿಗೆ ಪರಿಹಾರ ಒದಗಿಸಿದಲ್ಲಿ ಆರ್‌ಟಿಐ ಅಡಿ ಅಥವಾ ನ್ಯಾಯಾಲಯದಲ್ಲಿ ಪ್ರಶ್ನೆಗಳು ಉದ್ಭವವಾಗುವ ಸಾಧ್ಯತೆಗಳು ಇರುತ್ತವೆ,’ ಎಂದು ಮುಖ್ಯಮಂತ್ರಿ ಅವರನ್ನು ಎಚ್ಚರಿಸಿದ್ದರು.

 

ಅಷ್ಟೇ ಅಲ್ಲದೇ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅವರ ನಿರ್ದೇಶನದಂತೆ ಕಡತ ಮಂಡಿಸಿದ್ದ ಪರಿಹಾರ ನಿಧಿ ಶಾಖೆಯ ಅಧಿಕಾರಿಗಳು ‘ಸಿಎಂಆರ್‌ಎಫ್‌ ಅಡಿಯಲ್ಲಿ ಇಂತಹ ಪ್ರಕರಣಗಳಲ್ಲಿ ಪರಿಹಾರವನ್ನು ಈ ಹಿಂದೆ ನೀಡಿರುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ ಕೊಲೆ ಮತ್ತು ಕ್ರಿಮಿನಲ್‌ ಪ್ರಕರಣಗಳಾಗಿದ್ದು ಮೃತರಾದ ಅವಲಂಬಿತ ಕುಟುಂಬಗಳಿಗೆ ಪರಿಹಾರ ನೀಡಲು ಅವಕಾಶವಿರುವುದಿಲ್ಲ,’ ಎಂದು ಟಿಪ್ಪಣಿಯಲ್ಲಿ ತಮ್ಮ ಅಭಿಪ್ರಾಯವನ್ನು ದಾಖಲಿಸಿರುವುದು ಕಡತದೊಳಗಿರುವ ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಪರಿಹಾರ ನಿಧಿಯ ಶಾಖೆಯ ಅಧಿಕಾರಿಗಳು ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಬಜರಂಗ ದಳ ಕಾರ್ಯಕರ್ತ ಹರ್ಷ ಎಂಬಾತನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೇ 25 ಲಕ್ಷ ರು. ನೀಡಲು ಬಸವರಾಜ ಬೊಮ್ಮಾಯಿ ಅವರು ಅನುಮೋದಿಸಿದ್ದರು. ಅಲ್ಲದೇ ಈ ನಿಧಿಯು ಮುಖ್ಯಮಂತ್ರಿಗಳ ವಿವೇಚನೆಗೆ ಒಳಪಟ್ಟ ನಿಧಿಯಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದೂ ಅಧಿಕಾರಿಗಳು ಟಿಪ್ಪಣಿಯಲ್ಲಿ ದಾಖಲಿಸಿರುವುದು ಗೊತ್ತಾಗಿದೆ.

 

ಮೊದಲು ಕೋವಿಡ್‌ ಹಣ ಬಳಕೆ

 

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರು. ಹರ್ಷ ಕುಟುಂಬ ಸದಸ್ಯರಿಗೆ ಮಂಜೂರಾಗಿತ್ತಾದರೂ ಈ ಹಣವು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿ ಪರಿಹಾರ ನಿಧಿ ಬ್ಯಾಂಕ್‌ ಖಾತೆಗೆ ಜಮಾ ಆಗಿರಲಿಲ್ಲ ಎಂಬ ಸಂಗತಿ ತಿಳಿದು ಬಂದಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳು 2022ರ ಮಾರ್ಚ್‌ 10ರಂದು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದರು ಎಂದು ಗೊತ್ತಾಗಿದೆ.

 

ಹರ್ಷನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆ (ಸಂಖ್ಯೆ; 38587794605)ಯಿಂದ 25 ಲಕ್ಷ ರು. ಪರಿಹಾರ ವಿತರಿಸಿ ಸ್ವೀಕೃತಿ ಪಡೆದು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಒಗಿಸಬೇಕು ಎಂದು ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಅವರು ಸೂಚಿಸಿದ್ದರು. ಆದರೆ ಈ ಪರಿಹಾರದ ಮೊತ್ತವು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿ ಬ್ಯಾಂಕ್‌ ಖಾತೆಗೆ ಜಮಾ ಆಗಿರಲಿಲ್ಲ ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

‘ಮೃತರ ಕುಟುಂಬಕ್ಕೆ ತುರ್ತಾಗಿ ಪರಿಹಾಋ ಹಣ ವಿತರಣೆ ಮಾಡಬೇಕಾಗಿರುವುದರಿಂದ ಕೋವಿಡ್‌ 19 ರಡಿ ತಹಶೀಲ್ದಾರ್‌ ಶಿವಮೊಗ್ಗ ಇವರಲ್ಲಿ ಲಭ್ಯವಿರುವ ಅನುದಾನದಲ್ಲಿ ಮೃತ ಹರ್ಷ ಕುಟುಂಬ ವಾರಸುದಾರರಿಗೆ 25 ಲಕ್ಷ ರು. ಪರಿಹಾರ ವಿತರಿಸಬೇಕುಕ. ಈ ಪರಿಹಾರ ಮೊತ್ತವು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿ ಬ್ಯಾಂಕ್‌ ಖಾತೆಗೆ ಜಮಾ ಆದ ಕೂಡಲೇ ಈ ಮೊತ್ತವನ್ನು ಮರು ಹಂಚಿಕೆ ಮಾಡಬೇಕು,’ ಎಂದು ನಿರ್ದೇಶನ ನೀಡಲಾಗಿತ್ತು ಎಂಬುದು ಗೊತ್ತಾಗಿದೆ.

 

ಈ ಪ್ರಕ್ರಿಯೆ ಆದ ನಂತರ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 25 ಲಕ್ಷ ರು. ಅನುದಾನವು ಜಿಲ್ಲಾಧಿಕಾರಿಗಳ ಉಳಿತಾಯ ಖಾತೆಗೆ ಜಮಾ ಆಗಿದ್ದರಿಂದ 25 ಲಕ್ಷ ರು.ಗಳನ್ನು ಶಿವಮೊಗ್ಗ ತಹಶೀಲ್ದಾರ್‌ ಅವರಿಗೆ ಬಿಡುಗಡೆ ಮಾಡಲು ಅನುಮೋದಿಸಲಾಗಿತ್ತು ಎಂಬುದು ತಿಳಿದು ಬಂದಿದೆ.

 

ಕೆಲ ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಬಿಚ್ಚುಗತ್ತಿ ಮಾರಮ್ಮ ದೇಗುಲದಲ್ಲಿ ನೀಡಿದ್ದ ಪ್ರಸಾದ ಸೇವನೆಯಿಂದ ಸಾವೀಗೀಡಾಗಿದ್ದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರು., ಮತ್ತು ಮಂಡ್ಯ ಜಿಲ್ಲೆಯಲ್ಲಿನ ನಾಲೆಯೊಂದಕ್ಕೆ ಬಸ್‌ ಉರುಳಿದ್ದರಿಂದಾಗಿ ಮೃತಪಟ್ಟಿದ್ದವರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರು.ನಂತೆ ಪರಿಹಾರದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗಿತ್ತು. ಈ ಅವಧಿಯಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು.

 

ಸಾರ್ವಜನಿಕರು, ಸಂಘ ಸಂಸ್ಥೆಗಳು, ನಿಗಮ, ಮಂಡಳಿಗಳು, ಕಾರ್ಪೋರೇಷನ್‌ಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿವೆ. ಈ ಹಣವನ್ನು ಸನ್ನಿವೇಶ, ಕುಟುಂಬದ ತೀವ್ರತೆ, ದುಡಿಯುವ ವ್ಯಕ್ತಿ ಮೃತಪಟ್ಟಲ್ಲಿ, ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೇ ಭರಿಸಲಾಗುತ್ತಿದೆ. ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರಿಗೆ ಕನಿಷ್ಠ 10ರಿಂದ 25 ಲಕ್ಷ ರು.ವರೆಗೂ ಪರಿಹಾರವನ್ನು ಇದೇ ನಿಧಿಯಿಂದಲೇ ನೀಡಲಾಗುತ್ತಿದೆ.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!