Friday | April 17, 2026 |

ಕಲಿಕೆ ಹಿಂದುಳಿಯುವಿಕೆಗೆ ಕಾರಣವಾದ ‘ಹೆಬ್ಬುಲಿ’ ಕಟಿಂಗ್‌; ಚರ್ಚೆಗೆ ಗ್ರಾಸವಾದ ಮುಖ್ಯೋಪಾಧ್ಯಾಯರ ಪತ್ರ

ಬೆಂಗಳೂರು; ಕಲಿಕೆಯಲ್ಲಿ ಹಿಂದುಳಿಯುತ್ತಿರುವ ಶಾಲಾ ಮಕ್ಕಳಿಗೆ ಗುಣಮಟ್ಟದ ಬೋಧನೆ, ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸಬೇಕು ಎಂಬ ನಿಟ್ಟಿನಲ್ಲಿ ಶೈಕ್ಷಣಿಕ ವಲಯದಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿಯೇ ಜಮಖಂಡಿ ತಾಲೂಕಿನ ಕುಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಹೆಬ್ಬುಲಿ ಕಟಿಂಗ್‌ ಕಲಿಕೆಯಲ್ಲಿ ಹಿಂದುಳಿಯುವಿಕೆಗೆ ಕಾರಣವಾಗಿದೆ ಎಂಬ ಅಂಶವು ಚರ್ಚೆಗೆ ಗ್ರಾಸವಾಗಿದೆ.

 

ಹೆಬ್ಬುಲಿ ಚಿತ್ರದಲ್ಲಿ ನಟ ಸುದೀಪ್‌ ಅವರ ಕೇಶ ವಿನ್ಯಾಸವು ಅವರ ಅಭಿಮಾನಿಗಳ ಮನಸೂರೆಗೊಂಡಿತ್ತು. ಇದೀಗ ಶಾಲಾ ಮಕ್ಕಳೂ ಸಹ ಅದೇ ಕೇಶ ವಿನ್ಯಾಸಕ್ಕೆ ಮೊರೆ ಹೋಗಿರುವ ಕಾರಣ ಕಲಿಕೆ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಕುಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಾಜಿ ನಾಯಕ್‌ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

 

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕುಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಾಜಿ ನಾಯಕ್‌ ಅವರು ವ್ಯವಸ್ಥಿತ ಮತ್ತು ಶಿಸ್ತಿನಿಂದ ಕಾಣುವಂತಹ ಹೇರ್‌ ಕಟಿಂಗ್‌ ಮಾಡಬೇಕು ಎಂದು ಕುಲಹಳ್ಳಿಯ ಹೇರ್‌ ಕಟಿಂಗ್‌ ಅಂಗಡಿ ಮಾಲೀಕರಿಗೆ 2023ರ ಜುಲೈ 20ರಂದು ಬರೆದಿರುವ ಪತ್ರದಲ್ಲಿ ಹೆಬ್ಬುಲಿ ಕಟಿಂಗ್‌ ಕುರಿತು ಪ್ರಸ್ತಾಪಿಸಿದ್ದಾರೆ.

 

ಪತ್ರದಲ್ಲೇನಿದೆ?

 

ನಮ್ಮ ಶಾಲೆಯ ಗಂಡು ಮಕ್ಕಳು ಹೆಬ್ಬುಲಿಯಂತಹ ಇತರೆ ತರಹದ ಹೇರ್‌ ಕಟಿಂಗ್‌ (ತಲೆಯ ಒಂದು ಬದಿಗೆ ಕೂದಲು ಬಿಟ್ಟು ಇನ್ನೊಂದು ಬದಿಗೆ ಕೂದಲು ಉಳಿಸಿಕೊಳ್ಳುವುದು) ಮಾಡಿಸಿಕೊಂಡು ಶಾಲೆಗೆ ಬರುತ್ತಿದ್ದು ಇದರಿಂದ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಗೆ ಆಸಕ್ತಿ ತೋರಿಸದೇ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡದೇ ಕಲಿಕೆಯಲ್ಲಿ ಹಿಂದೆ ಉಳಿಯುತ್ತಿದ್ದಾರೆ.

 

ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಒಪ್ಪುವಂತಹ ಹೇರ್‌ ಕಟಿಂಗ್‌ ಮಾಡಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಒಂದು ವೇಳೆ ವಿದ್ಯಾರ್ಥಿಗಳು ಹೆಬ್ಬುಲಿ ಹೇರ್‌ ಕಟಿಂಗ್‌ ಮಾಡಲು ನಿಮಗೆ ಒತ್ತಾಯಿಸಿದರೆ ಅಂತಹ ವಿದ್ಯಾರ್ಥಿಗಳ ಹೆಸರನ್ನು ನನಗೆ ಅಥವಾ ಅವರ ಪಾಲಕರ ಗಮನಕ್ಕೆ ತರಬೇಕು ಎಂದು ಮುಖ್ಯೋಪಾಧ್ಯಾಯ ಶಿವಾಜಿ ನಾಯಕ್‌ ಅವರು ಹೇರ್‌ ಕಟಿಂಗ್‌ ಅಂಗಡಿ ಮಾಲೀಕರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

Hot this week

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

Topics

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Related Articles

Popular Categories

error: Content is protected !!