Friday | August 21, 2026 |

ಸಾಲ; 2,888 ಮಂದಿ ನಾಪತ್ತೆ, ಅಸಲು ಬಡ್ಡಿ ಸೇರಿ 1,733 ಕೋಟಿ ಬಾಕಿ, ಬಹಿರಂಗವಾಗದ ಅಪೆಕ್ಸ್‌ ಗ್ರಾಹಕರ ಹೆಸರು

ಬೆಂಗಳೂರು; ರಾಜ್ಯದ ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಮರು ಪಾವತಿ ಮಾಡದಿರುವ ಸಾಲದ ಅಸಲು 1,400 ಕೋಟಿ ರು., ಬಡ್ಡಿ 333 ಕೋಟಿ ರು. ಇದೆ. ಸಾಲ ಪಡೆದವರ ಪೈಕಿ 2,888 ಮಂದಿ ಪತ್ತೆಯಾಗಿಲ್ಲ.

 

ಇದು ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಕೇಳಿರುವ ಪ್ರಶ್ನೆಗೆ  ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು ನೀಡಿರುವ ಉತ್ತರ.

 

ಅಪೆಕ್ಸ್‌ ಬ್ಯಾಂಕ್‌ನಲ್ಲಿ 37 ಮಂದಿ ನಾಪತ್ತೆಯಾಗಿದ್ದು 127.79 ಲಕ್ಷ ಅಸಲು ಮ್ತು 68.71 ಲಕ್ಷ  ಬಡ್ಡಿ ಸೇರಿ ಒಟ್ಟು 196.5 ಲಕ್ಷ ಗಳು ಮರುಪಾವತಿಯಾಗಿಲ್ಲ ಎಂದು ಸಚಿವರು ನೀಡಿರುವ ಉತ್ತರದಿಂದ ತಿಳಿದುಬಂದಿದೆ.

 

ರಾಜ್ಯದ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಮರು ಪಾವತಿ ಮಾಡದೇ ಪತ್ತೆಯಾಗದವರ ಸಂಖ್ಯೆ ಮತ್ತು ಹೆಸರಿನ ಪಟ್ಟಿಯನ್ನು ಒದಗಿಸಿರುವ ಸಚಿವ ಕೆ ಎನ್‌ ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ನಲ್ಲಿ ಸಾಲ ಪಡೆದು ಪತ್ತೆಯಾಗದವರ ಹೆಸರುಗಳನ್ನು ಬಹಿರಂಗಪಡಿಸದೇ ಗ್ರಾಹಕರ ಹೆಸರನ್ನು ಮುಚ್ಚಿಟ್ಟಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

 

ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆದು ನಾಪತ್ತೆಯಾದವರ ಹೆಸರುಗಳನ್ನು ಬಹಿರಂಗಪಡಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ವಿಶೇಷವೆಂದರೆ ಕೆ ಎನ್‌ ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2 ಸಾವಿರ ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿತ್ತು ಎಂಬ ಬಲವಾದ ಆರೋಪ ಕೇಳಿ ಬಂದಿತ್ತು.

 

ಮರು ಪಾವತಿ ಮಾಡದೇ ಪತ್ತೆಯಾಗದವರು

 

ಪಟ್ಟಣ ಸಹಕಾರ ಬ್ಯಾಂಕ್‌ಗಳ ಪೈಕಿ ಬೆಂಗಳೂರು ನಗರದಲ್ಲಿ 2,485 ವ್ಯಕ್ತಿಗಳಿದ್ದಾರೆ. ಮೈಸೂರಿನಲ್ಲಿ 132, ಕಲ್ಬುರ್ಗಿಯಲ್ಲಿ ಶೂನ್ಯ, ಬೆಳಗಾವಿಯಲ್ಲಿ 15 ಮಂದಿ ಇದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ 37 ಮಂದಿ, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ 29, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 158 ಮಂದಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ 13 ಒಟ್ಟು 2,888 ಮಂದಿ ನಾಪತ್ತೆಯಾಗಿರುವುದು ಕೆ ಎನ್‌ ರಾಜಣ್ಣ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

 

 

ಪಟ್ಟಣ ಸಹಕಾರ ಬ್ಯಾಂಕ್‌ಗಳ ಪೈಕಿ ಬೆಂಗಳೂರು ನಗರದಲ್ಲಿರುವ ಬ್ಯಾಂಕ್‌ಗಳಲ್ಲಿ ಪತ್ತೆಯಾಗದ 2,485 ಮಂದಿಯಿಂದ ಅಸಲು 1,400 ಕೋಟಿ ರು ಅಸಲು ಮತ್ತು 596.72 ಲಕ್ಷ ರು., ಮೈಸೂರಿನಲ್ಲಿ 132 ಮಂದಿಯಿಂದ 24.1 ಲಕ್ಷ ಅಸಲು ಮತ್ತು 32.38 ಬಡ್ಡಿ, ಬೆಳಗಾವಿಯಲ್ಲಿ 15 ಮಂದಿಯಿಂದ 17.24 ಲಕ್ಷ ರು ಅಸಲು ಮತ್ತು 24.44 ಲಕ್ಷ ಬಡ್ಡಿ ವಸೂಲಾಗಬೇಕಿದೆ.

 

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಿಂದ 29 ಗ್ರಾಹಕರಿದಂದ 14.24 ಲಕ್ಷ ರು ಅಸಲು ಮತ್ತು 24.85 ಲಕ್ಷ ರು. ಬಡ್ಡಿ, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ನಿಂದ 158 ಮಂದಿಯಿಂದ 141.61 ಲಕ್ಷ ಅಸಲು ಮತ್ತು 178.16 ಲಕ್ಷ ಬಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ 13 ಮಂದಿಯಿಂದ 54.82 ಲಕ್ಷ ರು. ಅಸಲು, 41.09 ಲಕ್ಷ ಬಡ್ಡಿ ವಸೂಲಾಗಬೇಕಿದೆ.

 

ಮಂಡ್ಯ ಸಿಟಿ ಕೋ ಆಪರೇಟೀವ್‌ ಬ್ಯಾಂಕ್‌, ಕೊಡಗು ಜಿಲ್ಲಾ ಮಹಿಳಾ ಸಹಕಾರಿ ಬ್ಯಾಂಕ್‌, ಪೊನ್ನಂಪೇಟೆ ಪಟ್ಟಣ ಸಹಕಾರ ಬ್ಯಾಂಕ್‌, ಬೆಂಗಳೂರಿನ ದೀಕ್‌ ಸಹಕಾರಿಬ fಯಾಂಕ್‌, ಜನತಾ ಕೋ ಆಪರೇಟೀವ್ ಬ್ಯಾಂಕ್‌, ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌, ಬೆಂಗಳೂರು ಗ್ರಾಮಾಂತರದ ದಿ ಟೌನ್‌ ಕೋ ಆಪರೇಟೀವ್‌ ಸಹಕಾರಿ ಬ್ಯಾಂಕ್‌, ದೊಡ್ಡಬಳ್ಳಾಪುರ ದಿ ಟೆಕ್ಸ್‌ಟೈಲ್ ಮ್ಯಾನುಫ್ಯಾಕ್ಟರ್‌ ಕೋ ಆಪರೇಟೀವ್‌ ಬ್ಯಾಂಕ್‌, ಗ್ರಾಹಕರ ಹೆಸರುಗಳನ್ನು ಒದಗಿಸಿದೆ.

 

ಗುರುರಾಘವೇಂದ್ರ ಬ್ಯಾಂಕ್‌ ಹಗರಣ; 20 ವರ್ಷದಿಂದಲೂ ಅವ್ಯವಹಾರ, ಕಣ್ಮುಚ್ಚಿ ಕುಳಿತಿದ್ದ ಸರ್ಕಾರ

ಈ ಮೊತ್ತಗಳ ಪೈಕಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಬೆಂಗಳೂರು ಇದರ ಅಸಲು 1,400 ಕೋಟಿ ರು., ಹಾಗೂ ಬಡ್ಡಿ 323.73 ಕೋಟಿ ರು. ಇದೆ. ಬಡ್ಡಿಯನ್ನು ಎವರ್‍‌ ಗ್ರೀನ್‌ ಕ್ರೆಡಿಟ್‌ ಎಂಬುದಾಗಿ ಮತ್ತು 1,400 ಕೋಟಿ ರು. ಸಾಲವನ್ನು ಅನುತ್ಪಾದಕ ಆಸ್ತಿ ನಷ್ಟ ಎಂದು ಘೋಷಿಸಿದೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌; 1,400 ಕೋಟಿ ರು. ಮೊತ್ತದ ಸಾಲ ಅನುತ್ಪಾದಕ ಆಸ್ತಿ ಎಂದು ಘೋಷಣೆ

2020ರ ಮಾರ್ಚ್‌ 31ರಿಂದ ಈ ಸಾಲದ ಖಾತೆಗಳಿಗೆ ಬಡ್ಡಿ ವಿಧಿಸಿರುವುದಿಲ್ಲ ಎಂದು ಗೊತ್ತಾಗಿದೆ.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!