Wednesday | March 25, 2026 |

ಭ್ರಷ್ಟಾಚಾರ; ಭೂ ಪರಿಹಾರ ನೀಡಲು ಎಕರೆಗೆ 4 ಲಕ್ಷಕ್ಕೆ ಬೇಡಿಕೆ ಇರಿಸಿದ ವಿಶೇಷ ಭೂಸ್ವಾಧೀನಾಧಿಕಾರಿಗಳು

Support THE-FILE

spot_img

ಬೆಂಗಳೂರು; ಸರ್ಕಾರವು ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಕರೆಗೆ 4 ಲಕ್ಷ ರು. ನೀಡಲು ಬೇಡಿಕೆ ಇರಿಸುತ್ತಿರುವುದು ಇದೀಗ ಬಹಿರಂಗವಾಗಿದೆ.

 

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾಯಿತರಾಗಿರುವ ಗೋವಿಂದರಾಜು ಅವರು 2023ರ ಜುಲೈ 11ರಂದು ವಿಧಾನ ಪರಿಷತ್‌ನಲ್ಲಿ ಈ ಕುರಿತು ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದಾರೆ.

 

 

ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಕರೆಗೆ 4 ಲಕ್ಷ ರು. ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂಬ ಕುರಿತಾದ ಪ್ರಶ್ನೆಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್‌ ಅವರು ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.

 

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಲಂಚಕ್ಕೆ ಬೇಡಿಕೆ ಇರಿಸಿದೆ ಎಂದು ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ಬಲವಾಗಿ ಆರೋಪಿಸಿ ವಿಧಾನಸಭೆ ಚುನಾವಣೆಯಲ್ಲಿಯೂ ಇದನ್ನೇ ಪ್ರಬಲ ಅಸ್ತ್ರವನ್ನಾಗಿಸಿಕೊಂಡಿತ್ತು ಆದರೀಗ ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಿ ಒಂದು ತಿಂಗಳ ಅವಧಿ ಪೂರ್ಣಗೊಳಿಸಿರುವ ಹೊತ್ತಿನಲ್ಲಿಯೇ ಸರ್ಕಾರವು ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಲು ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಕರೆಗೆ 4 ಲಕ್ಷ ರು. ಲಂಚಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಕೇಳಿ ಬಂದಿರುವ ಆರೋಪವು ಮುನ್ನೆಲೆಗೆ ಬಂದಿದೆ.

 

‘ವಿಶೇಷ ಭೂ ಸ್ವಾಧೀನಾಧಿಕಾರಿಗಳು ಅತಿಯಾದ ಭ್ರಷ್ಟಾಚಾರ ನಡೆಯುತ್ತಿದ್ದು ಸರ್ಕಾರದ ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಲು 4 ಲಕ್ಷ ರುಪಾಯಿ ನೀಡಲು ಒತ್ತಾಯಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ,’ ಎಂದು ಗೋವಿಂದರಾಜು ಅವರು ಪ್ರಶ್ನೆ ಕೇಳಿದ್ದರು.

 

ಇದಕ್ಕೆ ಸುದೀರ್ಘವಾಗಿ ಉತ್ತರಿಸಿರುವ ಎಂ ಬಿ ಪಾಟೀಲ್‌ ಅವರು ಎಲ್ಲಿಯೂ ಭ್ರಷ್ಟಾಚಾರದ ಕುರಿತು ಮತ್ತು 4 ಲಕ್ಷ ರುಪಾಯಿಗೆ ಬೇಡಿಕೆ ಇರಿಸುತ್ತಿರುವ ಆರೋಪದ ಕುರಿತು ಸ್ಪಷ್ಟನೆಯನ್ನೇ ನೀಡಿಲ್ಲ.

 

ಎಂ ಬಿ ಪಾಟೀಲ್‌ ನೀಡಿದ್ದ ಉತ್ತರದಲ್ಲೇನಿದೆ?

 

ಕೆಐಎಡಿಬಿ ವತಿಯಿಂದ ಕೈಗಾರಿಕೆ ಪ್ರದೇಶ ಮತ್ತು ಏಕಘಟಕ ಸಂಕೀರ್ಣಗಳಿಗಾಗಿ ಸ್ವಾಧೀನಪಡಿಸಿಕೊಳ್ಳುವ ಜಮೀನುಗಳಿಗೆ ಕೆಐಎಡಿ ಕಾಯ್ದೆ ಕಲಂ 28(4) ಅಡಿ ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಭೂ ಪರಿಹಾರ ದರ ನಿಗದಿಪಡಿಸುವ ಸಲುವಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿ, ಮಂಡಳಿಯ ವಿಶೇಷ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಭೂ ದರ ನಿರ್ಧರಣಾ ಸಲಹಾ ಸಮಿತಿ ಸಭೆಯಲ್ಲಿ ಭೂ ಮಾಲೀಕರೊಂದಿಗೆ ಸಮಾಲೋಚಿಸಿ ಪ್ರಸ್ತಾವಿತ ಪ್ರದೇಶದಲ್ಲಿನ ಮಾರ್ಗಸೂಚಿ ದರ ಮತ್ತು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಹಿಂದಿನ 3 ವರ್ಷಗಳ ಮಾರಾಟದ ಅಂಕಿ ಅಂಶಗಳನ್ನು ಪರಿಗಣಿಸಿ ಶಿಫಾರಸ್ಸು ಮಾಡುವ ದರಕ್ಕೆ ಮಂಡಳಿ ಸಭೆಯ ಅನುಮೋದನೆ ಪಡೆದು ನಿಯಮಾನುಸಾರ ಪರಿಹಾರ ಪಾವತಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.

 

ಮಂಡಳಿಯ ಭೂ ಸ್ವಾಧೀನಕ್ಕೆ ಒಳಪಟ್ಟ ಜಮೀನುಗಳಿಗೆ ಪರಿಹಾರ ಪಾವತಿಸುವ ಕುರಿತಂತೆ ಭೂ ಮಾಲೀಕರಿಂದ ಅಗತ್ಯ ದಾಖಲೆಗಳನ್ನು ಪಡೆದು ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಅರ್ಹ ಭೂ ಮಾಲೀಕರಿಗೆ ಆದ್ಯತೆ ಮೇರೆಗೆ ಪರಿಹಾರ ಪಾವತಿಸಲು ಮಂಡಳಿಯ ಎಲ್ಲಾ ವಿಶೇಷ ಭೂ ಸ್ವಾಧೀನಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

 

ಭೂ ಪರಿಹಾರ ಪಾವತಿ ಕಾರ್ಯವನ್ನು ಪೂರ್ಣಗೊಳಿಸುವ ಕುರಿತಂತೆ ಭೂ ದರ ನಿರ್ಧರಣಾ ಸಲಹಾ ಸಮಿತಿ ಶಿಫಾರಸ್ಸು ಮಾಢುವ ಒಪ್ಪಂದದ ದರವು ಮಂಡಳಿ ಸಭೆಯಲ್ಲಿ ಅನುಮೋದನೆಗೊಂಡ ದಿನಾಂಕದಿಂದ 3 ತಿಂಗಳೊಳಗಾಗಿ ಪರಿಹಾರ ಪಾವತಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಹಾಘೂ ಒಪ್ಪಂದದ ದರದಲ್ಲಿ ಭೂ ಪರಿಹಾರ ಪಡೆಯದ ಮತ್ತು ಸಿವಿಲ್‌ ವಿವಾದಗಳಿರುವ ಪ್ರಕರಣಗಳಿಗೆ 45 ದಿನದೊಳಗಾಗಿ ಅವಾರ್ಡ್‌ ರಚಿಸಿ ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲು ಕ್ರಮವಹಿಸುವಂತೆ ಕಾಲಮಿತಿ ನಿಗದಿಪಡಿಸಿದೆ ಎಂದು ಉತ್ತರದಲ್ಲಿ ವಿವರಿಸಿದ್ದಾರೆ.

 

ಅಲ್ಲದೇ ಕಲಂ 28(4) ಅಡಿ ಅಂತಿಮ ಅಧಿಸೂಚನೆ ಹೊರಡಿಸಿ ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಪರಿಹಾರದ ಹಣವನ್ನು ಆದ್ಯತೆ ಮೇರೆಗೆ ಸಂಬಂಧಪಟ್ಟ ರೈತರು, ಖಾತೆದಾರರು ಹಿತಾಸಕ್ತಿದಾರರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಆರ್‍‌ಟಿಜಿಎಸ್‌ ಮುಖಾಂತರ ಜಮಾ ಮಾಡಲಾಗುತ್ತಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

Hot this week

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Topics

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

Related Articles

Popular Categories

error: Content is protected !!