Tuesday | July 28, 2026 |

ಹೊರಗುತ್ತಿಗೆ ಸೇವೆ ಸ್ಥಗಿತಕ್ಕೆ ಸೂಚನೆ; ಬೀದಿಗೆ ಬಿದ್ದ ಅಟಲ್‌ಜಿ ಜನಸ್ನೇಹಿಯ ಡೇಟಾ ಎಂಟ್ರಿ ಆಪರೇಟರ್‍‌ಗಳು

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಏಕಾಏಕೀ ರಾಜ್ಯದ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಹೊರಗುತ್ತಿಗೆ ಸೇವೆ ಸ್ಥಗಿತಗೊಳಿಸಿ ಡೇಟಾ ಎಂಟ್ರಿ ಆಪರೇಟರ್‍‌ಗಳನ್ನು ಬೀದಿಯಲ್ಲಿ ನಿಲ್ಲಿಸಿದೆ.

 

ಸಾರ್ವತ್ರಿಕ ಚುನಾವಣೆ, ಕೋವಿಡ್‌ ಸಂದರ್ಭ, ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಸಂದರ್ಭಗಳಲ್ಲಿ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಡೇಟಾ ಎಂಟ್ರಿ ಆಪರೇಟರ್‍‌ಗಳು ಕಾರ್ಯನಿರ್ವಹಿಸುತ್ತಿದ್ದರು. ಆದರೀಗ ಕಾಂಗ್ರೆಸ್‌ ಸರ್ಕಾರವು ದಿಢೀರ್‍‌ ಎಂದು ಅವರ ಸೇವೆಯನ್ನು ಸ್ಥಗಿತಗೊಳಿಸಿ ಹೊರಡಿಸಿರುವ ಆದೇಶದಿಂದಾಗಿ ಅವರ ಬದುಕನ್ನು ಕಿತ್ತುಕೊಂಡತಾಗಿದೆ.

 

ಈ ಸಂಬಂಧ ಡೇಟಾ ಆಪರೇಟರ್‍‌ಗಳು ತಮ್ಮ ಸೇವೆ ಮುಂದುವರೆಸಬೇಕು ಎಂದು ಕೋರಿ ಸಲ್ಲಿಸಿದ್ದ ಮನವಿಯೂ ಮುಖ್ಯಮಂತ್ರಿ ಕಚೇರಿಯ ಕಸದ ಬುಟ್ಟಿಗೆ ಸೇರಿದೆ.

 

ಹೊರಗುತ್ತಿಗೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಡೇಟಾ ಆಪರೇಟರ್‍‌ಗಳನ್ನು 2023ರ ಜುಲೈ 28ರಂದು ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಅವರ ನಿರ್ದೇಶನದಂತೆ ಕೆಲಸದಿಂದ ಕಿತ್ತು ಹಾಕಲಾಗಿದೆ.’ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಅಡಿಯಲ್ಲಿ ನೇಮಿಸಿಕೊಂಡಿರುವ ಡಾಟಾ ಎಂಟ್ರಿ ಆಪರೇಟರ್‍‌ಗಳನ್ನು ಆರ್ಥಿಕ ಇಲಾಖೆಯು ಅನುಮೋದಿಸಿರುವವ ಸಂಸ್ಥೆಗೆ ಸೀಮಿತಗೊಳಿಸಿ ಇನ್ನುಳಿದ ಆಪರೇಟರ್‍‌ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ,’ ಎಂದು ನಿರ್ದೇಶಕರು 2023ರ ಜುಲೈ 31ರಂದು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ. ಈ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯದ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್‍‌ಗಳ ಸೇವೆಯನ್ನು ಒದಗಿಸಲು ಧಾರವಾಡದ ಎಸ್‌ಬಿಎಲ್‌ ಎಂಟರ್‍‌ಪ್ರೈಸೆಸ್‌ಗೆ ಸೂಚಿಸಲಾಗಿತ್ತು. ಜುಲೈ 2023ರವರೆಗೆ ಈ ಸಂಸ್ಥೆಯಿಂದ ರಾಜ್ಯದ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್‍‌ಗಳ ಸೇವೆಯನ್ನು ಪಡೆಯಲಾಗಿತ್ತು.

 

‘ಅಟಲ್‌ಜಿ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟ್‌ಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಿ ಹೊರಗುತ್ತಿಗೆ ಆಧಾರದ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿ ಆದೇಶಿಸಿದೆ.

 

ಸುಮಾರು ವರ್ಷಗಳಿಂದ ಅಟಲ್‌ ಜಿ ಜನಸ್ನೇಹಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ, ಕೋವಿಡ್‌, ಅತಿವೃಷ್ಟಿ, ಅನಾವೃಷ್ಟಿ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸೇವೆಯನ್ನು ಸ್ಥಗಿತಗೊಳಿಸುವ  ನಿರ್ಧಾರದಿಂದ ನಮ್ಮ ಜೀವನವೇ ಬಲಿಯಾಗಲಿದೆ ಎಂದು ಡೇಟಾ ಎಂಟ್ರಿ ಆಪರೇಟರ್‍‌ಗಳು ಮನವಿಯಲ್ಲಿ ಗೋಳು ತೋಡಿಕೊಂಡಿದ್ದಾರೆ.

 

‘ನಾವೆಲ್ಲರೂ ಇದೇ ಕೆಲಸವನ್ನು ಅವಲಂಬಿಸಿ ಬದುಕುತ್ತಿದ್ದೇವೆ. ನಮ್ಮ ಕುಟುಂಬವೂ ಕೂಡ ನಮ್ಮನ್ನೇ ಆಧರಿಸಿ ಜೀವನ ನಡೆಸುತ್ತಿದೆ. ನಾವು ಎಷ್ಟೋ ಜನರು ಅಂಗವಿಕಲರಿದ್ದೇವೆ. ವಿಧವೆಯರಿದ್ದೇವೆ. ನಾವೀಗ ಬೀದಿಪಾಲಾಗಿದ್ದೇವೆ. ನಾವೆಲ್ಲರೂ ಇದೇ ಕೆಲಸವನ್ನು ಅವಲಂಬಿಸಿ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸುತ್ತಿದ್ದೇವೆ. ಈಗ ತಾವು ನಮ್ಮನ್ನು ಕೆಲಸದಿಂದ ಸ್ಥಗಿತಗೊಳಿಸಿದರೆ ನಾವು  ನಮ್ಮ ಮಕ್ಕಳು ಬೀದಿಪಾಲಾಗುವ ಪರಿಸ್ಥಿತಿ ಬರುತ್ತದೆ. ನಮ್ಮ ಜೀವನ ಬೀದಿಪಾಲಾಗಲು ಕಾರಣಕರ್ತರಾಗಬೇಡಿ,’ ಎಂದು ಡೇಟಾ ಆಪರೇಟರ್‍‌ಗಳು ಮನವಿಯಲ್ಲಿ ಕೋರಿದ್ದಾರೆ.

Hot this week

ಪ್ರವಾಸೋದ್ಯಮ ಆದಾಯ; ಲಕ್ಷಾಂತರ ರುಪಾಯಿ ಜಿಎಸ್‌ಟಿ ಕಟಾಯಿಸದ ಭದ್ರಾ ಹುಲಿ ಸಂರಕ್ಷಣಾ ಪ್ರತಿಷ್ಠಾನ, ಸಾರ್ವಜನಿಕವಾಗಿ ನಿಧಿ ಬಹಿರಂಗವಾಗಿಲ್ಲವೇಕೆ?

ಬೆಂಗಳೂರು; ಭದ್ರಾ ಹುಲಿ ಸಂರಕ್ಷಣಾ ಪ್ರತಿಷ್ಠಾನ ನಿಧಿಗೆ 2018-19ನೇ ಸಾಲಿನಲ್ಲಿ ಪ್ರವಾಸೋದ್ಯಮದಿಂದ...

ತಮಿಳುನಾಡಿಗೆ ಕಾವೇರಿ; ನಿಗದಿಗಿಂತ ಅರ್ಧ ಟಿಎಂಸಿ ಹೆಚ್ಚು ನೀರು ಹರಿಸಿದ ಕರ್ನಾಟಕ , ಸಂಸತ್‌ನಲ್ಲಿ ಕೇಂದ್ರದ ಮಾಹಿತಿ

ಬೆಂಗಳೂರು;   ಕಾವೇರಿ ನದಿ ನೀರು ಹಂಚಿಕೆ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಎನ್‌ಇಪಿ ಅಭ್ಯರ್ಥಿಗಳಿಗೆ ಆಘಾತ, ಉರ್ದು, ಚಿತ್ರಕಲಾ ಶಿಕ್ಷಕರ ಹುದ್ದೆ ಕೈಬಿಟ್ಟಿತೇಕೆ?; ಕರಡು ನಿಯಮಗಳಿಗೆ ಆಕ್ಷೇಪಣೆಗಳ ಸುರಿಮಳೆ

ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ...
Please Scan to make Your Contribution

Topics

ತಮಿಳುನಾಡಿಗೆ ಕಾವೇರಿ; ನಿಗದಿಗಿಂತ ಅರ್ಧ ಟಿಎಂಸಿ ಹೆಚ್ಚು ನೀರು ಹರಿಸಿದ ಕರ್ನಾಟಕ , ಸಂಸತ್‌ನಲ್ಲಿ ಕೇಂದ್ರದ ಮಾಹಿತಿ

ಬೆಂಗಳೂರು;   ಕಾವೇರಿ ನದಿ ನೀರು ಹಂಚಿಕೆ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಎನ್‌ಇಪಿ ಅಭ್ಯರ್ಥಿಗಳಿಗೆ ಆಘಾತ, ಉರ್ದು, ಚಿತ್ರಕಲಾ ಶಿಕ್ಷಕರ ಹುದ್ದೆ ಕೈಬಿಟ್ಟಿತೇಕೆ?; ಕರಡು ನಿಯಮಗಳಿಗೆ ಆಕ್ಷೇಪಣೆಗಳ ಸುರಿಮಳೆ

ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ...

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

Related Articles

Popular Categories

error: Content is protected !!