Friday | April 17, 2026 |

ಕನ್ನಡ ಸಂಸ್ಕೃತಿ ಇಲಾಖೆ ಸೇರಿ ಪ್ರಾಧಿಕಾರ ಅಧಿಕಾರಿ, ಸಿಬ್ಬಂದಿಗೆ ವೇತನ, ಭತ್ಯೆಗಳಿಗೆ ಅನುದಾನ ಕೊರತೆ?

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ವಿವಿಧ ಇಲಾಖೆಗಳ ಅನುದಾನ ಮತ್ತು ಕೆಲ ಕಾರ್ಯಕ್ರಮಗಳಿಗೆ ಅನುದಾನ ಕಡಿತಗೊಳಿಸಿರುವ ನಡುವೆಯೇ ಹಲವು ಇಲಾಖೆಗಳ ಸಿಬ್ಬಂದಿ ವೇತನಕ್ಕೂ ಅನುದಾನ ಕೊರತೆಯಾಗಿರುವುದು ಇದೀಗ ಬಹಿರಂಗವಾಗಿದೆ.

 

ವಿಶೇಷವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯದ ಅಧಿಕಾರಿಗಳು, ರವೀಂದ್ರ ಕಲಾಕ್ಷೇತ್ರ, ಕನ್ನಡ ಪುಸ್ತಕ ಪ್ರಾಧಿಕಾರದ ಸಿಬ್ಬಂದಿ ವೇತನ, ತುಟ್ಟಿಭತ್ಯೆ, ವೈದ್ಯಕೀಯ ಭತ್ಯೆಗಳನ್ನು ಪಾವತಿಸಲು ಅನುದಾನ ಕೊರತೆಯಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆಯು (ಎಫ್‌ಆರ್‍‌ ಮತ್ತು ಬಿಸಿಸಿ) ಆಯವ್ಯಯ ಪತ್ರದಲ್ಲಿ ಅಥವಾ ಹೆಚ್ಚಿನ  ಹಂಚಿಕೆ ಮತ್ತು ಎಲ್ಲಾ ವಿನಿಯೋಗಗಳಿಗೆ ಅಥವಾ ಮಂಜೂರಾತಿಗೆ ಬೇಕಿರುವ ಪುನರ್‍‌ ವಿನಿಯೋಗದ ಕುರಿತು ವಿವರಣೆ ಟಿಪ್ಪಣಿಯನ್ನು ಸಿದ್ದಪಡಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮುಂಗಡ ಪತ್ರದ ಪ್ರಧಾನ, ಉಪ ಮತ್ತು ವಿವರವಾದ ಶೀರ್ಷಿಕೆಗಳಡಿಯಲ್ಲಿ ಪಟ್ಟಿ ಮಾಡಿರುವ ಆರ್ಥಿಕ ಇಲಾಖೆಯು 2023-24ನೇ ಸಾಲಿನಲ್ಲಿ ಒದಗಿಸಿದ್ದ ಅನುದಾನ, ಇದುವರೆಗೂ ಆಗಿರುವ ವೆಚ್ಚ, ಸಂಭವನೀಯ ವೆಚ್ಚ, ಅಗತ್ಯವಿರುವ ಹೆಚ್ಚುವರಿ ಅನುದಾನದ ಕುರಿತೂ ಲೆಕ್ಕ ಹಾಕಿದೆ.ಈ ಕುರಿತು ಸಚಿವ ಶಿವರಾಜ್‌ ತಂಗಡಗಿ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

 

2023-24ನೇ ಸಾಲಿನ ಆಯವ್ಯಯದಲ್ಲಿ 9.17 cr ರು.ಗಳನ್ನು ಒದಗಿಸಲಾಗಿದೆ. ಇದುವರೆಗೆ 4.50 ಕೋಟಿ ರು. ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿ 5.07 ಕೋಟಿ ರು. ವೆಚ್ಚವಾಗಲಿದೆ ಎಂದು ಅಂದಾಜಿಸಿದೆ. 40.24 ಲಕ್ಷ ರು.ಗಳು ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ಆರ್ಥಿಕ ಇಲಾಖೆ ಲೆಕ್ಕ ಹಾಕಿರುವುದು ಗೊತ್ತಾಗಿದೆ.

 

ಪುರಸ್ಕೃತ ಖಾಲಿ ಹುದ್ದೆಗಳಿಗಾಗಿ ಅನುದಾನ ಮತ್ತು ಇತರೆ ಭತ್ಯೆಗಳಿಗಾಗಿ 4.54 ಕೋಟಿ ರು.ಗಳನ್ನು ಕಡಿಮೆ ಮಾಡಲು ಪ್ರಸ್ತಾವಿಸಲಾಗಿದೆ. ಪುನರ್‍‌ ವಿನಿಯೋಗಕ್ಕೆ 40.24 ಲಕ್ಷ ರು. ಲಭ್ಯವಿದೆ ಎಂದು ತಿಳಿದು ಬಂದಿದೆ.
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಅಧಿಕಾರಿಗಳಿಗೆ (2205-00-001-0-002) 1.34 ಕೋಟಿ ರು. ವೇತನಕ್ಕೆ ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿ 1.47 ಕೋಟಿ ರು. ವೆಚ್ಚವಾಗಲಿದೆ. ಹೀಗಾಗಿ 14.73 ಲಕ್ಷ ರು. ಹೆಚ್ಚುವರಿ ಅನುದಾನ ಬೇಕಿದೆ. ವೇತನ ಪಾವತಿಸಲು ಕೊರತೆಯಾಗಿರುತ್ತದೆ ಎಂದು ಆರ್ಥಿಕ ಇಲಾಖೆಯು ಪಟ್ಟಿ ಮಾಡಿರುವುದು ಗೊತ್ತಾಗಿದೆ.

 

ಅದೇ ರೀತಿ ನಿರ್ದೇಶನಾಲಯದ ಸಿಬ್ಬಂದಿಗಳಿಗೆ (2205-00-01-0-01-003) 1.27 ಕೋಟಿ ರು. ಇದುವರೆಗೂ ವೆಚ್ಚವಾಗಿದೆ. ಮುಂದಿನ ದಿನಲ್ಲಿ 1.45 ಕೋಟಿ ವೆಚ್ಚವಾಗಲಿದೆ. 12.26 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ. ತುಟ್ಟಿ ಭತ್ಯೆಗೆ ಸಂಬಂಧಿಸಿದಂತೆ (2205-00-001-01-011) 94.32 ಲಕ್ಷ ರು. ಈಗಾಗಲೇ ವೆಚ್ಚವಾಗಿದ್ದು ಮುಂದಿನ ದಿನಗಳಲ್ಲಿ 1.32 ಕೋಟಿ ರು. ವೆಚ್ಚವಾಗಲಿದೆ. ಇನ್ನೂ 5.56 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ ಎಂದು ಅಂದಾಜಿಸಿದೆ.

 

ಹಾಗೆಯೇ ಇದೇ ನಿರ್ದೇಶನಾಲಯದ ಇತರೆ ಭತ್ಯೆಗಳಿಗೆ (2205-00-001-01-020) 0.72 ಲಕ್ಷ ರು. ವೆಚ್ಚವಾಗಿದ್ದು, 1.30 ಲಕ್ಷ ರು ಮುಂದಿನ ದಿನಗಳಲ್ಲಿ ವೆಚ್ಚವಾಗಲಿದೆ. 0.02 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ.
ರವೀಂದ್ರ ಕಲಾ ಕ್ಷೇತ್ರದ ಸಿಬ್ಬಂದಿಗೆ ವೇತನ ಪಾವತಿಸಲು 5.51 ಲಕ್ಷ ರು. ವೆಚ್ಚವಾಗಿದ್ದು ಮುಂದಿನ ದಿನಗಳಲ್ಲಿ 4.67 ಲಕ್ಷ ರು. ವೆಚ್ಚವಾಗಲಿದೆ. ಇನ್ನೂ 1.18 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ. ಕಲಾ ಕ್ಷೇತ್ರದ ಸಿಬ್ಬಂದಿಗೆ ತುಟ್ಟಿ ಭತ್ಯೆ ಪಾವತಿಸಲು 1.83 ಲಕ್ಷ ರು. ಈಗಾಗಲೇ ವೆಚ್ಚವಾಗಿದ್ದು 2.45 ಲಕ್ಷ ರು. ಮುಂದಿನ ದಿನಗಳಲ್ಲಿ ವೆಚ್ಚ ಮಾಡಬೇಕಿದೆ. 0.28 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ ಎಂಬುದು ತಿಳಿದು ಬಂದಿದೆ.

 

ಅದೇ ರೀತಿ ಕಲಾಕ್ಷೇತ್ರದ ಸಿಬ್ಬಂದಿಗೆ ಇತರೆ ಭತ್ಯೆ ಪಾವತಿಸಲು 1.70 ಲಕ್ಷ ರು. ಖರ್ಚಾಗಿದ್ದು ಮುಂದಿನ ದಿನಗಳಲ್ಲಿ 2.06 ಲಕ್ಷ ರು. ವೆಚ್ಚವಾಗಲಿದೆ. 0.19 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ. ವೈದ್ಯಕೀಯ ಭತ್ಯೆ ಪಾವತಿಸಲು 0.02 ಲಕ್ಷ ರು. ಖರ್ಚಾಗಿದ್ದು 0.09 ಲಕ್ಷ ರು. ವೆಚ್ಚವಾಗಲಿದೆ. 0.01 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ ಎಂದು ಪ್ರಸ್ತಾವಿಸಿದೆ.

 

ಕನ್ನಡ ಪುಸ್ತಕ ಪ್ರಾಧಿಕಾರದ ಅಧಿಕಾರಿಗಳಿಗೆ 7.44 ಲಕ್ಷ ರು. ವೇತನಕ್ಕೆ ಇದುವರೆಗೆ ವೆಚ್ಚವಾಗಿದೆ. 9.15 ಲಕ್ಷ ರು. ಸಂಭವನೀಯ ವೆಚ್ಚವಾಗಲಿದೆ. 0.59 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ. ತುಟ್ಟಿ ಭತ್ಯೆಗೆ 2.70 ಲಕ್ಷ ರು.ಖರ್ಚಾಗಿದ್ದರೇ 4.48 ಲಕ್ಷ ರು. ಸಂಭವನೀಯ ವೆಚ್ಚವಾಗಲಿದೆ. 0.18 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ. ಇತರೆ ಭತ್ಯೆಗಳಿಗೆ ಸಂಬಂಧಿಸಿದಂತೆ 2.46 ಲಕ್ಷ ರು. ವೆಚ್ಚವಾಗಿದ್ದು, 2.66 ಲಕ್ಷ ರು. ಸಂಭವನೀಯ ವೆಚ್ಚವಾಗಲಿದೆ. 0.15 ಲಕ್ಷ ರು. ಹೆಚ್ಚುವರಿಯಾಗಿ ಬೇಕಿದೆ ಎಂದು ವಿವರಣೆ ಪಟ್ಟಿಯಲ್ಲಿ ನಮೂದಿಸಿರುವುದು ಗೊತ್ತಾಗಿದೆ.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!