Tuesday | May 5, 2026 |

ಒಂದೇ ಒಂದು ಸಭೆ ನಡೆಸದ ಸಿಎಂ ಮುಖ್ಯ ಸಲಹೆಗಾರ, ನೀಡಿದ್ದು ಮೌಖಿಕ ಸಲಹೆಯಷ್ಟೇ

ಬೆಂಗಳೂರು; ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಬಿಂಬಿಸಿಕೊಂಡಿರುವ ಸುನೀಲ್ ಕನುಗೋಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಕವಾದ ನಂತರ ಒಂದೇ ಒಂದು ಸಭೆಗಳನ್ನು ನಡೆಸಿಲ್ಲ. ಆದರೆ ವಿಷಯಾಧರಿತವಾಗಿ ಮೌಖಿಕ ಸಲಹೆಗಳನ್ನು ನೀಡಿದ್ದಾರೆ ಎಂದು ಅವರ ಕಚೇರಿಯು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.

 

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಡೆಸಿದ್ದ ಹೋರಾಟ, ತಂತ್ರಗಾರಿಕೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಬಿಂಬಿಸಿಕೊಂಡಿದ್ದ ಸುನೀಲ್‌ ಕುನುಗೋಳು ಅವರನ್ನು ಮುಖ್ಯಮಂತ್ರಿಗಳಿಗೆ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿದ್ದರೂ ಒಂದೇ ಒಂದು ಸಭೆಯನ್ನೂ ನಡೆಸಿಲ್ಲ ಎಂದು ನೀಡಿರುವ ಮಾಹಿತಿಯು ಚರ್ಚೆಗೆ ಗ್ರಾಸವಾಗಿದೆ.

 

ಮುಖ್ಯಮಂತ್ರಿಯವರಿಗೆ ಮುಖ್ಯ ಸಲಹೆಗಾರರಾಗಿ ನೇಮಕವಾದ ದಿನದಿಂದ ಇದುವರೆಗೂ ನೀಡಿರುವ ಸಲಹೆಗಳ ವಿವರ, ಪ್ರಯಾಣ ಭತ್ಯೆ, ವೇತನ ಪಡೆದಿರುವ ಬಗ್ಗೆ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿ ಸುನೀಲ್‌ ಕನುಗೋಳು ಅವರು ವಿಷಯಾಧರಿತವಾಗಿ ಮೌಖಿಕ ಸಲಹೆ ನೀಡಿರುತ್ತಾರೆ ಎಂದು ಮಾಹಿತಿ ಒದಗಿಸಿದ್ದಾರೆ.

 

ವಿಷಯಾಧರಿತವಾಗಿ ಮೌಖಿಕ ಸಲಹೆಗಳನ್ನು ನೀಡಿದ್ದಾರೆ ಎಂದು ಮಾಹಿತಿ ಒದಗಿಸಿರುವ ವಿಶೇಷ ಕರ್ತವ್ಯಾಧಿಕಾರಿಯು ಅದರ ವಿವರಗಳನ್ನು ಒದಗಿಸಿಲ್ಲ. ಹಾಗೆಯೇ ಸುನೀಲ್‌ ಕುನಗೋಳು ಅವರು ಮುಖ್ಯಮಂತ್ರಿಯವರಿಗೆ ಮುಖ್ಯ ಸಲಹೆಗಾರರಾಗಿ ನೇಮಕವಾದ ದಿನದಿಂದ ಇದುವರೆಗೂ ಯಾವುದೇ ಸಭೆಗಳನ್ನು ಏರ್ಪಡಿಸಿಲ್ಲ ಎಂದು ಆರ್‌ಟಿಐನಲ್ಲಿ ಮಾಹಿತಿ ಒದಗಿಸಿದೆ.

 

ಅದೇ ರೀತಿ ಸುನೀಲ್‌ ಕುನಗೋಳು ಅವರು ಮುಖ್ಯ ಸಲಹೆಗಾರರಾಗಿ ನೇಮಕವಾದ ದಿನದಿಂದ ಇದುವರೆಗೂ ಯಾವುದೇ ವೇತನ ಹಾಗೂ ಪ್ರಯಾಣ ಭತ್ಯೆಯನ್ನೂ ಪಡೆದಿಲ್ಲ ಎಂದು ಉತ್ತರ ಒದಗಿಸಿದೆ.

 

ಸುನೀಲ್‌ ಕುನುಗೋಲು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಡೆಸಿದ್ದ ಹೋರಾಟ, ತಂತ್ರಗಾರಿಕೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಹೇಳಲಾಗಿತ್ತು. ಹೀಗಾಗಿ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೊಠಡಿ ಮತ್ತು ಅವರಿಗೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

 

ರಾಜಕೀಯ ಕಾರ್ಯದರ್ಶಿ, ಕಾನೂನು, ಮುಖ್ಯ ಸಲಹೆಗಾರರ ನೇಮಕ; ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗುವುದೇ?

 

2024ರ ಲೋಕಸಭೆ ಚುನಾವಣೆಗೆ ಅವರ ನೆರವು ಪಡೆಯಲು ಪಕ್ಷದ ರಾಜ್ಯ ಘಟಕ ನಿರ್ಧರಿಸಿತ್ತು. ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವ ಕಾಂಗ್ರೆಸ್‌ ಪಕ್ಷವು ಇದರ ಜವಾಬ್ದಾರಿಯನ್ನು ಸುನೀಲ್‌ ಕುನುಗೋಳು ಅವರಿಗೆ ವಹಿಸಿದೆ ಎಂದು ಹೇಳಲಾಗುತ್ತಿದೆ.

 

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಕಂಡಿತ್ತು. ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿದ ನಂತರ ರಾಜ್ಯದಲ್ಲಿ ಗೆಲುವಿನ ಗತಿಯನ್ನು ಕಾಯ್ದುಕೊಳ್ಳಲು ಉತ್ಸುಕವಾಗಿದೆ. ಬಳ್ಳಾರಿ ಮೂಲದ ಕನುಗೋಳು ಕಾಂಗ್ರೆಸ್ ಪಕ್ಷದ ಮುಖ್ಯ ಚುನಾವಣಾ ತಂತ್ರಗಾರ ಎಂದು ಗುರುತಿಸಲ್ಪಟ್ಟಿದ್ದರು. ಕನುಗೋಲು ಅವರನ್ನು ಸಿಎಂ ಸಲಹೆಗಾರರನ್ನಾಗಿ ನೇಮಿಸಿರುವುದು ಕೂಡ ಆ ಪ್ರಯತ್ನದ ಭಾಗವೇ ಎನ್ನಲಾಗಿತ್ತು.

 

ಸುನಿಲ್ ಕನುಗೋಲು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿರುವುದಕ್ಕೆ ಪಕ್ಷದ ಯಶಸ್ಸಿನಲ್ಲಿ ಅವರ ಪಾತ್ರದ ಮಹತ್ವ ಮತ್ತು ರಾಜಕೀಯ ತಂತ್ರಗಾರಿಕೆಯಲ್ಲಿ ಅವರ ಪರಿಣತಿಯನ್ನು ಸೂಚಿಸುತ್ತದೆ. ಪರಿಣಾಮಕಾರಿ ನಿರ್ಧಾರ ಮತ್ತು ಆಡಳಿತವನ್ನು ಮಾಡಲು ಮುಖ್ಯ ಸಲಹೆಗಾರರಾಗಿ, ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಲಿದ್ದಾರೆ.

Hot this week

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Related Articles

Popular Categories

error: Content is protected !!