Monday | March 30, 2026 |

ಅನುಮೋದನೆಯಿಲ್ಲದೇ ಕಾನೂನು ಅಧಿಕಾರಿಗಳ ಹುದ್ದೆ ಸೃಜನೆ; ಕಡತ ಹಿಂದಿರುಗಿಸಿದ ಆರ್ಥಿಕ ಇಲಾಖೆ

Support THE-FILE

spot_img

ಬೆಂಗಳೂರು; ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ರ ಅನುಮೋದನೆಯಿಲ್ಲದೆಯೇ ಹೊಸದಾಗಿ ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಸೃಜಿಸಿರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯದ ಅಡ್ವೋಕೇಟ್‌ ಜನರಲ್‌ ಕಚೇರಿಗೆ 20 ಜನ ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಕ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಅನುಮೋದನೆಯಿಲ್ಲದೆಯೇ ಕಾನೂನು ಅಧಿಕಾರಿಗಳನ್ನು ಸೃಜಿಸಿರುವುದು ಮುನ್ನೆಲೆಗೆ ಬಂದಿದೆ.

 

ಅನುಮೋದನೆಯಿಲ್ಲದೆಯೇ ಕಾನೂನು ಅಧಿಕಾರಿಗಳ ಹುದ್ದೆ ಸೃಜಿಸಿದ್ದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ಆರ್ಥಿಕ ಇಲಾಖೆಯಿಂದ ಘಟನೋತ್ತರ ಅನುಮೋದನೆ ಕೋರಿತ್ತು. ಈ ಸಂಬಂಧ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಅನುಮೋದನೆ ಪಡೆದು ನಂತರ ಪರಿಶೀಲನೆಗೆ ಸಲ್ಲಿಸಿ ಎಂದು ಕಡತವನ್ನು (ಸಂಖ್ಯೆ ; ಆಇ 315 ವೆಚ್ಚ-10/2023 (ಇ) No LAW 20 LAG 023 (E) ಹಿಂದಿರುಗಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯು ಬರೆದಿರುವ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಆರ್ಥಿಕ ಇಲಾಖೆಯ ಪತ್ರದಲ್ಲೇನಿದೆ?

 

ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಹೊಸದಾಗಿ ಸೃಜಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ 04 ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಗೆ ಮೊದಲಿಗೆ ಕಾನೂನು ಸಚಿವರ ಹಾಗೂ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ನಂತರ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಪರಿಶೀಲನೆಗೆ ಸಲ್ಲಿಸಬೇಕು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು 2023ರ ಸೆ.12ರಂದು ಕಡತ ಹಿಂದಿರಿಗಿಸಿರುವುದು ಗೊತ್ತಾಗಿದೆ.

 

ರಾಜ್ಯದಲ್ಲಿ ಮೊದಲು ಒಬ್ಬರು ಇಬ್ಬರು ಅಥವಾ ಮೂವರು ಇಲ್ಲವೇ 5 ಜನ ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಕ ಮಾಡುವ ಪರಿಪಾಠ ಜಾರಿಯಲ್ಲಿತ್ತು. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು 20 ಜನ (15 ಜನ ಹೈಕೋರ್ಟ್, 5 ಜನ ಸುಪ್ರೀಂ ಕೋರ್ಟ್) ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಿಸಿತ್ತು. ಇದು ನ್ಯಾಯಾಂಗದ ವಲಯದಲ್ಲಿ ಪರ – ವಿರೋಧ ಚರ್ಚೆಗೆ ಕಾರಣವಾಗಿತ್ತು.

 

ಕರ್ನಾಟಕದ ಅಡ್ವೊಕೇಟ್ ಜನರಲ್ ಅವರು ಎಲ್ಲಾ ಆಡಳಿತಾತ್ಮಕ ಮತ್ತು ಆರ್ಥಿಕ ಅಧಿಕಾರವನ್ನು ಹೊಂದಿದ್ದಾರೆ ಏಕೆಂದರೆ ಅವರು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆ ಮಾಡಬಹುದು. ಹೆಚ್ಚುವರಿ ಅಡ್ವೊಕೇಟ್ ಜನರಲ್ ಸರ್ಕಾರಿ ವಕೀಲರು, ರಾಜ್ಯ ಸಾರ್ವಜನಿಕ ಅಭಿಯೋಜಕರು, ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರು, ಹೆಚ್ಚುವರಿ ಸರ್ಕಾರಿ ವಕೀಲರು ಮತ್ತು ಹೈಕೋರ್ಟ್ ಸರ್ಕಾರಿ ವಕೀಲರಂತಹ ಕಾನೂನು ಅಧಿಕಾರಿಗಳ ತಂಡವನ್ನು ಒಳಗೊಂಡಿದೆ.

 

ಹರ್ಯಾಣದಲ್ಲಿ ಕಾನೂನು ಅಧಿಕಾರಿಗಳ ಆಯ್ಕೆಯಲ್ಲಿನ ಸ್ವಜನಪಕ್ಷಪಾತ ಮತ್ತು ಅಕ್ರಮಗಳ ವಿರುದ್ಧ ವಿವರವಾದ ದೂರನ್ನು ಸಲ್ಲಿಸಲಾಗಿತ್ತು. ಆದರೆ ಅದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನರೈನ್‌ಘರ್‌ನ ಗುರುದೇವ್ ಸಿಂಗ್ ಮನವಿ ಸಲ್ಲಿಸಿದ್ದರು. ಸಲ್ಲಿಸಿದ ಮನವಿಯಲ್ಲಿ ನ್ಯಾಯಮೂರ್ತಿ ವಿನೋದ್ ಎಸ್ ಭಾರದ್ವಾಜ್ ಅವರ ಹೈಕೋರ್ಟ್ ಜನವರಿ 24 ರೊಳಗೆ ಪ್ರತಿಕ್ರಿಯೆ ಕೇಳಿತ್ತು.

 

ಅಡ್ವೊಕೇಟ್ ಜನರಲ್ (ಎಜಿ) ಕಛೇರಿಯಲ್ಲಿ ಕಾನೂನು ಅಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮಗಳು/ಸ್ವಜನಪಕ್ಷಪಾತದ ಆರೋಪದ ಕುರಿತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ (ಎಚ್‌ಸಿ) ಕೇಂದ್ರ ಮತ್ತು ಹರಿಯಾಣ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿರುವುದನ್ನು ಸ್ಮರಿಸಬಹುದು.

Hot this week

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Topics

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Related Articles

Popular Categories

error: Content is protected !!