Sunday | June 7, 2026 |

ಅನುಮೋದನೆಯಿಲ್ಲದೇ ಕಾನೂನು ಅಧಿಕಾರಿಗಳ ಹುದ್ದೆ ಸೃಜನೆ; ಕಡತ ಹಿಂದಿರುಗಿಸಿದ ಆರ್ಥಿಕ ಇಲಾಖೆ

ಬೆಂಗಳೂರು; ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ರ ಅನುಮೋದನೆಯಿಲ್ಲದೆಯೇ ಹೊಸದಾಗಿ ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಸೃಜಿಸಿರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯದ ಅಡ್ವೋಕೇಟ್‌ ಜನರಲ್‌ ಕಚೇರಿಗೆ 20 ಜನ ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಕ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಅನುಮೋದನೆಯಿಲ್ಲದೆಯೇ ಕಾನೂನು ಅಧಿಕಾರಿಗಳನ್ನು ಸೃಜಿಸಿರುವುದು ಮುನ್ನೆಲೆಗೆ ಬಂದಿದೆ.

 

ಅನುಮೋದನೆಯಿಲ್ಲದೆಯೇ ಕಾನೂನು ಅಧಿಕಾರಿಗಳ ಹುದ್ದೆ ಸೃಜಿಸಿದ್ದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ಆರ್ಥಿಕ ಇಲಾಖೆಯಿಂದ ಘಟನೋತ್ತರ ಅನುಮೋದನೆ ಕೋರಿತ್ತು. ಈ ಸಂಬಂಧ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಅನುಮೋದನೆ ಪಡೆದು ನಂತರ ಪರಿಶೀಲನೆಗೆ ಸಲ್ಲಿಸಿ ಎಂದು ಕಡತವನ್ನು (ಸಂಖ್ಯೆ ; ಆಇ 315 ವೆಚ್ಚ-10/2023 (ಇ) No LAW 20 LAG 023 (E) ಹಿಂದಿರುಗಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯು ಬರೆದಿರುವ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಆರ್ಥಿಕ ಇಲಾಖೆಯ ಪತ್ರದಲ್ಲೇನಿದೆ?

 

ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಹೊಸದಾಗಿ ಸೃಜಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ 04 ಕಾನೂನು ಅಧಿಕಾರಿಗಳ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಗೆ ಮೊದಲಿಗೆ ಕಾನೂನು ಸಚಿವರ ಹಾಗೂ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ನಂತರ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಪರಿಶೀಲನೆಗೆ ಸಲ್ಲಿಸಬೇಕು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು 2023ರ ಸೆ.12ರಂದು ಕಡತ ಹಿಂದಿರಿಗಿಸಿರುವುದು ಗೊತ್ತಾಗಿದೆ.

 

ರಾಜ್ಯದಲ್ಲಿ ಮೊದಲು ಒಬ್ಬರು ಇಬ್ಬರು ಅಥವಾ ಮೂವರು ಇಲ್ಲವೇ 5 ಜನ ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಕ ಮಾಡುವ ಪರಿಪಾಠ ಜಾರಿಯಲ್ಲಿತ್ತು. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು 20 ಜನ (15 ಜನ ಹೈಕೋರ್ಟ್, 5 ಜನ ಸುಪ್ರೀಂ ಕೋರ್ಟ್) ಹೆಚ್ಚುವರಿ ಅಡ್ವೊಕೇಟ್ ಜನರಲ್​ಗಳನ್ನು ನೇಮಿಸಿತ್ತು. ಇದು ನ್ಯಾಯಾಂಗದ ವಲಯದಲ್ಲಿ ಪರ – ವಿರೋಧ ಚರ್ಚೆಗೆ ಕಾರಣವಾಗಿತ್ತು.

 

ಕರ್ನಾಟಕದ ಅಡ್ವೊಕೇಟ್ ಜನರಲ್ ಅವರು ಎಲ್ಲಾ ಆಡಳಿತಾತ್ಮಕ ಮತ್ತು ಆರ್ಥಿಕ ಅಧಿಕಾರವನ್ನು ಹೊಂದಿದ್ದಾರೆ ಏಕೆಂದರೆ ಅವರು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆ ಮಾಡಬಹುದು. ಹೆಚ್ಚುವರಿ ಅಡ್ವೊಕೇಟ್ ಜನರಲ್ ಸರ್ಕಾರಿ ವಕೀಲರು, ರಾಜ್ಯ ಸಾರ್ವಜನಿಕ ಅಭಿಯೋಜಕರು, ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರು, ಹೆಚ್ಚುವರಿ ಸರ್ಕಾರಿ ವಕೀಲರು ಮತ್ತು ಹೈಕೋರ್ಟ್ ಸರ್ಕಾರಿ ವಕೀಲರಂತಹ ಕಾನೂನು ಅಧಿಕಾರಿಗಳ ತಂಡವನ್ನು ಒಳಗೊಂಡಿದೆ.

 

ಹರ್ಯಾಣದಲ್ಲಿ ಕಾನೂನು ಅಧಿಕಾರಿಗಳ ಆಯ್ಕೆಯಲ್ಲಿನ ಸ್ವಜನಪಕ್ಷಪಾತ ಮತ್ತು ಅಕ್ರಮಗಳ ವಿರುದ್ಧ ವಿವರವಾದ ದೂರನ್ನು ಸಲ್ಲಿಸಲಾಗಿತ್ತು. ಆದರೆ ಅದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನರೈನ್‌ಘರ್‌ನ ಗುರುದೇವ್ ಸಿಂಗ್ ಮನವಿ ಸಲ್ಲಿಸಿದ್ದರು. ಸಲ್ಲಿಸಿದ ಮನವಿಯಲ್ಲಿ ನ್ಯಾಯಮೂರ್ತಿ ವಿನೋದ್ ಎಸ್ ಭಾರದ್ವಾಜ್ ಅವರ ಹೈಕೋರ್ಟ್ ಜನವರಿ 24 ರೊಳಗೆ ಪ್ರತಿಕ್ರಿಯೆ ಕೇಳಿತ್ತು.

 

ಅಡ್ವೊಕೇಟ್ ಜನರಲ್ (ಎಜಿ) ಕಛೇರಿಯಲ್ಲಿ ಕಾನೂನು ಅಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮಗಳು/ಸ್ವಜನಪಕ್ಷಪಾತದ ಆರೋಪದ ಕುರಿತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ (ಎಚ್‌ಸಿ) ಕೇಂದ್ರ ಮತ್ತು ಹರಿಯಾಣ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿರುವುದನ್ನು ಸ್ಮರಿಸಬಹುದು.

Hot this week

ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್‌ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌...

Related Articles

Popular Categories

error: Content is protected !!