Thursday | April 30, 2026 |

ಎನ್‌ಸಿಸಿ ಕೆಡೆಟ್‌ಗಳಿಗೆ ವೈಮಾನಿಕ ತರಬೇತಿ; ಅದಾನಿ ಒಡೆತನದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಬಾಡಿಗೆ

ಬೆಂಗಳೂರು; ಅದಾನಿ ಸಂಸ್ಥೆಯ ಒಡೆತನಕ್ಕೆ ಒಳಪಟ್ಟಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ವೈಮಾನಿಕ ತರಬೇತಿಗೆ ಅನಗತ್ಯವಾಗಿ ಹೆಚ್ಚುವರಿ ಬಾಡಿಗೆ ತೆರಬೇಕಿದೆ. ಹೀಗಾಗಿ ತರಬೇತಿ ನೀಡುವ ಯೋಜನೆಯನ್ನು ಶಿವಮೊಗ್ಗ ಅಥವಾ ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.

 

ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ (O&M) ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರವು ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ವೈಮಾನಿಕ ತರಬೇತಿಗೆ ಅನಗತ್ಯವಾಗಿ ಹೆಚ್ಚುವರಿ ಬಾಡಿಗೆ ತೆರಬೇಕಿದೆ ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ.

 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ವೈಮಾನಿಕ ತರಬೇತಿ ನೀಡಲು ಮುಂದಾಗಿದ್ದ ಉನ್ನತ ಶಿಕ್ಷಣ ಇಲಾಖೆಯು ಈ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಇದೇ ವಿಮಾನ ನಿಲ್ದಾಣದಲ್ಲಿ ತರಬೇತಿ ನೀಡಿದ್ದಲ್ಲಿ ಅನಗತ್ಯವಾಗಿ ಹೆಚ್ಚುವರಿ ಬಾಡಿಗೆ ಪಾವತಿಸಬೇಕಾಗುತ್ತದೆ ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯಿಸಿದೆ.

 

ಉನ್ನತ ಶಿಕ್ಷಣ ಇಲಾಖೆಗೆ ಈ ಸಂಬಂಧ ಆರ್ಥಿಕ ಇಲಾಖೆಯು 2023ರ ಜುಲೈ 17ರಂದೇ ಅಭಿಪ್ರಾಯ (ಆಇ 393 ವೆಚ್ಚ-8/2023 , ಇಡಿ 139 ಹೆಚ್‌ಪಿಟಿ 2022) ನೀಡಿದೆ ಎಂದು ಗೊತ್ತಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಭಿಪ್ರಾಯದಲ್ಲೇನಿದೆ?

 

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅದಾನಿ ಸಂಸ್ಥೆಯ ಒಡೆತನಕ್ಕೆ ಒಳಪಟ್ಟಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಮೈಕ್ರೋಲೈಟ್‌ ಏರ್‍‌ ಕ್ರಾಫ್ಟ್ ಗ್ಲೈಡರ್‍‌ (ವೈಮಾನಿಕ ತರಬೇತಿ) ಉಡಾವಣೆ ತರಬೇತಿಯನ್ನು ನೀಡಿದಲ್ಲಿ ಅನಗತ್ಯವಾಗಿ 95,64,662.00 ರು.ಗಳ ಹೆಚ್ಚುವರಿ ಬಾಡಿಗೆ ಪಾವತಿಸಬೇಕಾಗುತ್ತದೆ.

 

ಆದ್ದರಿಂದ ತರಬೇತಿ ಸ್ಥಳವನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಏರ್‍‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದ ಅಧೀನಕ್ಕೆ ಒಳಪಟ್ಟಿರುವ ಹತ್ತಿರದ ವಿಮಾನ ನಿಲ್ದಾಣಗಳಾದ ಶಿವಮೊಗ್ಗ ವಿಮಾನ ನಿಲ್ದಾಣ ಅಥವಾ ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಬೇಕು ಎಂದು ಅಭಿಪ್ರಾಯಿಸಿರುವುದು ಗೊತ್ತಾಗಿದೆ.

 

ಕೆಡೆಟ್‌ಗಳು ಪಠ್ಯಕ್ರಮದ ಆಧಾರದ ಮೇಲೆ ತಮ್ಮ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಫ್ಲೈಯಿಂಗ್ ಭಾಗವು ಪ್ರಾಯೋಗಿಕ ಅಂಶವಾಗಿತ್ತು. ಹೀಗಾಗಿ ಮಂಗಳೂರಿನಲ್ಲಿ ಎನ್‌ಸಿಸಿ ಏರ್ ಫ್ಲೈಯಿಂಗ್ ಪುನರಾರಂಭಗೊಂಡಿತ್ತು. ವಿಮಾನಗಳನ್ನು ಹಾರಿಸುವುದರಿಂದ ಕೆಡೆಟ್‌ಗಳು ಭಾರತೀಯ ವಾಯುಪಡೆಗೆ ಮುಂದುವರಿಯಲು ಮತ್ತು ಸೇರಲು ಪ್ರೇರೇಪಿಸಬಹುದು ಎಂದು ಹೇಳಲಾಗಿತ್ತು.

 

ಕರ್ನಾಟಕದ ಬಂದರು ನಗರ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಅದಾನಿ ಗ್ರೂಪ್ ಅಕ್ಟೋಬರ್ 31, 2020 ರಂದು ವಹಿಸಿಕೊಂಡಿದೆ. ವಿಮಾನ ನಿಲ್ದಾಣವು ತನ್ನ ಇತ್ತೀಚಿನ ಸುಂಕ ವಿವರಗಳ ಸಲ್ಲಿಕೆಯಲ್ಲಿ ಈ ಅಕ್ಟೋಬರ್‌ನಿಂದ ದೇಶೀಯ ಪ್ರಯಾಣಿಕರ ಮೇಲೆ 250 ರೂ.ನಷ್ಟು ಯುಡಿಎಫ್‌ ಅನ್ನು ವಿಧಿಸಲು ಅನುಮತಿ ಕೇಳಿದೆ. ಮತ್ತು ಮಾರ್ಚ್ 31, 2026ರ ವೇಳೆಗೆ ಇದನ್ನು ಕ್ರಮೇಣ 725 ರೂ.ಗೆ ಹೆಚ್ಚಿಸಲು ಕೋರಿತ್ತು.

 

ಸುಂಕ ನಿರ್ಧರಿಸುವ ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (ಎಇಆರ್‌ಎ) ಮಂಗಳೂರು ವಿಮಾನ ನಿಲ್ದಾಣಕ್ಕೆ ಏಪ್ರಿಲ್ 1, 2021ರಿಂದ ಮಾರ್ಚ್ 31, 2026ರ ಅವಧಿಗೆ ಸುಂಕವನ್ನು ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ವೇಳೆ ಅದಾನಿ ಈ ಬೇಡಿಕೆ ಇಟ್ಟಿತ್ತು.

 

ಅಂತರರಾಷ್ಟ್ರೀಯ ಪ್ರಯಾಣಿಕರಿಗೆ 525 ರೂ. ಶುಲ್ಕ ವಿಧಿಸಿ ಮಾರ್ಚ್ 2026ರ ವೇಳೆಗೆ ಇದನ್ನು 1,200 ರೂ.ಗೆ ಹೆಚ್ಚಿಸಲು ಅದಾನಿ ಏರ್‌ಪೋರ್ಟ್ಸ್‌ ಪ್ರಯತ್ನಿಸಿತ್ತು. ಎಇಆರ್‌ಎ ಒಪ್ಪಿದಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಹಾಗೂ ಆಗಮಿಸುವ ಎಲ್ಲಾ ಪ್ರಯಾಣಿಕರ ಮೇಲೆ ಈ ಯುಡಿಎಫ್‌ ಶುಲ್ಕವನ್ನು ವಿಧಿಸಲಾಗುತ್ತದೆ.

 

ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ 150 ರೂ. ಯುಡಿಎಫ್‌ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ 825 ರೂ. ಶುಲ್ಕವಿದೆ. ಆದರೆ ಸದ್ಯಕ್ಕೆ ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಪ್ರಯಾಣಿಕರಿಗೆ ಮಾತ್ರ ಶುಲ್ಕವಿದೆ. ಆಗಮಿಸುವ ಪ್ರಯಾಣಿಕರಿಗೆ ಈ ಶುಲ್ಕ ಇಲ್ಲ ಎಂದು ಹೇಳಲಾಗಿತ್ತು.

 

ಬೆಲೆ ನಿಯಂತ್ರಕ ಸಂಸ್ಥೆಗೆ ಸಲ್ಲಿಸಿದ ದಾಖಲೆಯಲ್ಲಿ ಅದಾನಿ ಏರ್‌ಪೋರ್ಟ್ಸ್‌, 2010ರಿಂದ ಯಾವುದೇ ಸುಂಕ ಪರಿಷ್ಕರಣೆ ನಡೆದಿಲ್ಲ. “ವಿಮಾನ ನಿಲ್ದಾಣದ ಆಧುನೀಕರಣ ಯೋಜನೆಯು ಸಹ ನಡೆಯುತ್ತಿದೆ,” ಎಂದು ಹೇಳಿದ್ದನ್ನು ಸ್ಮರಿಸಬಹುದು.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!