Sunday | August 23, 2026 |

ಸಹಕಾರ ಸಂಘಗಳಲ್ಲಿ ಅಕ್ರಮ; ಕಳೆದ 5 ವರ್ಷಗಳಲ್ಲಿ 141.78 ಕೋಟಿ ರು. ದುರುಪಯೋಗ ಪತ್ತೆ

ಬೆಂಗಳೂರು; ರಾಜ್ಯದಲ್ಲಿರುವ ಸುಮಾರು 45 ಸಾವಿರಕ್ಕೂ ಹೆಚ್ಚು  ಸಹಕಾರ ಸಂಘಗಳಲ್ಲಿ  ಕಳೆದ ಐದು ವರ್ಷಗಳಲ್ಲಿ ಒಟ್ಟಾರೆ 141.78 ಕೋಟಿ ರು.ಗಳು ದುರುಪಯೋಗವಾಗಿರುವುದು ಇದೀಗ ಬಹಿರಂಗವಾಗಿದೆ.

 

ವಿವಿದೋದ್ದೇಶ ಸೇರಿದಂತೆ ವಿವಿಧ ಸ್ವರೂಪದ ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಡೆಸುವ ಖಾಸಗಿ/ಸನ್ನದು ಲೆಕ್ಕ ಪರಿಶೋಧಕರು ಹಣ ದುರುಪಯೋಗ ಹಚ್ಚುವುದರಲ್ಲಿ ವಿಫಲರಾಗಿದ್ದಾರೆ. ಅದೇ ರೀತಿ ಇಲಾಖೆ ಲೆಕ್ಕ ಪರಿಶೋಧಕರೇ ಹೆಚ್ಚಿನ ಸಂಖ್ಯೆಯಲ್ಲಿ ಹಣ ದುರುಪಯೋಗ ಪ್ರಕರಣಗಳನ್ನು ಪತ್ತೆ ಹಚ್ಚುತ್ತಿದ್ದಾರೆ ಎಂಬುದನ್ನೂ ಸಹಕಾರ ಇಲಾಖೆಯೇ ಬಹಿರಂಗಪಡಿಸಿದೆ.

 

ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆಯನ್ನು ಸಹಕಾರ ಇಲಾಖೆಯಲ್ಲಿಯೇ ಮುಂದುವರೆಸುವ ಕುರಿತು ಇಲಾಖೆಯು 2023ರ ಸೆ.21ರಂದು  ಹೊರಡಿಸಿರುವ ನಡವಳಿಗಳಲ್ಲಿ ಈ ಎಲ್ಲಾ ಅಂಶವು ಪ್ರಸ್ತಾಪಿತವಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಹಕಾರ ಸಂಘಗಳ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದಂತೆ ಇಲಾಖೆ ಲೆಕ್ಕ ಪರಿಶೋಧಕರಿಗಿಂತಲೂ ಖಾಸಗಿ ಸನ್ನದು ಲೆಕ್ಕ ಪರಿಶೋಧಕರೇ ಹೆಚ್ಚಿನ ಸಂಖ್ಯೆಯಲ್ಲಿ ಲೆಕ್ಕ ಪರಿಶೋಧನೆ ನಡೆಸಿದ್ದಾರೆ. ಕಳೆದ 5 ವರ್ಷಗಳಲ್ಲಿ 82,444  ಖಾಸಗಿ ಸನ್ನದು ಲೆಕ್ಕ ಪರಿಶೋಧಕರು ಲೆಕ್ಕ ಪರಿಶೋಧನೆ ನಡೆಸಿದ್ದರೆ 66,159 ಮಂದಿ ಇಲಾಖೆ ಲೆಕ್ಕ ಪರಿಶೋಧಕರು ಲೆಕ್ಕ ಪರಿಶೋಧನೆ ನಡೆಸಿದ್ದಾರೆ. ಆದರೂ ಕಳೆದ 5 ವರ್ಷಗಳಲ್ಲಿ ಇನ್ನು 76,156 ಸಹಕಾರ ಸಂಘಗಳಲ್ಲಿ ಲೆಕ್ಕ ಪರಿಶೋಧನೆಗೆ ಬಾಕಿ ಉಳಿದಿವೆ.

 

ದುರುಪಯೋಗ

 

2018-19ರಲ್ಲಿ 60 ಪ್ರಕರಣಗಳಲ್ಲಿ 31.27 ಕೋಟಿ ರು., 2019-20ರಲ್ಲಿ 44 ಪ್ರಕರಣಗಳಲ್ಲಿ 23.52 ಕೋಟಿ ರು., 2020-21ರಲ್ಲಿ 58 ಪ್ರಕರಣಗಳಲ್ಲಿ 18.08 ಕೋಟಿ ರು., 2021-22ರಲ್ಲಿ 65 ಪ್ರಕರಣಗಳಲ್ಲಿ 36.34 ಕೋಟಿ ರು., 2022-23ರಲ್ಲಿ 63 ಪ್ರಕರಣಗಳಲ್ಲಿ 32.55 ಕೋಟಿ ರು. ಸೇರಿ ಒಟ್ಟಾರೆ 141.78 ಕೋಟಿ ರು. ದುರುಪಯೋಗವಾಗಿರುವುದು ನಡವಳಿಯಿಂದ ತಿಳಿದು ಬಂದಿದೆ. ಆದರೆ ಇಂತಹ ಸಹಕಾರ ಸಂಘಗಳ ವಿರುದ್ಧ ಸಚಿವ ಕೆ ಎನ್‌ ರಾಜಣ್ಣ ಅವರು ಇದುವರೆಗೂ ಗಂಭೀರ ಕ್ರಮ ಕೈಗೊಳ್ಳಲು ಸೂಚಿಸಿಲ್ಲ ಎಂದು ತಿಳಿದು ಬಂದಿದೆ.

 

‘ಖಾಸಗಿ ಸನ್ನದು ಲೆಕ್ಕ ಪರಿಶೋಧಕರು ಸಂಘಗಳಲ್ಲಿ ಜರುಗಿರುವ ಅವ್ಯವಹಾರ/ದುರುಪಯೋಗ ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಾರ್ವಜನಿಕರು ನೂರಾರು ಕೋಟಿ ರುಪಾಯಿಗಳು ಉಳಿತಾಯ, ಬಂಡವಾಳ (ಹೂಡಿಕೆ)ಗಳನ್ನು ಕಳೆದುಕೊಂಡಿದ್ದಾರೆ. ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌, ಗುರು ಸಾರ್ವಭೌಮ ಕ್ರೆಡಿಟ್‌ ಸೌಹಾರ್ದ್ ಸಹಕಾರ ಸಂಘ, ವಸಿಷ್ಠ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘಗಳು ಉದಾಹರಣೆಗಳಿವೆ,’ ಎಂದು ಸಹಕಾರ ಇಲಾಖೆಯು ನಡವಳಿಯಲ್ಲಿ ವಿವರಿಸಿದೆ.

 

ಅಲ್ಲದೇ ಇಲಾಖೆಯ ಲೆಕ್ಕ ಪರಿಶೋಧಕರು ಹೆಚ್ಚಿನ ಸಂಖ್ಯೆಯಲ್ಲಿ ಲೆಕ್ಕ ಪರಿಶೋಧನೆ ನಿರ್ವಹಿಸಿದ್ದಲ್ಲಿ ಸರ್ಕಾರಕ್ಕೆ ಬರುವ ಆದಾಯವೂ ಗಣನೀಯವಾಗಿ ಹೆಚ್ಚಲಿದೆ ಎಂದೂ ಇಲಾಖೆಯು ಹೇಳಿದೆ.

 

ದೋಷಪೂರ್ಣ ಲೆಕ್ಕ ಪರಿಶೋಧನೆ ಕೈಗೊಂಡ ಲೆಕ್ಕ ಪರಿಶೋಧಕರನ್ನು, ಲೆಕ್ಕ ಪರಿಶೋಧನಾ ಸಂಸ್ಥೆಗಳನ್ನು ಪ್ಯಾನಲ್‌ನಿಂದ ಕೈ ಬಿಡಬೇಕಕು. ಗಂಭೀರ ಪ್ರಕರಣಗಳಲ್ಲಿ ಅಂತಹ ಲೆಕ್ಕ ಪರಿಶೋಧಕರನ್ನು ಲೆಕ್ಕ ಪರಿಶೋಧನಾ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಂತಹ ಪ್ರಕರಣಗಳಲ್ಲಿ ಪತ್ತೆಯಾದ ಹಣ ದುರುಪಯೋಗದ ಮಾಹಿತಿಯೊಂದಿಗೆ ತೊಂದರೆಗೊಳಗಾದ ಸಾರ್ವಜನಿಕರಿಗೆ ನ್ಯಾಯ ಒದಗಿಸುವುದು ಇಲಾಖೆಯ ಮುಖ್ಯ ಕರ್ತವ್ಯವಾಗಿದೆ ಎಂದೂ ವಿವರಿಸಲಾಗಿದೆ.

 

 

ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಮತ್ತು ಶ್ರೀ ಗುರು ಸಾರ್ವಭೌಮ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ 2014-15ರಿಂದ 2018-19ರವರೆಗೆ ಒಟ್ಟು 2,692.13 ಕೋಟಿ ರು. ಹಣ ದುರುಪಯೋಗವಾಗಿದೆ ಎಂದು ಮರು ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿತ್ತು.

 

 

 

‘ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನ 2014-15ರಿಂದ 2018-19ನೇ ಸಾಲಿನವರೆಗಿನ ಮರು ಲೆಕ್ಕ ಪರಿಶೋಧನೆ ವರದಿ ಪೂರ್ಣಗೊಂಡಿದ್ದು ವರದಿಗಳನ್ನು ಬಿಡುಗಡೆಗೊಳಿಸಲಾಗಿದೆ.  ಮರುಲೆಕ್ಕಪರಿಶೋಧನೆಯಿಮದ 2,574.13 ಕೋಟಿ ರು ಹಣ ದುರುಪಯೋಗದ ಮೊತ್ತವನ್ನು ಪತ್ತೆ ಹಚ್ಚಲಾಗಿದೆ. ಈ ಸಂಬಂಧ ಸರ್ಕಾರಕ್ಕೆ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೆ ವರದಿ ಮಾಡಲಾಗಿದೆ,’ ಎಂದು ಅನುಪಾಲನಾ ವರದಿಯಲ್ಲಿ ವಿವರಿಸಲಾಗಿತ್ತು.

 

 

ಅದೇ ರೀತಿ ‘ಶ್ರೀ ಗುರುಸಾರ್ವಭೌಮ ಕ್ರೆಡಿಟ್‌ ಸೌಹಾರ್ದ ಸಹಕಾರಿಯ 2015-16 ಮತ್ತು 2016-17ನೇ ಸಾಲಿನ ಮರುಲೆಕ್ಕಪರಿಶೋಧನೆ ವದಿ ಪೂರ್ಣಗೊಂಡು ವರದಿ ಬಿಡುಗಡೆಯಾಗಿದೆ. 2017-18ನೇ ಸಾಲಿನ ಮರುಲೆಕ್ಕಪರಿಶೋಧನೆ ಪೊಊರ್ನಗೊಂಡಿದ್ದು ವರದಿ ಬಿಡುಗಡೆಗೆ ಬಾಕಿ ಇದೆ. 2015-16ರಿಂದ 2017-18ನೇ ಸಾಲುಗಳ ಮರುಲೆಕ್ಕಪರಿಶೋಧನೆಯಿಂದ 118 ಕೋಟಿ ರು. ಹಣ ದುರುಪಯೋಗ ಪತ್ತೆಯಾಗಿದೆ,’ ಎಂದು ಅನುಪಾಲನಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗುರುರಾಘವೇಂದ್ರ ಬ್ಯಾಂಕ್‌, ಸೊಸೈಟಿಯಲ್ಲಿ 2,692 ಕೋಟಿ ರು. ದುರುಪಯೋಗ ಪತ್ತೆ; ಮರು ಲೆಕ್ಕಪರಿಶೋಧನೆ

 

2018-19ನೇ ಸಾಲಿನ ಮರುಲೆಕ್ಕಪರಿಶೋಧನೆ ವರದಿಯಿನ್ನು ಜುಲೈ 2022ರೊಳಗೆ ಪೂರ್ಣಗೊಳಿಸಿ ವರದಿ ಬಿಡುಗಡೆಗೊಳಿಸಲು ಸನ್ನದು ಲೆಕ್ಕಪರಿಶೋಧಕರಿಗೆ ಸೂಚಿಸಿದೆ. 2015-16 ಮತ್ತು 2016-17ನೇ ಸಾಲಿನ ವಿಧಿವಿಜ್ಞಾನ ಲೆಕ್ಕಪರಿಶೋಧನೆ ವರದಿ ಪೂರ್ಣಗೊಂಡು ವರದಿ ಬಿಡುಗಡೆಯಾಗಿದೆ. 2017-18, 2018-19, 2019-20ನೇ ಸಾಲಿನ ವಿಧಿವಿಜ್ಞಾನ ಲೆಕ್ಕಪರಿಶೋಧನೆಯು ಪ್ರಗತಿಯಲ್ಲಿದೆ ಎಂಬುದು ಅನುಪಾಲನಾ ವರದಿಯಲ್ಲಿ ಮಾಹಿತಿ ಒದಗಿಸಿದೆ.

 

ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ 2014-15ನೇ ಸಾಲಿಗೆ 871 ಕೋಟಿ ರು. ನಷ್ಟ ಮತ್ತು 807 ಕೋಟಿ ರು. ಹಣ ದುರುಪಯೋಗವಾಗಿದೆ. 2018-19ರವರೆಗಿನ ಲೆಕ್ಕಪತ್ರಗಳನ್ನು ಮರು ಲೆಕ್ಕಪರಿಶೋಧನೆ ನಡೆಸಿದ್ದ ಸನ್ನದು ಲೆಕ್ಕಪರಿಶೋಧಕರು 2020ರ ಮಾರ್ಚ್‌ ಅಂತ್ಯಕ್ಕೆ ಒಟ್ಟು 1,923 ಕೋಟಿ ರು. ನಷ್ಟ ಹೊಂದಿದೆ ಎಂದು ವರದಿ ಸಲ್ಲಿಸಿದ್ದರು.

 

‘ಎವರ್‌ ಗ್ರೀನ್‌ ಅಕೌಂಟ್ಸ್‌ ಎಂದು ಸೃಷ್ಟಿಸಿ ವಾಸ್ತವಿಕವಾಗಿ ಸಾಲಗಾರರಿಗೆ  ಸಾಲ ನೀಡಲಾಗಿದೆ ಎಂದು ದಾಖಲೆಯನ್ನು ಸೃಷ್ಟಿಸಿ ಎವರ್‌ ಗ್ರೀನ್‌ ಅಕೌಂಟ್ಸ್‌ ಸೃಷ್ಟಿಸಿರುತ್ತಾರೆ. ಸಾಲ ನೀಡುವಿಕೆಯಲ್ಲಿ ದೊಡ್ಡ ಪ್ರಮಾಣದ ವಂಚನೆ ಕಂಡು ಬರುತ್ತಿದೆ. ಪ್ರತಿ ಖಾತೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಸಾಲ ಮಂಜೂರಾತಿ, ಸಾಲದ ಹಣ ವರ್ಗಾವಣೆ ಆಯಾ ಸಾಲಗಾರರಿಗೆ ಆಗದೇ ಬೇರೆ ಸಾಲಗಳಿಗೆ ವರ್ಗಾವಣೆ ಮಾಡಿ ಹೊಂದಾಣಿಕೆ ಮಾಡಿರುವುದು ಸಾಬೀತಾಗುತ್ತಿದೆ,’ ಎಂದು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅಧ್ಯಕ್ಷತೆಯಲ್ಲಿ 2022ರ ಫೆಬ್ರುವರಿ 9ರಂದು ನಡೆದಿದ್ದ ಸಭೆಯಲ್ಲಿ ಸಹಕಾರ ನಿಬಂಧಕರು ವಿವರಣಾತ್ಮಕವಾದ ಟಿಪ್ಪಣಿ ಸಲ್ಲಿಸಿದ್ದರು. ಅಲ್ಲದೆ ಕಳೆದ 20 ವರ್ಷಗಳಿಂದಲೂ ಈ ಬ್ಯಾಂಕ್‌ನಲ್ಲಿ ಹಣ ದುರುಪಯೋಗವಾಗುತ್ತಿದೆ ಎಂಬ ಕುರಿತು 2022ರ ಫೆ. 14ರಂದು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

ಗುರುರಾಘವೇಂದ್ರ ಬ್ಯಾಂಕ್‌ ಹಗರಣ; 20 ವರ್ಷದಿಂದಲೂ ಅವ್ಯವಹಾರ, ಕಣ್ಮುಚ್ಚಿ ಕುಳಿತಿದ್ದ ಸರ್ಕಾರ

 

ಸಂಘದ ಅವ್ಯವಹಾರಕ್ಕೆ ಕಾರಣರಾಗಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ನಿರ್ದೇಶಕರಿಗೆ 2022ರ ಜುಲೈ 20ರಂದು ಪತ್ರ ಬರೆದಿದ್ದನ್ನು ಸ್ಮರಿಸಬಹುದು. ಈ ಕುರಿತು ಜುಲೈ 22ರಂದು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ; ನಿರೀಕ್ಷಿತ ಮಟ್ಟದಲ್ಲಿ ನಡೆಯದ ಮರುಲೆಕ್ಕಪರಿಶೋಧನೆ

2015-16 ಮತ್ತು 2016-17ನೇ ಸಾಲಿನ ಮರು ಲೆಕ್ಕ ಪರಿಶೋಧನೆ ವರದಿಯನ್ನು ಸಲ್ಲಿಸಿರುವ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ನಿರ್ದೇಶಕರು ಅಕ್ರಮದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದ್ದನ್ನು ಸ್ಮರಿಸಬಹುದು.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!