Thursday | June 11, 2026 |

ಕಂಪ್ಯೂಟರ್‍‌, ಪ್ರಿಂಟರ್, ಜೆರಾಕ್ಸ್‌ ಉಪಕರಣ ಖರೀದಿ; ತಾಂತ್ರಿಕ ಸಮಿತಿ ಶಿಫಾರಸ್ಸು ಬದಿಗೊತ್ತಿದ್ದ ಸಚಿವಾಲಯ

ಬೆಂಗಳೂರು; ಎಪ್ಪತ್ತೈದು ಲಕ್ಷ ರು. ಮೌಲ್ಯದಲ್ಲಿ ಕಂಪ್ಯೂಟರ್‍‌, ಪ್ರಿಂಟರ್‍‌, ಜೆರಾಕ್ಸ್‌ ಯಂತ್ರೋಪಕರಣಗಳನ್ನು ಅಲ್ಪಾವಧಿ ಟೆಂಡರ್‍ ಆಹ್ವಾನಿಸುವ ಮೂಲಕ ಖರೀದಿಸಬೇಕು ಎಂದು ತಾಂತ್ರಿಕ ಸಮಿತಿಯು ಮಾಡಿದ್ದ ಶಿಫಾರಸ್ಸನ್ನು ಬದಿಗೊತ್ತಿದ್ದ ವಿಧಾನಸಭೆ ಸಚಿವಾಲಯವು ಕಿಯೋನಿಕ್ಸ್‌ ಮೂಲಕ ನೇರವಾಗಿ ಖರೀದಿಸಿರುವುದನ್ನು ಇಂಡಿಯನ್‌ ಆಡಿಟ್‌ ಅಂಡ್‌ ಅಕೌಂಟೆಂಟ್‌ನ ತಪಾಸಣೆ ವರದಿಯು ಪತ್ತೆ ಹಚ್ಚಿದೆ.

 

ಕರ್ನಾಟಕ ವಿಧಾನಸಭೆ ಸಚಿವಾಲಯಕ್ಕೆ ಸಂಬಂಧಿಸಿದಂತೆ 2018-19ರಿಂದ 2021-22ರವರೆಗಿನ ಅವಧಿಯಲ್ಲಿ ತಪಾಸಣೆ ನಡೆಸಿರುವ ಇಂಡಿಯನ್‌ ಆಡಿಟ್‌ ಅಂಡ್‌ ಅಕೌಂಟೆಂಟ್‌, ವಿಧಾನಸಭೆ ಸಚಿವಾಲಯದ ಹಣಕಾಸು ಆಡಳಿತ, ದುಂದುವೆಚ್ಚ, ನಿಯಮಗಳ ಉಲ್ಲಂಘನೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸಂಭವಿಸಿರುವ ನಷ್ಟದ ಕುರಿತೂ ಬೆಳಕು ಚೆಲ್ಲಿದೆ. 2023ರ ಜನವರಿಯಲ್ಲಿ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಕೆಯಾಗಿರುವ  ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಅವಧಿಯಲ್ಲಿ ಸ್ಪೀಕರ್‍‌ ಆಗಿ ಕಾರ್ಯನಿರ್ವಹಿಸಿದ್ದರು. ಕೋವಿಡ್‌ ಸಂದರ್ಭದಲ್ಲೂ ವಿಧಾನಸಭೆ ಸಚಿವಾಲಯ ಮತ್ತು ಶಾಸಕರ ಭವನದ ಕೊಠಡಿಗಳಿಗೂ ಸ್ಯಾನಿಟೈಸರ್‍‌ ಮಾಡಿಸಿದ್ದರ  ಬಗ್ಗೆಯೂ ಇಂಡಿಯನ್‌ ಆಡಿಟ್‌ ಅಕೌಟೆಂಟ್‌ನ ತಪಾಸಣೆಯು ಬಹಿರಂಗಗೊಳಿಸಿತ್ತು. ಇದರ ಬೆನ್ನಲ್ಲೇ ಕಂಪ್ಯೂಟರ್‍‌ ಸೇರಿದಂತೆ ಇನ್ನಿತರೆ ವಿದ್ಯುನ್ಮಾನ ಉಪಕರಣಗಳ ಖರೀದಿಯಲ್ಲಿಯೂ ತಾಂತ್ರಿಕ ಸಮಿತಿ ಶಿಫಾರಸ್ಸನ್ನು ಬದಿಗೊತ್ತಿರುವ ಸಂಗತಿಯು ಮುನ್ನೆಲೆಗೆ ಬಂದಿದೆ.

 

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಲವು ಅಕ್ರಮಗಳ ಕುರಿತು ಕಾಂಗ್ರೆಸ್‌ ಸರ್ಕಾರವು ತನಿಖಾ ಆಯೋಗಗಳನ್ನು ರಚಿಸಿದ್ದರೇ ವಿಧಾನಸಭೆ ಸಚಿವಾಲಯದಲ್ಲಿ ನಡೆದಿರುವ ಅಕ್ರಮಗಳ ಕುರಿತು ಯಾವ ತನಿಖೆಯನ್ನೂ ನಡೆಸಿಲ್ಲ.  ಈ ಕುರಿತು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಈಗಾಗಲೇ ಈ ಸಂಬಂಧ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಇದನ್ನು ಹಾಲಿ ಸ್ಪೀಕರ್‍‌ ಯು ಟಿ ಖಾದರ್‍‌ ಅವರು ಅನುಮೋದಿಸಿದ್ದಾರೆ  ಎಂದು ಗೊತ್ತಾಗಿದೆ.

 

ಹೆಚ್‌ಪಿ ಡೆಸ್ಕ್‌ಟಾಪ್‌ ಕಂಪ್ಯೂಟರ್ಸ್‌, ಹೆಚ್‌ಪಿ ಆಲ್‌ ಇನ್‌ ಒನ್ ಡೆಸ್ಕ್‌ ಟಾಪ್‌, ಕೆನಾನ್‌ ಪ್ರಿಂಟರ್ಸ್‌, ಸ್ಕ್ಯಾನರ್‍‌, ಕೆನಾನ್‌ ಪ್ರಿಂಟರ್ಸ್, ಹೆಚ್‌ಪಿ ಕಲರ್‍‌ ಪ್ರಿಂಟರ್ಸ್‌, ಶಾರ್ಪ್ ಜೆರಾಕ್ಸ್‌ ಯಂತ್ರಗಳನ್ನು ಅಲ್ಪಾವಧಿ ಟೆಂಡರ್‍‌ ಆಹ್ವಾನಿಸಿ ಖರೀದಿಸಬೇಕು ಎಂದು ತಾಂತ್ರಿಕ ಸಮಿತಿಯು ಶಿಫಾರಸ್ಸು ಮಾಡಿತ್ತು. 2020ರ ಮೇ 26 ರಂದು ನಡೆದಿದ್ದ ಸಭೆಯ ನಡವಳಿಯಲ್ಲಿಯೂ ದಾಖಲಾಗಿತ್ತು. ಆದರೆ ಇದನ್ನು ವಿಧಾನಸಭೆ ಸಚಿವಾಲಯದ ಮುಖ್ಯಸ್ಥರು ಇದನ್ನು ತಿರಸ್ಕರಿಸಿದ್ದರು ಎಂಬುದು ತಪಾಸಣೆ ವರದಿಯಿಂದ ಗೊತ್ತಾಗಿದೆ.

 

ಉಪಕರಣಗಳ ಖರೀದಿ ಪ್ರಕ್ರಿಯೆಯು ಮೂಲತಃ 2020ರ ಆರಂಭದಲ್ಲಿ ಶುರುವಾಗಿತ್ತು. ಆದರೆ ಇದನ್ನು 2022ರ ಮಾರ್ಚ್‌ನಲ್ಲಿ ಖರೀದಿಸಲಾಗಿತ್ತು. ಅಲ್ಪಾವಧಿ ಟೆಂಡರ್‍‌ ಆಹ್ವಾನಿಸಿ ಖರೀದಿಸಬೇಕು ಎಂದು ತಾಂತ್ರಿಕ ಸಮಿತಿಯ ಶಿಫಾರಸ್ಸನ್ನು ತಿರಸ್ಕರಿಸಲು ವಿಧಾನಸಭೆ ಸಚಿವಾಲಯವು ನೀಡಿದ್ದ ಕಾರಣಗಳು ಸಮರ್ಥನೀಯವಾಗಿರಲಿಲ್ಲ ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

ತಾಂತ್ರಿಕ ಸಮಿತಿಯು ಶಿಫಾರಸ್ಸು ಮಾಡಿದ್ದ ನಿರ್ದಿಷ್ಟತೆಯುಳ್ಳ ಉಪಕರಣಗಳನ್ನೇ ಕಿಯೋನಿಕ್ಸ್‌ ಮೂಲಕ ಖರೀದಿಸಿದ್ದ ಸಚಿವಾಲಯವು ಅಲ್ಪಾವಧಿ ಟೆಂಡರ್‍‌ ಮೂಲಕ ಖರೀದಿಸಿ ಸ್ಪರ್ಧಾತ್ಮಕ ದರಗಳನ್ನು ಕಳೆದುಕೊಂಡಿತ್ತು. ಕಿಯೋನಿಕ್ಸ್‌ ಮೂಲಕವೇ ಖರೀದಿಸುವ ಮೂಲಕ ಹೆಚ್ಚುವರಿ ವೆಚ್ಚಕ್ಕೆ ಕಾರಣವಾಗಿತ್ತು ಎಂಬ ಅಂಶವು ತಪಾಸಣೆ ವರದಿಯಿಂದ ತಿಳಿದು ಬಂದಿದೆ.

 

ಅದೇ ರೀತಿ ನಗದು ಪುಸ್ತಕ, ನಗದು ವಹಿಯಲ್ಲಿನ ಲೋಪಗಳನ್ನೂ ತಪಾಸಣೆ ವರದಿಯಲ್ಲಿ ವಿವರಿಸಲಾಗಿದೆ. 2020ರ ಅಕ್ಟೋಬರ್‍‌ 21ರಿಂದ 2021ರ ಅಕ್ಟೋಬರ್‍‌ 21ರವರೆಗಿನ 19,49,809 ರು. ಮೊತ್ತದ ವೋಚರ್‍‌ಗಳನ್ನು ಲೆಕ್ಕ ತಪಾಸಕರಿಗೆ ವಿಧಾನಸಭೆ ಸಚಿವಾಲಯವು ಒದಗಿಸಿರಲಿಲ್ಲ. ವೋಚರ್‍‌ಗಳನ್ನು ಪರಿಶೀಲನೆಗೆ ಒದಗಿಸದ ಕಾರಣ ಈ ವೆಚ್ಚವನ್ನು ತಪಾಸಣೆಗೆ ಒಳಪಡಿಸಿಲ್ಲ ಎಂಬುದೂ ವರದಿಯಿಂದ ಗೊತ್ತಾಗಿದೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!