Tuesday | May 12, 2026 |

423.51 ಕೋಟಿ ಭೂ ಕಂದಾಯ ಬಾಕಿ; ವಸೂಲಾತಿ ಶುಲ್ಕ ನಿಗದಿಗೆ ಕಂದಾಯ ಇಲಾಖೆಗೆ ವಸತಿ ಇಲಾಖೆ ಪತ್ರ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳಡಿಯಲ್ಲಿ ರಾಜ್ಯದ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ 7 ಜಿಲ್ಲೆಗಳಲ್ಲಿ 423.51 ಕೋಟಿ ರು.ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

 

ದಂಡ ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲು ಮಾಡುವ ವಿಷಯವನ್ನು ಸಕಾಲ ವ್ಯಾಪ್ತಿಗೊಳಪಡಿಸುವ ಸಂಬಂಧ ರೇರಾ ಪ್ರಾಧಿಕಾರ ನಡೆಸಿದ್ದ ಸಭೆಯಲ್ಲಿ 423.51 ಕೋಟಿ ರು ಪ್ರಮಾಣದಲ್ಲಿ ಭೂ ಕಂದಾಯ ಬಾಕಿ ಇರುವ ವಿಚಾರವು ಚರ್ಚೆಗೆ ಬಂದಿದೆ. ಈ ಸಂಬಂಧ 2023ರ ಸೆ.26ರಂದು ನಡೆದಿದ್ದ ಸಭೆಯ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರೇರಾ ಕಾಯ್ದೆ ಅಡಿಯಲ್ಲಿ ವಿಧಿಸಲಾಗುವ ದಂಡ, ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ವಸೂಲು ಮಾಡುವ ಪ್ರಕ್ರಿಯೆಗೆ ತಗುಲುವ ವೆಚ್ಚಗಳನ್ನು ಭರಿಸಲು ಮತ್ತು ವಸೂಲಾತಿ ಶುಲ್ಕಗಳನ್ನು ವಿಧಿಸಲು ರೇರಾ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ತರುವ ಬಗ್ಗೆ ಕ್ರಮ ವಹಿಸಲು ವಸತಿ ಇಲಾಖೆಗೆ ಸೂಚಿಸಲಾಗಿದೆ.

 

ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಈ ಕುರಿತು ಸದ್ಯದಲ್ಲೇ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ ಎಂದು ಗೊತ್ತಾಗಿದೆ.

 

ಈ ಬೆಳವಣಿಗೆ ನಡುವೆಯೇ ಎಷ್ಟು ಪ್ರಮಾಣದಲ್ಲಿ ವಸೂಲಾತಿ ಶುಲ್ಕವನ್ನು ನಿಗದಿಪಡಿಸಬಹುದು ಎಂದು ಮಾಹಿತಿ ನೀಡಬೇಕು ಎಂದು ಕಂದಾಯ ಇಲಾಖೆಗೆ ವಸತಿ ಇಲಾಖೆಯು ಸೂಚಿಸಿದೆ. ಈ ಸಂಬಂಧ 20234 ಅಕ್ಟೋಬರ್‍‌ 18ರಂದು ಅನಧಿಕೃತ ಟಿಪ್ಪಣಿ ಹೊರಡಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಭೂ ಕಂದಾಯ ಬಾಕಿ ಉಳಿಸಿಕೊಂಡಿರುವ ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ 415.73 ಕೋಟಿ ರು. ಬಾಕಿ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 73.46 ಲಕ್ಷ ರು., ಮೈಸೂರು ಜಿಲ್ಲೆಯಲ್ಲಿ 2.33 ಕೋಟಿ ರು., ಧಾರವಾಡದಲ್ಲಿ 27.33 ಲಕ್ಷ ರು., ಬೆಳಗಾವಿಯಲ್ಲಿ 69.29 ಲಕ್ಷ ರು., ದಕ್ಷಿಣ ಕನ್ನಡದಲ್ಲಿ 3.20 ಕೋಟಿ ರು., ಉಡುಪಿಯಲ್ಲಿ 53.26 ಲಕ್ಷ ರು. ಭೂ ಕಂದಾಯ ವಸೂಲಾತಿಗೆ ಬಾಕಿ ಇರುವುದು ನಡವಳಿಯಿಂದ ಗೊತ್ತಾಗಿದೆ.

 

ರೇರಾ ಕಾಯ್ದೆ 2016ರ ಕಲಂ 40(1) ಹಾಗೂ ರೇರಾ ನಿಯಮ 25ರಡಿಯಲ್ಲಿ ದಂಡ/ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲು ಮಾಡುವ ಸಂಬಂಧ ಸಾಧಕ ಬಾಧಕಗಳ ಕುರಿತು ಚರ್ಚೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.

 

‘ರೇರಾ ಕಾಯ್ದೆಯು ಕೇಂದ್ರ ಸರ್ಕಾರದ ಕಾಯ್ದೆಯಾಗಿದೆ. ಇದನ್ನು ಸಂಬಂಧಪಟ್ಟ ತಹಶೀಲ್ದಾರ್‍‌ಗಳೇ ರೇರಾ ಕಾಯ್ದೆಯಡಿ ವಿಧಿಸುವ ದಂಡದ ಮೊತ್ತವನ್ನು ಭೂ ಕಂದಾಯ ಎಂದು ವಸೂಲು ಮಾಡಬೇಕಾಗುತ್ತದೆ. ಆದರೆ ತಹಶೀಲ್ದಾರ್‍‌ರು ಅರೆ ನ್ಯಾಯಿಕ ಪ್ರಾಧಿಕಾರವಾಗಿದ್ದು ರೇರಾ ಕಾಯ್ದೆಯಡಿ ವಿಧಿಸುವ ದಂಡದ ಮೊತ್ತವನ್ನು ಭೂ ಕಂದಾಯ ಎಂದು ವಸೂಲು ಮಾಡುವಲ್ಲಿ ಹಲವಾರು ಕಾನೂನಾತ್ಮಕ ತೊಡಕುಗಳೀವೆ,’ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚರ್ಚಿಸಿರುವುದು ಗೊತ್ತಾಗಿದೆ.

 

ದಂಡದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ವಸೂಲು ಮಾಡುವಲ್ಲಿ ಕಂಡು ಬಂದಿರುವ ಕಾನೂನಾತ್ಮಕ ತೊಡಕುಗಳು ಮತ್ತು ಇದನ್ನು ವಸೂಲು ಮಾಡಲು ಹೆಚ್ಚು ಸಮಯಾವಕಾಶ ಬೇಕಿರುವುದರಿಂದ ಬೇರೆ ಸೇವೆಗಳ ರೀತಿಯಲ್ಲಿ ಸಕಾಲ ವ್ಯಾಪ್ತಿಗೆ ಸೇರ್ಪಡೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಎಲ್ಲಾ ಪ್ರಾದೇಶಿಕ ಆಯುಕ್ತರುಗಳೂ ಒಂದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.

 

ಸಕಾಲ ವ್ಯಾಪ್ತಿಗೇಕೆ ಬೇಡ?

 

ಈ ಸೇವೆಯು ವಿವಿಧ ಹಂತಗಳಲ್ಲಿ ವಿವಿಧ ಪ್ರಾಧಿಕಾರಗಳ ಅನುಮೋದನೆಗೆ ಒಳಪಟ್ಟಿರುತ್ತದೆ.

 

ಕರ್ನಾಟಕ ಸಕಾಲ ಸೇವೆಗಳ ಕಾಯ್ದೆ ಅಡಿ ಸಾಮಾನ್ಯವಾಗಿ ಒಬ್ಬರೇ ಹೆಸರಿಸಲಾದ ಅಧಿಕಾರಿ ಇದ್ದು ಈ ಸೇವೆಯು ವಿವಿಧ ಅಧಿಕಾರಿಗಳ ಅನುಮೋದನೆ, ಆದೇಶಕ್ಕೆ ಒಳಪಟ್ಟಿದೆ. ಹೀಗಾಗಿ ಈ ಸೇವೆಯನ್ನು ಸಕಾಲ ವ್ಯಾಪ್ತಿಗೆ ಒಳಪಡಿಸುವುದು ಸಮಂಜಸವಲ್ಲ.

 

ಸಕಾಲ ವ್ಯಾಪ್ತಿಯ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಇತ್ಯರ್ಥಪಡಿಸಬೇಕು. ಈ ಸೇವೆಯ ಇತ್ಯರ್ಥಕ್ಕೆ ಹೆಚ್ಚಿನ ಕೆಲಸದ ದಿನಗಳ ಕಾಲಾವಧಿ ಅವಶ್ಯಕವಿದೆ ಎಂಬ ಕಾರಣಗಳನ್ನು ಪ್ರಾದೇಶಿಕ ಆಯುಕ್ತರುಗಳು ಮುಂದೊಡ್ಡಿರುವುದು ನಡವಳಿಯಿಂದ ಗೊತ್ತಾಗಿದೆ.

 

ಭೂ ಕಂದಾಯ ಬಾಕಿ ವಸೂಲು ಮಾಡುವುದನ್ನು ಸಕಾಲ ಸೇವೆಗೆ ಒಳಪಡಿಸುವುದನ್ನು ಒಪ್ಪದ ಸಮಿತಿಯು, ಗ್ರಾಹಕರಿಗೆ, ಮನೆ ಖರೀದಿದಾರರಿಗೆ ಪರಿಹಾರ/ದಂಡದ ಮೊತ್ತವನ್ನು ನೀಡುವಲ್ಲಿ ವಿಫಲರಾದಂತಹ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಮತ್ತುಕಂದಾಯ ಇಲಾಖೆಗೆ ಒದಗಿಸಲು ವಸತಿ ಇಲಾಖೆಗೆ ಸೂಚಿಸಿದೆ.

 

ಬಾಕಿ ಪಾವತಿಸಬೇಕಾಗಿರುವ ಅಭಿವೃದ್ಧಿದಾರರ ಸ್ವತ್ತುಗಳ ದಾಖಲೆಗಳಲ್ಲಿ ಬಾಕಿ ಪಾವತಿಯ ವಿವರಗಳನ್ನು ನಿಯಮಾನುಸಾರ ನಮೂದಿಸಬೇಕು. ಕಾನೂನಿನ ಅನ್ವಯ ಸ್ವತ್ತುಗಳನ್ನು ಜಫ್ತಿ ಮಾಡಲು ಪ್ರಕ್ರಿಯೆಗಳನ್ನು ನಡೆಸಬೇಕು. ಗ್ರಾಹಕರಿಗೆ ಸೇರಬೇಕಾದ ಹಣವನ್ನು ತ್ವರಿತಗತಿಯಲ್ಲಿ ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ನಿರ್ಣಯ ಕೈಗೊಂಡಿದೆ.

 

ಅಲ್ಲದೇ ರೇರಾ ಕಾಯ್ದೆ ಅಡಿಯಲ್ಲಿ ವಿಧಿಸಲಾಗುವ ದಂಡ, ಪರಿಹಾರದ ಮೊತ್ತವನ್ನು ಭೂ ಕಂದಾಯ ಬಾಕಿ ಎಂದು ವಸೂಲು ಮಾಡುವ ಪ್ರಕ್ರಿಯೆಗೆ ತಗುಲುವ ವೆಚ್ಚಗಳನ್ನು ಭರಿಸಲು ಮತ್ತು ವಸೂಲಾತಿ ಶುಲ್ಕಗಳನ್ನು ವಿಧಿಸಲು ರೇರಾ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ತರುವ ಬಗ್ಗೆ ವಸತಿ ಇಲಾಖೆಯು ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಿರುವುದು ತಿಳಿದು ಬಂದಿದೆ.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!