Thursday | April 16, 2026 |

ಆಸ್ತಿ ಹೊಣೆಗಾರಿಕೆ ಪಟ್ಟಿ ಪರಾಮರ್ಶಿಸಲೂ ಲಂಚ; ಲಕ್ಷಾಂತರ ವಸೂಲಿ, ಲಂಚಗುಳಿತನ ಅನಾವರಣ

ಬೆಂಗಳೂರು; ಜಲಸಂಪನ್ಮೂಲ ಇಲಾಖೆಯಲ್ಲಿ ಮುಖ್ಯ, ಪ್ರಧಾನ ಇಂಜಿನಿಯರ್‌ಗಳು ಸೇರಿದಂತೆ ವಿವಿಧ ವೃಂದದ ಇಂಜಿನಿಯರ್‌ಗಳ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳನ್ನು ಪರಾಮರ್ಶಿಸಲೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಒಬ್ಬೊಬ್ಬ ಇಂಜಿನಿಯರ್‌ಗಳಿಂದ ಕನಿಷ್ಟ 50ರಿಂದ 60 ಸಾವಿರ ರು.ನಂತೆ ಲಕ್ಷಾಂತರ ರುಪಾಯಿ ವಸೂಲು ಮಾಡಲಾಗುತ್ತಿದೆ ಎಂಬ ಪ್ರಕರಣವನ್ನು ‘ದಿ ಫೈಲ್‌’ ಇದೀಗ ಬಹಿರಂಗಗೊಳಿಸುತ್ತಿದೆ.

 

ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ಇದೀಗ ಇಲಾಖೆಗಳ ಅಧಿಕಾರಿ, ನೌಕರರ ಆಸ್ತಿ, ಹೊಣೆಗಾರಿಕೆ ಪಟ್ಟಿಗಳ ಪರಾಮರ್ಶಿಸುವುದರಲ್ಲಿಯೂ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮುನ್ನೆಲೆಗೆ ಬಂದಿದೆ.

 

ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿವೆ. ಈ ಸಂಬಂಧ ಇಂಜಿನಿಯರೊಬ್ಬರ ಪರವಾಗಿ ವಕೀಲರೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ 2023ರ ಅಕ್ಟೋಬರ್‌ 16ರಂದು ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇಂಜಿನಿಯರೊಬ್ಬರ ಪರವಾಗಿ ದೂರು ಸಲ್ಲಿಸಿರುವ ವಕೀಲ ಮನೋಜ್‌ ಕುಮಾರ್‌ ಪಿ ಎಂಬುವರು ಜಲಸಂಪನ್ಮೂಲ ಇಲಾಖೆಯಲ್ಲಿನ ಲಂಚಗುಳಿತವನ್ನು ಅನಾವರಣಗೊಳಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ನಡೆಯುತ್ತಿರುವ ಲಂಚಗುಳಿತನದ ಬಗ್ಗೆ  ಉಪ ಮುಖ್ಯಮಂತ್ರಿ ಹಾಗೂ ಸಚಿವ ಡಿ ಕೆ ಶಿವಕುಮಾರ್‍‌ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗೊತ್ತಾಗಿದೆ.

 

ಜಲಸಂಪನ್ಮೂಲ ಇಲಾಖೆಯಲ್ಲಿನ ಸೇವೆಗಳು (ಎ) ಶಾಖೆಯ ಹೆಚ್ಚುವರಿ ಕಾರ್ಯದರ್ಶಿ ಶ್ರೀ ಹರ್ಷ, ಅಧೀನ ಕಾರ್ಯದರ್ಶಿ ಪುಟ್ಟರಂಗ, ಶಾಖಾಧಿಕಾರಿ ಜ್ಞಾನೇಶ್‌, ವಿಷಯ ನಿರ್ವಾಹಕರು, ಇಲಾಖೆಗೆ ಸೇರಿದ ಪ್ರಧಾನ ಇಂಜಿನಿಯರ್‌, ಮುಖ್ಯ ಇಂಜಿನಿಯರ್‌, ಅಧೀಕ್ಷಕ ಇಂಜಿನಿಯರ್‌ಗಳಿಂದಲೇ 50ರಿಂದ 60 ಸಾವಿರ ರು ಲಂಚಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಇಲಾಖೆಗಳ ಹೆಚ್ಚುವರಿ ಕಾರ್ಯದರ್ಶಿ, ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳ ಪರವಾಗಿ 50ರಿಂದ 60 ಸಾವಿರ ರು.ಗಳಿಗೆ ಬೇಡಿಕೆ ಇರಿಸಿದ್ದಾರೆ ಎಂದು ದೂರಿನಲ್ಲಿ ವಕೀಲ ಮನೋಜ್‌ ಕುಮಾರ್‌ ಪಿ ಅವರು ಆಪಾದಿಸಿದ್ದಾರೆ.

 

ಈ ಹಿಂದೆ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಹಾಗೂ ಇತರೆ ಇಲಾಖೆಗಳ ಪ್ರಧಾನ ಇಂಜಿನಿಯರ್‌ ಹಾಗೂ ಮುಖ್ಯ ಇಂಜಿನಿಯರ್‌ಗಳ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿತ್ತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಆಯಾ ಪ್ರಧಾನ ಇಂಜಿನಿಯರ್‌, ಮುಖ್ಯ ಇಂಜಿನಿಯರ್‌ಗಳು ಸಲ್ಲಿಸಿದ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳನ್ನು ಲಿಸ್ಟ್‌ ಮಾಡಿ ಕಡತದಲ್ಲಿ ಇರಿಸುತ್ತಿದ್ದರು ಎಂಬ ಅಂಶವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

‘ಈ ಪ್ರಕ್ರಿಯೆ ವೇಳೆಯಲ್ಲಿ ಡಿಪಿಎಆರ್‌ ಅಧಿಕಾರಿಗಳಿಂದ ಯಾವುದೇ ತೊಂದರೆ ನೀಡಿರುವುದು ಕಂಡುಬಂದಿರುವುದಿಲ್ಲ. ಆದರೆ ಜಲಸಂಪನ್ಮೂಲ ಇಲಾಖೆಯಲ್ಲಿ ವಿಷಯ ನಿರ್ವಾಹಕರಿಂದ ಹಿಡಿದು ಹೆಚ್ಚುವರಿ ಕಾರ್ಯದರ್ಶಿಯವರ ಮಟ್ಟದಲ್ಲಿ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳ ಪರಾಮರ್ಶಿಸುವ ನೆಪದಲ್ಲಿ ಲಕ್ಷಾಂತರ ರುಪಾಯಿಗಳನ್ನು ವಸೂಲು ಮಾಡುತ್ತಿದ್ದಾರೆ,’ ಎಂದು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

‘ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳ ಪರಾಮರ್ಶಿಸುವ ನೆಪದಲ್ಲಿ ವಿವಿಧ ವೃಂದದ ಇಂಜನಿಯರ್‌ಗಳಿಗೆ ಹಿಂಸೆ ನೀಡಿ ಲಕ್ಷಾಂತರ ರುಪಾಯಿ ವಸೂಲು ಮಾಡುತ್ತಿರುವುದು ನನ್ನ ಕಕ್ಷಿದಾರರು ನೇರವಾಗಿ ದೂರನ್ನು ಸಲ್ಲಿಸಲಾಗದ ಕಾರಣ ನಾನು ಈ ದೂರನ್ನು ಸಲ್ಲಿಸುತ್ತಿದ್ದೇನೆ. ಈ ದೂರನ್ನು ರಹಸ್ಯವಾಗಿ ಪರಿಶೀಲಿಸಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ, ಶಾಖಾಧಿಕಾರಿ ಹಾಗೂ ವಿಷಯ ನಿರ್ವಾಹಕರ ವಿರುದ್ಧ ಸರ್ಕಾರದ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಬೇಕು,’ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!