Wednesday | June 10, 2026 |

ಆಸ್ತಿ ಹೊಣೆಗಾರಿಕೆ ಪಟ್ಟಿ ಪರಾಮರ್ಶಿಸಲೂ ಲಂಚ; ಲಕ್ಷಾಂತರ ವಸೂಲಿ, ಲಂಚಗುಳಿತನ ಅನಾವರಣ

ಬೆಂಗಳೂರು; ಜಲಸಂಪನ್ಮೂಲ ಇಲಾಖೆಯಲ್ಲಿ ಮುಖ್ಯ, ಪ್ರಧಾನ ಇಂಜಿನಿಯರ್‌ಗಳು ಸೇರಿದಂತೆ ವಿವಿಧ ವೃಂದದ ಇಂಜಿನಿಯರ್‌ಗಳ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳನ್ನು ಪರಾಮರ್ಶಿಸಲೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಒಬ್ಬೊಬ್ಬ ಇಂಜಿನಿಯರ್‌ಗಳಿಂದ ಕನಿಷ್ಟ 50ರಿಂದ 60 ಸಾವಿರ ರು.ನಂತೆ ಲಕ್ಷಾಂತರ ರುಪಾಯಿ ವಸೂಲು ಮಾಡಲಾಗುತ್ತಿದೆ ಎಂಬ ಪ್ರಕರಣವನ್ನು ‘ದಿ ಫೈಲ್‌’ ಇದೀಗ ಬಹಿರಂಗಗೊಳಿಸುತ್ತಿದೆ.

 

ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ಇದೀಗ ಇಲಾಖೆಗಳ ಅಧಿಕಾರಿ, ನೌಕರರ ಆಸ್ತಿ, ಹೊಣೆಗಾರಿಕೆ ಪಟ್ಟಿಗಳ ಪರಾಮರ್ಶಿಸುವುದರಲ್ಲಿಯೂ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮುನ್ನೆಲೆಗೆ ಬಂದಿದೆ.

 

ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿವೆ. ಈ ಸಂಬಂಧ ಇಂಜಿನಿಯರೊಬ್ಬರ ಪರವಾಗಿ ವಕೀಲರೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ 2023ರ ಅಕ್ಟೋಬರ್‌ 16ರಂದು ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇಂಜಿನಿಯರೊಬ್ಬರ ಪರವಾಗಿ ದೂರು ಸಲ್ಲಿಸಿರುವ ವಕೀಲ ಮನೋಜ್‌ ಕುಮಾರ್‌ ಪಿ ಎಂಬುವರು ಜಲಸಂಪನ್ಮೂಲ ಇಲಾಖೆಯಲ್ಲಿನ ಲಂಚಗುಳಿತವನ್ನು ಅನಾವರಣಗೊಳಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ನಡೆಯುತ್ತಿರುವ ಲಂಚಗುಳಿತನದ ಬಗ್ಗೆ  ಉಪ ಮುಖ್ಯಮಂತ್ರಿ ಹಾಗೂ ಸಚಿವ ಡಿ ಕೆ ಶಿವಕುಮಾರ್‍‌ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗೊತ್ತಾಗಿದೆ.

 

ಜಲಸಂಪನ್ಮೂಲ ಇಲಾಖೆಯಲ್ಲಿನ ಸೇವೆಗಳು (ಎ) ಶಾಖೆಯ ಹೆಚ್ಚುವರಿ ಕಾರ್ಯದರ್ಶಿ ಶ್ರೀ ಹರ್ಷ, ಅಧೀನ ಕಾರ್ಯದರ್ಶಿ ಪುಟ್ಟರಂಗ, ಶಾಖಾಧಿಕಾರಿ ಜ್ಞಾನೇಶ್‌, ವಿಷಯ ನಿರ್ವಾಹಕರು, ಇಲಾಖೆಗೆ ಸೇರಿದ ಪ್ರಧಾನ ಇಂಜಿನಿಯರ್‌, ಮುಖ್ಯ ಇಂಜಿನಿಯರ್‌, ಅಧೀಕ್ಷಕ ಇಂಜಿನಿಯರ್‌ಗಳಿಂದಲೇ 50ರಿಂದ 60 ಸಾವಿರ ರು ಲಂಚಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಇಲಾಖೆಗಳ ಹೆಚ್ಚುವರಿ ಕಾರ್ಯದರ್ಶಿ, ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳ ಪರವಾಗಿ 50ರಿಂದ 60 ಸಾವಿರ ರು.ಗಳಿಗೆ ಬೇಡಿಕೆ ಇರಿಸಿದ್ದಾರೆ ಎಂದು ದೂರಿನಲ್ಲಿ ವಕೀಲ ಮನೋಜ್‌ ಕುಮಾರ್‌ ಪಿ ಅವರು ಆಪಾದಿಸಿದ್ದಾರೆ.

 

ಈ ಹಿಂದೆ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಹಾಗೂ ಇತರೆ ಇಲಾಖೆಗಳ ಪ್ರಧಾನ ಇಂಜಿನಿಯರ್‌ ಹಾಗೂ ಮುಖ್ಯ ಇಂಜಿನಿಯರ್‌ಗಳ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿತ್ತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಆಯಾ ಪ್ರಧಾನ ಇಂಜಿನಿಯರ್‌, ಮುಖ್ಯ ಇಂಜಿನಿಯರ್‌ಗಳು ಸಲ್ಲಿಸಿದ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳನ್ನು ಲಿಸ್ಟ್‌ ಮಾಡಿ ಕಡತದಲ್ಲಿ ಇರಿಸುತ್ತಿದ್ದರು ಎಂಬ ಅಂಶವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

‘ಈ ಪ್ರಕ್ರಿಯೆ ವೇಳೆಯಲ್ಲಿ ಡಿಪಿಎಆರ್‌ ಅಧಿಕಾರಿಗಳಿಂದ ಯಾವುದೇ ತೊಂದರೆ ನೀಡಿರುವುದು ಕಂಡುಬಂದಿರುವುದಿಲ್ಲ. ಆದರೆ ಜಲಸಂಪನ್ಮೂಲ ಇಲಾಖೆಯಲ್ಲಿ ವಿಷಯ ನಿರ್ವಾಹಕರಿಂದ ಹಿಡಿದು ಹೆಚ್ಚುವರಿ ಕಾರ್ಯದರ್ಶಿಯವರ ಮಟ್ಟದಲ್ಲಿ ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳ ಪರಾಮರ್ಶಿಸುವ ನೆಪದಲ್ಲಿ ಲಕ್ಷಾಂತರ ರುಪಾಯಿಗಳನ್ನು ವಸೂಲು ಮಾಡುತ್ತಿದ್ದಾರೆ,’ ಎಂದು ದೂರಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

‘ಆಸ್ತಿ ಮತ್ತು ಹೊಣೆಗಾರಿಕೆ ಪಟ್ಟಿಗಳ ಪರಾಮರ್ಶಿಸುವ ನೆಪದಲ್ಲಿ ವಿವಿಧ ವೃಂದದ ಇಂಜನಿಯರ್‌ಗಳಿಗೆ ಹಿಂಸೆ ನೀಡಿ ಲಕ್ಷಾಂತರ ರುಪಾಯಿ ವಸೂಲು ಮಾಡುತ್ತಿರುವುದು ನನ್ನ ಕಕ್ಷಿದಾರರು ನೇರವಾಗಿ ದೂರನ್ನು ಸಲ್ಲಿಸಲಾಗದ ಕಾರಣ ನಾನು ಈ ದೂರನ್ನು ಸಲ್ಲಿಸುತ್ತಿದ್ದೇನೆ. ಈ ದೂರನ್ನು ರಹಸ್ಯವಾಗಿ ಪರಿಶೀಲಿಸಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ, ಶಾಖಾಧಿಕಾರಿ ಹಾಗೂ ವಿಷಯ ನಿರ್ವಾಹಕರ ವಿರುದ್ಧ ಸರ್ಕಾರದ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಬೇಕು,’ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

Hot this week

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!