Monday | May 25, 2026 |

ಪಿಇಎಸ್‌ ವಿರುದ್ಧ ಕ್ರಮ; ನಿರ್ದಿಷ್ಟವಾಗಿ ಕೋರಿದ್ದರೂ ಮಾಹಿತಿ ಒದಗಿಸದೇ ಮುಚ್ಚಿಟ್ಟ ಸರ್ಕಾರ

ಬೆಂಗಳೂರು;  ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು  ಉಲ್ಲಂಘಿಸಿ  ಪ್ರತ್ಯೇಕ ಪ್ರವೇಶ ಪರೀಕ್ಷೆ ಮತ್ತು  ಕೌನ್ಸಲಿಂಗ್‌ ನಡೆಸಿರುವ ಪಿಇಎಸ್‌ ಸೇರಿದಂತೆ ಖಾಸಗಿ ವಿಶ್ವವಿದ್ಯಾಲಯಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರವೇಶ ಮೇಲ್ವಿಚಾರಣೆ ಸಮಿತಿ ಬರೆದಿದ್ದ ಪತ್ರವನ್ನಾಧರಿಸಿ ಕೈಗೊಂಡಿರುವ ಕ್ರಮಗಳ ಕುರಿತಾದ ಮಾಹಿತಿಯನ್ನು ಈಗಿನ ಕಾಂಗ್ರೆಸ್‌ ಸರ್ಕಾರವು ಮುಚ್ಚಿಡಲು ಹವಣಿಸುತ್ತಿದೆ.

 

ಹಿಂದಿನ ಇಬ್ಬರು ಮುಖ್ಯಮಂತ್ರಿಗಳಿಗೆ ಶೈಕ್ಷಣಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಡಾ ಎಂ ಆರ್‍‌ ದೊರೆಸ್ವಾಮಿ ಅವರು ಕುಲಾಧಿಪತಿ ಆಗಿರುವ  ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ದೂರು  ದಾಖಲಾಗಿತ್ತು. ಈ  ದೂರನ್ನಾಧರಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ ಮನೋಹರ್‍‌ ಅಧ್ಯಕ್ಷತೆಯಲ್ಲಿದ್ದ ಪ್ರವೇಶ ಮೇಲ್ವಿಚಾರಣೆ ಸಮಿತಿಯು  ಮೂರು ವರ್ಷದ ಹಿಂದೆಯೇ ವರದಿ ನೀಡಿತ್ತು.

 

ಈ ವರದಿ ಆಧರಿಸಿ ಉನ್ನತ ಶಿಕ್ಷಣ ಇಲಾಖೆಯು ಯಾವ ಕ್ರಮ ಕೈಗೊಂಡಿದೆ ಎಂದು ‘ದಿ ಫೈಲ್‌’ 2023ರ ಸೆ.14ರಂದು ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು.  ಅರ್ಜಿಯಲ್ಲಿ   ಪ್ರವೇಶ ಮೇಲ್ವಿಚಾರಣೆ ಸಮಿತಿಯು ಬರೆದಿದ್ದ ಪತ್ರ, ಸಂಖ್ಯೆ ಮತ್ತು ದಿನಾಂಕವನ್ನು ನಿರ್ದಿಷ್ಟವಾಗಿ ನಮೂದಿಸಲಾಗಿತ್ತು.

 

ಆದರೆ ಉನ್ನತ ಶಿಕ್ಷಣ ಇಲಾಖೆಯು 2023ರ ಸೆ.29 ರಂದು ನೀಡಿರುವ ಉತ್ತರವು, ಮೂಲ ಅರ್ಜಿಯಲ್ಲಿ ನಿರ್ದಿಷ್ಟವಾಗಿ ಮಾಹಿತಿ ಕೋರಲಾಗಿದ್ದರೂ ‘ನಿರ್ದಿಷ್ಟವಾಗಿ ಮಾಹಿತಿ/ದಾಖಲೆಯನ್ನು ಕೋರಿರುವುದಿಲ್ಲ,’ ಎಂದು ಹಿಂಬರಹ ನೀಡಿದೆ.

 

 

ಉನ್ನತ ಶಿಕ್ಷಣ ಇಲಾಖೆಯು ಒದಗಿಸಿರುವ ದಾಖಲೆಗಳ ಪ್ರಕಾರ 2023ರ ಜೂನ್‌ 16ವರೆಗೆ ಕಡತ ಚಲನೆಯಲ್ಲಿದೆ. ಆದರೆ ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ನೋಟೀಸ್‌ ಕೂಡ ನೀಡದೇ ಇರುವುದು ಸೇರಿದಂತೆ ಯಾವುದೇ ಕ್ರಮ ವಹಿಸಿರುವ ಬಗ್ಗೆ ದಾಖಲೆಗಳು ಕಡತದಲ್ಲಿ ಕಂಡು ಬಂದಿಲ್ಲ.

 

ಪಿಇಎಸ್‌ ವಿಶ್ವವಿದ್ಯಾಲಯವು ಬಿ ಟೆಕ್‌ ಕೋರ್ಸ್‌ಗಳಿಗೆ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿ 2020ರ ಸೆಪ್ಟಂಬರ್‍‌ 18ರಿಂದ 20ವರೆಗೆ ಕೌನ್ಸಲಿಂಗ್‌ ನಡೆಸಿತ್ತು. ಇದು ಸರ್ವೋಚ್ಛ ನ್ಯಾಯಾಲಯ ನೀಡಿದ್ದ ತೀರ್ಪು ಮತ್ತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಗಳ ಉಲ್ಲಂಘನೆಯಾಗಿತ್ತು. ಈ ಕುರಿತು ಪ್ರವೇಶ ಮೇಲ್ವಿಚಾರಣೆ ಸಮಿತಿಯು ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಿಸಿತ್ತು ಎಂಬ ಅಂಶವನ್ನು ಕಡತದ ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಲಾಗಿತ್ತು. ಈ ಕುರಿತು ‘ದಿ ಫೈಲ್‌’ 2023ರ ಸೆ.15ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

ಪ್ರತ್ಯೇಕ ಸಿಇಟಿ; ಪಿಇಎಸ್‌ ಸೇರಿ ಖಾಸಗಿ ವಿವಿಗಳಿಂದ ಆದೇಶ ಉಲ್ಲಂಘನೆ, ಕಸದಬುಟ್ಟಿಗೆ ಸೇರಿದ ವರದಿ

 

ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶ ಮತ್ತು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಪ್ರವೇಶ, ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ 2006ರ ಕಲಂ 04 ಅನ್ವಯ ಒಂದೇ ರೀತಿಯ ವೃತ್ತಿಪರ ಶಿಕ್ಷಣವನ್ನು ನೀಡುತ್ತಿರುವ ಎಲ್ಲಾ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಎಲ್ಲಾ ಖಾಸಗಿ ಅನುದಾನ ರಹಿತ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಹಾಗೂ ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್‌ ವಿಶ್ವವಿದ್ಯಾಲಯ) ಒಟ್ಟಾಗಿ ಸೇರಿಕೊಂಡು ಪಾರದರ್ಶಕತೆ ಮತ್ತು ಅರ್ಹತೆ ಪೂರೈಸಲು ವೃತ್ತಿ ಪರ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳಿಗೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಬೇಕು.

 

ಕೇಂದ್ರೀಕೃತ ಸಮಾಲೋಚನೆ ಅಥವಾ ಏಕ ಗವಾಕ್ಷಿ ವ್ಯವಸ್ಥೆ ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಲ್ಲಿ ಕಾಮೆಡ್‌ ಕೆ ಕೋಟಾ, ಕೆಆರ್‍ಎಲ್‌ಎಂಪಿಸಿಎ ಕೋಟಾ, ಮ್ಯಾನೇಜ್‌ಮೆಂಟ್‌ ಕೋಟಾ, ಖಾಸಗಿ ಡೀಮ್ಡ್‌ ವಿವಿ ಸೀಟುಗಳು, ಖಾಸಗಿ ವಿಶ್ವವಿದ್ಯಾಲಯದ ಸೀಟುಗಳು ಒಳಗೊಂಡಿದ್ದವು.

 

ಆದರೆ ಪಿಇಎಸ್‌ ವಿಶ್ವವಿದ್ಯಾಲಯವು ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿತ್ತು. ಅಲ್ಲದೇ ಕೌನ್ಸಲಿಂಗ್‌ ಪ್ರಕ್ರಿಯೆಯನ್ನೂ ನಡೆಸಿತ್ತು ಎಂಬುದು ವರದಿಯಿಂದ ತಿಳಿದು ಬಂದಿದೆ.

 

ಪ್ರವೇಶ ಮೇಲ್ವಿಚಾರಣೆ ಸಮಿತಿ ವರದಿಯಲ್ಲೇನಿದೆ?

 

ಪಿಇಎಸ್‌ ವಿಶ್ವವಿದ್ಯಾಲಯವು ಬಿ ಟೆಕ್‌ ಕೋರ್ಸ್‌ಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪರೀಕ್ಷೆ ನಡೆಸಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ ತೀರ್ಪುಗಳನ್ನು ಉಲ್ಲಂಘಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸದೇ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದಂತಾಗಿದೆ. 2020ರ ಸೆಪ್ಟಂಬರ್‍‌ 18ರಿಂದ 20ರವರೆಗೆ ಪ್ರತ್ಯೇಕವಾಗಿ ಪ್ರವೇಶ ಪರೀಕ್ಷೆ ನಡೆಸಿರುವುದನ್ನು ಒಪ್ಪಿಕೊಂಡಿದೆ. ಈ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಮಿತಿಯು ತನ್ನ ವರದಿಯಲ್ಲಿ ನಿರ್ದೇಶನ ನೀಡಿತ್ತು.

 

ಕರ್ನಾಟಕ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್‌ ಸಂಘ, ಕರ್ನಾಟಕ ಖಾಸಗಿ ಅನುದಾನ ರಹಿತ, ಕರ್ನಾಟಕ ಭಾಷಾ ಮತ್ತು ಮತೀಯ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ, ಕರ್ನಾಟಕ ಅಲ್ಪಸಂಖ್ಯಾತ ವೃತ್ತಿ ಪರ ಕಾಲೇಜುಗಳ ಸಂಘ ಒಳಗೊಂಡಂತೆ ಇತರೆ ಖಾಸಗಿ ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳು ವೃತ್ತಿ ಪರ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಿ ನಿಯಮಗಳನ್ನು ಉಲ್ಲಂಘಿಸಿವೆ ಎಂದು ಉನ್ನತ ಶಿಕ್ಷಣ ಇಲಾಖೆಯೇ (ತಾಂತ್ರಿಕ ಶಿಕ್ಷಣ) ಒಪ್ಪಿಕೊಂಡಿತ್ತು.

 

ಆದರೂ ಈಗಿನ ಕಾಂಗ್ರೆಸ್‌ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಅಲ್ಲದೇ ಹಾಲಿ ಸಚಿವ ಎಂ ಸಿ ಸುಧಾಕರ್‍‌ ಅವರೂ ಸಹ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಗೊತ್ತಾಗಿದೆ.

 

ಪಿಇಎಸ್‌ ವಿಶ್ವವಿದ್ಯಾಲಯ ಮಾತ್ರವಲ್ಲದೇ ಎಂ ಎಸ್‌ ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ, ರೇವಾ ವಿಶ್ವವಿದ್ಯಾಲಯಗಳು ಪ್ರತ್ಯೇಕ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ ಅಧಿಸೂಚನೆ ಹೊರಡಿಸಿದ್ದವು ಎಂಬುದು ಉನ್ನತ ಶಿಕ್ಷಣ ಇಲಾಖೆಯ ದಾಖಲೆಯಿಂದ ತಿಳಿದು ಬಂದಿದೆ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!