Friday | April 3, 2026 |

ಮಾನವ ಸಂಪನ್ಮೂಲ ಸೇವೆಗಳ ಹೊರಗುತ್ತಿಗೆ; ಮೂರು ಕಂಪನಿಗಳಿಗೆ 11.56 ಕೋಟಿ ಪಾವತಿ ಬಹಿರಂಗ

ಬೆಂಗಳೂರು; ವಿಶೇಷ ಜ್ಞಾನ ಮತ್ತು ಕೌಶಲ್ಯಗಳ ಅಗತ್ಯವಿರುವ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತಿದೆ ಎಂಬ ಹೆಗ್ಗಳಿಕೆ ಹೊಂದಿರುವ ನೀತಿ ಆಯೋಗವು ಇದೀಗ ಮಾನವ ಸಂಪನ್ಮೂಲ ಸೇವೆಗಳಿಗೆ ಮೂರು ಖಾಸಗಿ ಕಂಪನಿಗಳಿಗೆ  ಹೊರಗುತ್ತಿಗೆ ನೀಡಿರುವುದು ಆರ್‍‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.

 

ಸರಕಾರದ ಆಡಳಿತ ಯಂತ್ರದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸೇವೆಗಳನ್ನು ಖಾಸಗಿಯವರಿಗೆ ಹೊರಗುತ್ತಿಗೆ ನೀಡುವಂತೆ ನೀತಿ ಆಯೋಗವು ನೀಡಿದ್ದ ಸಲಹೆ ಬೆನ್ನಲ್ಲೇ ಇದೀಗ ತನ್ನದೇ ಸಂಸ್ಥೆಯನ್ನು ಮಾನವ ಸಂಪನ್ಮೂಲ ಸೇವೆಗಳನ್ನು ಪಡೆಯಲು  ಹೊರಗುತ್ತಿಗೆ ಕಂಪನಿಗಳ ಸೇವೆಯನ್ನು ಪಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

2015ರಿಂದ 2023ರ ಸೆಪ್ಟಂಬರ್‍‌ವರೆಗೆ ಹೊರಗುತ್ತಿಗೆ ಪಡೆದಿರುವ ನೀತಿ ಆಯೋಗವು ಈ ಸಂಬಂಧ 11.56 ಕೋಟಿ ರು.ಗಳನ್ನು ಪಾವತಿಸಿರುವುದು ಆರ್‍‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

 

ಅಮರಾವತಿಯ ಅಜಯ್‌ ಬಸುದೇವ್‌ ಬೋಸ್‌ ಅವರು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಕೋರಿದ್ದರು. ಇದಕ್ಕೆ 2023ರ ನವೆಂಬರ್‍‌ 23ರಂದು ಉತ್ತರ ನೀಡಿರುವ ಕೇಂದ್ರ ಸರ್ಕಾರವು ನೀತಿ ಆಯೋಗವನ್ನು ಮುನ್ನೆಡೆಸಲು ಹೊರಗುತ್ತಿಗೆ ನೀಡಿರುವ ವಿಚಾರವನ್ನು ಬಹಿರಂಗಪಡಿಸಿದೆ.

 

ನೊಯ್ಡಾದ ಸುಲಭ್‌ ಇಂಟರ್‍‌ ನ್ಯಾಷನಲ್‌, ಒಯೊನಿಕ್ಸ್‌ ಮ್ಯಾನೇಜ್‌ಮೆಂಟ್‌ ಸರ್ವಿಸಸ್‌, ಫರಿದಾಬಾದ್‌ನ ಉತ್ಕರ್ಷ್‌ ಯುಟಿಲಿಟಿಸ್‌ ಗೆ ಒಟ್ಟು 11.56 ಕೋಟಿ ರು. ಮೊತ್ತದಲ್ಲಿ ಹೊರಗುತ್ಗಿಗೆ ಕಂಪನಿಗಳಿಗೆ 2015ರ ಜನವರಿಯಿಂದ 2023ರ ಸೆಪ್ಟಂಬರ್‍‌ವರೆಗೆ ಪಾವತಿಸಿರುವುದು ಗೊತ್ತಾಗಿದೆ.

 

ಸರಕಾರದ ಆಡಳಿತ ಯಂತ್ರದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸೇವೆಗಳನ್ನು ಖಾಸಗಿಯವರಿಗೆ ಹೊರಗುತ್ತಿಗೆ ನೀಡುವಂತೆ ನೀತಿ ಚಿಂತಕರ ಚಾವಡಿ ನೀತಿ ಆಯೋಗ ಸಲಹೆ ನೀಡಿತ್ತು.
ಲ್ಯಾಟರಲ್ ಎಂಟ್ರಿಯ ಮೂಲಕ ಆಡಳಿತ ವ್ಯವಸ್ಥೆಗೆ ಪರಿಣಿತರನ್ನು ಒಳಗೊಳ್ಳುವಂತೆ ಶಿಫಾರಸು ಮಾಡಿತ್ತು. ಈ ಕ್ರಮವು “ಸ್ಥಾಪಿತ ವೃತ್ತಿ ಅಧಿಕಾರಶಾಹಿಗೆ ಸ್ಪರ್ಧೆಯೊಡ್ಡಲಿದೆ ಎಂದು ಹೇಳಲಾಗಿತ್ತು.

 

ನೀತಿ ಆಯೋಗವು ಆಡಳಿತ-ಸಂಬಂಧಿತ ಕಾರ್ಯಗಳ ಸಂಪೂರ್ಣ ಡಿಜಿಟಲೀಕರಣದ ಗುರಿಯನ್ನು ಹೊಂದಿತ್ತು. ಆರ್ಥಿಕತೆಯ ಹೆಚ್ಚುತ್ತಿರುವ ಸಂಕೀರ್ಣತೆಯು ನೀತಿ-ನಿರ್ಮಾಣವು ಒಂದು ವಿಶೇಷವಾದ ಚಟುವಟಿಕೆಯಾಗಿದೆ. ಆದ್ದರಿಂದ, ಲ್ಯಾಟರಲ್ ಎಂಟ್ರಿ ಮೂಲಕ ಪರಿಣಿತರನ್ನು ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಲು ಅತ್ಯಗತ್ಯ ಎಂದು ಪ್ರತಿಪಾದಿಸಿತ್ತು.

 

ಅಧಿಕಾರಿಗಳು ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ನಿರ್ದಿಷ್ಟ ಕ್ಷೇತ್ರಗಳಲ್ಲಿ ಪರಿಣತಿಯನ್ನು ಪಡೆಯಲು ಪ್ರೋತ್ಸಾಹಿಸಲಿದೆ. ದೀರ್ಘಾವಧಿಯ ಪೋಸ್ಟಿಂಗ್ ವ್ಯವಸ್ಥೆಯಿಂದ ಬದಲಾಯಿಸಬಹುದು ಎಂದು ವರದಿ ಹೇಳಿತ್ತು.

 

ತೀವ್ರ ತರಬೇತಿಯ ಮೂಲಕ ವಿಶೇಷತೆಯ ಆಯ್ಕೆಯ ಕ್ಷೇತ್ರದಲ್ಲಿ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಹೆಚ್ಚಿಸಲು ಅಧಿಕಾರಿಗಳನ್ನು ಪ್ರೋತ್ಸಾಹಿಸಬೇಕು. ಆಂತರಿಕ ಸಿಬ್ಬಂದಿಯ ಈ ವಿಶೇಷತೆಯು ಸ್ಥಿರ-ಅವಧಿಯ ಒಪ್ಪಂದಗಳಲ್ಲಿ ಹೆಚ್ಚು ಪರಿಣಿತ ಸಿಬ್ಬಂದಿಯ ಭಾಗಶಃ ಪ್ರವೇಶದಿಂದ ಪೂರಕವಾಗಿರಬೇಕು” ಎಂದು ಹೇಳಿತ್ತು.

 

ಈ ವ್ಯವಸ್ಥೆಯು ಉನ್ನತ ಪ್ರತಿಭೆ ಮತ್ತು ಶಕ್ತಿಯನ್ನು ಸರ್ಕಾರಿ ವ್ಯವಸ್ಥೆಯಲ್ಲಿ ತರುತ್ತದೆ. ಮತ್ತು ಸಚಿವಾಲಯಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ತಜ್ಞರನ್ನು ಮೂರರಿಂದ ಐದು ವರ್ಷಗಳ ಗುತ್ತಿಗೆ ಅವಧಿಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಿದ್ದನ್ನು ಸ್ಮರಿಸಬಹುದು.

Hot this week

ಪ್ರಧಾನಮಂತ್ರಿ ಜೀವನ ಜ್ಯೋತಿ, ಸುರಕ್ಷಾ ವಿಮೆ ಯೋಜನೆ; ಕಲ್ಬುರ್ಗಿ ಸೇರಿ 12 ಜಿಲ್ಲೆಗಳಲ್ಲಿ ಕಳಪೆ ಪ್ರದರ್ಶನ

ಬೆಂಗಳೂರು; ಜೀವ ವಿಮೆ ರಕ್ಷಣೆ ನೀಡುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

Topics

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

Related Articles

Popular Categories

error: Content is protected !!