Thursday | July 16, 2026 |

7 ತಿಂಗಳಲ್ಲಿ 7,399.60 ಕೋಟಿ ರು ಸಾಲ; ಬಿಜೆಪಿ ಅವಧಿಗೆ ಹೋಲಿಸಿದರೆ 2,576.82 ಕೋಟಿ ರು. ಅಧಿಕ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಏಪ್ರಿಲ್‌-ಅಕ್ಟೋಬರ್‌ (2022)ನಲ್ಲಿ ಪಡೆದಿದ್ದ ಸಾಲಕ್ಕಿಂತಲೂ ಈಗಿನ ಕಾಂಗ್ರೆಸ್‌ ಸರ್ಕಾರವು ಏಳೇ ತಿಂಗಳಿನಲ್ಲಿ  2,576.82 ಕೋಟಿ ರು. ಹೆಚ್ಚು ಸಾಲ ಪಡೆದಿರುವುದು ಇದೀಗ ಬಹಿರಂಗವಾಗಿದೆ.

 

2023-24ನೇ ಸಾಲಿನ ಏಪ್ರಿಲ್‌-ಅಕ್ಟೋಬರ್‌ ಅಂತ್ಯಕ್ಕೆ ಒಟ್ಟಾರೆ 7,399.60 ಕೋಟಿ ರು. ಸಾಲವನ್ನು ಪಡೆದಿದೆ. ಹಿಂದಿನ ಬಿಜೆಪಿ ಸರ್ಕಾರವು 2022ರ ಏಪ್ರಿಲ್‌-ಅಕ್ಟೋಬರ್‌ ಅಂತ್ಯಕ್ಕೆ ಒಟ್ಟಾರೆ 4,822.78 ಕೋಟಿ ರು. ಸಾಲ ಪಡೆದಿತ್ತು. ಹಿಂದಿನ ವರ್ಷಕ್ಕೆ  ಹೋಲಿಸಿದರೆ 2023ರ ಏಪ್ರಿಲ್‌-ಅಕ್ಟೋಬರ್‌ನಲ್ಲಿ 2,576.82 ಕೋಟಿ ರು. ಹೆಚ್ಚು ಸಾಲವನ್ನು ಪಡೆದಂತಾಗಿದೆ. ಸೆಪ್ಟಂಬರ್‍‌ 2023ರ ಅಂತ್ಯಕ್ಕೆ  1,191.10 ಕೋಟಿ ರು ಸಾಲ ಪಡೆದಿದ್ದ ಸರ್ಕಾರವು ಅಕ್ಟೋಬರ್‍‌ ಅಂತ್ಯಕ್ಕೆ 6,208.5 ಕೋಟಿ ರು. ಸಾಲ ಪಡೆದಿದೆ.

 

ರಾಜ್ಯದ ವಿತ್ತೀಯ ಪರಿಸ್ಥಿತಿ ಕುರಿತು ಆರ್ಥಿಕ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಈ ವಿವರಗಳಿವೆ.

 

ಸಾರ್ವಜನಿಕ ಸಾಲವಾಗಿ ಏಪ್ರಿಲ್ನಲ್ಲಿ 262.40 ಕೋಟಿ ರೂ. ಸಾಲ ಮಾಡಿತ್ತು. ಮೇ ತಿಂಗಳಲ್ಲಿ 181.42 ಕೋಟಿ ರೂ. ಸಾಲ ಎತ್ತಿದ್ದರೇ ಜೂನ್ನಲ್ಲಿ 158.47 ಕೋಟಿ ರೂ. ಸಾಲ ಪಡೆದಿತ್ತು. ಜುಲೈನಲ್ಲಿ 40.73 ಕೋಟಿ ರೂ. ಸಾರ್ವಜನಿಕ ಸಾಲ ಮಾಡಿತ್ತು. ಆಗಸ್ಟ್ ತಿಂಗಳಲ್ಲಿ 228.02 ಕೋಟಿ ರೂ. ಸಾಲ ಮಾಡಿದ್ದರೆ, ಸೆಪ್ಟೆಂಬರ್ನಲ್ಲಿ ಸುಮಾರು 235 ಕೋಟಿ ರೂ. ಸಾಲ ಮಾಡಿದೆ ಎಂಬುದು ಆರ್ಥಿಕ ಇಲಾಖೆಯ ಅಂಕಿ ಅಂಶದಿಂದ ತಿಳಿದು ಬಂದಿದೆ.

 

ಏಪ್ರಿಲ್‌ 2023ರಲ್ಲಿ 262.40 ಕೋಟಿ ರು., ಮೇ ತಿಂಗಳಿನಲ್ಲಿ 443.82 ಕೋಟಿ ರು., ಜೂನ್‌ನಲ್ಲಿ 602.29 ಕೋಟಿ ರು., ಜುಲೈನಲ್ಲಿ 643.02 ಕೋಟಿ ರು., ಆಗಸ್ಟ್‌ನಲ್ಲಿ 871.04 ಕೋಟಿ ರು., ಸೆಪ್ಟಂಬರ್‍‌ನಲ್ಲಿ 1,191.10 ಕೋಟಿ ರು. ಮತ್ತು ಅಕ್ಟೋಬರ್‍‌ ಅಂತ್ಯಕ್ಕೆ  7,399.60 ಕೋಟಿ ರು. ಸಾಲ ಪಡೆದಿರುವುದು ಗೊತ್ತಾಗಿದೆ.

 

ಏಪ್ರಿಲ್‌ 2023ರಲ್ಲಿ 262.40 ಕೋಟಿ ರು. ಸಾಲ ಪಡೆದಿದ್ದ ಸರ್ಕಾರವು ಮೇ ನಲ್ಲಿ 443.82 ಕೋಟಿ ರು. ಸಾಲ ಎತ್ತಿದೆ. ಅಂದರೆ ಒಂದೇ ತಿಂಗಳಲ್ಲಿ 181.42 ಕೋಟಿ ರು. ಸಾಲದ ಮೊತ್ತವನ್ನು ಹೆಚ್ಚಿಸಿಕೊಂಡಿದೆ. ಅದೇ ರೀತಿ ಜೂನ್‌ನಲ್ಲಿ 158.82 ಕೋಟಿ ರು., ಜುಲೈನಲ್ಲಿ 40.73 ಕೋಟಿ ರು., ಆಗಸ್ಟ್‌ನಲ್ಲಿ 228.01 ಕೋಟಿ ರು., ಸೆಪ್ಟಂಬರ್‍‌ನಲ್ಲಿ 320.09 ಕೋಟಿ ರು., ಅಕ್ಟೋಬರ್‍‌ನಲ್ಲಿ 6,208.5 ಕೋಟಿ ರು. ಸಾಲ ಪಡೆದಿರುವುದು ತಿಳಿದು ಬಂದಿದೆ.

 

ಸ್ವಂತ ತೆರಿಗೆ ರಾಜಸ್ವವು 2023ರ ಏಪ್ರಿಲ್‌-ಅಕ್ಟೋಬರ್‌ವರೆಗೆ 900,235.10 ಕೋಟಿ ರು. ಇದೆ. 2022-23ರ ಏಪ್ರಿಲ್‌-ಅಕ್ಟೋಬರ್‌ವರೆಗೆ 79,515.82 ಕೋಟಿ ರು. ಸಂಗ್ರಹಿಸಿದೆ. ವಾಣಿಜ್ಯ ತೆರಿಗೆ 52,768.17 ಕೋಟಿ ರು. ಸಂಗ್ರಹಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಅವಧಿಯಲ್ಲಿ 47,053.70 ಕೋಟಿ ರು. ಸಂಗ್ರಹಿಸಿತ್ತು.

 

ಅಬಕಾರಿ ಆದಾಯದಲ್ಲಿ 19,302.25 ಕೋಟಿ ರು. ಸಂಗ್ರಹಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಏಪ್ರಿಲ್‌-ಅಕ್ಟೋಬರ್‌ನಲ್ಲಿ 17,090.62 ಕೋಟಿ ರು. ಸಂಗ್ರಹಿಸಿತ್ತು. ಮೋಟಾರು ವಾಹನ ತೆರಿಗೆಗೆ ಸಂಬಂಧಿಸಿದಂತೆ 2023ರ ಅಕ್ಟೋಬರ್‌ ಅಂತ್ಯಕ್ಕೆ 6,301.48 ಕೋಟಿ ರು. ಇದ್ದರೇ 2022-23ರ ಏಪ್ರಿಲ್‌-ಅಕ್ಟೋಬರ್‌ ಅಂತ್ಯಕ್ಕೆ 5,373.01 ಕೋಟಿ ರು. ಇತ್ತು.

 

ಮುದ್ರಾಂಕ ಮತ್ತು ನೋಂದಣಿ ತೆರಿಗೆಯಲ್ಲಿ 10,940.06 ಕೋಟಿ ರು. ಇತ್ತ ಇದೆ. 2022ರ 23ರ ಏಪ್ರಿಲ್‌-ಅಕ್ಟೋಬರ್‌ನಲ್ಲಿ 9,558.51 ಕೋಟಿ ರು. ಇತ್ತು.

 

https://the-file.in/2023/09/governance/18974/

 

ಕೇಂದ್ರ ಸರ್ಕಾರದಿಂದ ಸಹಾಯಾನುದಾನಕ್ಕೆ ಸಂಬಂಧಿಸಿದಂತೆ 2023ರ ಏಪ್ರಿಲ್‌ ಅಕ್ಟೋಬರ್‌ ಅವದಿಯಲ್ಲಿ 6,785.08 ಕೋಟಿ ರು. ಇದೆ. 2022-23ರ ಏಪ್ರಿಲ್‌-ಅಕ್ಟೋಬರ್‌ ಅವಧಿಯಲ್ಲಿ 14,872.35 ಕೋಟಿ ರು. ಇತ್ತು. ಹಿಂದಿನ ವರ್ಷಕ್ಕೆ ಹೋಲಿಸಿದರೆ 8,087.27 ಕೋಟಿ ರು. ಕಡಿಮೆಯಾಗಿದೆ.

 

ಕೇಂದ್ರ ಸರ್ಕಾರದ ತೆರಿಗೆಗೆ ಸಂಬಂಧಿಸಿದಂತೆ 20234 ಏಪ್ರಿಲ್‌-ಅಕ್ಟೋಬರ್‌ನಲ್ಲಿ 19,270.86 ಕೋಟಿ ರು. ಇದ್ದರೇ 2022-23ರ ಏಪ್ರಿಲ್‌ ಅಕ್ಟೋಬರ್‌ನಲ್ಲಿ 15,844.09 ಕೋಟಿ ರು. ಇತ್ತು.

 

ಈ ಬಾರಿಯ ಹಣಕಾಸು ನಿರ್ವಹಣೆಗಾಗಿ ಕಾಂಗ್ರೆಸ್ ಸರ್ಕಾರ ಸಾಲವನ್ನು ಬಹುವಾಗಿ ನೆಚ್ಚಿಕೊಂಡಿದೆ. ಇದಕ್ಕೆ ಪುಷ್ಠಿ ಎಂಬಂತೆ ಈ ಬಾರಿ ಬಜೆಟ್ ಮಂಡನೆ ವೇಳೆಯಲ್ಲೇ ಹೆಚ್ಚಿನ ಸಾಲದ ಮೊರೆ ಹೋಗುವುದಾಗಿ ಹೇಳಿತ್ತು.

 

ಇದಕ್ಕಾಗಿ 2023-24ರ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚಿನ ಸಾಲದ ಮೊರೆ ಹೋಗಿದ್ದರು. ಜುಲೈನಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ 2023-24ರ ಸಾಲಿನಲ್ಲಿ ಒಟ್ಟು ಅಂದಾಜು 85,818 ಕೋಟಿ ಸಾಲ ಮಾಡಲು ನಿರ್ಧರಿಸಿತ್ತು.

 

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದ ಬಜೆಟ್ನಲ್ಲಿ 2023-24ರಲ್ಲಿ ಅಂದಾಜು 77,750 ಕೋಟಿ ಸಾಲ ಮಾಡುವುದಾಗಿ ಹೇಳಿದ್ರು. ಆದರೆ, ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್ನಲ್ಲಿ ಒಟ್ಟು ಸಾಲದ ಮೊತ್ತವನ್ನು 85,818 ಕೋಟಿ ರೂ.ಗೆ ಏರಿಕೆ ಮಾಡಿರುವುದನ್ನು ಸ್ಮರಿಸಬಹುದು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!