Thursday | April 16, 2026 |

ಇಲಾಖೆ, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳಲ್ಲಿ ಖಾಸಗಿ ಇ-ಮೇಲ್‌ ಬಳಕೆ; ಸರ್ಕಾರದ ಮಾಹಿತಿ ಸೋರಿಕೆ?

ಬೆಂಗಳೂರು; ಕರ್ನಾಟಕ ಸರ್ಕಾರದ ಇಲಾಖೆಗಳು, ನಿಗಮ,ಮಂಡಳಿ, ಸ್ವಾಯತ್ತೆ ಸಂಸ್ಥೆಗಳ ಮುಖ್ಯಸ್ಥರು, ವಿಶ್ವವಿದ್ಯಾಲಯಗಳ ಕುಲಪತಿಗಳು ಸರ್ಕಾರದ ಇ-ಮೇಲ್‌ ಬಳಕೆ ಮಾಡದೇ ಖಾಸಗಿ ಇ-ಮೇಲ್‌ ಬಳಸುತ್ತಿದ್ದಾರೆ. ಇದರಿಂದ ಸರ್ಕಾರದ ಮಾಹಿತಿಗಳು ಸೋರಿಕೆಯಾಗುತ್ತಿವೆ!

 

ಇಂತಹದ್ದೊಂದು ಆತಂಕಕಾರಿ ಸುದ್ದಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್‌ ಅವರು ಬಹಿರಂಗಗೊಳಿಸಿದ್ದಾರೆ.

 

ಸರ್ಕಾರದ ಇಲಾಖೆ, ನಿಗಮ, ಮಂಡಳಿ,ಸ್ವಾಯತ್ತ ಸಂಸ್ಥೆಗಳ ಮುಖ್ಯಸ್ಥರು ಖಾಸಗಿ ಇ-ಮೇಲ್‌ ಬಳಕೆ ಮಾಡದೇ ಸರ್ಕಾರದ ಇ-ಮೇಲ್‌ ಬಳಕೆ ಮಾಡಬೇಕು ಎಂಬ ಬಗ್ಗೆ 2023ರ ನವೆಂಬರ್‌ 21ರಂದೇ ಡಾ ಶಾಲಿನಿ ರಜನೀಶ್‌ ಅವರು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಾರಿಗೆ, ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೆಎಸ್‌ಎಸ್‌ಐಡಿಸಿ, ಉನ್ನತ ಶಿಕ್ಷಣ, ಕೆಹಚ್‌ಬಿ, ಡಿಪಿಎಆರ್‌ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಖಾಸಗಿ ಇ-ಮೇಲ್‌ ಬಳಕೆ ಮಾಡಲಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ಸಾರಿಗೆ ಇಲಾಖೆಯಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಇ-ಮೇಲ್‌ ಬಳಕೆ ಮಾಡಲಾಗುತ್ತಿದೆ ಎಂಬುದು ಸುತ್ತೋಲೆಯಿಂದ ತಿಳಿದು ಬಂದಿದೆ.

 

ಸುತ್ತೋಲೆಯಲ್ಲೇನಿದೆ?

 

ಸರ್ಕಾರದ ಇಲಾಖೆ, ನಿಗಮ, ಮಂಡಳಿ ಹಾಗೂ ಸ್ವಾಯತ್ತ ಸಂಸ್ಥೆಗಳ ಕಚೇರಿ ಕೆಲಸದ ನಿಮಿತ್ತ ಸಂಬಂಧಪಟ್ಟ ಅಧಿಕಾರಿಗಳ ಹುದ್ದೆಗಳ ಅನುಗುಣವಾಗಿ ಇ-ಮೇಲ್‌ಗಳನ್ನು 2005ನೇ ಇಸವಿಯಿಂದ ಸೃಷ್ಟಿಸಿ ಒದಗಿಸಲಾಗುತ್ತಿದೆ. ಕೆಲವು ಇಲಾಖೆ, ನಿಗಮ, ಮಂಡಳೀ, ಸ್ವಾಯತ್ತ ಸಂಸ್ಥೆಗಳು ಸರ್ಕಾರದ ಇ-ಮೇಲ್‌ ಬಳಕೆ ಮಾಡದೇ ಖಾಸಗಿ ಇ-ಮೇಲ್‌ಗಳನ್ನು ಸೃಷ್ಟಿಸಿಕೊಂಡು ಕಚೇರಿ ಕೆಲಸ ನಿರ್ವಹಣೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

 

ಖಾಸಗಿ ಇ-ಮೇಲ್‌ಗಳನ್ನು ಬಳಕೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಸರ್ಕಾರದ ಇಲಾಖೆ, ನಿಗಮ, ಮಂಡಳಿ,ಸ್ವಾಯತ್ತ ಸಂಸ್ಥೆಗಳೊಂದಿಗೆ ವ್ಯವಹರಿಸಲು ಅನಾನುಕೂಲವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾವ ಹುದ್ದೆಗೆ ಸಂಬಂಧಪಟ್ಟ ಅಧಿಕಾರಿಗಳ ಇ-ಮೇಲ್‌ ಎಂದು ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಖಾಸಗಿ ಇ-ಮೇಲ್‌ ಬಳಸುವುದರಿಂದ ಸರ್ಕಾರದ ಮಾಹಿತಿಗಳು ಸೋರಿಕೆಯಾಗುವ ಸಂಭವ ಉಂಟಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.

 

ಸರ್ಕಾರದ ಎಲ್ಲಾ ಇಲಾಖೆ, ನಿಗಮ, ಮಂಡಳಿ ಹಾಗೂ ಸ್ವಾಯತ್ತ ಸಂಸ್ಥೆಗಳ ಕಚೇರಿ ಕೆಲಸಕ್ಎಕ ಸಂಬಂಧಪಟ್ಟ ಅಧಿಕಾರಿಗಳ ಹುದ್ದೆಗಳಿಗುನುಣವಾಗಿ ಇ-ಮೇಲ್‌ಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸೃಜಿಸಿದ ಇ-ಮೇಲ್‌ಗಳನ್ನೇ ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಡಾ ಶಾಲಿನಿ ರಜನೀಶ್‌ ಅವರು ಸೂಚಿಸಿರುವುದು ಗೊತ್ತಾಗಿದೆ.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!