Wednesday | June 10, 2026 |

ಆರ್ಡರ್ಲಿ ಹಿಂಪಡೆದಿದ್ದರೂ ಮುಂದುವರೆಸಲು ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳ ಕೋರಿಕೆ

ಬೆಂಗಳೂರು; ರಾಜ್ಯ ಬಿಜೆಪಿ ಮುಖಂಡರೂ ಅಗಿರುವ ನಿವೃತ್ತ ಐಪಿಎಸ್‌ ಪೊಲೀಸ್‌ ಅಧಿಕಾರಿ ಭಾಸ್ಕರರಾವ್‌ ಸೇರಿದಂತೆ ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳು ತಮ್ಮ ಮನೆಯಲ್ಲಿ ಕೆಲಸ ಮಾಡಲು ಪೊಲೀಸ್‌ ಸಿಬ್ಬಂದಿಗಳನ್ನು ಮುಂದುವರೆಸಬೇಕು ಎಂಬ ಕೋರಿಕೆ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯದ ನಿವೃತ್ತ ಐಪಿಎಸ್‌ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ಆರ್ಡಲಿಗಳನ್ನು ಹಿಂಪಡೆದು ಈಗಾಗಲೇ ಆದೇಶ ಹೊರಡಿಸಲಾಗಿದೆ. ಆದರೂ ಈ ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳು ಆರ್ಡಲಿಗಳನ್ನು ಮುಂದುವರೆಸಬೇಕು ಎಂದು ಸಲ್ಲಿಸಿರುವ ಕೋರಿಕೆಯು ಚರ್ಚೆಗೆ ಗ್ರಾಸವಾಗಿದೆ.

 

ನಿವೃತ್ತ ಪೊಲೀಸ್‌ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಸಿಬ್ಬಂದಿಯನ್ನು ಹಿಂಪಡೆಯಲು 2023ರ ಡಿಸೆಂಬರ್‍‌ 11ರಂದು ಒಳಾಡಳಿತ ಇಲಾಖೆಯು ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ವಿವಿಧ ಕಾರಣಗಳನ್ನು ಮುಂದಿರಿಸಿ ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳ ಮನೆಯಲ್ಲಿ ಆರ್ಡಲಿಗಳನ್ನು ಮುಂದುವರೆಸಲು ಕೋರಿಕೆ ಸಲ್ಲಿಸಿರುವುದು ಮುನ್ನೆಲೆಗೆ ಬಂದಿದೆ.

 

ನಿವೃತ್ತ ಐಪಿಎಸ್‌ ಪೊಲೀಸ್‌ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ಹಿಂಪಡೆಯುವ ಕುರಿತು ಡಿಐಜಿ ಸೌಮೇಂದು ಮುಖರ್ಜಿ ಅವರು ಎಲ್ಲಾ ಘಟಕಾಧಿಕಾರಿಗಳಿಗೆ 2023ರ ಡಿಸೆಂಬರ್‍‌ 19ರಂದು ಹಿಂಬರಹ ಹೊರಡಿಸಿದ್ದಾರೆ. 2023ರ ಡಿಸೆಂಬರ್‍‌ 11ರಂದು ಹೊರಡಿಸಿರುವ ಅದೇಶವನ್ನು ಪಾಲಿಸಬೇಕು ಮತ್ತು ಈ ಕುರಿತು ಸೂಕ್ತ ಕ್ರಮ ವಹಿಸಬೇಕು, ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದಾರೆ.

 

ಸೌಮೆಂದು ಮುಖರ್ಜಿ ಅವರು ಹೊರಡಿಸಿರುವ ಹಿಂಬರಹದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಭಾಸ್ಕರರಾವ್‌ ನಿವೃತ್ತಿ ಐಪಿಎಸ್‌ ಅವರು ದೂರವಾಣಿ ಮುಖಾಂತರ ಕರೆ ಮಾಡಿ ತಾನು ಏಪ್ರಿಲ್‌ ತಿಂಗಳಿನಲ್ಲಿ ಅಷ್ಟೇ ಸ್ವ ಇಚ್ಛಾ ನಿವೃತ್ತಿ ಹೊಂದಿದ್ದರೂ ಸಹ ತಾಂತ್ರಿಕವಾಗಿ ಇಲಾಖೆಯಲ್ಲಿಯೇ ಮುಂದುವರೆದಿರುವುದಾಗಿ ತಿಳಿಸಿ ಈ ಸಂಬಂಧ ಇನ್ನೂ ಕೆಲ ದಿನಗಳವರೆಗೆ ಆರ್ಡಲಿಗಳನ್ನು ಮುಂದುವರೆಸುವಂತೆ ಕೋರಿರುತ್ತಾರೆ ಎಂಬ ಅಂಶವನ್ನು ಒಳಾಡಳಿತ ಇಲಾಖೆಯು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

ಕರ್ನಾಟಕ ರಿಯಲ್ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ಹೆಚ್‌ ಸಿ ಕಿಶೋರ್‍‌ ಚಂದ್ರ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ತಮ್ಮ ಸುರಕ್ಷಾ ಕರ್ತವ್ಯ ನಿಮಿತ್ತ ಮುಂದುವರೆಸುವಂತೆ ಕೋರಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.

 

‘ಉಳಿದಂತೆ ಇತರೆ ನಿವೃತ್ತ ಐಪಿಎಸ್‌ ಅಧಿಕಾರಿಗಳ ಮನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಸಿಬ್ಬಂದಿಗಳನ್ನು ಹಿಂಪಡೆಯಲಾಗಿದೆ,’ ಎಂಬ ಮಾಹಿತಿಯನ್ನು ಸ%B

Hot this week

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!