Thursday | March 19, 2026 |

ಬಾಣಂತಿ, ಅಪೌಷ್ಠಿಕ ಮಕ್ಕಳ ಆಹಾರ ಖರೀದಿಯಲ್ಲೂ ಅಕ್ರಮ; 2 ಕೋಟಿ ಮೊತ್ತದ ನಕಲಿ ಬಿಲ್‌ ಸೃಷ್ಟಿ

Support THE-FILE

spot_img

ಬೆಂಗಳೂರು; ಮೂರು ವರ್ಷದ ಮಕ್ಕಳು, ಗರ್ಭಿಣಿ, ಬಾಣಂತಿಯರು ಮತ್ತು ತೀವ್ರ ಅಪೌಷ್ಠಿಕ ಮಕ್ಕಳಿಗೆ ಶೇಂಗಾ, ತೊಗರಿಬೇಳೆ, ಹೆಸರುಕಾಳು, ಹೆಸರು ಬೇಳೆ, ಉಪ್ಪು, ಬೆಲ್ಲ ಸೇರಿದಂತೆ ಇನ್ನಿತರೆ ಪೂರಕ ಪೌಷ್ಠಿಕ ಆಹಾರ ಖರೀದಿಸಲಾಗಿದೆ ಎಂದು ನಕಲಿ ಬಿಲ್‌ ತಯಾರಿಸಿ ಅಂದಾಜು 2 ಕೋಟಿ ರೂ. ಅಧಿಕ ಮೊತ್ತದ ಅಕ್ರಮ ನಡೆಸಿರುವುದು ಇದೀಗ ಬಹಿರಂಗವಾಗಿದೆ.

 

ಈ ಪ್ರಕರಣದ ಕುರಿತಂತೆ ತನಿಖೆ ನಡೆಸಬೇಕು ಎಂದು ಇಲಾಖೆಯ ಉಪ ನಿರ್ದೇಶಕರು ಸರ್ಕಾರದ ಕಾರ್ಯದರ್ಶಿಗೆ ಪತ್ರವನ್ನು ಬರೆದಿದ್ದಾರೆ.

 

ವಿಶೇಷವೆಂದರೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‍‌ ಅವರ ತವರು ಜಿಲ್ಲೆಯಲ್ಲಿಯೇ ಈ ಪ್ರಕರಣ ನಡೆದಿದೆ. ಪತ್ರ ಬರೆದು ಮೂರ್ನಾಲ್ಕು ದಿನಗಳಾದರೂ ಇಲಾಖೆ ಸಚಿವರಾಗಲೀ, ಸರ್ಕಾರದ ಕಾರ್ಯದರ್ಶಿಗಳಾಗಲೀ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

 

ಇಲಾಖೆಯ ಉಪ ನಿರ್ದೇಶಕರು ಸರ್ಕಾರದ ಕಾರ್ಯದರ್ಶಿಗೆ 2023ರ ಡಿಸೆಂಬರ್‍‌ 20ರಂದು ಬರೆದಿರುವ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕೇಂದ್ರದ ಪಾಲು (ಲೆಕ್ಕ ಶೀರ್ಷಿಕೆ; 2235-00-101-0-61 ಲಿಂಕ್‌ ಶೀರ್ಷಿಕೆ 2236-02-197-7-01) 28.16 ಕೋಟಿ ರು., ರಾಜ್ಯದ ಪಾಲಿನ 28.22 ಕೋಟಿ ರು.ಗಳು ಬೆಳಗಾವಿ ಜಿಲ್ಲೆಗೆ ಬಿಡುಗಡೆಯಾಗಿತ್ತು. ಈ ಮೊತ್ತವನ್ನು ಬೆಳಗಾವಿ ಜಿಲ್ಲೆಯ 14 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 9 ಮಹಿಳಾ ಪೂರಕ ಪೌಷ್ಠಿಕ ಆಹಾರ ತಯಾರಿಕೆ ಘಟಕಗಳ ಮುಖಾಂತರ ಅಕ್ರಮವಾಗಿ ಬಿಲ್‌ ತಯಾರಿಸಲಾಗಿತ್ತು ಎಂದು ಪತ್ರದಿಂದ ತಿಳಿದು ಬಂದಿದೆ.

 

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳಗಾವಿ ತಾಲೂಕಿನ ಉಪನಿರ್ದೇಶಕ ಆರ್‍‌ ನಾಗರಾಜ್‌ ಮತ್ತಿತರರು ಅಧಿಕಾರ ದುರ್ಬಳಕೆ ಮಾಡಿಕೊಂಡು ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಅಕ್ರಮವಾಗಿ ಹಾಗೂ ಕಾನೂನುಬಾಹಿರವಾಗಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣದ ಕುರಿತು ತನಿಖೆ ನಡೆಸಬೇಕು,’ ಎಂದು ಸರ್ಕಾರದ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಕೋರಿರುವುದು ಗೊತ್ತಾಗಿದೆ.

 

ಬೆಳಗಾವಿ ಗ್ರಾಮೀಣ, ರಾಮದುರ್ಗ, ಬೈಲಹೊಂಗಲ ಮತ್ತು ಸವದತ್ತಿಯಲ್ಲಿನ ಎಂಎಸ್‌ಪಿಎಸಿಗಳಿಗೆ ಅನಿರೀಕ್ಷಿತ ಭೇಟಿ, ತಪಾಸಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಲಿ ಉಪನಿರ್ದೇಶಕರು ಸರ್ಕಾರಕ್ಕೆ 2 ಕೋಟಿ ರು. ವಂಚನೆ ಮಾಡಿರುವ ಪ್ರಕರಣವನ್ನು ಪತ್ತೆ ಹಚ್ಚಿರುವುದು ಪತ್ರದಿಂದ ತಿಳಿದು ಬಂದಿದೆ.

 

‘ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಾಗಲೀ ಸ್ಟಾಕ್‌ ತೆಗೆದುಕೊಳ್ಳದೇ ಸರ್ಕಾರಕ್ಕೆ ಮೋಸ ಮಾಡಿ ವಂಚಿಸಿ ಸುಮಾರ 2 ಕೋಟಿ ರು. ಅಕ್ರಮ ಬಿಲ್‌ ತಯಾರಿಸಿ 6 ತಿಂಗಳಿನಿಂದ 3 ವರ್ಷದ ಮಕ್ಕಳು, 3-6 ವರ್ಷದ ಮಕ್ಕಳು, ಗರ್ಭಿಣಿ, ಬಾಣಂತಿಯರು ಮತ್ತು ತೀವ್ರ ಅಪೌಷ್ಠಿಕ ಮಕ್ಕಳ ಹೊಟ್ಟೆ ಮೇಲೆ ಹೊಡೆದು ಪೂರಕ ಪೌಷ್ಠಿಕ ಆಹಾರವನ್ನು ನೀಡದೇ ಸುಳ್ಳು ಬಿಲ್‌ ತಯಾರಿಸಲಾಗಿದೆ,’ ಎಂದು ಪತ್ರದಲ್ಲಿ ಹೇಳಿರುವುದು ಗೊತ್ತಾಗಿದೆ.

 

ಬೆಳಗಾವಿ ಜಿಲ್ಲೆಯ ಬೆಳಗಾವಿ ಗ್ರಾಮೀಣ ಮತ್ತು ನಗರ ತಾಲೂಕುಗಳ ಎಂಎಸ್‌ಪಿಸಿಯಲ್ಲಿ ಬೆಂಗಳೂರಿನ ರಾಜಾಜಿನಗರದ ಜಗಾದಿ ಎಂಟರ್‍‌ ಪ್ರೈಸೆಸ್‌ (ಜಿಎಸ್‌ಟಿ ನಂ GST/UIN NO 29AADPU5024DIZS) ಹೆಸರಿನಲ್ಲಿ ಟ್ಯಾಕ್ಸ್‌ ಇನ್‌ವಾಯ್ಸ್‌ ಬಿಲ್‌ನ್ನು 2023ರ ಅಕ್ಟೋಬರ್‍‌ 1ರ JE/23-24/25 ಬಿಲ್‌ನಲ್ಲಿ ಪೂರಕ ಪೌಷ್ಠಿಕ ಆಹಾರ ಪಡೆಯಲಾಗಿದೆ ಎಂದು ನಕಲಿ ಬಿಲ್‌ ಸೃಷ್ಟಿಸಲಾಗಿದೆ ಎಂದು ಉಪ ನಿರ್ದೇಶಕರು ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

 

ಶೇಂಗಾ ಬೀಜ, (1,550 ರು) ಕೆ ಜಿ ದರ 120 ರು. ನಂತೆ 1,86,000 ರು., 99 ರು. ನಂತೆ 900 ಕೆ ಜಿ ಹುರಿಗಡಲೆ, 89,100 ಒಟ್ಟು 2,75,100 ರು., 2023ರ ಅಕ್ಟೋಬರ್‍‌ 1ರಂದು ಬಿಲ್‌ ಸಂಖ್ಯೆ (JE/23/24 ) ಕೆ ಜಿ ಗೆ 110 ರು. ದರದಂತೆ 2,150 ಕೆ ಜಿ ಹೆಸರುಕಾಳಿಗೆ 2,36,000 ರು., 120 ರು ದರದಂತೆ 390 ಕೆ ಜಿ ಹೆಸರುಬೇಳೆಗೆ 44,850 ರು., ಕೆ ಜಿ 18 ರು.ನಂತೆ 125 ಕೆ ಜಿ ಉಪ್ಪಿಗೆ 2,250 ರು, ಕೆ ಜಿ 50 ರು,ನಂತೆ 2,172 ಕೆ ಜಿ ಬೆಲ್ಲಕ್ಕೆ 1,08,600 ರು. ಒಟ್ಟು 4,57,000 ರು.ಗಳ ಬಿಲ್‌ ತಯಾರಿಸಲಾಗಿದೆ ಎಂದು ಪತ್ರದಿಂದ ಗೊತ್ತಾಗಿದೆ.

 

ಅದೇ ರೀತಿ ಬೆಳಗಾವಿ ಗ್ರಾಮೀಣ ಮತ್ತು ನಗರ ಎಂಎಸ್‌ಪಿಸಿಗಳಲ್ಲಿ ಒಟ್ಟು 7,45,855 ರು., ರಾಮದುರ್ಗ ಎಂಎಸ್‌ಪಿಸಿ (ಬಿಲ್‌ ಸಪ್ಲೈ ನಂ JE/23/24 20 ) ನಕಲಿ ಬಿಲ್‌ ತಯಾರಿಸಲಾಗಿದೆ. ಇಲ್ಲಿಯೂ 110 ರು. ದರದಲ್ಲಿ 3,000 ಕೆ ಜಿ ಹೆಸರುಕಾಳಿಗೆ 3,30,000 ರು., ಕೆ ಜಿ 120 ರು. ದರದಲ್ಲಿ 810 ಕೆ ಜಿ ತೊಗರಿಬೇಳೆಗೆ 97,200 ರು., ಕೆ ಜಿ 18 ರು.ದರದಲ್ಲಿ 175 ಕೆ ಜಿ ಉಪ್ಪಿಗೆ 3,150 ರು., ಕೆ ಜಿ 50 ರು. ನಂತೆ 1,080 ಕೆ ಜಿ ಬೆಲ್ಲಕ್ಕೆ 69,000 ರು., ಹೀಗೆ ಒಟಟ್ಉ 5,53,350 ರು.ಗಳ ಬಿಲ್‌ ತಯಾರಿಸಲಾಗಿದೆ ಎಂದು ಪರಿಶೀಲನೆ ವೇಳೆಯಲ್ಲಿ ಪತ್ತೆ ಮಾಡಲಾಗಿದೆ.

 

‘ಬೆಳಗಾವಿ ಗ್ರಾಮೀಣ ಮತ್ತು ನಗರ ತಾಲೂಕು, ರಾಮದುರ್ಗ, ಬೈಲಹೊಂಗಲ, ಸವದತ್ತಿ ತಾಲೂಕಿನ ಎಂಎಸ್‌ಪಿಸಿಗಳಲ್ಲಿ ಸದಸ್ಯರು, ಉಪ ನಿರ್ದೇಶಕರು ಸುಳ್ಳು ಬಿಲ್‌ ಸೃಷ್ಟಿಸಲಾಗಿದೆ. ಎಂಎಸ್‌ಪಿಸಿ ಸದಸ್ಯರನ್ನು ಬೆದರಿಸಿ ಒತ್ತಾಯಪೂರ್ವಕವಾಗಿ ಸ್ಟಾಕ್‌ ಇಶ್ಯೂ ಪ್ರಮಾಣ ಪತ್ರಗಳಿಗೆ ಸಹಿ ಪಡೆದಿದ್ದಾರೆ. ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ದೃಢೀಕರಿಸಿಕೊಂಡು ಬಿಲ್‌ ತಯಾರಿಸಲಾಗಿದೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಚೇರಿಯಿಂದ ಮೇಲು ಸಹಿ ಪಡೆಯಲಾಗಿದೆ,’ ಎಂದು ಉಪ ನಿರ್ದೇಶಕರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

 

ಎಂಎಸ್‌ಪಿಸಿಗಳ ಅಧ್ಯಕ್ಷರು ಮತ್ತು ಸದಸ್ಯರುಗಳು ಈ ಅಕ್ರಮ, ಅನ್ಯಾದ ವಿರುದ್ಧ ಮಾತನಾಡದೇ ಉಪ ನಿರ್ದೇಶಕರಿಗೂ ವರದಿ ಸಲ್ಲಿಸದೇ ಇರುವುದು ಹಲವು ಅನುಮಾನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದೂ ಪತ್ರದಲ್ಲಿ ಹೇಳಲಾಗಿದೆ.

 

‘ಸರ್ಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡಿ ವಂಚಿಸಿರುವುದರಿಂದ ಹಿಂದಿನ ಉಪನಿರ್ದೇಶಕ ಆರ್‍‌ ನಾಗರಾಜ್‌, ಪ್ರಥಮ ದರ್ಜೆ ಸಹಾಯಕ ವಿಕ್ರಮ್‌ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕರ್ತವ್ಯಲೋಪ ಎಸಗಿದ್ದಾರೆ. ಇವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲು ಈ ಮೂಲಕ ಪ್ರಸ್ತಾವನೆ ಮತ್ತು ವಾಸ್ತವಾಂಶಗಳನ್ನು ತಮ್ಮ ಗಮನಕ್ಕೆ ತರಲಾಗಿದೆ,’ ಎಂದು ಪತ್ರದಲ್ಲಿ ಹೇಳಿರುವುದು ಗೊತ್ತಾಗಿದೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!