Thursday | April 16, 2026 |

ಪಿಯು ವಿದ್ಯಾರ್ಥಿಗಳ ಜೇಬಿಗೆ ‘ಕೈ’ ಹಾಕಿದ ಸರ್ಕಾರ; ಮುಂದಿನ ವರ್ಷದಿಂದಲೇ ಶುಲ್ಕ ಪರಿಷ್ಕರಣೆ

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸಾಲ ಎತ್ತುವಳಿ ಮಾಡಲು ಏದುಸಿರು ಬಿಡುತ್ತಿರುವ  ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಪಿಯು ವಿದ್ಯಾರ್ಥಿಗಳ ಜೇಬಿಗೆ ಕೈ ಹಾಕಲು ಮುಂದಾಗಿದೆ. ಈಗಾಗಲೇ ಪರಿಷ್ಕೃತ ಶುಲ್ಕ ಪಟ್ಟಿಯನ್ನೂ ಸಿದ್ಧಪಡಿಸಿಟ್ಟುಕೊಂಡಿರುವುದು ಇದೀಗ ಬಹಿರಂಗವಾಗಿದೆ.

 

ಹಿಂದಿನ ಬಿಜೆಪಿ ಸರ್ಕಾರವು ಪಿಯು ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ನೀಡಿದ್ದರೇ ಈಗಿನ ಕಾಂಗ್ರೆಸ್‌ ಸರ್ಕಾರವು 2024-25ನೇ ಸಾಲಿಗೆ ಪಿಯು ವಿದ್ಯಾರ್ಥಿಗಳ ವಿವಿಧ ರೀತಿಯ ಶುಲ್ಕವನ್ನು ಪರಿಷ್ಕರಣೆ ಮಾಡಲು ಹೊರಟಿದೆ.

 

ಪಿಯು ವಿದ್ಯಾರ್ಥಿಗಳ ಶುಲ್ಕ ಪರಿಷ್ಕರಣೆ ಮಾಡುವ ಸಂಬಂಧ ಪಿಯು ಮಂಡಳಿಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಪ್ರಸ್ತಾವನೆ ಕುರಿತು ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಪ್ರಸ್ತಾಪಿಸಿದ್ದಾರೆ ಎಂದ ಗೊತ್ತಾಗಿದೆ.

 

ಪಿಯು ಮಂಡಳಿ ನಿರ್ದೇಶಕರು ಪ್ರಸ್ತಾವಿಸಿರುವ ಶುಲ್ಕ ಪರಿಷ್ಕರಣೆಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಲು ಕಡತವನ್ನು ರವಾನಿಸಲಾಗಿದೆ ಎಂದು ಗೊತ್ತಾಗಿದೆ. ಈ ಸಂಬಂಧ ‘ದಿ ಫೈಲ್‌’ಗೆ ಕೆಲವು ದಾಖಲೆಗಳು (ಇಪಿ ಟಿಪಿಯು 2023, ಸ್ವೀಕೃತಿ ಸಂಖ್ಯೆ; 7004123/2023) ಲಭ್ಯವಾಗಿವೆ.

 

ಪದವಿಪೂರ್ವ ಶಿಕ್ಷಣ ಹಂತದಲ್ಲಿ ಕಾಲೇಜುಗಳಿಂದ ಸಂಗ್ರಹ ಮಾಡಲಾಗುವ ಶುಲ್ಕ ಮತ್ತು ಪ್ರಥಮ, ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಶುಲ್ಕಗಳನ್ನು ಪಡೆಯಲಾಗುತ್ತಿದೆ. ಕಾಲೇಜುಗಳಿಂದ ಸಂಗ್ರಹ ಮಾಡಲಾಗುವ ಶುಲ್ಕಗಳನ್ನು 2018ನೇ ಸಾಲಿನಲ್ಲಿ (ಸರ್ಕಾರದ ಆದೇಶ ಸಂಖ್ಯೆ ಇಡಿ 195 ಡಿಜಿಡಿ 2017, ದಿನಾಂಕ 02-03-2018) ಪರಿಷ್ಕರಿಸಲಾಗಿತ್ತು. ಇದು 2018-19ನೇ ಸಾಲಿನಿಂದಲೇ ಜಾರಿಯಲ್ಲಿತ್ತು.

 

ಶುಲ್ಕ ಪರಿಷ್ಕರಣೆಯನ್ನು ಪ್ರತೀ ಮೂರು ವರ್ಷಗಳಿಗೊಮ್ಮೆ ಮಾಡಬೇಕಿದೆ ಎಂಬ ಸಮರ್ಥನೆಯನ್ನು ಮುಂದಿರಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು 2024-25ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಬರುವಂತೆ ಶುಲ್ಕವನ್ನು ಪರಿಷ್ಕರಿಸಲು ಮುಂದಾಗಿರುವುದು ದಾಖಲೆಯಿಂದ ಗೊತ್ತಾಗಿದೆ.

 

‘ಕಾಲೇಜಿನ ಮೂಲಭೂತ ಸೌಕರ್ಯ ಅಭಿವೃದ್ಧಿ ದೃಷ್ಟಿಯನ್ನು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗದಂತೆ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಷ್ಕರಣೆ ಪಟ್ಟಿ ಸಿದ್ಧಪಡಿಸಲಾಗಿದೆ. ಜಾರಿಯಲ್ಲಿರುವ ಪ್ರಸ್ತುತ ಶುಲ್ಕ ಹಾಗೂ ಪರಿಷ್ಕರಣೆ ಮಾಡಲು ಉದ್ದೇಶಿಸಿರುವ ಶುಲ್ಕಗಳ ವಿವರವಾದ ಪಟ್ಟಿಯೊಂದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರಂತೆ 2024-25ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಬರುವಂತೆ ಶುಲ್ಕ ಪರಿಷ್ಕರಣೆ ಸಂಬಂಧ ಸರ್ಕಾರದ ಹಂತದಲ್ಲಿ ಸೂಕ್ತ ಅದೇಶ ಹೊರಡಿಸಬೇಕು,’ ಎಂದು ಕೋರಿರುವುದು ತಿಳಿದು ಬಂದಿದೆ.

 

ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಕಾಲೇಜುಗಳಿಂದ ಸಂಗ್ರಹ ಮಾಡಲಾಗುವ ಶುಲ್ಕಗಳನ್ನು ಪರಿಷ್ಕರಣೆ ಮಾಡಲು ಕೋರಿರುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯಲು ಕಡತವನ್ನು ರವಾನಿಸಿದೆ ಎಂದು ಗೊತ್ತಾಗಿದೆ.

 

2013-14ರಲ್ಲಿದ್ದ ಶುಲ್ಕವನ್ನು ಶೇ.30ರಿಂದ ಶೇ.60ರ ವರೆಗೆ 2018-19ರಿಂದ ಹೆಚ್ಚಿಸಿತ್ತು. ಪರೀಕ್ಷಾ ಶುಲ್ಕ, ಮರು ಮೌಲ್ಯಮಾಪನ, ಅಂಕಪಟ್ಟಿ, ಅನುತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿ, ಹೊಸ ಕಾಲೇಜು, ಹೊಸ ಕಾಂಬಿನೇಷನ್‌ ತೆರೆಯಲು, ವರ್ಗಾವಣೆ ಪತ್ರ, ನೋಂದಣಿ ಶುಲ್ಕ, ಪರೀಕ್ಷಾ ಕೇಂದ್ರದ ಬದಲಾವಣೆ ಸೇರಿದಂತೆ ಸುಮಾರು 46 ವಿವಿಧ ಶುಲ್ಕ ಪರಿಷ್ಕರಣೆ ಮಾಡಿತ್ತು.

 

2018-19ರಲ್ಲಿದ್ದ ದರ ಪಟ್ಟಿ

 

ವಿದ್ಯಾರ್ಥಿ ಪ್ರವೇಶ 36.50 ರು ನಿಂದ 38.89 ರು.,

 

 

ಖಾಸಗಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ 252 ರು. ನಿಂದ 400. 37 ರು.,

 

ನೋಂದಣಿ ಶುಲ್ಕ 25 ರು. ನಿಂದ 35. 40

 

 

ಟ್ಯೂಷನ್‌ ಶುಲ್ಕ 504 ರು ನಿಂದ 670 ರು.

 

 

ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ  ಟ್ಯೂಷನ್‌ ಶುಲ್ಕ 1,008 ರುನಿಂದ 1,330 ರು.

 

 

ವಿಳಂಬ ದಾಖಲಾತಿ ದಂಡ 504 ರು. ನಿಂದ 670 ರು.

 

 

ವಿಳಂಬ ದಾಖಲಾತಿ ವಿಶೇಷ ದಂಡ 1,680 ರು ನಿಂದ 2, 220 ರು.,

 

 

ಕಾಲೇಜು ಬದಲಾವಣೆ ಶುಲ್ಕ 1,200 ರು. ನಿಂದ 1,600 ರು.

 

 

ಹೊಸ ಕಾಲೇಜಿಗೆ ಅರ್ಜಿ ಶುಲ್ಕ 36,000 ರು. ನಿಂದ 50, 000 ರು.,

 

 

ಹೊಸ ಕಾಲೇಜು ನೋಂದಣಿ ಶುಲ್ಕ 72, 000 ರು. ನಿಂದ 1,00, 800 ರು.,

 

ಹೊಸ ಕಾಂಬಿನೇಷನ್‌(ಕಲಾ, ವಾಣಿಜ್ಯ) 1,44,007 ರು. ನಿಂದ 2,00, 000

 

ಹಿಂದಿನ ಬಿಜೆಪಿ ಸರ್ಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿತ್ತು. ಈ ಮೊತ್ತವನ್ನು ಮೊತ್ತವನ್ನು ಕಾಲೇಜು ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಆದೇಶ ಹೊರಡಿಸಿತ್ತು.

 

2019-20ನೇ ಸಾಲಿನಿಂದ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗುತ್ತಿತ್ತು.

 

ಆದರೆ ಹಿಂದಿನ ಬಿಜೆಪಿ ಸರ್ಕಾರದ ಆದೇಶದಂತೆ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿತ್ತು.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!