Sunday | June 7, 2026 |

ಕನ್ನಡ ಮಾಧ್ಯಮ ಖಾಸಗಿ ಶಾಲೆಗಳಿಗಿಲ್ಲ ವೇತನಾನುದಾನ; 179 ಕೋಟಿ ವೆಚ್ಚ ಭರಿಸಲು ಮುಂದಾಗದ ಸರ್ಕಾರ

ಬೆಂಗಳೂರು; 1995ರ ನಂತರ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಸಿಬ್ಬಂದಿಗಳಿಗೆ ವೇತನಾನುದಾನ ಮತ್ತು ಸೇವಾ ಭದ್ರತೆಯೇ ಇಲ್ಲ. ಅಷ್ಟೇ ಅಲ್ಲ ಈ ಶಾಲೆಗಳನ್ನ ವೇತನ ಅನುದಾನಕ್ಕೆ ಒಳಪಡಿಸಲು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವೂ ಇಲ್ಲ.

 

ಹೀಗೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್‌ ಮಧು ಬಂಗಾರಪ್ಪ ಅವರು ವಿಧಾನಪರಿಷತ್‌ನಲ್ಲಿ ಉತ್ತರ ನೀಡಿದ್ದಾರೆ.

 

ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮಧು ಬಂಗಾರಪ್ಪ ಅವರು ಖಾಸಗಿ ವಲಯದ ಕನ್ನಡ ಮಾಧ್ಯಮ ಶಾಲೆಗಳ ಸಿಬ್ಬಂದಿಗೆ ವೇತನ ಅನುದಾನ ಒದಗಿಸುವ ಸಂಬಂಧ ಯಾವುದೇ ಪ್ರಸ್ತಾವನೆಯೂ ಇಲ್ಲ ಎಂದು ಉತ್ತರಿಸಿದ್ದಾರೆ. ಸರ್ಕಾರದ ಈ ಉತ್ತರವು ಕನ್ನಡ ಮಾಧ್ಯಮ ಶಾಲೆಗಳ ಸಿಬ್ಬಂದಿಯನ್ನು ಮತ್ತಷ್ಟು ಕತ್ತಲೆಗೆ ದೂಡಿದಂತಾಗಿದೆ.

 

ಹಾಗೆಯೇ ಕನ್ನಡ ಮಾಧ್ಯಮವಿರುವ ಖಾಸಗಿ ಕಿರಿಯ ಮತ್ತು ಹಿರಿಯಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸಿಬ್ಬಂದಿಯನ್ನು ವೇತನ ಅನುದಾನಕ್ಕೆ ಒಳಪಡಿಸಿದರೆ ವಾರ್ಷಿಕವಾಗಿ 179 ಕೋಟಿ ರು. ವೆಚ್ಚವಾಗುತ್ತದೆ ಎಂದು ಉತ್ತರದಲ್ಲಿ ವಿವರಿಸಿದ್ದಾರೆ.

 

1995ರ ನಂತರ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಸಿಬ್ಬಂದಿಗಳಿಗೆ ವೇತನಾನುದಾನ ಮತ್ತು ಸೇವಾ ಭದ್ರತೆ ನೀಡಿಲ್ಲ. ಇದು ಸರ್ಕಾರದ ಗಮನಕ್ಕೂ ಬಂದಿದೆ ಎಂದು ಮಧು ಬಂಗಾರಪ್ಪ ಮಾಹಿತಿ ಒದಗಿಸಿದ್ದಾರೆ.

 

1995-2000ನೇ ಸಾಲಿನವರೆಗೆ ಖಾಸಗಿ ವಲಯದಲ್ಲಿ 133 ಪ್ರಾಥಮಿಕ ಶಾಲೆಗಳು ಆರಂಭವಾಗಿವೆ. ಇದರಲ್ಲಿ 487 ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, 206 ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿ ಒಟ್ಟಾರೆ 693 ಶಿಕ್ಷಕರಿದ್ದಾರೆ.

 

 

ಒಬ್ಬ ಶಿಕ್ಷಕರಿಗೆ ವಾರ್ಷಿಕವಾಗಿ 4,75,000 ರು. ವೆಚಚವಾಗುತ್ತದೆ. ಅದರಂತೆ 693 ಶಿಕ್ಷಕರಿಗೆ ಒಟ್ಟಾರೆ 32,91,75,000 ರು ವೆಚ್ಚವಾಗುತ್ತದೆ. 324 ಪ್ರೌಢಶಾಲೆಗಳಲ್ಲಿ ಅಂದಾಜು 2,592 ಶಿಕ್ಷಕರಿಗೆ ವೇತನ ನೀಡಬೇಕಿದೆ. ಒಬ್ಬರಿಗೆ 47,431 ರು. ನಂತೆ ಒಟ್ಟಾರೆ 2,592 ಶಿಕ್ಷಕರಿಗೆ 147,52,93,824 ರು. ವೆಚ್ಚವಾಗುತ್ತದೆ ಎಂದು ಉತ್ತರದಲ್ಲಿ ವಿವರಿಸಿದ್ದಾರೆ.

 

1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನರಹಿತ ಶಾಲಾ ಕಾಲೇಜಗಳಿಗೆ ಅನುದಾನ ನೀಡಿ ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಸಮನ್ವಯ ಹೋರಾಟ ಸಮಿತಿಯು ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದೆ.

 

ಸ್ವಾತಂತ್ರ್ಯಾನಂತರ ಅವಧಿಯಲ್ಲಿ ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುತ್ತಿತ್ತು. ಅದು 1986ರಲ್ಲಿ ನಿಂತು ಹೋಗಿದೆ. 2006 ರಲ್ಲಿಅಧಿಕಾರಕ್ಕೆ ಬಂದಿದ್ದ ಸಮ್ಮಿಶ್ರ ಸರಕಾರ ಮತ್ತು 2008 ರಲ್ಲಿಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರಗಳು 1986 ರಿಂದ 1995 ರವರೆಗೆ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನ ನೀಡಿವೆ.

 

ನಂತರ ಬಂದ ಸರಕಾರಗಳು 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸದೇ ಕನ್ನಡ ಶಾಲೆಗಳಿಗೆ ಅನ್ಯಾಯ ಮಾಡಿವೆ. ಇದರಿಂದ ಈ ಶಾಲೆಗಳಲ್ಲಿ ಕಲಿಯುವ ಲಕ್ಷಾಂತರ ಬಡ ಮಕ್ಕಳು ಸರಕಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಈ ಶಾಲೆ ಶಿಕ್ಷಕರು 23 ವರ್ಷಗಳಿಂದ ಕನಿಷ್ಠ ಸಂಬಳಕ್ಕೆ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅವರ ಜೀವನ ಶೋಚನೀಯವಾಗಿದೆ.

Hot this week

ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್‌ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌...

Related Articles

Popular Categories

error: Content is protected !!