Wednesday | March 25, 2026 |

ಉಚಿತ ವಿದ್ಯುತ್‌; 6,242.53 ಕೋಟಿ ರು ಕೊರತೆ, ಸಹಾಯಧನ ಸೀಮಿತಗೊಳಿಸಲು ಚಿಂತನೆ?

Support THE-FILE

spot_img

ಬೆಂಗಳೂರು; ಮುಂಗಾರು ಮಳೆ ಕೊರತೆಯಿಂದಾಗಿ ಹೆಚ್ಚುವರಿ ವಿದ್ಯುತ್‌ ಬಳಕೆಯ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಅಧಿಕ ಸಹಾಯಧನಕ್ಕಾಗಿ ಸರ್ಕಾರದ ಮೆಟ್ಟಿಲು ಹತ್ತಿರುವ ವಿದ್ಯುತ್‌ ಸರಬರಾಜು ಕಂಪನಿಗಳೀಗ ಇದರ ಬೇಡಿಕೆಗೆ ಅನುಗುಣವಾಗಿ 6,242.53 ಕೋಟಿ ರು. ಅಧಿಕ ಸಹಾಯ ಧನ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿದೆ. ಇದನ್ನು ಪರಿಶೀಲಿಸಿರುವ ಹಣಕಾಸು ಇಲಾಖೆಯು  ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನ ಸೀಮಿತಗೊಳಿಸಬೇಕು ಎಂದು ನಿಲುವು ತಳೆದಿರುವುದು ಇದೀಗ ಬಹಿರಂಗವಾಗಿದೆ.

 

ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಮತ್ತು 10 ಹೆಚ್‌ ಪಿ ವರೆಗಿನ ನೀರಾವರಿ ಪಂಪ್‌ ಸೆಟ್‌ಗಳ ಉಚಿತ ವಿದ್ಯುತ್‌ ಸರಬರಾಜು ಸಂಬಂಧಿಸಿದಂತೆ ವಿದ್ಯುತ್‌ ಸರಬರಾಜು  ಕಂಪನಿಗಳು ಸಲ್ಲಿಸಿರುವ ಅಧಿಕ ಸಹಾಯಧನ ಬಿಡುಗಡೆಯ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ಇದೀಗ ತಲೆ ಮೇಲೆ ಕೈ ಹೊತ್ತು ಕುಳಿತಿದೆ.

 

ಬೊಕ್ಕಸಕ್ಕೆ ಹೊರೆಯಾದರೂ  ಗೃಹ ಜ್ಯೋತಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ಅವರು ವಿಧಾನಸಭೆ ಅಧಿವೇಶನದಲ್ಲಿ ಲಿಖಿತ ಉತ್ತರ ನೀಡಿರುವ ಬೆನ್ನಲ್ಲೇ ಇದೀಗ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, 10 ಹೆಚ್‌ಪಿವರೆಗಿನ ಉಚಿತ ವಿದ್ಯುತ್‌ ಸರಬರಾಜು ಯೋಜನೆಗೆ 6,242.53 ಕೋಟಿ ರು. ಅಧಿಕ ಸಹಾಯಧನಕ್ಕಾಗಿ ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ.

 

ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಕೆಲ ( FD/423/EXP1/2023) ದಾಖಲೆಗಳು ಲಭ್ಯವಾಗಿವೆ.

 

ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನ ಸೀಮಿತಗೊಳಿಸಬೇಕು ಎಂದು ಆರ್ಥಿಕ ಇಲಾಖೆಯು ತಳೆದಿರುವ ನಿಲುವು ಇದೀಗ ಸರ್ಕಾರವನ್ನು ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಗಳಿವೆ.

 

‘ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನವನ್ನು ಸೀಮಿತಗೊಳಿಸಬೇಕು ಎನ್ನುವುದು ಆರ್ಥಿಕ ಇಲಾಖೆಯ ನಿಲುವಾಗಿದ್ದು ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಸರಬರಾಜು ಮಾಡಿ ಈಗ ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಕೋರಲಾಗುತ್ತಿದೆ,’ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.

 

2023-24ನೇ ಸಾಲಿನ ಆಯವ್ಯಯದಲ್ಲಿ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, 10 ಹೆಚ್‌ಪಿವರೆಗಿನ ನೀರಾವರಿ ವಿದ್ಯುತ್‌ ಪಂಪ್‌ಸೆಟ್‌ಗಳ ಉಚಿತ ವಿದ್ಯುತ್‌ ಸರಬರಾಜಿಗಾಗಿ 13,143 ಕೋಟಿ ರು.ಗಳ ಸಹಾಯಧನವನ್ನು ಹಂಚಿಕೆ ಮಾಡಿ ಒದಗಿಸಿದೆ. ಇದೇ ಆರ್ಥಿಕ ಸಾಲಿನ 2023ರ ಏಪ್ರಿಲ್‌ನಿಂದ ನವೆಂಬರ್‌ ಮಾಹೆಯಲ್ಲಿ ಈ ಯೋಜನೆಗಳಡಿ ಉಚಿತ ವಿದ್ಯುತ್‌ ಸರಬರಾಜುವಿಗಾಗಿ 14,803.53 ಕೋಟಿ ರು. ವಾಸ್ತವಿಕ ವಿದ್ಯುತ್‌ ಬೇಡಿಕೆ ಇದೆ ಎಂಬುದು ತಿಳಿದು ಬಂದಿದೆ.

 

ಏಪ್ರಿಲ್‌ನಲ್ಲಿ 2,549.65 ಕೋಟಿ ರು. ಬೇಡಿಕೆ ಪೈಕಿ 1,500.00 ಕೋಟಿ ರು. ಬಿಡುಗಡೆ ಮಾಡಿತ್ತು. ಬಾಕಿ 1,049.65 ಕೋಟಿ ರು. ಇತ್ತು. ಮೇ ತಿಂಗಳಿನಲ್ಲಿ 2,620.31 ಕೋಟಿ ರು. ಬೇಡಿಕೆ ಪೈಕಿ 1,500 ಕೋಟಿ ರು. ಬಿಡುಗಡೆ ಮಾಡಿತ್ತು. ಬಾಕಿ 1,120.31 ಕೋಟಿ ರು. ಕೊರತೆ ಕಂಡುಬಂದಿತ್ತು. 10,561 ಕೋಟಿ ರು  ಸಹಾಯಧನದ ಪೈಕಿ  ಬಿಡುಗಡೆಗೆ 2,582 ಕೋಟಿ ರು. ಬಾಕಿ ಇತ್ತು.

 

ಜೂನ್‌ನಲ್ಲಿ 1,466.23 ಕೋಟಿ ರು. ಬೇಡಿಕೆ ಪೈಕಿ 690.50 ಕೋಟಿ ರು. ಬಿಡುಗಡೆ ಮಾಡಿದ್ದ ಇಲಾಖೆಯು 775.73 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಜುಲೈನಲ್ಲಿ 1,833.38 ಕೋಟಿ ರು. ಬೇಡಿಕೆ ಇತ್ತಾದರೂ ಇದರಲ್ಲಿ 690.50 ಕೋಟಿಯನ್ನಷ್ಟೇ ಬಿಡುಗಡೆ ಮಾಡಿತ್ತು. ಹೀಗಾಗಿ 1,142.88 ಕೋಟಿ ರು ಕೊರತೆ ಕಂಡುಬಂದಿತ್ತು ಎಂಬುದು ಗೊತ್ತಾಗಿದೆ. ಸ

 

ಆಗಸ್ಟ್‌ನಲ್ಲಿ 1,122.09 ಕೋಟಿ ರು ಬೇಡಿಕೆ ಪೈಕಿ 1.045.00 ಕೋಟಿ ರು. ಬೇಡಿಕೆ ಪೈಕಿ 77.09 ಕೋಟಿ ರು. ಬಿಡುಗಡೆ ಮಾಡಿತ್ತು. ಸೆಪ್ಟಂಬರ್‌ನಲ್ಲಿ 1,962.29 ಕೋಟಿ ರು. ಬೇಡಿಕೆಯಲ್ಲಿ 1,045.00 ಕೋಟಿ ರು. ಬಿಡುಗಡೆ ಮಾಡಿದ್ದ ಇಲಾಖೆಯು 917.29 ಕೋಟಿ ರು. ಬಾಕಿ ಉಳಿಸಿಕೊಂಡಿತ್ತು. ಅಕ್ಟೋಬರ್‌ನಲ್ಲಿ 1,644.80 ಕೋಟಿ ರು. ಬೇಡಿಕೆ ಇತ್ತಾದರೂ ಇದರಲ್ಲಿ 1,045.00 ಕೋಟಿ ರು. ಬಿಡುಗಡೆಗೊಳಿಸಿ ಇನ್ನೂ 559.59 ಕೋಟಿ ರು. ಬಾಕಿ ಇರಿಸಿಕೊಂಡಿತ್ತು ಎಂಬುದು ತಿಳಿದು ಬಂದಿದೆ.

 

ಇದಲ್ಲದೇ ಹೆಚ್ಚುವರಿ ವಿದ್ಯುತ್‌ ಬಳಕೆಯಿಂದ ಬೇಡಿಕೆ ಹೆಚ್ಚಾಗಿರುವ ಕಾರಣ ಅಧಿಕ ಸಹಾಯಧನದ ರೂಪದಲ್ಲಿ  4,0479.68 ಕೋಟಿ ರು.ಗಳನ್ನು ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ್ದ ಅರ್ಥಿಕ ಇಲಾಖೆಯು 2,000 ಕೋಟಿ ರು.ಗಳನ್ನು ಮುಂಗಡ ಸಹಾಯಧನಕ್ಕೆ ಸಮ್ಮತಿ ವ್ಯಕ್ತಪಡಿಸಿ ಬಿಡುಗಡೆ ಮಾಡಿತ್ತು. ಈ ಮೊತ್ತವೂ ಸೇರಿದಂತೆ ಇದುವರೆಗೆ 10,561 ಕೋಟಿ ರು.ಗಳನ್ನು ಸಹಮತಿಸಿ ಬಿಡುಗಡೆ ಮಾಡಿದೆ.

 

ಆದರೆ 2023ರ ಏಪ್ರಿಲ್‌ರಿಂದ 2023ರ ನವೆಂಬರ್‌ವರೆಗೆ ಮುಂಗಾರು ಮಳೆ ಕೊರತೆ ಪರಿಣಾಮ  ಹೆಚ್ಚುವರಿ ವಿದ್ಯುತ್‌ ಬಳಕೆಯಿಂದಾಗಿ ಬೇಡಿಕೆಯು ಹೆಚ್ಚಾಗಿದೆ. ಹೀಗಾಗಿ ಒಟ್ಟಾರೆ 14,803.53 ಕೋಟಿ ರು. ವಾಸ್ತವಿಕ ಬೇಡಿಕೆ ಇರಿಸಿತ್ತು. ಇದೇ ಅವಧಿಯಲ್ಲಿ 8,561.00 ಕೋಟಿ ರು. (2,000 ಕೋಟಿ ಮುಂಗಡ ಸಹಾಯಧನ ಹೊರತುಪಡಿಸಿ), ಸಹಾಯಧನ, ಇದಲ್ಲದೇ ಹೆಚ್ಚುವರಿ ವಿದ್ಯುತ್‌ ಬಳಕೆಯಿಂದ ಹೆಚ್ಚಾಗಿರುವ ಬೇಡಿಕೆಗೆ ಅನುಗುಣವಾಗಿ 6,242 ಕೋಟಿ ರು ಕೋರಿದೆ. ಅಲ್ಲದೇ ಡಿಸೆಂಬರ್‌ ತಿಂಗಳಿನಿಂದ 2024 ಮಾರ್ಚ್‌ವರೆಗೂ ವಾಸ್ತವಿಕ ಬೇಡಿಕೆ ಹೆಚ್ಚಳವಾಗುವ ಸಂಭವವಿರುವುದು ಗೊತ್ತಾಗಿದೆ.

 

ಹೀಗಾಗಿ 2,582 ಕೋಟಿ ರು.ಗಳನ್ನು ಬಿಡುಗಡೆ ಮಾಡಬೇಕು ಎಂದು ಇಂಧನ ಇಲಾಖೆಯು ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ‘ಆಯವ್ಯಯದಲ್ಲಿ ಹಂಚಿಕೆಯಾಗುವ ಅನುದಾನಕ್ಕೆ ವಿದ್ಯುತ್‌ ಸಹಾಯಧನವನ್ನು ಸೀಮಿತಗೊಳಿಸಬೇಕು ಎನ್ನುವುದು ಆರ್ಥಿಕ ಇಲಾಖೆಯ ನಿಲುವಾಗಿದ್ದು ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಸರಬರಾಜು ಮಾಡಿ ಈಗ ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಕೋರುತ್ತಿದೆ,’ ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿದೆ.

 

ಈ ಪ್ರಸ್ತಾವನೆಯ ಕುರಿತು ಆದೇಶಕ್ಕಾಗಿ ಕಡತವನ್ನು ಮಂಡಿಸಿದೆ ಎಂದು ತಿಳಿದು ಬಂದಿದೆ.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!