Sunday | June 14, 2026 |

16ನೇ ಹಣಕಾಸು ಆಯೋಗ; ರಾಜ್ಯದ ಆರ್ಥಿಕ ಪರಿಸ್ಥಿತಿ, ಸವಾಲು ಮನವರಿಕೆಗೆ ತಜ್ಞರ ನೇಮಕ?

ಬೆಂಗಳೂರು; ಕೇಂದ್ರ ಸರ್ಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ ಅರವಿಂದ್‌ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಬೆನ್ನಲ್ಲೇ ಇದೇ ಆಯೋಗದ ಮುಂದೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ, ಆರ್ಥಿಕ ಸವಾಲುಗಳು ಕುರಿತು ಮನವರಿಕೆ ಮಾಡಲು ವಿಷಯ ತಜ್ಞರು ಮತ್ತು ಅನುಭವಿ ಆಡಳಿತಗಾರರ ತಂಡವೊಂದನ್ನು ರಚಿಸಲು ಮುಂದಾಗಿದೆ.

 

ರಾಜ್ಯದ 6ನೇ ವೇತನ ಆಯೋಗದ ಅಧ್ಯಕ್ಷರೂ ಆಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಎಂ ಆರ್‍‌ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲು ಒಲವು ವ್ಯಕ್ತಪಡಿಸಿರುವುದು ಇದೀಗ ಬಹಿರಂಗವಾಗಿದೆ.
16ನೇ ಕೇಂದ್ರ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರದ ಪರವಾಗಿ ತಾರ್ಕಿಕ ಮತ್ತು ನಿಖರ ಅಂಕಿ ಅಂಶಗಳೊಂದಿಗೆ ಮೆಮೊರೆಂಡಮ್‌ ಸಿದ್ಧಪಡಿಸುವ ಮಹತ್ತರ ಹೊಣೆಗಾರಿಕೆಯನ್ನು ಈ ಸಮಿತಿ ಮೇಲೆ ಹೊರಿಸಲಿದೆ.

 

ವಿಶೇಷವೆಂದರೇ  ಭಾರತ ಸರ್ಕಾರವು 16ನೇ ಕೇಂದ್ರ ಹಣಕಾಸು ಆಯೋಗವನ್ನು  ರಚಿಸುವ ಮುನ್ನವೇ ಮುಂಜಾಗ್ರತವಾಗಿ ಕರ್ನಾಟಕ ಸರ್ಕಾರವು ನವೆಂಬರ್‍‌ 2023ರಲ್ಲಿಯೇ ಎಂ ಆರ್‍‌ ಶ್ರೀನಿವಾಸಮೂರ್ತಿ ಅವರ ನೇತೃತ್ವದ ತಂಡವೊಂದನ್ನು ರಚಿಸಲು ಕಸರತ್ತು ನಡೆಸಿತ್ತು.

 

ಈ ಕುರಿತು ‘ದಿ ಫೈಲ್‌’ಗೆ ಕೆಲ ದಾಖಲೆಗಳು (FD -FCC/12/2023) ಲಭ್ಯವಾಗಿವೆ.

 

‘ಹಿಂದಿನ 15ನೇ ಕೇಂದ್ರ ಹಣಕಾಸು ಆಯೋಗದ ವರದಿಯಿಂದ ಕರ್ನಾಟಕ ರಾಜ್ಯಕ್ಕೆ ದೊರಕಬೇಕಾದ ಪಾಲು ಸರಿಯಾದ ಪ್ರಮಾಣದಲ್ಲಿ ದೊರಕಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಬಹಳಷ್ಟು ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟಾಗಿದೆ. 15ನೇ ಹಣಕಾಸು ಆಯೋಗದ ವರದಿಯಿಂದ ಉಂಟಾಗಿರುವ ಅನ್ಯಾಯವು 16ನೇ ಕೇಂದ್ರ ಹಣಕಾಸು ಆಯೋಗದ ವರದಿಯಲ್ಲಿ ಮತ್ತೊಮ್ಮೆ ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ,’ ಎಂದು ರಾಜ್ಯ ಸರ್ಕಾರವು ಇಂಗಿತ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.

15ನೇ ಹಣಕಾಸು ಆಯೋಗ; ಬಿಡಿಗಾಸೂ ನೀಡದ ಕೇಂದ್ರ, 551.53 ಕೋಟಿ ಮರಳಿಸಿದ ಆರೋಗ್ಯ ಇಲಾಖೆ

 

ರಾಜ್ಯದ ಆರ್ಥಿಕ ಪರಿಸ್ಥಿತಿ, ರಾಜ್ಯದ ಮುಂದಿರುವ ಆರ್ಥಿಕ ಸವಾಲುಗಳು ಮತ್ತಿತರೆ ವಿಷಯಗಳನ್ನು ಒಳಗೊಂಡಂತೆ ರಾಜ್ಯಕ್ಕೆ ದೊರಕಬೇಕಾದ ಆರ್ಥಿಕ ಸವಾಲು, ನ್ಯಾಯಯುತ ಪಾಲನ್ನು ಕೇಂದ್ರದಿಂದ ಪಡೆಯಲು ಸರಿಯಾಗಿ ಮನವರಿಕೆ ಮಾಡಲು ಒಂದು ವಿಸ್ತೃತವಾದ ಮೆಮೋರಂಡಮ್‌ ಸಲ್ಲಿಸಬೇಕಿದೆ. ಈ ಸಮಿತಿಯು ರಾಜ್ಯಕ್ಕೆ ಹೆಚ್ಚಿನ ಮತ್ತು ನ್ಯಾಯಯುತ ಪಾಲನ್ನು ಒದಗಿಸಿಕೊಡುವಲ್ಲಿ ಈ ಮೆಮೊರೆಂಡಮ್‌ ಗಣನೀಯ ಪಾತ್ರವನ್ನು ವಹಿಸತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ ಮುಂದೆ ಆಶಯ ವ್ಯಕ್ತಪಡಿಸಿದರು.

15ನೇ ಹಣಕಾಸು ಆಯೋಗ; 2,142 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ

 

ತಂಡದಲ್ಲಿ ಯಾರೆಲ್ಲಾ ಇರಲಿದ್ದಾರೆ?

 

ಎಂ ಆರ್‍‌ ಶ್ರೀನಿವಾಸ್ ಮೂರ್ತಿ ಅವರ ನೇತೃತ್ವದಲ್ಲಿ ಐಸೆಕ್‌ನ ನಿವೃತ್ತ ನಿರ್ದೇಶಕರೂ ಮತ್ತು 14ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರೂ ಆಗಿದ್ದ ಡಾ ಗೋವಿಂದರಾವ್‌, ಐಐಎಸ್ಸಿಯ ಡಾ ನರೇಂದ್ರಪಾಣಿ, ನಾರಾಯಣರಾವ್‌ ಅವರನ್ನೊಳಗೊಂಡ ಪರಿಣಿತರ ತಂಡವಿರಲಿದೆ. ಇವರಿಗೆ ಲಂಪ್‌ಸಮ್‌ ಒಟ್ಟು 5 ಲಕ್ಷ ರು. ಗೌರವ ಧನ ನೀಡಬಹುದು ಎಂದು ಗೊತ್ತಾಗಿದೆ.

15ನೇ ಹಣಕಾಸು ಆಯೋಗ; ರಾಜ್ಯ ವಿಪತ್ತು ನಿರ್ವಹಣೆಗೆ ಈವರೆಗೂ ಬಿಡುಗಡೆಯಾಗದ ಅನುದಾನ

 

ಕೇಂದ್ರ ಸರಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಅರವಿಂದ್ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಈಗಾಗಲೇ ಆದೇಶವನ್ನು ಹೊರಡಿಸಿದೆ. ಪನಗಾರಿಯಾ ಅಮೆರಿಕದ ಕೊಲಂಬಿಯಾ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆರ್ಥಿಕ ವ್ಯವಹಾರಗಳ ಇಲಾಖೆಯು ಹೊರಡಿಸಿರುವ ಅಧಿಸೂಚನೆಯಂತೆ ಐಎಎಸ್ ಅಧಿಕಾರಿ ರಿತ್ವಿಕ್ ರಂಜನಂ ಪಾಂಡೆ ಅವರು ಹಣಕಾಸು ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

 

ಆಯೋಗದ ಅಧ್ಯಕ್ಷರು ಮತ್ತು ಇತರ ಸದಸ್ಯರು ಹುದ್ದೆಯನ್ನು ವಹಿಸಿಕೊಂಡ ದಿನಾಂಕದಿಂದ ವರದಿ ಸಲ್ಲಿಕೆಯ ದಿನಾಂಕ ಅಥವಾ 2025,ಅ.31;ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಧಿಕಾರದಲ್ಲಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

ಹಣಕಾಸು ಆಯೋಗವು ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಹಂಚಿಕೆ,ಭಾರತದ ಸಂಚಿತ ನಿಧಿಯಿಂದ ರಾಜ್ಯಗಳಿಗೆ ಆದಾಯ ಅನುದಾನವನ್ನು ನಿಯಂತ್ರಿಸುವ ನೀತಿಗಳು,ರಾಜ್ಯ ಹಣಕಾಸು ಆಯೋಗದ ಶಿಫಾರಸುಗಳ ಆಧಾರದಲ್ಲಿ ಪಂಚಾಯತ್‌ಗಳು ಮತ್ತು ನಗರಸಭೆಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ರಾಜ್ಯದ ಸಂಚಿತ ನಿಧಿಯನ್ನು ಹೆಚ್ಚಿಸಲು ಅಗತ್ಯ ಕ್ರಮಗಳ ಬಗ್ಗೆ ಶಿಫಾರಸುಗಳನ್ನು ಮಾಡುತ್ತದೆ.

 

ಆಯೋಗವು ವಿಪತ್ತು ನಿರ್ವಹಣಾ ಕ್ರಮಗಳಿಗೆ ಹಣಕಾಸು ಒದಗಿಸುವ ಪ್ರಸ್ತುತ ವ್ಯವಸ್ಥೆಗಳನ್ನು ಪುನರ್‌ಪರಿಶೀಲಿಸಬಹುದು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಬಹುದು ಎಂದೂ ಅಧಿಸೂಚನೆಯಲ್ಲಿ ಹೇಳಲಾಗಿದೆ. ಆಯೋಗವು 2026,ಎ.1ರಿಂದ ಆರಂಭಗೊಳ್ಳುವ ಐದು ವರ್ಷಗಳ ಅವಧಿಗಾಗಿ ತನ್ನ ವರದಿಯನ್ನು 2025,ಅ.31ರೊಳಗೆ ಸಲ್ಲಿಸಬೇಕಿದೆ.

Hot this week

ಮಾನ್ಸೂನ್ ಅಧಿವೇಶನವೋ, ವಿಸ್ತರಿಸಿದ ಅಧಿವೇಶನವೋ: ಸಚಿವ ಸಂಪುಟ ಮಾರ್ಗದರ್ಶನ ಕೋರಿದ ಸಂಸದೀಯ ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನ ಅನಿರ್ದಿಷ್ಟಾವಧಿಗೆ...

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...
Please Scan to make Your Contribution

Topics

ಮಾನ್ಸೂನ್ ಅಧಿವೇಶನವೋ, ವಿಸ್ತರಿಸಿದ ಅಧಿವೇಶನವೋ: ಸಚಿವ ಸಂಪುಟ ಮಾರ್ಗದರ್ಶನ ಕೋರಿದ ಸಂಸದೀಯ ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನ ಅನಿರ್ದಿಷ್ಟಾವಧಿಗೆ...

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

Related Articles

Popular Categories

error: Content is protected !!